ಡಾ ಬಿ.ಆರ್ ಅಂಬೇಡ್ಕರ್ ಗ್ರಾಮ ವಿಕಸನ ಮತ್ತು ಕಲಾ ವೇದಿಕೆ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ಪೂಕಳಂ ಸ್ಪರ್ಧೆ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಾನಂದ ಎಂ.ಸಿ ಅವರು ನಿರ್ವಹಿಸಿದರು. ಸ್ಪರ್ಧೆಯಲ್ಲಿ ಲಿಂಗಪ್ಪ ಕುಬಣೂರು ,ದಯಾನಂದ ಸೋಂಕಾಲ್,ಕೃಷ್ಣ ಕೆಪಿ ಸೋಂಕಾಲ್ ತೀರ್ಪುಗಾರರಾಗಿ ಸಹಕರಿಸಿದರು.
ಆ ಬಳಿಕ ಹರೀಶ್ ಎಂ.ಜಿ ,ರಾಮಚಂದ್ರ ಎಂ ,ವೇದಿಕೆ ಅಧ್ಯಕ್ಷರಾದ ಕಿಶೋರ್ ಕುಮಾರ್ ಅವರ ಉಪಸ್ಥಿತಿಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವೇದಿಕೆ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಅಮಿತಾ ಸುರೇಶ್ ನಿರೂಪಿಸಿದರು.