ಮಂಜೇಶ್ವರ: ರೈತ ವಿರೋಧಿ ನೀತಿ ಖಂಡಿಸಿ ರೈತ ಸಂಘದಿಂದ ಪ್ರತಿಭಟನಾ ಮೆರವಣಿಗೆ

ಮಂಜೇಶ್ವರ, ಜು.23: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳು, ರಸಗೊಬ್ಬರದ ಬೆಲೆ ಏರಿಕೆ ಹಾಗೂ ಅಮೆರಿಕದೊಂದಿಗೆ ಮಾಡಿಕೊಂಡಿರುವ ಜನವಿರೋಧಿ ಒಪ್ಪಂದವನ್ನು ಖಂಡಿಸಿ ರೈತ ಸಂಘದ ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಮೀಯಪದವಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ಪ್ರತಿಭಟನೆಯನ್ನು ರಾಜ್ಯ ಸಮಿತಿ ಸದಸ್ಯ ಕೆ.ಆರ್. ಜಯಾನಂದ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರದ ಕೃಷಿ ಹಾಗೂ ರೈತ ವಿರೋಧಿ ನೀತಿಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ರಸಗೊಬ್ಬರಗಳ ಬೆಲೆ ಏರಿಕೆಯಿಂದ ಕೃಷಿ ವೆಚ್ಚ ಮತ್ತಷ್ಟು ಹೆಚ್ಚಾಗಿದೆ ಎಂದು ಅವರು ಆರೋಪಿಸಿದರು. ಅಮೆರಿಕದೊಂದಿಗೆ ಮಾಡಿಕೊಂಡಿರುವ ಒಪ್ಪಂದವೂ ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಟೀಕಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಏರಿಯಾ ಸಮಿತಿ ಅಧ್ಯಕ್ಷ ಬಿ.ಎಂ. ಕರುಣಾಕರ ಶೆಟ್ಟಿ ವಹಿಸಿದ್ದರು. ಏರಿಯಾ ಕಾರ್ಯದರ್ಶಿ ಅಶೋಕ ಭಂಡಾರಿ ಸ್ವಾಗತಿಸಿದರು.

ಪ್ರತಿಭಟನೆಯಲ್ಲಿ ಹುಸೈನ್ ಮಾಸ್ತರ್, ಪ್ರಭಾಕರ ಶೆಟ್ಟಿ, ಸದಾನಂದ ಕೋರಿಕ್ಕಾರ್, ಚಂದ್ರಾವತಿ ಕುಳೂರು, ಲೋಕೇಶ್, ಉಮೇಶ್ ಶೆಟ್ಟಿ ಸೇರಿದಂತೆ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!