ಗಾಂಜಾ ಪೂರೈಕೆ ಮಾಡುತ್ತಿದ್ದ ಒರಿಸ್ಸಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳು ಅರೆಸ್ಟ್

ಮಂಗಳೂರು: ಗಾಂಜಾ ಪೂರೈಕೆ ಮಾಡುತ್ತಿದ್ದ ಒರಿಸ್ಸಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡದಲ್ಲಿ ಬಂಧಿಸಲಾಗಿದೆ.ದಿನಾಂಕ:19-01-2026 ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೂ.53,03,000 ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣದಲ್ಲಿ ತನಿಖೆ ನಡೆಸಿ ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42)…

Read More

₹23 ಲಕ್ಷ ಚಿನ್ನಾಭರಣ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, 222 ಗ್ರಾಂ ಚಿನ್ನ ವಶ

ಮಂಗಳೂರು: ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ₹23 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳ್ಳತನ ಪ್ರಕರಣವನ್ನು ಭೇದಿಸಿರುವ ಬಜ್ಪೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಅಬ್ದುಲ್ ನಾಸರ್ @ ನಾಸಿರ್ @ ನಾಚಿ (31) ಹಾಗೂ ಕಳವಾರು ನಿವಾಸಿ ಮಯ್ಯದ್ದಿ ಇಮ್ರಾನ್ ಎಂದು ಗುರುತಿಸಲಾಗಿದೆ. 23-09-2025ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಜೋಕಟ್ಟೆಯಲ್ಲಿ ನಿವಾಸಿ ಮೊಹಮ್ಮದ್ ಷರೀಫ್ ಅವರು ತಮ್ಮ ಸಂಬಂಧಿಕರ ಮೆಹಂದಿ…

Read More

ಕೊಕ್ಕಡದಲ್ಲಿ ಅಖಿಲ ಭಾರತ ಮುಷ್ಕರ ಪ್ರಚಾರ ಜಾಥಾಗೆ ಅಡ್ಡಿ: ‘ಮೋದಿ ಮೋದಿ’ ಘೋಷಣೆ

ಮಂಗಳೂರು : ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಕೊಕ್ಕಡದಲ್ಲಿ ಅಖಿಲ ಭಾರತ ಮುಷ್ಕರ ಪ್ರಚಾರದ ಅಂಗವಾಗಿ ನಡೆದ ವಾಹನ ಜಾಥಾ ಕಾರ್ಯಕ್ರಮದ ವೇಳೆ ತಂಡವೊಂದು ʼಮೋದಿ ಮೋದಿʼ ಎಂಬ ಘೋಷಣೆ ಕೂಗಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಪ್ರಯತ್ನಿಸಿದ ಘಟನೆ ನಡೆದಿದೆ. ವಾಹನ ಜಾಥಾದ ಅಂಗವಾಗಿ ಕೊಕ್ಕಡದಲ್ಲಿ ಸಭಾ ಕಾರ್ಯಕ್ರಮ ನಡೆಯುತ್ತಿದ್ದು, ಈ ವೇಳೆ ಕಾರ್ಮಿಕ‌ ಮುಖಂಡ ಸುನಿಲ್ ಕುಮಾರ್ ಬಜಾಲ್ ಮಾತನಾಡುತ್ತಿದ್ದರು.ಈ ಸಂದರ್ಭ ಏಕಾಏಕಿ ಗುಂಪೊಂದು ಸೇರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದು,…

Read More

ಸಾಹಿತಿ, ಸಂಘಟಕಿ, ಕವಯತ್ರಿ, ಶ್ರೀಮತಿ ಹಂಚಿಕಟ್ಟೇರ ಫ್ಯಾನ್ಸಿ ಮುತ್ತಣ್ಣ ಇವರಿಗೆ ಕವಿ ಕಾವ್ಯ ವಿಭೂಷಣ ಪ್ರಶಸ್ತಿ

ಮಂಗಳೂರು : ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದ ಪ್ರಯುಕ್ತ 22.02.2026.ಭಾನುವಾರ ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಗ್ರಂಥಾಲಯದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್. ಅರಸ್ “ವೇದಿಕೆಯಲ್ಲಿ ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಕೂಡ್ಲು ಸರ್ವಾಧ್ಯಕ್ಷತೆಯಲ್ಲಿ, ಶ್ರೀಮದ್ ಎಡನೀರ್ ಶ್ರೀಗಳ ಹಾಗೂ ಗದಗ ಜಿಲ್ಲೆಯ ಶ್ರೀ ಶ್ರೀ ರಮೇಶ ಮಹಾಸ್ವಾಮಿ, ಗೋವಿನಾಳ ಇವರ…

