ಕರ್ನಾಟಕ ಸಂಘ ಶಾರ್ಜಾ ನೂತನ ಕಾರ್ಯಕಾರಿ ಸಮಿತಿ ಪದಗ್ರಹಣ

ದುಬೈ: ಯುಎಇಯಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಸೇವೆ ಸಲ್ಲಿಸುತ್ತಿರುವ ಕರ್ನಾಟಕ ಸಂಘ ಶಾರ್ಜಾದ 2026–2028ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದುಬೈ ಗ್ರ್ಯಾಂಡ್ ಹೋಟೆಲ್ ಬೈ ಫಾರ್ಚೂನ್‌ನಲ್ಲಿ ನಡೆಯಿತು. ಪೂರ್ವ ಅಧ್ಯಕ್ಷ ಗಣೇಶ್ ರೈ ಅವರ ನೇತೃತ್ವದಲ್ಲಿ ನೂತನ ಅಧ್ಯಕ್ಷರಾಗಿ ರಂಗಸಾರಥಿ ವಿಶ್ವನಾಥ್ ಶೆಟ್ಟಿ ಹಾಗೂ ಇತರ ಪದಾಧಿಕಾರಿಗಳು ಪ್ರಮಾಣ ವಚನ ಸ್ವೀಕರಿಸಿದರು. ಕನ್ನಡ ಭಾಷೆ, ಸಂಸ್ಕೃತಿಯ ಉತ್ತೇಜನ ಹಾಗೂ ಅನಿವಾಸಿ ಕನ್ನಡಿಗರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ರೂಪಿಸುವ…

Read More

ಮುಸ್ಲಿಂ ಲೀಗ್ ಅವಕಾಶವಾದಿ ರಾಜಕೀಯ ಮಾಡುತ್ತಿದೆ: ರವೀಶ ತಂತ್ರಿ ಕುಂಟರು

ಪೈವಳಿಕೆಯಲ್ಲಿ ನಡೆದ ಬಿಜೆಪಿ ಮಂಜೇಶ್ವರ ಮಂಡಲ ಪ್ರಶಿಕ್ಷಣ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ನಾಯಕ ರವೀಶ ತಂತ್ರಿ ಕುಂಟರು, ಮುಸ್ಲಿಂ ಲೀಗ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಪೈವಳಿಕೆಯ ಸಜಂಕಿಲದಲ್ಲಿ ನಡೆದ ಬಿಜೆಪಿ ಮಂಜೇಶ್ವರ ಮಂಡಲ ಪ್ರಶಿಕ್ಷಣ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ನಾಯಕ ರವೀಶ ತಂತ್ರಿ ಕುಂಟರು, ದೇಶದಲ್ಲಿ ಬಿಜೆಪಿ ಅಲೆ ಮುಂದುವರಿದಿದ್ದು, ಕೇರಳದಲ್ಲೂ ಬಿಜೆಪಿ ಪ್ರಬಲ ರಾಜಕೀಯ ಶಕ್ತಿಯಾಗಿ ಬೆಳೆಯುತ್ತಿದೆ ಎಂದು ಹೇಳಿದರು. ಮುಸ್ಲಿಂ ಲೀಗ್ ಅವಕಾಶವಾದಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ…

