ಕಾಸರಗೋಡು: ಕಾಸರಗೋಡಿನ ಹೆಮ್ಮೆಯ ವೈದ್ಯ ಶಿರೋಮಣಿ, ದೇಶೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕಾರಗಳನ್ನು ಮುಡಿಗೆರಿಸಿಕೊಂಡಿರುವ ಕವಿಹೃದಯಿ ಡಾ. ಜನಾರ್ದನ ನಾಯ್ಕ್ ಸಿ. ಎಚ್ ಇವರೀಗೆ ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ 18.01.2026,ರಂದು ನಡೆಯಲಿರುವ “ನಾಡು -ನುಡಿ ಹಬ್ಬ “ಕಾರ್ಯಕ್ರಮ ಕನ್ನಡ ಭವನ ಸಂಕೀರ್ಣದ “ಶ್ರೀ ಕೃಷ್ಣ ದೇವರಾಯ “ವೇದಿಕೆಯಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.