ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾಗವಹಿಸಲು ಶಾಸಕ ಡಾ. ಭರತ್ ಶೆಟ್ಟಿ ಕರೆ

ಮಂಗಳೂರು, ಜುಲೈ 1: ಚುನಾವಣಾ ಆಯೋಗವು ಹಮ್ಮಿಕೊಂಡಿರುವ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರಕ್ರಿಯೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಬಿಎಲ್‌ಒ ಅಧಿಕಾರಿಗಳು ಶಾಸಕರಿಗೆ ಅರ್ಜಿ ನಮೂನೆಯನ್ನು ಹಸ್ತಾಂತರಿಸಿದರು. ಪ್ರಜಾಪ್ರಭುತ್ವದ ಸುಭದ್ರತೆಗೆ ಮತದಾರರ ಪಟ್ಟಿಯ ಪರಿಷ್ಕರಣೆ ಅತ್ಯಂತ ಮಹತ್ವದ್ದಾಗಿದೆ. ದೇಶದಲ್ಲಿ ಬದುಕಲು, ಮತದಾನದ ಹಕ್ಕು ಉಳಿಸಿಕೊಳ್ಳಲು, ಮಕ್ಕಳ ಹಕ್ಕಿನ ಭದ್ರತೆಗಾಗಿ ಎಸ್‌ಐಆರ್ ಪ್ರಾಮುಖ್ಯತೆ ಪಡೆದಿದೆ ಎಂದು ಶಾಸಕರು ತಿಳಿಸಿದರು. ಅರ್ಹ ಪ್ರತಿಯೊಬ್ಬ ಮತದಾರರು…

Read More

ಭಕ್ತರ ನಡೆ ಸಾಗುವಳಿಯ ಕಡೆ: ಅನ್ನಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ಭತ್ತದ ನಾಟಿ

ಬಂಟ್ವಾಳ, ಜು. 1: ಸಜೀಪ ಮೂಡ ಗ್ರಾಮದ ಅನ್ನಪಾಡಿಯ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಪರ್ವದ ಅಂಗವಾಗಿ ಭಕ್ತರಿಗೆ ತೆನೆ ವಿತರಿಸುವ ಉದ್ದೇಶದಿಂದ ದೇವಾಲಯದ ಗದ್ದೆಯಲ್ಲಿ ಭತ್ತದ ಕೃಷಿಗೆ ಚಾಲನೆ ನೀಡಲಾಯಿತು. ಇದರ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ನೇಜಿ (ಭತ್ತ) ನಾಟಿ ಕಾರ್ಯಕ್ರಮದಲ್ಲಿ ಭಕ್ತರು ಉತ್ಸಾಹದಿಂದ ಪಾಲ್ಗೊಂಡು ಸೇವೆ ಸಲ್ಲಿಸಿದರು. ಕೆಸಜೀಪ ಮಾಗಣೆತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರು ಪ್ರಾರ್ಥನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ…

Read More

ವಿದ್ಯುತ್ ತಂತಿಗೆ ಕಬ್ಬಿಣದ ಪೈಪ್ ತಗುಲಿ ವ್ಯಕ್ತಿ ದುರ್ಮರಣ

ಬಂಟ್ವಾಳ, ಜು. 1: ಶೆಡ್ ನಿರ್ಮಾಣ ಕಾರ್ಯದ ವೇಳೆ ಕಬ್ಬಿಣದ ಪೈಪ್ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ತಗುಲಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೇರಮಜಲು ಗ್ರಾಮದ ನಿವಾಸಿ ಎ. ಇಸ್ಮಾಯಿಲ್ (58) ಮೃತಪಟ್ಟವರು. ಮೃತರ ಪುತ್ರ ಮಹಮ್ಮದ್ ಸಫ್ವಾನ್ ನೀಡಿದ ದೂರಿನ ಪ್ರಕಾರ, ಜೂನ್ 28ರಂದು ಸಂಜೆ 6.30ರಿಂದ 7 ಗಂಟೆಯ ನಡುವೆ ಗೂಡಂಗಡಿಯ ಮುಂಭಾಗದಲ್ಲಿ ಶೆಡ್ ನಿರ್ಮಿಸುವ ಉದ್ದೇಶದಿಂದ ಎರಡು ಕಬ್ಬಿಣದ ಪೈಪ್‌ಗಳನ್ನು…

