ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ದ್ವಿತೀಯ ದಿನ
ಯಕ್ಷ ಸ್ನೇಹ ಕಲಾಪ್ರತಿಷ್ಠಾನ (ರಿ) ಕೊಂಚಾಡಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಲೆ ಅಷ್ಟಾಹ ಸಂಭ್ರಮ ಯಕ್ಷಮಂಜರಿಯ ದ್ವಿತೀಯ ದಿನದ ಕಾರ್ಯಕ್ರಮವನ್ನು ಶ್ರೀ ದುರ್ಗಾಪರಮೇಶ್ವರೀ ನಾಗಕನ್ನಿಕ ದೇವಸ್ಥಾನದ ಪ್ರಧಾನ ಅರ್ಚಕರಾದ ವಿದ್ವಾನ್ ಶ್ರೀ ಅರವಿಂದ ಭಟ್ ಇವರು ದೀಪ ಪ್ರಜ್ವಲನೆ ಮಾಡಿ ಮಾತನಾಡುತ್ತಾ ದೇವಸ್ಥಾನಗಳು ಕೇವಲ ಪೂಜಾ ಕೇಂದ್ರಗಳಾಗದೇ ನಮ್ಮ ಸಂಸ್ಕೃತಿ ಸಂಸ್ಕಾರ ಬೆಳೆಸುವ ಕೇಂದ್ರಗಳಾಗ ಬೇಕು ಎಂದು ಹೇಳುತ್ತಾ ಇಂತಹ ಕಾರ್ಯಕ್ರಮಗಳು ಪ್ರತಿಷ್ಠಾನದಿಂದ ಆಯೋಜಿಸಲ್ಪಡಲಿ ದೇವರ ಅನುಗ್ರಹ ಸರ್ವರಿಗೂ ಪ್ರಾಪ್ತವಾಗಲಿ ಎಂದು…