574 ಮೆಟ್ಟಿಲುಗಳಲ್ಲಿ ಭರತ ನಾಟ್ಯ ಮಾಡುತ್ತ ಅಂಜನಾದ್ರಿ ಬೆಟ್ಟ ಏರಿದ ಕಲಾವಿದೆ!
ಗಂಗಾವತಿ,: ವಿಜಯನಗರ ಜಿಲ್ಲೆಯ ಹೊಸಪೇಟೆಯ ಕಲಾವಿದೆ ಆರ್. ಹರ್ಷಿತಾ ಭರತನಾಟ್ಯ ಮಾಡುತ್ತಲೇ ಅಂಜನಾದ್ರಿ ಬೆಟ್ಟ ಏರಿ ಕಲೆ ಪ್ರದರ್ಶನ ನೀಡಿದ್ದಾರೆ. ಹನುಮದ್ ವ್ರತಾಚರಣೆ ಸಂದರ್ಭದಲ್ಲಿ, ಪಾಲಕರ ಮಾರ್ಗದರ್ಶನದಲ್ಲಿ 574 ಮೆಟ್ಟಿಲುಗಳ ಮೇಲೆ ವಿವಿಧ ಭಂಗಿಯಲ್ಲಿ ನಾಟ್ಯ ನಡೆಸಿ, ಅವರು 8 ನಿಮಿಷ 59 ಸೆಕೆಂಡಿನಲ್ಲಿ ಶಿಖರವನ್ನು ದಾಟಿದ್ದಾರೆ. ಬೆಟ್ಟದ ತುದಿಯ ಆವರಣದಲ್ಲಿ ಭರತನಾಟ್ಯ ಕಲೆ ಪ್ರದರ್ಶಿಸಿ, ದೇವರ ದರ್ಶನ ಪಡೆದ ಆರ್. ಹರ್ಷಿತಾರನ್ನು ನಂತರ ದೇವಸ್ಥಾನದಲ್ಲಿ ಸನ್ಮಾನಿಸಿ ಗೌರವಿಸಿಲಾಯಿತು. ಹನುಮಮಾಲಾ ವಿಸರ್ಜನೆ ಹಾಗೂ ಹನುಮದ್ ವ್ರತಾಚರಣೆಯ ಸಂದರ್ಭದಲ್ಲಿ,…