ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ಸಿಬ್ಬಂದಿಯ ಸಾಹಸ
ಉಡುಪಿ: ಮನೆಯ ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ಉಡುಪಿ ಜಿಲ್ಲಾ ಅಗ್ನಿಶಾಮಕ ಸಿಬ್ಬಂದಿ ಜೀವದ ಹಂಗು ತೊರೆದು ರಕ್ಷಿಸಿದ ಘಟನೆ ಉಡುಪಿ ನಗರದಲ್ಲಿ ನಡೆದಿದೆ. ಉಡುಪಿ ನಗರದ ಸಗ್ರಿ ನಿವಾಸಿ ಜಯಕರ ನಾಯ್ಕ್ (59) ಅವರು ಮನೆಯ ಬಾವಿಯಲ್ಲಿ ಸಿಲುಕಿಕೊಂಡಿದ್ದರು. ಅಪಾರ ಮದ್ಯಪಾನದ ಚಟ ಹೊಂದಿರುವ ಜಯಕರ ನಾಯ್ಕ್ ಅವರು ಕಾಲುಜಾರಿ ಬಾವಿಗೆ ಬಿದ್ದಿರಬಹುದೆಂದು ಅಥವಾ ತಾವೇ ಹಾರಿರುವ ಸಾಧ್ಯತೆಯೂ ಇರುವುದಾಗಿ ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಅರ್ಧ ಗಂಟೆ…