ಮಂಗಲ್ಪಾಡಿ ಪಂಚಾಯತಿನಲ್ಲಿ ಸೂರ್ಯನಿಗೂ ಸವಾಲೆಸೆಯುವ ಹಗಲು ದೀಪಗಳ ವೈಭವ : ಸಾರ್ವಜನಿಕರ ಹಣ ವಿದ್ಯುತ್ ರೂಪದಲ್ಲಿ ಪೋಲು: ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ

​ಮಂಜೇಶ್ವರ: ಸೂರ್ಯನ ಬೆಳಕು ಸಾಲದೋ ಏನೋ ಎಂಬಂತೆ ಮಂಗಲ್ಪಾಡಿ ಪಂಚಾಯತ್ ತನ್ನ ವ್ಯಾಪ್ತಿಯಲ್ಲಿ ಹಗಲು ಹೊತ್ತಿನಲ್ಲೂ ಬೀದಿ ದೀಪಗಳನ್ನು ಉರಿಸಿ ‘ಹೊಸ ಇತಿಹಾಸ’ ಬರೆಯುತ್ತಿದೆ.ಪೆರಿಂಗಡಿ ರಸ್ತೆಯ ಜನಪ್ರಿಯ ಸರ್ವೀಸ್ ರಸ್ತೆ ಹಾಗೂ ಕುಬಣೂರು ಪುಳಿಕುತ್ತಿ ಸ್ಮಶಾನದ ಬಳಿಯ ಹೈಮಾಸ್ಟ್ ದೀಪಗಳು ಕಳೆದ ಒಂದು ತಿಂಗಳಿನಿಂದ ವಿರಾಮವಿಲ್ಲದೆ ರಾತ್ರಿ-ಹಗಲು ಸತತವಾಗಿ ಉರಿಯುತ್ತಿವೆ. ​ಬಹುಶಃ ಪಂಚಾಯತ್‌ಗೆ ಹಗಲು ಹೊತ್ತಿನ ಕತ್ತಲೆಯನ್ನು ಓಡಿಸುವ ಅತೀಂದ್ರಿಯ ಶಕ್ತಿ ಬಂದಿರಬೇಕು ಅಥವಾ ಕೆಎಸ್‌ಇಬಿ ಬಿಲ್ ಹೆಚ್ಚಾದಷ್ಟೂ ಪಂಚಾಯತ್ ಖಜಾನೆ ತುಂಬುತ್ತದೆ ಎಂಬ ನಂಬಿಕೆ ಇರಬಹುದು….

Read More

ಪುತ್ತೂರು ಮಹಿಳಾ ಕಾಲೇಜು: ಮೂಲಭೂತ ಸಮಸ್ಯೆ ಬಗೆಹರಿಸಲಾಗದ ಶಾಸಕ ಅಶೋಕ್ ರೈ ಅವರಿಂದ ಪ್ರಾಂಶುಪಾಲರ ಅಮಾನತಿನ ‘ಒಣ ಪ್ರತಿಷ್ಠೆ’ – ವಿಧಾನಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಆಕ್ರೋಶ

ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಮೂಲಭೂತ ಸೌಕರ್ಯಗಳ ಕೊರತೆ ಮತ್ತು ವಿಪರೀತ ಧೂಳಿನ ಸಮಸ್ಯೆಯಿಂದ ಬೇಸತ್ತು ನ್ಯಾಯಯುತವಾಗಿ ಪ್ರತಿಭಟನೆ ನಡೆಸಿದ್ದಕ್ಕೆ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ವೇದಶ್ರೀ ನಿಡ್ಯಾ ಅವರನ್ನು ಅಮಾನತು ಮಾಡಿಸಿರುವ ಪುತ್ತೂರು ಶಾಸಕ ಅಶೋಕ್ ರೈ ಅವರ ದ್ವೇಷದ ರಾಜಕಾರಣವನ್ನು ಉಡುಪಿ-ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಉಗ್ರವಾಗಿ ಖಂಡಿಸಿದ್ದಾರೆ. ವಿದ್ಯಾರ್ಥಿನಿಯರ ಹಿತಾಸಕ್ತಿಗೆ ಸ್ಪಂದಿಸಿದ ಪ್ರಾಮಾಣಿಕ ಅಧಿಕಾರಿಯನ್ನು ಬಲಿಪಶು ಮಾಡುವ ಬದಲು, ನಿಯಮ…