Read More

ಮಂಗಳೂರು ಗುಡ್ಡ ಕುಸಿತ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ, ಶಾಶ್ವತ ಪುನರ್ವಸತಿಗೆ ಎಸ್‌ಡಿಟಿಯು ಆಗ್ರಹ

ಮಂಗಳೂರು, ಜು. 1: ನಗರದ ಗರೋಡಿ ಪ್ರದೇಶದಲ್ಲಿ ಭಾರೀ ಮಳೆಯಿಂದ ಸಂಭವಿಸಿದ ಗುಡ್ಡ ಕುಸಿತದಲ್ಲಿ ಇಬ್ಬರು ಮಕ್ಕಳು ಹಾಗೂ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ಅತ್ಯಂತ ದುಃಖಕರವಾಗಿದೆ ಎಂದು ಎಸ್‌ಡಿಟಿಯು ಮಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷ ಇರ್ಫಾನ್ ಕಾನ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣವೇ ಸಮರ್ಪಕ ಪರಿಹಾರ ಘೋಷಿಸಬೇಕು. ಗಾಯಾಳುಗಳಿಗೆ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ಒದಗಿಸುವುದರೊಂದಿಗೆ, ಮನೆ ಹಾಗೂ ಆಸ್ತಿಪಾಸ್ತಿ ಕಳೆದುಕೊಂಡ ಕುಟುಂಬಗಳಿಗೆ ಶಾಶ್ವತ…

Read More

ಕರಾವಳಿಗೆ ಮೂರು ದಿನಗಳ ರೆಡ್ ಅಲರ್ಟ್: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು, ಜು. 1: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಜುಲೈ 1ರಿಂದ 3ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಅತಿಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವುದು, ಮರಗಳು ಉರುಳುವುದು, ಭೂಕುಸಿತ…

Read More

ಉಡುಪಿ ಶ್ರೀಕೃಷ್ಣ ಮಠದಲ್ಲಿ ಎಸ್‌ಐಆರ್‌ ಅಭಿಯಾನಕ್ಕೆ ಚಾಲನೆ

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠದ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ-ಮಂತ್ರಾಕ್ಷತೆ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಎಸ್‌ಐಆರ್‌ (SIR) ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಅಭಿಯಾನವು ಯಶಸ್ವಿಯಾಗಿ ನಡೆಯಲೆಂದು ಶ್ರೀಪಾದರು ಆಶೀರ್ವಚನ ನೀಡಿದರು. ಎಸ್‌ಐಆ‌ರ್ ಅಭಿಯಾನವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಹಾಗೂ ಸಂಬಂಧಿತ ಅಧಿಕಾರಿಗಳು ಸಹಕರಿಸುವಂತೆ ಮನವಿ ಮಾಡಿದರು. ಸಮಾಜದ ಪ್ರತಿಯೊಬ್ಬರೂ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು…

Read More

ದಕ್ಷಿಣ ಕನ್ನಡ ಕ್ರೀಡಾಪಟುಗಳಿಂದ ರಾಷ್ಟ್ರೀಯ ಕಿಕ್‌ಬಾಕ್ಸಿಂಗ್‌ನಲ್ಲಿ ಭರ್ಜರಿ ಸಾಧನೆ: 22 ಪದಕಗಳ ಜಯ

ಮಂಗಳೂರು: ಭಾರತ ಸರ್ಕಾರ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರ ಮಾನ್ಯತೆ ಪಡೆದ ವಾಕೋ ಇಂಡಿಯಾ ಸಬ್ ಜೂನಿಯರ್ ರಾಷ್ಟ್ರೀಯ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್–2026ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ IKMA Institute of Karate Martial Arts ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಕರ್ನಾಟಕ ಕಿಕ್‌ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಅವರು ತಿಳಿಸಿದಂತೆ, ಮಧ್ಯಪ್ರದೇಶದ ಇಂದೋರ್‌ನಲ್ಲಿ ಜೂನ್ 17ರಿಂದ 21ರವರೆಗೆ ನಡೆದ ಈ ಸ್ಪರ್ಧೆಯಲ್ಲಿ IKMA ಕ್ರೀಡಾಪಟುಗಳು ಒಟ್ಟು 11 ಚಿನ್ನ, 2 ಬೆಳ್ಳಿ ಹಾಗೂ 9…

