ಕಾಸರಗೋಡು: ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ, 18.01.2026.ಪ್ರಯುಕ್ತ ಕನ್ನಡ ಭವನ “ಶ್ರೀ ಕೃಷ್ಣ ದೇವರಾಯ “ವೇದಿಕೆಯಲ್ಲಿ ನಡೆಯಲಿರುವ “ನಾಡು -ನುಡಿಹಬ್ಬ “ಕಾರ್ಯಕ್ರಮದಲ್ಲಿ ಪ್ರಕಾಂಡ ಪಂಡಿತೆ, ಶ್ರೇಷ್ಠ ಕವಯತ್ರಿ, ಸಾಹಿತಿ ಸತ್ಯವತಿ ಭಟ್ ಕೊಳಚಪ್ಪು ಇವರಿಗೆ ಕನ್ನಡ ಭವನದ ಪ್ರತಿಷ್ಠಿತ “ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2026.ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.