Read More

ಮಂಗಲ್ಪಾಡಿ ಪಂಚಾಯತ್ 2026–27ರ ಗೋಲ್ಡನ್ ಬಜೆಟ್: ಮಿನಿ ಸಿವಿಲ್ ಸ್ಟೇಷನ್, ಉಪ್ಪಳದಲ್ಲಿ ಆಧುನಿಕ ಬಸ್‌ಸ್ಟ್ಯಾಂಡ್–ಶಾಪಿಂಗ್ ಕಾಂಪ್ಲೆಕ್ಸ್

ಉಪ್ಪಳ: ಮೂಲಸೌಕರ್ಯ ಸೇರಿದಂತೆ ಎಲ್ಲಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಮಂಗಲ್ಪಾಡಿ ಗ್ರಾಮಪಂಚಾಯತ್ 2026–27ನೇ ಸಾಲಿನ ಜನಪ್ರಿಯ “ಗೋಲ್ಡನ್ ಬಜೆಟ್” ಅನ್ನು ಉಪಾಧ್ಯಕ್ಷೆ ಶಮೀನಾ ಟೀಚರ್ ಪ್ರಸ್ತುತಪಡಿಸಿದರು. ಗ್ರಾಮಪಂಚಾಯತ್ ಅಧೀನದಲ್ಲಿರುವ ಎಲ್ಲಾ ಘಟಕ ಸಂಸ್ಥೆಗಳನ್ನು ಒಳಗೊಂಡಂತೆ ಮಿನಿ ಸಿವಿಲ್ ಸ್ಟೇಷನ್ ಮಾದರಿಯಲ್ಲಿ ಆಧುನಿಕ ಕಚೇರಿ ಸಮುಚ್ಚಯವನ್ನು ನಿರ್ಮಿಸಲಾಗುತ್ತದೆ. ಉಪ್ಪಳ ಪಟ್ಟಣದಲ್ಲಿ ಬಿಒಟಿ (BOT) ಆಧಾರದ ಮೇಲೆ ಆಧುನಿಕ ಬಸ್‌ಸ್ಟ್ಯಾಂಡ್–ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೂ ಬಜೆಟ್‌ನಲ್ಲಿ ಉಲ್ಲೇಖವಿದೆ. ಬೀಚ್ ಟೂರಿಸಂ ಉತ್ತೇಜಿಸಲು ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತದೆ. ಕ್ಷೇತ್ರವಾರು ಅನುದಾನ ಒಟ್ಟು…

Read More

ಹೈದರಾಬಾದಲ್ಲಿ ಕುಳಿತು ಸೈಬರ್ ವಂಚನೆ ಮಾಡುತ್ತಿದ್ದ ಸೈಬರ್ ವಂಚಕರ ಬಂಧನ

ಹೈದರಾಬಾದಲ್ಲಿ ಕುಳಿತು ಸೈಬರ್ ವಂಚನೆ ಮಾಡುತ್ತಿದ್ದ ಸೈಬರ್ ವಂಚಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣಾ ಅ.ಕ್ರ. 09/2026, ಕಲಂ. 66(ಸಿ), 66(ಡಿ) ಐಟಿ ಕಾಯ್ದೆ & ಕಲಂ. 308(5), 318(4), 319(2),111 ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆ-2023ರಂತೆ ಕೇಸ್ ದಾಖಲಾಗಿತ್ತು. ಬಂಧಿತರನ್ನು ಶೇಖ್ ಕರೀಮುಲ್ಲಾ @ ರಸೂಲ್, ಬುಡಿದಿನ್ನೆ ವಂಶಿ @ ಗುರು, ಪಂಡಿತಿ ಕ್ರಾಂತಿ ಕುಮಾರ್, ಇಬ್ರಾಹಿಂ, ಬಡೆ ಶ್ರೀನಿವಾಸ್, ಉತ್ಪಲ ಸಂತೋಷ್ ಕೃಷ್ಣ ಎಂದು ಗುರುತಿಸಲಾಗಿದೆ. ಈ…

