ಮಹಿಳಾ 33% ಮೀಸಲಾತಿಗೆ ಕಾಂಗ್ರೆಸ್ ವಿರೋಧ: ಮಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಬೃಹತ್ ಪಾದಯಾತ್ರೆ

ಮಂಗಳೂರು: ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಮಹಿಳೆಯರ ಶೇ. 33 ಮೀಸಲಾತಿಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ತನ್ನ ಮಹಿಳಾ ವಿರೋಧಿ ನೀತಿಯನ್ನು ಜಗಜ್ಜಾಹೀರುಗೊಳಿಸಿದೆ ಎಂದು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾ ತೀವ್ರವಾಗಿ ಕಿಡಿಕಾರಿದೆ. ಕಾಂಗ್ರೆಸ್‌ನ ಈ ಧೋರಣೆಯನ್ನು ಪ್ರತಿಭಟಿಸಿ ಬಿ.ವಿ.ಎಸ್ ವೃತ್ತದಿಂದ ಮಹಾನಗರ ಪಾಲಿಕೆ ಕಚೇರಿಯವರೆಗೆ ಬೃಹತ್ ಪಾದಯಾತ್ರೆ ನಡೆಸುವ ಮೂಲಕ ಬೃಹತ್ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, “ತೊಟ್ಟಿಲು ತೂಗುವ ಕೈಗಳು ದೇಶವನ್ನೂ…

Read More

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ನಾಯಕತ್ವ ಪೈಪೋಟಿ: ಸಿಎಂ ಹಂಚಿಕೆ ಚರ್ಚೆಗೆ ಹೊಸ ತಿರುವು

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ನಾಯಕತ್ವದ ಪೈಪೋಟಿ ತೀವ್ರಗೊಂಡಿದೆ. ಮುಖ್ಯಮಂತ್ರಿ Siddaramaiah ಅವರು ಮೂರು ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಸಿಎಂ ಸ್ಥಾನ ಹಂಚಿಕೆ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ. ಉಪಮುಖ್ಯಮಂತ್ರಿ ಡಿ . ಕೆ . ಶಿವಕುಮಾರ್ ಬಣದಿಂದ ಹಂಚಿಕೆ ಬೇಡಿಕೆ ಕೇಳಿಬರುತ್ತಿದ್ದರೆ, ಸಿದ್ದರಾಮಯ್ಯ ಬೆಂಬಲಿಗರು ಸಿಎಂ ಬದಲಾವಣೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಈ ನಡುವೆ ದಲಿತ ಮುಖ್ಯಮಂತ್ರಿ ಅಸ್ತ್ರ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು ಹೈಕಮಾಂಡ್ ಮುಂದೆ ಹೊಸ ಷರತ್ತು ಇಟ್ಟಿದ್ದಾರೆ ಎನ್ನಲಾಗುತ್ತಿದ್ದು, ತಾವು…

Read More

ಪಶ್ಚಿಮ ಬಂಗಾಳ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಸಜ್ಜು: ಇಂದು ಬಹಿರಂಗ ಪ್ರಚಾರ ಅಂತ್ಯ

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಬಹಿರಂಗ ಪ್ರಚಾರ ಇಂದು ಅಂತ್ಯಗೊಳ್ಳಲಿದೆ. ಏಪ್ರಿಲ್ 29ರಂದು ಮತದಾನ ನಡೆಯಲಿದ್ದು, ಭದ್ರತಾ ವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗಿದೆ. ಚುನಾವಣಾ ಆಯೋಗವು ಮತದಾನಕ್ಕೆ ಅಡ್ಡಿಪಡಿಸುವ ಅಥವಾ ಮತದಾರರನ್ನು ಬೆದರಿಸುವ ಯಾವುದೇ ಪ್ರಯತ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ಕೊನೆಯ ದಿನದ ಪ್ರಚಾರದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ ಭರ್ಜರಿ ರ್ಯಾಲಿ ಮತ್ತು ಸಭೆಗಳನ್ನು ನಡೆಸಲಿವೆ. ಪ್ರಧಾನಿ ನರೇಂದ್ರ…

Read More

ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

Mangaluru: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ನಾರ್ತ್ ಪೊಲೀಸ್ ಸ್ಟೇಷನ್ ಠಾಣೆಯಲ್ಲಿ ದಾಖಲಾಗಿದ್ದ 1998ರ ಗಲಭೆ ಮತ್ತು ಬೆಂಕಿ ಹಚ್ಚಿದ ಪ್ರಕರಣದ ವಾರಂಟ್ ಆರೋಪಿ ಒಬ್ಬನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಮುನೀರ್ ಅಹ್ಮದ್ (59) ಎಂದು ಗುರುತಿಸಲಾಗಿದೆ. ಇವರು ಅನ್ಸಾರಿ ಕ್ರಾಸ್ ರಸ್ತೆ, ಬಂದರು ನಿವಾಸಿಯಾಗಿದ್ದು, ಇತ್ತೀಚೆಗೆ ಕುಲಶೇಖರದಲ್ಲಿರುವ ಸಾಯಿ ಆರ್ಟ್ಸ್ ಅಪಾರ್ಟ್‌ಮೆಂಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 291/1998ರಡಿ…

