ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ), ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್‌ ಎ ಶ್ರವಣಬೆಳಗೊಳ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್ ನಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕವನ್ನು ಪುನರ್ ಸಂಘಟಿಸಲು ಸಮಾಲೋಚನಾ ಸಭೆಯನ್ನು ಕರೆಯಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ನ್ಯಾಯವಾದಿ ಪರಿಮಳ ರಾವ್ ಕೆ ಅವರು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಎಲ್ಲಾ ತಾಲೂಕು ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳನ್ನು ಪುನರ್…

Read More

ಮಾರ್ಚ್ 6ರಂದು ಟಾಕೀಸ್ ಆ್ಯಪ್‌ನಲ್ಲಿ ‘ಧರ್ಮ ಚಾವಡಿ’ ಸಿನೆಮಾ ಬಿಡುಗಡೆ

ಕೃಷ್ಣವಾಣಿ ಪಿಕ್ಚರ್ಸ್ ಬ್ಯಾನರ್‌ನಲ್ಲಿ ಜಗದೀಶ್ ಅಮೀನ್ ನಿರ್ಮಾಣದ, ಕಳೆದ ವರ್ಷ ಕರಾವಳಿಯಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಂಡ ತುಳು ಚಲನಚಿತ್ರ ‘ಧರ್ಮ ಚಾವಡಿ’ ಇದೀಗ ಮಾರ್ಚ್ 6ರಂದು ಟಾಕೀಸ್ ಆ್ಯಪ್ (Talkies App) OTT ಮೂಲಕ ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ರಮೇಶ್ ರೈ ಕುಕ್ಕುವಳ್ಳಿ ಮಾತನಾಡಿ, “ಮುಂದಿನ ದಿನಗಳಲ್ಲಿ ಈ ಸಿನಿಮಾವನ್ನು ಕನ್ನಡದಲ್ಲಿ ಡಬ್ ಮಾಡಿ ಕರ್ನಾಟಕದ ಇತರ ಭಾಗಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ” ಎಂದು ಮಾಹಿತಿ ನೀಡಿದರು….

Read More

ಪುತ್ತೂರಿನಲ್ಲಿ ಸರ್ಕಾರಿ ಬಾವಿ, ಕೆರೆ ಒತ್ತುವರಿ ಆರೋಪ: ಸಾರ್ವಜನಿಕ ಹಿತಾಸಕ್ತಿ ದೂರು ಸಲ್ಲಿಕೆ

ಪುತ್ತೂರು: ಪುತ್ತೂರು ನಗರಸಭೆ ಕಟ್ಟಡದ ಸಮೀಪ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿಯಲ್ಲಿ ಭೂ ಅತಿಕ್ರಮಣ ಹಾಗೂ ಸಾರ್ವಜನಿಕ ಕೆರೆಯನ್ನು ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತ, ತಹಸೀಲ್ದಾರ್, ನಗರಸಭೆ ಹಾಗೂ ನಗರ ಯೋಜನಾ ಪ್ರಾಧಿಕಾರಕ್ಕೆ ದೂರು ನೀಡಿರುವುದಾಗಿ ನೆಹರುನಗರ ನಿವಾಸಿ ಸಂತೋಷ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪುತ್ತೂರು ಹೋಬಳಿಯ ಪುತ್ತೂರು ಕಸಬಾ ಗ್ರಾಮದ ಸರ್ವೆ ನಂ. 133/9ಎ ವ್ಯಾಪ್ತಿಯ ಸುಮಾರು 0.02 ಎಕರೆ ಸರ್ಕಾರಿ ಜಾಗದಲ್ಲಿ ಅನಾದಿ ಕಾಲದಿಂದ ಬಾವಿಯೊಂದು ಇದ್ದು, ಸ್ಥಳೀಯ ದೇವಿಯ ಆರಾಧನೆಗೆ…

Read More

ಮಾ.7 ರಿಂದ 14ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ‘ಪ್ರೇಮ ಪ್ರವಾಹಿನಿ’ ರಥ ಸಂಚಾರ, ಭಕ್ತಿ ಭಾವನೆಯ ಸಾಕ್ಷಾತ್ಕಾರ

ಪ್ರೇಮಮಯಿ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವದ ಮೂಲಾಧಾರವಾದ ‘ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ’ ಹೆಸರಿನ ರಥಯಾತ್ರೆ ದೇಶಾದ್ಯಂತ ಸಂಚರಿಸುತ್ತಿದ್ದು . ಇದರ ಭಾಗವಾಗಿ ರಥಯಾತ್ರೆಯು ಮಾ.7ರಿಂದ 14ರವರೆಗೆ ದ.ಕ., ಕಾಸರಗೋಡು , ಉಡುಪಿ ಜಿಲ್ಲೆಗಳಲ್ಲಿ ಸಂಚಾರ ನಡೆಸಲಿದೆ ಎಂದು ಶ್ರೀ ಸತ್ಯಸಾಯಿ ಸೇವಾ ಸಮಿತಿಯ ರಾಜ್ಯಾಧ್ಯಕ್ಷರಾದ ಪದ್ಮನಾಭ ಪೈ, ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ‘ಪ್ರೇಮ ಪ್ರವಾಹಿನಿ’ ರಥಯಾತ್ರೆಯ ದಕ್ಷಿಣ…

