Headlines

ಉಡುಪಿ: ಎರಡು ದೈವಸ್ಥಾನಗಳ ಕಾಣಿಕೆ ಡಬ್ಬಿ ಕಳವು ಪ್ರಕರಣ ಭೇದಿಸಿದ ಪೊಲೀಸರು; ಆರೋಪಿ ಬಂಧನ

ಉಡುಪಿ: ನಗರದ ಎರಡು ದೈವಸ್ಥಾನಗಳ ಕಾಣಿಕೆ ಡಬ್ಬಿಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಉಡುಪಿ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಬಾಗಲಕೋಟೆ ಮೂಲದ ಮುದುಕಪ್ಪ (27) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಈ ಹಿಂದೆಯೂ ವಿವಿಧ ದೇವಸ್ಥಾನಗಳ ಕಾಣಿಕೆ ಹುಂಡಿಗಳನ್ನು ಕಳವು ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ವೇಳೆ ದೈವಸ್ಥಾನಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ಅದರ ಆಧಾರದ ಮೇಲೆ ಆರೋಪಿಯನ್ನು…

Read More

ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಹೆಚ್ಚುವರಿ ಆಟೋ ನಿಲ್ದಾಣಕ್ಕೆ ಮನವಿ: ಶಾಸಕ ರಾಜೇಶ್ ನಾಯ್ಕ್ ಅವರನ್ನು ಭೇಟಿ ಮಾಡಿದ ರಿಕ್ಷಾ ಚಾಲಕರ ನಿಯೋಗ

ಬಂಟ್ವಾಳ, ಜೂನ್ 29: ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಆಟೋ ರಿಕ್ಷಾಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರ ಸಂಘದ ನಿಯೋಗವು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ನಿಯೋಗದ ಸದಸ್ಯರು, ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಪ್ರಸ್ತುತ ಎರಡು ಆಟೋ ರಿಕ್ಷಾ ಪಾರ್ಕಿಂಗ್ ಸ್ಥಳಗಳಿದ್ದು, ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ವ್ಯವಸ್ಥೆ ಸಾಕಾಗುತ್ತಿಲ್ಲ ಎಂದು ಶಾಸಕರ ಗಮನಕ್ಕೆ ತಂದರು. ಬಸ್…

Read More

ಮಲ್ಪೆ ಬಂದರಿನಲ್ಲಿ ನಿರ್ವಹಣೆಯಿಲ್ಲದೆ ಪಾಳುಬಿದ್ದ ಶೌಚಾಲಯಗಳು-12 ವರ್ಷಗಳ ಹಿಂದೆ ನಿರ್ಮಿಸಿದ ಸೌಲಭ್ಯ ಇಂದಿಗೂ ಬಳಕೆಗೆ ಇಲ್ಲ; ಮೂಲಸೌಕರ್ಯ ಕೊರತೆಗೆ ಮೀನುಗಾರರ ಆಕ್ರೋಶ

ಉಡುಪಿ: ಏಷ್ಯಾದ ಅತಿದೊಡ್ಡ ಸರ್ವಋತು ಮೀನುಗಾರಿಕಾ ಬಂದರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲ್ಪೆ ಬಂದರಿನಲ್ಲಿ ಮೀನುಗಾರರ ಅನುಕೂಲಕ್ಕಾಗಿ ಸುಮಾರು 12 ವರ್ಷಗಳ ಹಿಂದೆ ನಿರ್ಮಿಸಲಾದ ಶೌಚಾಲಯಗಳು ನಿರ್ವಹಣೆಯ ಕೊರತೆಯಿಂದ ಇಂದಿಗೂ ಬಳಕೆಗೆ ಲಭ್ಯವಾಗದೆ ಪಾಳುಬಿದ್ದಿವೆ. ಮಹಿಳಾ ಮೀನುಗಾರ್ತಿಯರಿಗಾಗಿ ನಿರ್ಮಿಸಲಾಗಿದ್ದ ವಿಶ್ರಾಂತಿ ಕೊಠಡಿಯೂ ನಿರುಪಯುಕ್ತವಾಗಿದ್ದು, ಮೂಲಸೌಕರ್ಯಗಳ ಕೊರತೆಗೆ ಮೀನುಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮೀನುಗಾರಿಕೆ ಇಲಾಖೆಯು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಎರಡು ಶೌಚಾಲಯಗಳನ್ನು ನಿರ್ಮಿಸಿದ್ದರೂ, ಅವುಗಳ ನಿರ್ವಹಣೆಗೆ ಸಿಬ್ಬಂದಿಯನ್ನು ನೇಮಿಸದ ಕಾರಣ ಸಾರ್ವಜನಿಕ ಬಳಕೆಗೆ ತೆರೆಯಲಾಗಿಲ್ಲ ಎಂದು ಮೀನುಗಾರರು…

