ಕಾಂ. ವಿ. ಎಸ್. ಅಚ್ಚುತಾನಂದನ್ ಅವರ ಪ್ರಥಮ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಕೊಡ್ಲಮೊಗರುದಲ್ಲಿ ಪಕ್ಷದ ಹಿರಿಯ ನಾಯಕರಿಗೆ ಗೌರವಾರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಕಾಂ. ಸಿ. ಎಚ್. ಕುಂಜ್ಞಬು ಉದ್ಘಾಟಿಸಿದರು. ಕಾಂ. ಸಿ. ಜಿ. ಮ್ಯಾಥ್ಯು ಅಧ್ಯಕ್ಷತೆ ವಹಿಸಿದ್ದರು. ಕಾಂ. ಕೆ. ಆರ್. ಜಯಾನಂದ ಸೇರಿದಂತೆ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿ. ಎಸ್. ಅಚ್ಚುತಾನಂದನ್ ಅವರ ಆದರ್ಶಗಳು ಮತ್ತು ಜನಪರ ಸೇವೆಯನ್ನು ಸ್ಮರಿಸಿದರು.



ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕರನ್ನು ಗೌರವಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು, ಅಚ್ಚುತಾನಂದನ್ ಅವರ ಜೀವನ ಮೌಲ್ಯಗಳು ಮತ್ತು ಸಾಮಾಜಿಕ ಬದ್ಧತೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವನ್ನು ಒತ್ತಿಹೇಳಿದರು.