Read More

ಬೀದಿಬದಿ ವ್ಯಾಪಾರಿಗಳ ಮೇಲಿನ ಧಾಳಿ ನಿಲ್ಲದಿದ್ದಲ್ಲಿ ಹೋರಾಟ ತೀವ್ರಗೊಳ್ಳಲಿದೆ – ಸಿಐಟಿಯು

ಮಂಗಳೂರು : ಮಹಾನಗರ ಪಾಲಿಕೆ ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡದೆ ಏಕಪಕ್ಷೀಯ ಕಾರ್ಯಾಚರಣೆ ನಡೆಸಿದರೆ ಹೋರಾಟ ತೀವ್ರಗೊಳಿಸಲು ಸಿಐಟಿಯು ನಿರ್ಧರಿಸಿದೆ. ಇಂದು ಬೋಳಾರದ ಎ.ಕೆ.ಜಿ ಭವನದಲ್ಲಿ ಬೀದಿಬದಿ ವ್ಯಾಪಾರಿಗಳ ಬದುಕುವ ಹಕ್ಕಿನ ರಕ್ಷಣೆಗಾಗಿ,ನಗರಪಾಲಿಕೆ ನಡೆಸುತ್ತಿರುವ ಬೀದಿ ವ್ಯಾಪಾರದ ಕಾನೂನು ಉಲ್ಲಂಘಿಸಿ ನಡೆಸುತ್ತಿರುವ ಧಾಳಿಯನ್ನು ವಿರೋಧಿಸಿ ಇಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಜರಗಿದ ಸಂಘಟನಾ ಸಮಾವೇಶ ನಡೆಯಿತು. ಈ ಸಮಾವೇಶವನ್ನು ಉದ್ಘಾಟಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್…

Read More

ಮಂಗಳೂರು ನಾಗೂರಿ ದುರಂತ: ತಡೆಗೋಡೆ ಕುಸಿದು ಒಂದೇ ಕುಟುಂಬದ ಮೂವರು ಸಾವು; ಭಾರೀ ಮಳೆಗೆ ನಗರ ತತ್ತರ …. !

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯು ಮಂಗಳೂರು ನಗರದಲ್ಲಿ ಹೃದಯವಿದ್ರಾವಕ ದುರಂತವೊಂದಕ್ಕೆ ಮುನ್ನುಡಿ ಬರೆದಿದೆ . ನಗರದ ಕಂಕನಾಡಿ ಸಮೀಪದ ನಾಗೂರಿಯಲ್ಲಿ ತಡೆಗೋಡೆ ಕುಸಿದು ಹಳೆಯ ಹಂಚಿನ ಮನೆಯ ಮೇಲೆ ಬಿದ್ದ ಪರಿಣಾಮ ನಿದ್ರೆಯಲ್ಲಿದ್ದ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಬುಧವಾರ ಮುಂಜಾನೆ ನಡೆದಿದೆ. ಅವಶೇಷಗಳಡಿ ಸಿಲುಕಿದ್ದ ಬಿಹಾರ ಮೂಲದ ಶಾಂತ (46), ಅನಾಮಿಕ ಚೌರಾಸಿಯಾ (8) ಹಾಗೂ ಪರಿ (4) ಅವರನ್ನು ಹೊರತೆಗೆದಾಗ ಅವರು ಮೃತಪಟ್ಟಿರುವುದು ದೃಢಪಟ್ಟಿದೆ. ದುರಂತದ…

Read More

ಕಂಕನಾಡಿ ನಾಗೂರಿ ದುರಂತ: ಇಂತಹ ಘಟನೆಗಳು ಮರುಕಳಿಸದಂತೆ ತಕ್ಷಣ ಕ್ರಮ ಕೈಗೊಳ್ಳಿ – ಶ್ರೀ ಐವನ್ ಡಿ’ಸೋಜಾ

ಮಂಗಳೂರು ನಗರದ ಕಂಕನಾಡಿ ಸಮೀಪದ ನಾಗೂರಿಯಲ್ಲಿ ಭಾರೀ ಮಳೆಯಿಂದ ತಡೆಗೋಡೆ ಕುಸಿದು ಶಾಂತಾ (46), ಅನಾಮಿಕಾ ಚೌರಾಸಿಯಾ (8) ಹಾಗೂ ಪರಿ (4) ಮೃತಪಟ್ಟಿರುವ ದುರಂತದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರು ತಿಳಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಅವರು ಸಂತಾಪ ಸೂಚಿಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಶ್ರೀ…

Read More

ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಿ: ಪೊಲೀಸ್ ಆಯುಕ್ತರಿಗೆ ಮಹಿಳಾ ಕಾಂಗ್ರೆಸ್ ಮನವಿ

