ಮಂಜೇಶ್ವರ : ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪೈವಳಿಕೆ ಮೂಲದ ಅಬೂಬಕ್ಕರ್ ಸಿದ್ದೀಕ್ ಎಂಬಾತನನ್ನು ಮಂಜೇಶ್ವರ ಪೊಲೀಸರು ಕಾಪಾ ಕಾಯಿದೆಯಡಿ ಬಂಧಿಸಿದ್ದಾರೆ.

ಸ್ಥಳೀಯವಾಗಿ ನಿರಂತರವಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಹಾಗೂ ಹಲವು ಹಿಂಸಾತ್ಮಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ಈತನ ವಿರುದ್ಧ ಮುನ್ನೆಚ್ಚರಿಕೆ ಬಂಧನ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಬಂಧನದ ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಆರೋಪಿಯನ್ನು ಕಣ್ಣೂರು ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.
ಕ್ಷೇತ್ರದಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಯುವ ಭಾಗವಾಗಿ ಪೊಲೀಸರು ಈ ಕಠಿಣ ಕ್ರಮವನ್ನು ಜರುಗಿಸಿದ್ದಾರೆ.


Really enjoying the selection of games here. Everything is well organized and the mobile version works like a charm. Check out phxgjili.