ನಗರಪಾಲಿಕೆಯಿಂದ ಬೀದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ವಿರುದ್ದ ಆಕ್ರೋಶ: ಪ್ರತಿಭಟನಾಕಾರರ ಬಂಧನ
ಬೀದಿಬದಿ ವ್ಯಾಪಾರಿಗಳ ವ್ಯಾಪಕ ವಿರೋಧದ ನಡುವೆ ನಗರದ ಮೈದಾನ ರಸ್ತೆ, ಲೇಡಿ ಘೋಷನ್ ಆಸ್ಪತ್ರೆ ರಸ್ತೆ, ಪುರಭವನದ ಬಳಿ ವ್ಯಾಪಾರ ಮಾಡುವ ಬೀದಿ ವ್ಯಾಪಾರಿಗಳನ್ನು ನಗರಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಬೀದಿಬದಿ ವ್ಯಾಪಾರಿಗಳು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಿದರು ಬೀದಿ ವ್ಯಾಪಾರದ ನಿಯಮನುಸಾರ ಪರ್ಯಾಯ ವ್ಯವಸ್ಥೆ ಮಾಡಿದ ನಂತರ ಕಾರ್ಯಾಚರಣೆ ನಡೆಸಿ ಎಂದು ಆಯುಕ್ತರಲ್ಲಿ ವಿನಂತಿಕೊಂಡರೂ ಪಾಲಿಕೆ ಆಯುಕ್ತರು ಬೀದಿಬದಿ ವ್ಯಾಪಾರಿಗಳ ಆಗ್ರಹವನ್ನು ಕಡೆಗಣಿಸಿ ಏಕಪಕ್ಷೀಯ…