Read More

ಇಚ್ಲಂಗೋಡು ಶ್ರೀ ನಾಗಬ್ರಹ್ಮ ಕೋಮಾರು ಚಾಮುಂಡೇಶ್ವರಿ ದೈವಸ್ಥಾನದ ನೇಮೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

ಇಚ್ಲಂಗೋಡು:ಬಾಕುಡ ಸಮಾಜದ 18 ದೈವಸ್ಥಾನಗಳಲ್ಲಿ ಒಂದಾದ ಶ್ರೀ ನಾಗಬ್ರಹ್ಮ ಕೋಮಾರು ಚಾಮುಂಡೇಶ್ವರಿ ದೈವಸ್ಥಾನ ಇಚ್ಲಂಗೋಡು ಇಲ್ಲಿಯ ನೇಮೋತ್ಸವ ಮಾರ್ಚ್ ತಿಂಗಳ 19 ರಿಂದ 20 ರ ವರೆಗೆ ಬಹು ವಿಜೃಂಭಣೆಯಿಂದ ಜರಗಲಿದೆ. ಇದರ ಭಾಗವಾಗಿ ಸಮುದಾಯದ ಕಟ್ಟುಪಾಡುಗಳಂತೆ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಹಿರಿಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಆಡಳಿತ ಸಮಿತಿ ಹಾಗೂ ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ದೇರಳಕಟ್ಟೆ ಯಲ್ಲಿ ಶೇಖರಣೆ ಗೊಂಡ ತ್ಯಾಜ್ಯ ನೀರು: ಪ್ರತಿಭಟನೆ

ತುಳು ನಾಡ ರಕ್ಷಣಾ ವೇದಿಕೆ ಹಾಗೂ ಆಟೋರಿಕ್ಷಾ ಚಾಲಕ ಘಟಕದ ಆಶ್ರಯದಲ್ಲಿ ದೇರಳಕಟ್ಟೆ ಖಾಸಗಿ ಆಸ್ಪತ್ರೆ ಬಳಿ ನಿಂತಿರುವ ಕೊಳಚೆ ನೀರಿನಿಂದ ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ ಆಡುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಒದಗಿಸಿ ಕೊಡುವಂತೆ ಆಗ್ರಹಿಸಿ ಪ್ರತಿಭಟನೆ ಸಭೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಯ ಬಳಿ ಇರುವ ರಿಕ್ಷಾ ಪಾರ್ಕ್ ನಲ್ಲಿ ನಡೆಯಿತು. ತುಳು ನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಮಾತನಾಡಿ, ದೇರಳಕಟ್ಟೆ ಪರಿಸರ ದಲ್ಲಿ ನಿರ್ಮಾಣ ಆಗಿರುವ ಬಹು ಮಹಡಿ ಕಟ್ಟಡ ಗಳ…

Read More

ಶಾಸಕ ವೇದವ್ಯಾಸ್ ಕಾಮತ್ ರಾಜ್ಯ ಸರಕಾರ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪ ಶುದ್ಧ ಸುಳ್ಳು ,ಸರಕಾರ ನೀಡಿದ ಅನುದಾನದ ದಾಖಲೆ ನನ್ನ ಬಳಿ ಇದೆ : ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ರಾಜ್ಯ ಸರಕಾರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸುತ್ತಾರೆ ಆದರೆ ಶಾಸಕರು ನಡೆಸುತ್ತಿರುವ ಗುದ್ದಲ್ಲಿ ಪೂಜೆಗೆ ಅನುದಾನ ಎಲ್ಲಿಂದ ಬರುತ್ತದೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಪ್ರಶ್ನಿಸಿದ್ದಾರೆ. ನಗರದ ಮಹಾನಗರ ಪಾಲಿಕೆಯಲ್ಲಿರುವ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿ ಮಾತನಾಡಿದ ಅವರು, ಮಂಗಳೂರಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಹಂತ 2ರಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 2024-27ನೇ ಸಾಲಿಗೆ 165ಕೋಟಿ ಅನುದಾನ ಹಂಚಿಕೆಯಾಗಿದೆ. ವೆಟ್‌ವೆಲ್…