Read More

ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ಚತುರ್ಥ ದಿನ

ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ ಯಕ್ಷಮಂಜರಿಯ ಚತುರ್ಥ ದಿನದ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆ ಮಾಡಿ ಮಾತನಾಡಿದ ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಧಾರ್ಮಿಕ ಮುಂದಾಳು, ಹಿರಿಯರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರು ನಮ್ಮ ಭಾರತೀಯ ಸನಾತನ ಸಂಸ್ಕೃತಿ ಉಳಿಯಬೇಕಾದರೆ ನಮ್ಮಲ್ಲಿ ಧಾರ್ಮಿಕ ಪ್ರಜ್ಞೆ ಮೂಡಬೇಕು ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಆ ಕುರಿತಾದ ಚಿಂತನೆಗೆ ಅವಕಾಶ ಇಲ್ಲದಿರುವುದರಿಂದ, ಮಕ್ಕಳು ಮಹಿಳೆಯರು ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಜಾಗೃತಿ ಸಾಧ್ಯ…

Read More

ಪುತ್ತೂರಿನಲ್ಲಿ ಭೂಮಿಗೆ ಅತೀ ಸಮೀಪದಲ್ಲಿ ಹಾರಿದ ವಿಮಾನ: ಸ್ಥಳೀಯರಲ್ಲಿ ಆತಂಕ

ಪುತ್ತೂರು: ಪುತ್ತೂರಿನಲ್ಲಿ ಗುರುವಾರ ಸಂಜೆ ವಿಮಾನವೊಂದು ಭೂಮಿ ಮಟ್ಟಕ್ಕೆ ಅತೀ ಸಮೀಪದಲ್ಲಿ ಹಾರಾಟ ನಡೆಸಿದ ದೃಶ್ಯ ಕಂಡುಬಂದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಬಳಿಕ ಇದು ಭೂ ವಿಜ್ಞಾನಕ್ಕೆ ಸಂಬಂಧಿಸಿದ ಸಮೀಕ್ಷಾ ಕಾರ್ಯವೆಂದು ತಿಳಿದು ಬಂದ ಹಿನ್ನೆಲೆಯಲ್ಲಿ ಜನರು ನಿಟ್ಟುಸಿರು ಬಿಟ್ಟರು. ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದ ಗದ್ದೆ ಪ್ರದೇಶದ ಮೇಲ್ಭಾಗದಲ್ಲಿ ನೆಲ ಮಟ್ಟಕ್ಕೆ ಬಹಳ ಸಮೀಪದಲ್ಲಿ ವಿಮಾನ ಹಾರಾಡುತ್ತಿರುವುದನ್ನು ಸ್ಥಳೀಯರು ಗಮನಿಸಿದರು. ಈ ವಿಮಾನವು ನಗರದ ವಿವಿಧ ಭಾಗಗಳ ಮೇಲೂ ಸುಮಾರು 10 ರಿಂದ 15 ಸುತ್ತು…