ಮಂಗಳೂರಿನ ಕಾಟಿಪಳ್ಳದಲ್ಲಿ 17 ವರ್ಷದ ಗರ್ಭಿಣಿ ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆಗೆ ಒತ್ತಾಯ ಕೇಳಿಬಂದಿದೆ. ಈ ಕುರಿತು ಸುರತ್ಕಲ್ ಮಹಿಳಾ ಕಾಂಗ್ರೆಸ್ ನಿಯೋಗ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಭೇಟಿ ಮಾಡಿದ ಸುರತ್ಕಲ್ ಮಹಿಳಾ ಕಾಂಗ್ರೆಸ್ ನಿಯೋಗ, ಪ್ರಕರಣದ ಸಂಪೂರ್ಣ ಸತ್ಯಾಂಶ ಹೊರಬರಲು ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಮಣಿಯದೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಒತ್ತಾಯಿಸಿತು. ತಪ್ಪಿತಸ್ಥ…

Read More

ಎನ್‌ಸಿಇಆರ್‌ಟಿ 7ನೇ ತರಗತಿ ಪಠ್ಯದಲ್ಲಿ ರಾಣಿ ಅಬ್ಬಕ್ಕ: ಕನ್ನಡಿಗರಿಗೆ ಹೆಮ್ಮೆಯ ಕ್ಷಣ – ಕೆಆರ್‌ಎಂಎಸ್‌ಎಸ್

ವೀರವನಿತೆಯ ಜೀವನ ರಾಷ್ಟ್ರದ ವಿದ್ಯಾರ್ಥಿಗಳಿಗೆ ತಲುಪುವುದು ಐತಿಹಾಸಿಕ ಬೆಳವಣಿಗೆ; ಎನ್‌ಸಿಇಆರ್‌ಟಿಗೆ ಸಂಘಟನೆಗಳ ಅಭಿನಂದನೆ ಬೆಂಗಳೂರು, ಜುಲೈ 1: ಕರ್ನಾಟಕದ ವೀರವನಿತೆ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟದ ಪ್ರಥಮ ಮಹಿಳಾ ಹೋರಾಟಗಾರ್ತಿಯರಲ್ಲಿ ಒಬ್ಬರಾದ ರಾಣಿ ಅಬ್ಬಕ್ಕ ಅವರ ಜೀವನಾಧಾರಿತ ಪಾಠವನ್ನು ಎನ್‌ಸಿಇಆರ್‌ಟಿ 7ನೇ ತರಗತಿಯ ಇಂಗ್ಲಿಷ್ ಪಠ್ಯಪುಸ್ತಕದಲ್ಲಿ ಸೇರ್ಪಡೆಗೊಳಿಸಿರುವುದು ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ಕೆಆರ್‌ಎಂಎಸ್‌ಎಸ್) ಹಾಗೂ ಅಖಿಲ ಭಾರತೀಯ ಶೈಕ್ಷಿಕ ಮಹಾಸಂಘ ತಿಳಿಸಿವೆ. ಈ ಐತಿಹಾಸಿಕ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿರುವ…

Read More

ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ: ಗಾಯಾಳು ಲಿಂಗಪ್ಪ ಗೌಡರಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಚಿಕಿತ್ಸೆಗೆ ನೆರವು ಭರವಸೆ

ಗಂಜಿಮಠ ಬಡಗುಳಿಪಾಡಿ ಗ್ರಾಮದ ಗಣೇಶನಗರದಲ್ಲಿ ಎಲ್‌ಪಿಜಿ ಗ್ಯಾಸ್ ಸೋರಿಕೆಯಿಂದ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಹಾನಿಗೀಡಾದ ಘಟನೆ ನಡೆದಿದೆ. ಘಟನೆಯಲ್ಲಿ ಮನೆ ಯಜಮಾನ ಲಿಂಗಪ್ಪ ಗೌಡ (68) ಅವರಿಗೆ ಶೇ.60ರಷ್ಟು ಸುಟ್ಟ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಲಿಂಗಪ್ಪ ಗೌಡರ ಆರೋಗ್ಯ ವಿಚಾರಿಸಿದರು. ವೈದ್ಯರೊಂದಿಗೆ ಸಮಾಲೋಚನೆ ನಡೆಸಿ…

