ದೇರಳಕಟ್ಟೆಯಲ್ಲಿ ಎಂಸಿಸಿ ಬ್ಯಾಂಕ್ 22ನೇ ಶಾಖೆ ಉದ್ಘಾಟನೆ

ಮಂಗಳೂರು, ಜೂ. 28: ಗ್ರಾಹಕರ ಸರ್ವತೋಮುಖ ಅಭಿವೃದ್ಧಿ ಹಾಗೂ ಸಮುದಾಯದ ಪ್ರಗತಿಯೇ ಎಂಸಿಸಿ ಬ್ಯಾಂಕ್‌ನ ಮುಖ್ಯ ಧ್ಯೇಯವಾಗಿದ್ದು, ಇದೇ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಗ್ರಾಹಕರ ವಿಶ್ವಾಸ ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಹೇಳಿದರು. ದೇರಳಕಟ್ಟೆಯ ಫಾದರ್ ಮುಲ್ಲರ್ ಕಟ್ಟಡ ಸಂಕೀರ್ಣದಲ್ಲಿ ಎಂಸಿಸಿ ಬ್ಯಾಂಕ್‌ನ 22ನೇ ಶಾಖೆ ಹಾಗೂ 16ನೇ ಎಟಿಎಂ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 114 ವರ್ಷಗಳ ಸೇವೆ ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್, 2025-26ನೇ ಹಣಕಾಸು ವರ್ಷದಲ್ಲಿ 22.89 ಶೇಕಡಾ…

Read More

ಅಧ್ಯಕ್ಷೀಯ ಅಧಿಕಾರ ವಿಸ್ತರಣೆ: ಟ್ರಂಪ್‌ಗೆ ಅಮೆರಿಕ ಸುಪ್ರೀಂ ಕೋರ್ಟ್ ಬೆಂಬಲ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸುವ ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸ್ವತಂತ್ರ ಫೆಡರಲ್ ಸಂಸ್ಥೆಗಳ ಮುಖ್ಯಸ್ಥರನ್ನು ವಜಾಗೊಳಿಸುವ ಅಧಿಕಾರವನ್ನು ಮಾನ್ಯಗೊಳಿಸಿದೆ. ಆದರೆ, ಅಮೆರಿಕದ ಕೇಂದ್ರ ಬ್ಯಾಂಕ್‌ಗೆ ಸಂಬಂಧಿಸಿದ ವಿಷಯದಲ್ಲಿ ಮಾತ್ರ ವಿನಾಯಿತಿ ನೀಡಿದೆ. ನ್ಯಾಯಾಲಯವು ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿ ಸದಸ್ಯೆ ಲಿಸಾ ಕುಕ್ ಅವರನ್ನು ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ನೀಡಿದೆ. ಇದೇ ವೇಳೆ, ಅಧ್ಯಕ್ಷರು ತಮ್ಮ ಇಚ್ಛೆಯಂತೆ ಹಲವು ಸ್ವತಂತ್ರ ಸಂಸ್ಥೆಗಳ ಮುಖ್ಯಸ್ಥರನ್ನು ವಜಾಗೊಳಿಸಬಹುದೆಂದು ಬಹುಮತದ…

Read More

ವಿಶೇಷ ಸಹಕಾರ ಸಪ್ತಾಹಕ್ಕೆ ಮಂಗಳೂರಿನಲ್ಲಿ ಚಾಲನೆ: ಸಹಕಾರಿ ಕ್ಷೇತ್ರ ಬಲಪಡಿಸಲು ಕರೆ

ಮಂಗಳೂರು, ಜೂನ್ 29: ಕೇಂದ್ರ ಸಹಕಾರ ಸಚಿವಾಲಯ ಸ್ಥಾಪನೆಯ ಐದು ವರ್ಷಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಎಸ್‌ಸಿಡಿಸಿಸಿ ಬ್ಯಾಂಕ್, ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶೇಷ ಸಹಕಾರ ಸಪ್ತಾಹಕ್ಕೆ ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ರಾಜ್ಯದಲ್ಲಿ 47 ಸಾವಿರಕ್ಕೂ ಹೆಚ್ಚು ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು,…

Read More

ರಾಜ್ಯಸಭಾ ಸದಸ್ಯರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಸ್ವೀಕಾರ

ನವದೆಹಲಿ, ಜೂನ್ 29: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸೋಮವಾರ ನವದೆಹಲಿಯ ಉಪರಾಷ್ಟ್ರಪತಿ ಕಚೇರಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭಾ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಮಲ್ಲಿಕಾರ್ಜುನ ಖರ್ಗೆ ಅವರ ಪತ್ನಿ ರಾಧಾಬಾಯಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಸೇರಿದಂತೆ ಪಕ್ಷದ…