Read More

ಸಂಸದರ ಕಚೇರಿ, ಎಂಎಸ್‌ಇಜೆಡ್ಎಲ್ ವತಿಯಿಂದ ವಿಶೇಷ ಚೇತನರಿಗೆ ಅತ್ಯಾಧುನಿಕ ವೀಲ್‌ಚೇರ್‌ಗಳ ವಿತರಣೆ

ಮಂಗಳೂರು: ವಿಶೇಷ ಚೇತನರಿಗೆ ಅತ್ಯಾಧುನಿಕ ಎಲೆಕ್ಟ್ರಿಕ್ ವೀಲ್‌ಚೇರ್ ಸಹಿತ ಅಗತ್ಯ ಸಾಧನಾ ಸಲಕರಣೆಗಳ ವಿತರಣಾ ಕಾರ್ಯಕ್ರಮವು ದಕ್ಷಿಣ ಕನ್ನಡ ಸಂಸದರ ಕಚೇರಿಯಲ್ಲಿ ಇಂದು ನಡೆಯಿತು. ಕ್ಷೇತ್ರದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಚೇತನ ಫಲಾನುಭವಿಗಳಿಗೆ ಅತ್ಯಾಧುನಿಕ ಎಲೆಕ್ಟ್ರಿಕ್ ವೀಲ್‌ಚೇರ್‌ಗಳು ಹಾಗೂ ಇತರ ಸಾಧನಗಳನ್ನು ವಿತರಿಸಿದ್ದಾರೆ. ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ಅವರ ಉಪಸ್ಥಿತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಈ ಫಲಾನುಭವಿಗಳಿಗೆ ಹಸ್ತಾಂತರ ಮಾಡಲಾಗಿದೆ. ಸಂಸದ ಕ್ಯಾ. ಚೌಟ ಅವರ ವಿಶೇಷ ಮನವಿಗೆ ಸ್ಪಂದಿಸಿರುವ ಮಂಗಳೂರು…

Read More

ಕಾರು–ಸ್ಕೂಟರ್ ಡಿಕ್ಕಿ: ಉಪ್ಪಳದ ಆಟೋ ಚಾಲಕ ಬದರುಲ್ ಮುನೀರ್ ಮೃತ್ಯು

ಮಂಜೇಶ್ವರ: ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾನುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.ಮೃತ ಯುವಕನನ್ನು ಪಚ್ಚಂಬಳ ನಿವಾಸಿ ಹಾಗೂ ಉಪ್ಪಳದ ಆಟೋ ಚಾಲಕ ಬದರುಲ್ ಮುನೀರ್ ಎಂದು ಗುರುತಿಸಲಾಗಿದೆ. ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಡಿಕ್ಕಿಯಿಂದ ಅಪಘಾತ ಸಂಭವಿಸಿದ್ದು, ಬದರುಲ್ ಮುನೀರ್ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ಮಂಗಲ್ಪಾಡಿ ಆಸ್ಪತ್ರೆಗೆ ದಾಖಲಿಸಿದರು. ಪ್ರಾಥಮಿಕ ಚಿಕಿತ್ಸೆ…

Read More

ವಿಷ ಸೇವಿಸಿ ಚಿಕಿತ್ಸೆಗೊಳಗಾಗಿದ್ದ ಯುವಕ ಸಾವು

ಮಂಜೇಶ್ವರ: ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಚಿಕಿತ್ಸೆಗೂ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ತಲಪಾಡಿ ಮರಿಯಾಶ್ರಮ ಚರ್ಚ್ ಕಂಪೌಂಡ್ ಸಮೀಪದ ನಿವಾಸಿ ಅಶೋಕ ಕ್ರಾಸ್ತ (32) ಮೃತ ದುರ್ದೈವಿ. ಮಂಗಳೂರಿನ ಅಂಗಡಿಯೊಂದರಲ್ಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ಅವಿವಾಹಿತರಾದ ಅಶೋಕ ಕ್ರಾಸ್ತ ಅವರು ಜನವರಿ 31ರಂದು ರಾತ್ರಿ ಸುಮಾರು 8 ಗಂಟೆಗೆ ತಮ್ಮ ನಿವಾಸದಲ್ಲಿ ವಿಷ ಸೇವಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಸಾವು ಸಂಭವಿಸಿದೆ….