Read More

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ, ವಾಹನ ಚಾಲಕರ ಮತ್ತು ಗ್ರೂಪ್ ಡಿ ನೌಕರರ ಸಂಘ ದ.ಕ. ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ,ವಾಹನ ಚಾಲಕರ ಮತ್ತು ಗ್ರೂಪ್ ಡಿ‌.ನೌಕರರ ಸಂಘ (ರಿ.) ಬೆಂಗಳೂರು ಇದರ ದ.ಕ.ಜಿಲ್ಲೆಯ 2025 -2029 ಅವಧಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ರಾಜ್ಯ ಸಂಘದ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ನಿವೃತ್ತ ಬೊಧಕೇತರ ನೌಕರರಿಗೆ ಗೌರವಾಭಿನಂದನೆ ಕಾರ್ಯಕ್ರಮ ಮೊಡಂಕಾಪು ಅನುಗ್ರಹ ಹಾಲ್ ನಲ್ಲಿ ನಡೆಯಿತು. ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಲಿಪಿಕ ನೌಕರರ, ವಾಹನ ಚಾಲಕರ ಮತ್ತು ಗ್ರೂಪ್ ಡಿ ನೌಕರರ ಸಂಘದ ಅಧ್ಯಕ್ಷ ನವೀನ್…

Read More

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 56,432 ಹುದ್ದೆಗಳನ್ನು ಭರ್ತಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್ … !

ಬೆಂಗಳೂರು:ರಾಜ್ಯದಲ್ಲಿ ಸರ್ಕಾರಿ ಕೆಲಸಕ್ಕಾಗಿ ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ದೀರ್ಘಕಾಲದ ಹೋರಾಟ ಮತ್ತು ಪ್ರತಿಭಟನೆಗಳ ಫಲವಾಗಿ, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 56,432 ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ಒಂದು ತಿಂಗಳ ಒಳಗಾಗಿ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲು ಸರ್ಕಾರ ಆದೇಶಿಸಿದೆ. ಸದ್ಯಕ್ಕೆ ಶೇ. 56ರಷ್ಟು ಮೀಸಲಾತಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವ…

Read More

ಬ್ರಹ್ಮರಕೂಟ್ಟು ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ಮಾರ್ಚ್ 03 ರಂದು ಸಾಮೂಹಿಕ ಧರಣಿ

ಬಂಟ್ವಾಳ: ಬ್ರಹ್ಮರಕೂಟ್ಟು ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ಮಾರ್ಚ್ 03 ರಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 12.30 ರವರೆಗೆ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಬ್ರಹ್ಮರಕೂಟ್ಟು ಟೋಲ್ ಗೇಟ್ ತೆರವು ಹೋರಾಟ ಸಮಿತಿ’ ನೇತೃತ್ವದಲ್ಲಿ ಸಾಮೂಹಿಕ ಧರಣಿ ನಡೆಯಲಿದೆ ಎಂದು ಮಾಜಿ ಸಚಿವ ಹಾಗೂ ಬ್ರಹ್ಮರಕೂಟ್ಟು ಟೋಲ್ ಗೇಟ್ ತೆರವು ಹೋರಾಟ ಸಮಿತಿ’ಗೌರವಾಧ್ಯಕ್ಷ ಬಿ.ರಮಾನಾಥ ರೈ ಅವರು ತಿಳಿಸಿದರು.ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಟೋಲ್ ಸಂಗ್ರಹಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ…

Read More
error: Content is protected !!