Read More

ಯೂನಿಯನ್‌ಗಳ ಮತ್ತು ಅಧಿಕಾರಿಗಳ ನಡುವಿನ ಮಾತುಕತೆ ಯಶಸ್ವಿ: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಬರ್ ಸೇವೆ ಪುನರಾರಂಭ

ಮಂಗಳೂರು; ಜೂ29: ಉಬರ್ ಕಂಪೆನಿಯ ಅನ್ಯಾಯದ ನೀತಿ ಹಾಗೂ ಚಾಲಕರ ಜೀವನೋಪಾಯಕ್ಕೆ ಧಕ್ಕೆ ಉಂಟುಮಾಡುತ್ತಿರುವ ಕ್ರಮಗಳನ್ನು ಖಂಡಿಸಿ ಮಂಗಳೂರು ಆನ್ ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂಪೆನಿಯೊಂದಿಗೆ ಹಲವು ಬೇಡಿಕೆಗಳನ್ನು ನೀಡಿ ತನ್ನ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು ಇದಕ್ಕೆ ಸ್ಪಂದಿಸಿದ ವಿಮಾನ ನಿಲ್ದಾನದ ಅಧಿಕಾರಿಗಳು ಇವತ್ತು ಯೂನಿಯನ್ ಗಳ ನಾಯಕರ ಸಭೆ ಕರೆಸಿ ಮಾತುಕತೆ ನಡೆಸಿ ತಮ್ಮ ಬೇಡಿಕೆಗಳನ್ನು ಪೂರೈಸುವುದಾಗಿ ಹೇಳಿದರು. ಈ ಸಭೆಯಲ್ಲಿ ದ.ಕನ್ನಡ ಜಿಲ್ಲಾ ಆನ್ ಲೈನ್ ಟ್ಯಾಕ್ಸಿ…

Read More

ಉಪ್ಪಳದಲ್ಲಿ ವೃದ್ಧ ಮೀನು ಮಾರಾಟಗಾರ್ತಿಗೆ ಕತ್ತಿ ತೋರಿಸಿ ಚಿನ್ನದ ಸರ ದರೋಡೆ

ಉಪ್ಪಳ: ಮೀನು ಮಾರಾಟಗಾರ್ತಿಯಾದ ವೃದ್ಧ ಮಹಿಳೆ ನಡೆದು ಹೋಗುತ್ತಿರುವಾಗ ದಾರಿ ಅಡ್ಡಗಟ್ಟಿದ ದುಷ್ಕರ್ಮಿಗಳು ಕತ್ತಿ ತೋರಿಸಿ ಬೆದರಿಸಿ ಕುತ್ತಿಗೆಯಿಂದ ಚಿನ್ನದ ಸರ ಮತ್ತು ಕಿವಿಯಿಂದ ಬೆಂಡೋಲೆ ತೆಗೆದು ಪರಾರಿಯಾದ ಘಟನೆ ಇಂದು ಬೆಳಿಗ್ಗೆ ಉಪ್ಪಳ ಮಣಿಮುಂಡದಲ್ಲಿ ಸುಮಾರು 10 ಗಂಟೆಯ ವೇಳೆಗೆ ಈ ಘಟನೆ ನಡೆಯಿತು.ಮಣಿಮುಂಡದ ರೖಲ್ವೇ ಅಡಿಸೇತುವೆ ಬಳಿ ಘಟನೆ ನಡೆದಿದೆ. ಉಪ್ಪಳ ಶಾರದಾ ನಗರ ನಿವಾಸಿ 60 ರ ಹರೆಯದ ಮೀನು ಮಾರಾಟ ಮಾಡುವ ಮಹಿಳೆ ಉಪ್ಪಳ ಮೀನು ಮಾರುಕಟ್ಟೆಯತ್ತ ನಡೆದು ಬರುವಾಗ ಹೊಂಚು…

Read More

ಕುದ್ಮುಲ್ ರಂಗರಾವ್ ರವರ ಹೆಸರು ಚಿರಸ್ಥಾಯಿಯಾಗಿ ಉಳಿಯಬೇಕು :- ಶಾಸಕ ಕಾಮತ್

ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ, ಕುದ್ಮುಲ್ ರಂಗರಾವ್ ರವರ ಜನ್ಮದಿನದ ಅಂಗವಾಗಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಎಸ್ಸಿ ಮೋರ್ಚಾ ವತಿಯಿಂದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಸ್ಮಾರಕಕ್ಕೆ ಪುಷ್ಪ ನಮನಗಳ ಸಹಿತ ಗೌರವ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಪೂಜನೀಯ ಕುದ್ಮುಲ್ ರಂಗರಾಯರು ಶೋಷಿತರ ಅಭಿವೃದ್ಧಿಗಾಗಿ ಇಡೀ ಬದುಕನ್ನು ಮುಡಿಪಾಗಿಟ್ಟ ಮಹಾನ್ ಮಾನವತಾವಾದಿಗಳು. ಭಿಕ್ಷೆ ಬೇಡಿಯಾದರೂ ದಲಿತ ಬಂಧುಗಳನ್ನು ಸಮಾಜದ ಮುಖ್ಯ ವಾಹಿನಿಗೆ ತರುತ್ತೇನೆ ಎಂಬ ಅಚಲ ವಿಶ್ವಾಸ ಹೊಂದಿದ್ದವರು….