Read More

ಮಕ್ಕಳ ಆರೋಗ್ಯಕ್ಕೆ ಪಲ್ಸ್ ಪೋಲಿಯೊ ಲಸಿಕೆ ಅತ್ಯಗತ್ಯ: ಪವನ್ ಕುಮಾರ್ ಶಿರ್ವ

ಕಾರ್ಕಳ, ಜೂ. 29: ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೊ ಲಸಿಕೆ ಕಡ್ಡಾಯವಾಗಿ ನೀಡಬೇಕು. ಲಸಿಕೆ ನೀಡುವುದರಿಂದ ಮಕ್ಕಳ ಆರೋಗ್ಯ ಸದೃಢವಾಗಿದ್ದು, ಪೋಲಿಯೊ ನಿರ್ಮೂಲನೆಗೆ ಸಹಕಾರಿಯಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಹೇಳಿದರು. ಅವರು ಕಾರ್ಕಳ ತಾಲೂಕಿನ ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನವನ್ನು ಮಗುವಿಗೆ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ….

Read More

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತಸಾಗರ: ಒಂದೇ ದಿನ 40 ಸಾವಿರಕ್ಕೂ ಅಧಿಕ ಭಕ್ತರ ಆಗಮನ

ಸುಬ್ರಹ್ಮಣ್ಯ, : ಸರಣಿ ರಜೆಗಳ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ನಾಗಾರಾಧನಾ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ 40 ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಶುಕ್ರವಾರದ ರಜೆ, ನಾಲ್ಕನೇ ಶನಿವಾರ ಹಾಗೂ ಭಾನುವಾರದ ರಜೆ ಒಂದೇ ಸಂದರ್ಭದಲ್ಲಿ ಬಂದಿರುವುದರಿಂದ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಶುಕ್ರವಾರದಿಂದಲೇ ಕ್ಷೇತ್ರಕ್ಕೆ ಆಗಮಿಸಲು ಆರಂಭಿಸಿದ್ದರು. ಪರಿಣಾಮವಾಗಿ ದೇವಸ್ಥಾನದ ಎಲ್ಲಾ ವಸತಿಗೃಹಗಳು ಭರ್ತಿಯಾಗಿದ್ದು, ಖಾಸಗಿ ಲಾಡ್ಜ್‌ಗಳಲ್ಲೂ ಕೊಠಡಿಗಳು ಸಂಪೂರ್ಣ ಭರ್ತಿಯಾಗಿದ್ದವು. ಕೊಠಡಿ ಸಿಗದ…

Read More

ಮಂಗಳೂರು: ಕಾರಿಗೆ ಅಡ್ಡಗಟ್ಟಿ ಉದ್ಯಮಿ ಕುಟುಂಬವನ್ನು ಅಪಹರಿಸಿ ದರೋಡೆ; ಕಾರಿನೊಂದಿಗೆ ಪರಾರಿ

ಮಂಗಳೂರು, ಜೂ. 29: ಮುಂಬೈಯಲ್ಲಿ ಸ್ನೇಹಿತನ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಕೇರಳಕ್ಕೆ ಹಿಂದಿರುಗುತ್ತಿದ್ದ ಉದ್ಯಮಿಯೊಬ್ಬರ ಕಾರನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡಗಟ್ಟಿ, ಅವರ ಪತ್ನಿ ಹಾಗೂ ಮಗನನ್ನು ಕಾರಿನ ಸಮೇತ ಅಪಹರಿಸಿ ಚಿನ್ನಾಭರಣ, ಬೆಲೆಬಾಳುವ ವಸ್ತುಗಳು ಮತ್ತು ಕಾರನ್ನು ದೋಚಿದ ಘಟನೆ ಸೋಮವಾರ ಮುಂಜಾನೆ ಬೈಕಂಪಾಡಿ ಸಮೀಪದ ದ್ವಾರ ಹೋಟೆಲ್ ಬಳಿ ನಡೆದಿದೆ. ಕೇರಳದ ಪಯ್ಯನ್ನೂರು ನಿವಾಸಿ ಹಾಗೂ ಉದ್ಯಮಿ ವಿಕಾಸ್ ಅವರು ಪತ್ನಿ ಮತ್ತು ಮಗನೊಂದಿಗೆ ಕಾರಿನಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಮುಂಜಾನೆ ಸುಮಾರು 2.30ರ ವೇಳೆಗೆ ರಾಷ್ಟ್ರೀಯ…

