ಮಂಜೇಶ್ವರ: ಕೊಳದಲ್ಲಿ ಈಜಲು ತೆರಳಿದ್ದ 13ರ ಬಾಲಕ ಮುಳುಗಿ ಸಾವು

​ಮಂಜೇಶ್ವರ: ಉಪ್ಪಳ ಮಂಗಲ್ಪಾಡಿ ಪೆರಿಂಗಡಿಯಲ್ಲಿ ಕೊಳದಲ್ಲಿ ಈಜುವಾಗ ವಿದ್ಯಾರ್ಥಿಯೊಬ್ಬ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.ಪೆರಿಂಗಡಿಯ ಅಲಿ ಹಾಗೂ ಸುಲೈಖ ದಂಪತಿಯ ಪುತ್ರ ಅಬೂಬಕರ್ ಅಸಾನ್ (13) ಮೃತಪಟ್ಟ ದುರ್ದೈವಿ.ಈತ ಮಂಗಲ್ಪಾಡಿ ಸರಕಾರಿ ಹೈಸ್ಕೂಲ್‌ನಲ್ಲಿ ಎಂಟನೇ ತರಗತಿ ಓದುತ್ತಿದ್ದನು.

​ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಸ್ನೇಹಿತರೊಂದಿಗೆ ಕೊಳದಲ್ಲಿ ಈಜಲು ತೆರಳಿದ್ದ ಅಬೂಬಕರ್, ಎಲ್ಲರೂ ಸ್ನಾನ ಮುಗಿಸಿ ಮರಳಲು ಸಿದ್ಧರಾಗುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿ ಹೋಗಿದ್ದಾನೆ.

​ನಂತರ ವಿದ್ಯಾರ್ಥಿ ನಾಪತ್ತೆಯಾಗಿರುವುದನ್ನು ಕಂಡು ನಡೆಸಿದ ಹುಡುಕಾಟದಲ್ಲಿ, ಸಮೀಪದ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಬಾಲಕ ಕೊಳದಲ್ಲಿ ಮುಳುಗುತ್ತಿರುವುದು ಪತ್ತೆಯಾಗಿದೆ.

​ತಕ್ಷಣ ಸ್ಥಳೀಯರು ಹಾಗೂ ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೊಳದಲ್ಲಿ ಶೋಧ ಕಾರ್ಯ ನಡೆಸಿ, ರಾತ್ರಿ 10 ಗಂಟೆ ಸುಮಾರಿಗೆ ಬಾಲಕನನ್ನು ಪತ್ತೆಹಚ್ಚಿದರು.ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಮೃತದೇಹವನ್ನು ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!