Read More

ಉಡುಪಿ: ಎರಡು ದೈವಸ್ಥಾನಗಳ ಕಾಣಿಕೆ ಡಬ್ಬಿ ಕಳವು ಪ್ರಕರಣ ಭೇದಿಸಿದ ಪೊಲೀಸರು; ಆರೋಪಿ ಬಂಧನ

ಉಡುಪಿ: ನಗರದ ಎರಡು ದೈವಸ್ಥಾನಗಳ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಉಡುಪಿ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಬಾಗಲಕೋಟೆ ಮೂಲದ ಮುದುಕಪ್ಪ (27) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಈ ಹಿಂದೆಯೂ ವಿವಿಧ ದೇವಸ್ಥಾನಗಳ ಕಾಣಿಕೆ ಹುಂಡಿಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ವೇಳೆ ದೈವಸ್ಥಾನಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ಅದರ ಆಧಾರದ ಮೇಲೆ ಆರೋಪಿಯನ್ನು…

Read More

ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಹೆಚ್ಚುವರಿ ಆಟೋ ನಿಲ್ದಾಣಕ್ಕೆ ಮನವಿ: ಶಾಸಕ ರಾಜೇಶ್ ನಾಯ್ಕ್ ಅವರನ್ನು ಭೇಟಿ ಮಾಡಿದ ರಿಕ್ಷಾ ಚಾಲಕರ ನಿಯೋಗ

ಬಂಟ್ವಾಳ, ಜೂನ್ 29: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಆಟೋ ರಿಕ್ಷಾಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರ ಸಂಘದ ನಿಯೋಗವು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ನಿಯೋಗದ ಸದಸ್ಯರು, ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಪ್ರಸ್ತುತ ಎರಡು ಆಟೋ ರಿಕ್ಷಾ ಪಾರ್ಕಿಂಗ್ ಸ್ಥಳಗಳಿದ್ದು, ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಸಾಕಾಗುತ್ತಿಲ್ಲ ಎಂದು ಶಾಸಕರ ಗಮನಕ್ಕೆ ತಂದರು. ಬಸ್…

Read More

ಮಲ್ಪೆ ಬಂದರಿನಲ್ಲಿ ನಿರ್ವಹಣೆಯಿಲ್ಲದೆ ಪಾಳುಬಿದ್ದ ಶೌಚಾಲಯಗಳು-12 ವರ್ಷಗಳ ಹಿಂದೆ ನಿರ್ಮಿಸಿದ ಸೌಲಭ್ಯ ಇಂದಿಗೂ ಬಳಕೆಗೆ ಇಲ್ಲ; ಮೂಲಸೌಕರ್ಯ ಕೊರತೆಗೆ ಮೀನುಗಾರರ ಆಕ್ರೋಶ

ಉಡುಪಿ: ಏಷ್ಯಾದ ಅತಿದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆ ಬಂದರಿನಲ್ಲಿ ಮೀನುಗಾರರ ಅನುಕೂಲಕ್ಕಾಗಿ ಸುಮಾರು 12 ವರ್ಷಗಳ ಹಿಂದೆ ನಿರ್ಮಿಸಲಾದ ಶೌಚಾಲಯಗಳು ನಿರ್ವಹಣೆಯ ಕೊರತೆಯಿಂದ ಇಂದಿಗೂ ಬಳಕೆಗೆ ಲಭ್ಯವಾಗದೆ ಪಾಳುಬಿದ್ದಿವೆ. ಮಹಿಳಾ ಮೀನುಗಾರ್ತಿಯರಿಗಾಗಿ ನಿರ್ಮಿಸಲಾಗಿದ್ದ ವಿಶ್ರಾಂತಿ ಕೊಠಡಿಯೂ ನಿರುಪಯುಕ್ತವಾಗಿದ್ದು, ಮೂಲಸೌಕರ್ಯಗಳ ಕೊರತೆಗೆ ಮೀನುಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೀನುಗಾರಿಕೆ ಇಲಾಖೆಯು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಎರಡು ಶೌಚಾಲಯಗಳನ್ನು ನಿರ್ಮಿಸಿದ್ದರೂ, ಅವುಗಳ ನಿರ್ವಹಣೆಗೆ ಸಿಬ್ಬಂದಿಯನ್ನು ನೇಮಿಸದ ಕಾರಣ ಸಾರ್ವಜನಿಕ ಬಳಕೆಗೆ ತೆರೆಯಲಾಗಿಲ್ಲ ಎಂದು ಮೀನುಗಾರರು…

Read More
error: Content is protected !!