Read More

ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯಕ್ಕೆ ರಜತ ಮಹೋತ್ಸವ ಸಂಭ್ರಮ; 25 ಸರಣಿ ದತ್ತಿ ಉಪನ್ಯಾಸ ಮಾಲಿಕೆ ಹಾಗೂ ‘ಕಾಸರಗೋಡು ಸಾಹಿತ್ಯೋತ್ಸವ–ಕನ್ನಡೋತ್ಸವ’ ಘೋಷಣೆ

ಕಾಸರಗೋಡು, ಜುಲೈ 1: ಕಾಸರಗೋಡು ಕನ್ನಡ ಗ್ರಾಮದಲ್ಲಿರುವ ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯವು ತನ್ನ ರಜತ ಮಹೋತ್ಸವ ವರ್ಷ (2000–2026)ವನ್ನು ಅಂಗವಾಗಿ 25 ಸರಣಿ ದತ್ತಿ ಉಪನ್ಯಾಸ ಮಾಲಿಕೆ ಹಾಗೂ ‘ಕಾಸರಗೋಡು ಸಾಹಿತ್ಯೋತ್ಸವ–ಕನ್ನಡೋತ್ಸವ’ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಿದೆ. ಕಾಸರಗೋಡು ಜಿಲ್ಲೆಯಲ್ಲಿ ಖಾಸಗಿ ನೆಲೆಯಲ್ಲಿ ಅತಿದೊಡ್ಡ ಕನ್ನಡ ಪುಸ್ತಕ ಸಂಗ್ರಹ ಹೊಂದಿರುವ ಈ ಗ್ರಂಥಾಲಯದಲ್ಲಿ ವಿವಿಧ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ಅಪರೂಪದ ಕೃತಿಗಳ ಸಂಗ್ರಹವಿದ್ದು, ಲೇಖಕರು, ಸಾಹಿತಿಗಳು, ಕವಿಗಳು, ಸಂಶೋಧಕರು, ಶಿಕ್ಷಣ ತಜ್ಞರು,…

Read More

ಸುರತ್ಕಲ್ ಹೈವೇ ದರೋಡೆ ಪ್ರಕರಣ: ದೋಚಿದ್ದ ಕಾರು ಬಂಟ್ವಾಳದಲ್ಲಿ ಪತ್ತೆ, ಆರೋಪಿಗಳಿಗಾಗಿ ವ್ಯಾಪಕ ಶೋಧ

ಸುರತ್ಕಲ್ ಸಮೀಪದ ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮಾ ಶೈಲಿಯಲ್ಲಿ ಚರ್ಚೆಗೆ ಗ್ರಾಸವಾದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ದರೋಡೆಕೋರರು ಕೊಂಡೊಯ್ದಿದ್ದ ಕೇರಳ ಮೂಲದ ಚಿನ್ನದ ವ್ಯಾಪಾರಿ ವಿಕಾಸ್ ಅವರಿಗೆ ಸೇರಿದ ಸ್ವಿಫ್ಟ್ ಡಿಸೈರ್ ಕಾರು ಬಂಟ್ವಾಳ ತಾಲೂಕಿನ ಕಲ್ಪನೆ ಪ್ರದೇಶದಲ್ಲಿ ಪತ್ತೆಯಾಗಿದೆ. ಜೂನ್ 29ರಂದು ನಸುಕಿನ ಜಾವ ಸುಮಾರು 3 ಗಂಟೆ ವೇಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿನ್ನದ ವ್ಯಾಪಾರಿ ವಿಕಾಸ್ ಪ್ರಯಾಣಿಸುತ್ತಿದ್ದ ಕಾರನ್ನು ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ, ಕುಟುಂಬಸ್ಥರಿಗೆ ಜೀವ ಬೆದರಿಕೆ ಒಡ್ಡಿ ಸುಮಾರು…

Read More
error: Content is protected !!