Read More

ರಾಮಚಂದ್ರ ಬೈಕಂಪಾಡಿ ನೈಜ ಸಾಂಸ್ಕೃತಿಕ ನಾಯಕ: ಡಾ. ಪ್ರಭಾಕರ ಜೋಶಿ

ಮಂಗಳೂರು : ಸಾಂಸ್ಕೃತಿಕ ಸಂಘಟಕ, ನಾಟಕಕಾರ ಹಾಗೂ ರಾಜಕಾರಣಿ ರಾಮಚಂದ್ರ ಬೈಕಂಪಾಡಿ ಅವರಲ್ಲಿ ನೈಜ ಸಾಂಸ್ಕೃತಿಕ ಕಾಳಜಿ ಇತ್ತು ಅವರು ರಾಜಕೀಯ ನೇತಾರರಾಗಿದ್ದರೂ ಅವರು ರಾಜಕೀಯ ಅದೃಷ್ಟವಂತರಾಗಿರಲಿಲ್ಲ , ಕರಾವಳಿಯ ಸಾಂಸ್ಕೃತಿಕ ಲೋಕಕ್ಕೆ ಅವರದ್ದು ದೊಡ್ಡ ಕೊಡುಗೆ ಇದೆ ಎಂದು ಹಿರಿಯ ವಿದ್ವಾಂಸ ಡಾ. ಪ್ರಭಾಕರ ಜೋಶಿ ಅವರು ಹೇಳಿದರು. ಮಂಗಳೂರು ತುಳು ಭವನದಲ್ಲಿ ಶನಿವಾರ ಆಯೋಜಿಸಲಾದ ತುಳು ಅಕಾಡೆಮಿಯ ಮಾಜಿ ಸದಸ್ಯ ಹಾಗೂ ತುಳು ಅಕಾಡೆಮಿಯ ವಾರ್ಷಿಕ ಗೌರವ ಪುರಸ್ಕೃತ ನಾಟಕಕಾರ ರಾಮಚಂದ್ರ ಬೈಕಂಪಾಡಿ ಅವರಿಗೆ…

Read More

ಬೆಂಕಿಯುಂಡೆಯಾದ ಬಾನು: ಕಮರುತ್ತಿರುವ ಕೃಷಿ ಮತ್ತು ವನ್ಯಜೀವಿಗಳ ಆರ್ತನಾದ

ಪ್ರಕೃತಿಯ ಋತುಚಕ್ರದಲ್ಲಿ ಬೇಸಿಗೆ ಎನ್ನುವುದು ಒಂದು ಸಹಜ ಪ್ರಕ್ರಿಯೆ. ಆದರೆ ಇಂದು ನಮಗೆ ಎದುರಾಗುತ್ತಿರುವ ಬಿಸಿಲು ಕೇವಲ ಕಾಲಧರ್ಮವಾಗಿ ಉಳಿದಿಲ್ಲ; ಅದು ಪ್ರಕೃತಿ ಮನುಕುಲಕ್ಕೆ ನೀಡುತ್ತಿರುವ ತೀವ್ರ ಎಚ್ಚರಿಕೆಯ ಗಂಟೆಯಂತೆ ಭಾಸವಾಗುತ್ತಿದೆ. ದಿನದಿಂದ ದಿನಕ್ಕೆ ಏರುತ್ತಿರುವ ತಾಪಮಾನ ಕೇವಲ ನಮ್ಮ ಚರ್ಮವನ್ನು ಸುಡುತ್ತಿಲ್ಲ, ಬದಲಾಗಿ ನಮ್ಮ ನಾಳಿನ ಬದುಕಿನ ಭದ್ರತೆಯನ್ನೇ ಆಪೋಶನ ತೆಗೆದುಕೊಳ್ಳುತ್ತಿದೆ. ಆಕಾಶದಿಂದ ಸುರಿಯುವ ಬೆಂಕಿ ಮಳೆ ಅಕ್ಷರಶಃ ಭೂಮಿಯನ್ನು ಬೆವರುವಂತೆ ಮಾಡುತ್ತಿದೆ. ಕೃಷಿಯನ್ನೇ ಉಸಿರಾಗಿಸಿಕೊಂಡ ಹಳ್ಳಿಗಾಡಿನ ಮಣ್ಣಿನ ಮಕ್ಕಳಿಗೆ ಈ ಬಿಸಿಲು ಶಾಪವಾಗಿ ಪರಿಣಮಿಸಿದೆ….