Read More

ಕಾಸರಗೋಡಿನ ಶಾಲಾ ಮೈದಾನದಲ್ಲಿ ಅಪಾಯಕಾರಿ ಕಾರ್ ರೇಸಿಂಗ್; ವಾಹನವನ್ನು ವಶಪಡಿಸಿಕೊಂಡ ಪೊಲೀಸರು

ಕಾಸರಗೋಡು : ಕಾಸರಗೋಡಿನ ಪಳ್ಳಿಕರ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಕಾರುಗಳು ಅಪಾಯಕಾರಿ ರೀತಿಯಲ್ಲಿ ರೇಸಿಂಗ್ ನಡೆಸಿದವು. ಶಾಲೆ ಬಿಡುವ ಸಮಯದಲ್ಲಿ ಮಕ್ಕಳು ಮನೆಗೆ ಮರಳುತ್ತಿದ್ದ ಸಂದರ್ಭದಲ್ಲೇ ಈ ರೇಸಿಂಗ್ ನಡೆದಿತ್ತು. ಅತಿವೇಗ ಮತ್ತು ಅಪಾಯಕಾರಿ ಚಾಲನೆ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ತಲುಪಿದ ಪೊಲೀಸರ ಮೇಲೆಯೂ ದಾಳಿ ನಡೆದಿದೆ. ರೇಸಿಂಗ್ ನಿಲ್ಲಿಸಲು ಸೂಚಿಸಿದ ಪ್ರೊಬೇಷನ್ ಎಸ್‌ಐ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದರೆ. ಎಸ್‌ಐ ಪ್ರಿನ್ಸ್ ಜಾನ್ ಕಾಞ್ಞಂಗಾಡ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಈ ಘಟನೆಯಲ್ಲಿ…

Read More

​ನಾಯಕತ್ವದ ಹೆಜ್ಜೆಗುರುತುಗಳು: ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಮತ್ತು ಸನ್ಮಾನ ಸಮಾರಂಭ.

ಮಂಜೇಶ್ವರ : ಗಡಿ ಪ್ರದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕುಂಜತ್ತೂರು ಹಾಗೂ ಹೊಸಂಗಡಿ ಪೀಸ್ ಕ್ರಿಯೇಟಿವ್ ಕೇಂದ್ರೀಯ ಶಾಲೆಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭ ಹಾಗೂ ಶಿಕ್ಷಕರು ಹಾಗೂ ಸಿಬ್ಬಂದಿಗಳಿಗೆ ಸನ್ಮಾನ ಸಮಾರಂಭ ಜರುಗಿತು.ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುವ ಮತ್ತು ಗುರುಹಿರಿಯರಿಗೆ ಗೌರವ ಸಲ್ಲಿಸುವ ಉದಾತ್ತ ಉದ್ದೇಶವನ್ನು ಹೊಂದಿತ್ತು. ಶಾಲೆಯ ನೂತನ ವಿದ್ಯಾರ್ಥಿ ನಾಯಕ, ನಾಯಕಿಯರು ಮತ್ತು ವಿವಿಧ ವಿಭಾಗಗಳ ಪದಾಧಿಕಾರಿಗಳಿಗೆ ಶಾಲಾ ಆಡಳಿತ ಮಂಡಳಿಯು ಗೌರವಯುತವಾಗಿ ಬಾವುಟ ಮತ್ತು ಪದಕಗಳನ್ನು ನೀಡಿ…

Read More

ಕಂಕನಾಡಿ ಸಮೀಪ ತಡೆಗೋಡೆ ಕುಸಿತ: ಇಬ್ಬರು ಮಕ್ಕಳು ಸೇರಿ ಮೂವರು ಮೃತ್ಯು – ಶಾಸಕ ವೇದವ್ಯಾಸ ಕಾಮತ್ ಸಂತಾಪ

ನಗರದಲ್ಲಿ ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಂಕನಾಡಿ ಸಮೀಪ ತಡೆಗೋಡೆ ಕುಸಿದು ಮನೆ ಮೇಲೆ ಬಿದ್ದು ಸಂಭವಿಸಿದ ದುರಂತದಲ್ಲಿ ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು, ಮೃತರ ಕುಟುಂಬಕ್ಕೆ ತಕ್ಷಣ ಸೂಕ್ತ ಪರಿಹಾರ ಒದಗಿಸಲು ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿ, ಅವರು…

Read More
error: Content is protected !!