Read More

ಲಯನ್ಸ್ ಡಿಸ್ಟ್ರಿಕ್ಟ್ 317ಡಿ ‘ಧನ್ಯೋಸ್ಮಿ’ ಜಿಲ್ಲಾ ಅವಾರ್ಡ್ ನೈಟ್ ವೈಭವ

ಮಂಗಳೂರು, ಜೂ. 29: ಲಯನ್ಸ್ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ 317ಡಿ ವತಿಯಿಂದ ಆಯೋಜಿಸಲಾದ ‘ಧನ್ಯೋಸ್ಮಿ’ ಜಿಲ್ಲಾ ಅವಾರ್ಡ್ ನೈಟ್ ಕಾರ್ಯಕ್ರಮ ಮಂಗಳೂರಿನಲ್ಲಿ ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯಿತು. ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಲಯನ್ಸ್ ಸದಸ್ಯರ ಸಮ್ಮುಖದಲ್ಲಿ ನಡೆದ ಸಮಾರಂಭವನ್ನು ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿರುವ ಕ್ಯಾಬಿನೆಟ್ ತಂಡ…

Read More

ಸ್ಟೇಟ್ ಬ್ಯಾಂಕ್–ಬೋಂದೆಲ್ ಮಾರ್ಗಕ್ಕೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್ ಸೇವೆಗೆ ಡಿವೈಎಫ್‌ಐ ಮನವಿ

ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್‌ನಿಂದ ಬೋಂದೆಲ್ ನಡುವಿನ ಮಾರ್ಗದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸರ್ಕಾರಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಆರಂಭಿಸುವಂತೆ ಒತ್ತಾಯಿಸಿ ಡಿವೈಎಫ್‌ಐ ಕೊಂಚಾಡಿ ಘಟಕದ ನೇತೃತ್ವದಲ್ಲಿ ಭಾನುವಾರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಈಗಿರುವ ಬಸ್‌ಗಳ ಸಂಖ್ಯೆ ಸಾಕಾಗುತ್ತಿಲ್ಲ. ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ತುರ್ತಾಗಿ ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿ ಸಲ್ಲಿಸುವ ಸಂದರ್ಭದಲ್ಲಿ ಡಿವೈಎಫ್‌ಐ ಮುಖಂಡರಾದ ವೆಂಕಟೇಶ್,…

Read More

ಮಂಗಳೂರು: ಫೇಸ್‌ಬುಕ್‌ನಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಆರೋಪ – ವ್ಯಕ್ತಿ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನ ‘ಸನಾತನಿ ಸಿಂಹ’ ಎಂಬ ಪೇಜ್ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಪ್ರಕಟಿಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ 2025ರ ಸೆಪ್ಟೆಂಬರ್‌ 18ರಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ವಿಟ್ಲ ಠಾಣೆ ಪೊಲೀಸರು, ಆರೋಪಿಯಾದ ಬೆಂಗಳೂರಿನ ವಿದ್ಯಮಾನ್ಯನಗರ ನಿವಾಸಿ ಆನಂದ್ ಎ. ಅವರನ್ನು ಜೂನ್‌ 27ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ತನಿಖೆ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ವಿಷಯಗಳನ್ನು ಪ್ರಸಾರ…

Read More

ನೂತನ ವಿಧಾನಪರಿಷತ್ ಸದಸ್ಯ ಪಿ.ಎ. ಮೋಹನ್‌ರಿಂದ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ

ಮಂಗಳೂರು: ನೂತನವಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಪಿ.ಎ. ಮೋಹನ್ ಅವರು ಇಂದು ಮಾಜಿ ಸಚಿವ ಬಿ. ರಮಾನಾಥ ರೈ ಅವರ ನಿವಾಸಕ್ಕೆ ಭೇಟಿ ನೀಡಿ, ಅವರೊಂದಿಗೆ ಕುಶಲೋಪರಿ ವಿಚಾರಿಸಿದರು. ಭೇಟಿಯ ವೇಳೆ ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯತೆ ಹಾಗೂ ಜನಪರ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಉಭಯ ನಾಯಕರು ಸುದೀರ್ಘವಾಗಿ ಚರ್ಚೆ ನಡೆಸಿದರು. ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಯೋಜನೆಗಳು ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳನ್ನು ಇನ್ನಷ್ಟು ಸಕ್ರಿಯಗೊಳಿಸುವ…

Read More
error: Content is protected !!