Read More

ಪಂಚ ಗ್ಯಾರಂಟಿ ಯೋಜನೆ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸಿದೆ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ‌ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಬ್ರಹ್ಮಾವರ ಕೊಕ್ಕರ್ಣೆಯಲ್ಲಿ ಆಯೋಜಿಸಿದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ “ಪಂಚ ಗ್ಯಾರಂಟಿ ಯೋಜನೆ ಸಮಾವೇಶ”ದಲ್ಲಿ ಅವರು ಮಾತನಾಡಿದರು. ನಾನು ಸೋತವ, ವಿಧಾನಸಭೆಗೆ ಪ್ರವೇಶಿಸಲು ನನಗೆ ನೀವೇ ಅಧಿಕಾರ ಕೊಡಲಿಲ್ಲ. ಆದರೂ ಹೊಳೆಬೈಲಿನ ಗ್ರಾಮಸ್ಥರು ಶೌಚಾಲಯ ನಿರ್ಮಿಸಿಕೊಡುವಂತೆ ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿ ಶೌಚಾಲಯ…

Read More

ಮಂಗಳೂರು–ಉಡುಪಿ ಜಿಲ್ಲೆಗಳಿಗೆ ನಾಲ್ಕು ದಿನ ಯೆಲ್ಲೋ ಅಲರ್ಟ್: ಪೂರ್ವ ಮುಂಗಾರು ಮಳೆ ಬಿರುಸು ಸಾಧ್ಯತೆ

ಮಂಗಳೂರು / ಉಡುಪಿ: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ. 27ರಿಂದ ನಾಲ್ಕು ದಿನಗಳ ಎಲ್ಲೋ ಅಲರ್ಟ್ ಘೋಷಿಸಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎ.27 ರಿಂದ 30ರ ವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆದಿತ್ಯವಾರ ದಿನವಿಡೀ ಉರಿ ಬಿಸಿಲಿನ ವಾತಾವರಣ ಇತ್ತು. ಸೆಕೆಯ ಬೇಗೆ…

Read More

ಕೆಪಿಟಿ ಡಿಪ್ಲೋಮಾ ಪ್ರವೇಶ ಪ್ರಕ್ರಿಯೆ ಆರಂಭ: ದೇಶದ ಪ್ರಥಮ ಸ್ವಾಯತ್ತ ಸರ್ಕಾರಿ ಪಾಲಿಟೆಕ್ನಿಕ್‌ಗೆ ಅರ್ಜಿ ಆಹ್ವಾನ

ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ 75 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಮಂಗಳೂರಿನ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್ (KPT) ಸಂಸ್ಥೆ, ದೇಶದ ಪ್ರಥಮ ಸ್ವಾಯತ್ತ ಸರ್ಕಾರಿ ಪಾಲಿಟೆಕ್ನಿಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, 2026-27ನೇ ಸಾಲಿನ ಡಿಪ್ಲೋಮಾ ಇಂಜಿನಿಯರಿಂಗ್ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಹರೀಶ್ ಶೆಟ್ಟಿ ತಿಳಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಎಐಸಿಟಿಇ (AICTE) ಮಾನ್ಯತೆ ಪಡೆದಿರುವ ಸಂಸ್ಥೆ ಸ್ವಾಯತ್ತ ಸ್ಥಾನಮಾನ ಹೊಂದಿರುವುದರಿಂದ ಕೈಗಾರಿಕಾ ಅಗತ್ಯಗಳಿಗೆ ಅನುಗುಣವಾಗಿ ಪ್ರತಿ 2-3 ವರ್ಷಗಳಿಗೊಮ್ಮೆ…

Read More

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಏ.29ರಿಂದ ಅಂತರಾಷ್ಟ್ರೀಯ ವಿಜ್ಞಾನ-ತಂತ್ರಜ್ಞಾನ ಸಮ್ಮೇಳನ

ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (SUIET) ವತಿಯಿಂದ ಏಪ್ರಿಲ್ 29 ಮತ್ತು 30ರಂದು ‘ಹೊಸತಾಗಿ ಬೆಳೆಯುತ್ತಿರುವ ಸಮನ್ವಯ ವಿಜ್ಞಾನ ಮತ್ತು ತಂತ್ರಜ್ಞಾನ’ (ICESST-2026) ಕುರಿತು ಅಂತರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಡೀನ್ ಡಾ. ರಾಮಕೃಷ್ಣ ಎನ್. ಹೆಗ್ಡೆ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಏಪ್ರಿಲ್ 29ರಂದು ಬೆಳಿಗ್ಗೆ 11 ಗಂಟೆಗೆ ಮುಕ್ಕದ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭವನ್ನು ಭಾರತದ…

Read More
error: Content is protected !!