Read More

ಮಂಗಳೂರು ವಿಶ್ವವಿದ್ಯಾಲಯದಲ್ಲಿ 5ನೇ ರ‍್ಯಾಂಕ್‌ ಪಡೆದ ಐಷಾ: ಬರಕಾ ಸಂಸ್ಥೆಗೆ ಹೆಮ್ಮೆಯ ಕ್ಷಣ

ಆಡ್ಯಾರ್‌ನ ಬರಕಾ ಇಂಟರ್‌ನ್ಯಾಷನಲ್ ಶಾಲೆ ಹಾಗೂ ಕಾಲೇಜಿಗೆ ಮತ್ತೊಂದು ಹೆಮ್ಮೆಯ ಕ್ಷಣ ಲಭಿಸಿದೆ. ಸಂಸ್ಥೆಯ ಪದವಿ ಕಾಲೇಜಿನ ವಿದ್ಯಾರ್ಥಿನಿ ಐಷಾ ಅವರು ಮಂಗಳೂರು ವಿಶ್ವವಿದ್ಯಾಲಯದ ಬಿ.ಎ. ವಿಭಾಗದಲ್ಲಿ 5ನೇ ರ‍್ಯಾಂಕ್‌ ಗಳಿಸಿ ಸಂಸ್ಥೆಯ ಕೀರ್ತಿಪತಾಕೆಯನ್ನು ಮತ್ತೊಮ್ಮೆ ಎತ್ತಿಹಿಡಿದಿದ್ದಾರೆ.ಐಷಾ ಅವರು ಅಶ್ರಫ್ ಅಲಿ ಹಾಗೂ ರಮ್ಲತ್ ದಂಪತಿಯ ಪುತ್ರಿಯಾಗಿದ್ದು, ಅಲ್ತಾಫ್ ಉಮರ್ ಅವರ ಪತ್ನಿಯಾಗಿದ್ದಾರೆ. ಈಗಾಗಲೇ ಶೈಕ್ಷಣಿಕ ಸಾಧನೆಯಲ್ಲಿ ಮೆಚ್ಚುಗೆ ಗಳಿಸಿರುವ ಅವರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾಲಯದಲ್ಲೇ ಇಂಗ್ಲಿಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ (ಎಂ.ಎ.) ಅಭ್ಯಾಸ ಮಾಡುತ್ತಿದ್ದಾರೆ. ಅವರ…

Read More

ಮಂಗಳೂರು: ಮಾರ್ಚ್ 5ರಂದು 117ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಮ್ಯಾಪ್ಸ್ ಕಾಲೇಜು ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 117ನೇ ‘ಸಾಹಿತ್ಯ ಅಭಿರುಚಿ’ ಕಾರ್ಯಕ್ರಮ ಮಾರ್ಚ್ 5ರಂದು ಬೆಳಿಗ್ಗೆ 11:30ಕ್ಕೆ ಮ್ಯಾಪ್ಸ್ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮ್ಯಾಪ್ಸ್ ಕಾಲೇಜು ಮಂಗಳೂರಿನ ಪ್ರಾಂಶುಪಾಲರಾದ ಡಾ. ಶೃತಿ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಸಂಪನ್ಮೂಲ ಅತಿಥಿಗಳಾಗಿ ಎ.ಜೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನ ಕೇಂದ್ರ ಮಂಗಳೂರಿನ ಔಷಧ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಚಂದ್ರಶೇಖರ್ ಹಾಗೂ ವಿಜಯ ಕರ್ನಾಟಕ ದೈನಿಕದ…

Read More

ಅಜ್ಜಿ ಕಥೆ (ನೈಯಪ್ಪದ ಆಸೆ )

ಒಂದು ಊರಲ್ಲಿ ಒಬ್ಬ ಅಜ್ಜ ಅಜ್ಜಿ ವಾಸವಾಗಿದ್ದರು, ಅಜ್ಜ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಾ ಜೀವನ ಸಾಗಿಸುತ್ತಿದ್ದರು, ಒಂದು ದಿನ ಅಜ್ಜನಿಗೆ ನೈಯ್ಯಪ್ಪ ಮಾಡಿ ತಿನ್ನಬೇಕು ಅಂತ ಆಸೆ ಆಯಿತು, ಅದಕ್ಕೋಸ್ಕರ ಅಂಗಡಿಗೆ ಹೋಗಿ ಬೇಕಾದ ಸಾಮಾನುಗಳನ್ನು ತಂದು ಅಜ್ಜಿಯ ಕಯ್ಯಲ್ಲಿ ಕೊಟ್ಟರು, ನೀನು ನೆಯ್ಯಪ್ಪ ಮಾಡು ಅಷ್ಟರಲ್ಲಿ ನಾನು ಸ್ನಾನ ಮಾಡಿ ಬರುತ್ತೇನೆ ಅಂತ ಕೆರೆ ಕಡೆ ಹೋದರು, ಅಜ್ಜಿ ಅಕ್ಕಿ, ಬೆಲ್ಲವನ್ನು ನ್ನು ಅರೆದು ನೆಯ್ಯಪ್ಪ ಮಾಡಲು ಶುರುಮಾಡಿದಳು, ಮೊದಲಿಗೆ ಮಾಡಿದ ನೆಯ್ಯಪ್ಪ ದ ರುಚಿಯನ್ನು…

Read More

ತುಳು ಅಧಿಕೃತ ಭಾಷೆ ಕುರಿತು ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ

ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವಾಗ ಅನುಸರಿಸಿರುವ ಮಾನದಂಡಗಳ ಕುರಿತು ಅಧ್ಯಯನ ನಡೆಸಲು ರಚಿಸಲಾಗಿದ್ದ ಸಮಿತಿಯು ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಂದಿನ ನಿರ್ದೇಶಕಿ ಕೆ.ಎಂ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ ಆರು ಸದಸ್ಯರ ಅಧ್ಯಯನ ಸಮಿತಿಯನ್ನು ಸರ್ಕಾರ ನೇಮಿಸಿತ್ತು. ಈ ಸಮಿತಿ…

Read More
error: Content is protected !!