Read More

ಮಣ್ಣಂಗುಝಿಯಲ್ಲಿ ಭೀಕರ ರಸ್ತೆ ಅಪಘಾತ-ನಾಲ್ವರು ಯುವಕರಿಗೆ ಗಾಯ

ಉಪ್ಪಳ : ಉಪ್ಪಳ ಮಣ್ಣಂಗುಝಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಗಾಯಗೊಂಡಿದ್ದಾರೆ. ಮಣ್ಣಂಗುಝಿ ಪರಿಸರ ನಿವಾಸಿಗಳಾದ ಶಾಹಿಲ್ (22), ಮನಾಫ್ (19), ಫಹಾಲ್ (19) ಹಾಗೂ ರಾಶಿದ್ (25) ಗಾಯಗೊಂಡವರು. ಎರಡು ಕಾರುಗಳಲ್ಲಿ ಪ್ರಯಾಣಿಸುತ್ತಿದ್ದ ಯುವಕರು ಬಾಯಾರು ಭಾಗದತ್ತ ತೆರಳುತ್ತಿದ್ದ ವೇಳೆ, ಮಣ್ಣಂಗುಝಿ ಇಳಿಜಾರಿನಲ್ಲಿ ಮುಂದೆ ಸಾಗುತ್ತಿದ್ದ ಕಾರು ರಸ್ತೆ ಬದಿಗೆ ತಿರುಗಿಸುವ ಸಂದರ್ಭ ಹಿಂದಿನಿಂದ ಬಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಎರಡೂ ಕಾರುಗಳು ನಿಯಂತ್ರಣ ತಪ್ಪಿ ಪಲ್ಟಿಯಾಗಿವೆ. ಅಪಘಾತದಲ್ಲಿ…

Read More

ಕನ್ನಡ ಸೇನೆ ಕರಾವಳಿ ಜಿಲ್ಲೆಗಳಿಗೆ ವಿಸ್ತರಣೆಯಾಗಿ ಕನ್ನಡ ಕಟ್ಟುವ ಮನಸುಗಳನ್ನು ಒಂದು ಮಾಡಲಿದೆ : ಸಮಿತಿಯ ಉಪಾಧ್ಯಕ್ಷ ಎನ್ ನಾಗೇಂದ್ರ

ಮಂಗಳೂರು: ಕರ್ನಾಟಕ ರಾಜ್ಯದಲ್ಲಿ ಕನ್ನಡ ಸೇನೆಯು ಸುಮಾರು ನಾಲ್ಕು ದಶಕಗಳಿಂದಲೂ ಸತತವಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಾ ಬಂದಿರುತ್ತದೆ. ಇದರ ರಾಜ್ಯಾಧ್ಯಕ್ಷರಾಗಿ ಕೆ ಆರ್ ಕುಮಾರ್ ಅವರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುತ್ತಾರೆ. ಕನ್ನಡ ಸೇನೆ ಘಟಕಗಳು ಎಲ್ಲಾ ಜಿಲ್ಲೆಯಲ್ಲೂ ರೂಪುಗೊಂಡಿದ್ದು ಅದರಂತೆ ದಕ್ಷಿಣ ಕನ್ನಡ ಜಿಲ್ಲೆಗೂ ಸಹ ವಿಸ್ತರಿಸುವ ಉದ್ದೇಶವನ್ನು ಹೊಂದಿದೆ ಎಂದು ಸಮಿತಿಯ ಉಪಾಧ್ಯಕ್ಷರಾದ ಎನ್ ನಾಗೇಂದ್ರ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿಯಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಿತಿಯು ಈಗಾಗಲೇಹೊಸ ಪ್ರತಿನಿಧಿಗಳನ್ನು ಆಯ್ಕೆ…

Read More

ಬೆಳ್ತಂಗಡಿ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ

ಮಂಗಳೂರು :ಬೆಳ್ತಂಗಡಿಯ ಗಡಾಯಿಕಲ್ಲು ಚಾರಣ ಪ್ರವೇಶ ತಾತ್ಕಾಲಿಕ ನಿಷೇಧ ವಿಧಿಸಲಾಗಿದೆ.ಗಡಾಯಿಕಲ್ಲು ಚಾರಣವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದಿಂದ ಆದೇಶ ಹೊರಡಿಸಲಾಗಿದೆ. ಬೇಸಿಗೆಯಿಂದ ಕಾಡ್ಕಿಚ್ಚು ಸಂಭವಿಸುವ ಸಾಧ್ಯತೆ ಇರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗಡಾಯಿಕಲ್ಲು ಚಾರಣ ಅವಕಾಶವನ್ನು ಫೆ.7ರಿಂದ ಮುಂದಿನ ಆದೇಶ ದವರೆಗೆ ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.

Read More
error: Content is protected !!