ಮಂಗಳೂರಿನ ಡಾ.ಟಿ.ಎಂ.ಎ. ಪೈ ಕನ್ ವೆನ್ಶನ್ ಸೆಂಟರ್ ನಲ್ಲಿ ಫಿಲಾನಮಿಸ್ಟ್ ಅಂಚೆಚೀಟಿಗಳು ಮತ್ತು ನಾಣ್ಯಗಳ ಪ್ರದರ್ಶನ

ಮಂಗಳೂರು: ದೇಶದ ಪ್ರಮುಖ ನಾಣ್ಯ ಮತ್ತು ಅಂಚೆ ಚೀಟಿ ಸಂಗ್ರಹಕಾರಾದ ಮಂಗಳೂರಿನ ಎಂ. ಪ್ರಶಾಂತ್ ಶೇಟ್ ಅವರಿಂದ ಫಿಲಾನಮಿಸ್ಟ್ ಅಂಚೆಚೀಟಿಗಳು ಮತ್ತು ನಾಣ್ಯಗಳ ಪ್ರದರ್ಶನ ಇಂದು ಮತ್ತು ನಾಳೆ ಮಂಗಳೂರಿನ ಡಾ.ಟಿ.ಎಂ.ಎ. ಪೈ ಕನ್ ವೆನ್ಶನ್ ಸೆಂಟರ್ ನಲ್ಲಿ ನಡೆಯುತ್ತಿದ್ದು ಇದು ಸಾರ್ವಜನಿಕರಿಗೆ ಉಚಿತ ಪ್ರವೇಶವಾಗಿದೆ . ಇತಿಹಾಸದ ಬಗ್ಗೆ ಆಸಕ್ತಿ ಉಳ್ಳವರು ಇದರ ಸದುಪಯೋಗವನ್ನು ಪಡೆಯಬಹುದಾಗಿದೆ. ವಿಶೇಷತೆ ಜಗತ್ತಿನಲ್ಲೇ ಮೊದಲ ಬಾರಿಗೆ ಬಳಕೆಗೆ ಬಂದ 17 ನೇ ಶತಮಾನದ ಆಫ್ರಿಕನ್ ನಾಣ್ಯ, ಚೀನಾ, ಜಪಾನ್ ,…

Read More

ಯುವಕನ ದುರಂತ ಸಾವು ತಂದೆ-ತಾಯಿಯಂತೆಯೇ ಮಗನೂ ಆತ್ಮಹತ್ಯೆಗೆ ಶರಣು

ಪುತ್ತೂರು:ಬೆಂಗಳೂರಿನಿಂದ ಊರಿಗೆ ಬಂದಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪುರುಷರಕಟ್ಟೆ ಇಂದಿರಾನಗರದಲ್ಲಿ ನವೆಂಬರ್ 21ರಂದು ನಡೆದಿದೆ.ಮೃತರನ್ನು ಪುರುಷರಕಟ್ಟೆ ಇಂದಿರಾನಗರ ನಿವಾಸಿ, ದಿವಂಗತ ಪ್ರವೀಣ್ ಜೋಗಿ ಅವರ ಪುತ್ರ ಪ್ರತೀಕ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಶೋರೂಮ್‌ ವರ್ಕ್‌ಶಾಪ್‌ ಒಂದರಲ್ಲಿ ಉದ್ಯೋಗದಲ್ಲಿದ್ದ ಪ್ರತೀಕ್, ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಗುರುವಾರ ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ನೋಡುತ್ತಾ ಕುಳಿತಿದ್ದ ಅವರು, ಏಕಾಏಕಿ ನಾಪತ್ತೆಯಾಗಿದ್ದರು. ಅನುಮಾನಗೊಂಡು ಮನೆಯವರು ಹುಡುಕಾಡಿದಾಗ, ಪ್ರತೀಕ್ ಮನೆಯ ಕೊಠಡಿಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡ…

Read More

ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳವು.ಆರೋಪಿಗಳ ಬಂಧನ

ಮಂಗಳೂರು :: ಬೆಳ್ತಂಗಡಿಯ ನಿಟ್ಟಡೆ ಗ್ರಾಮದ ಪಾಣೂರು ಗುರುನಾರಾಯಣ ಸರ್ಕಲ್ ಬಳಿ ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ನಿಲ್ಲಿಸಿದ್ದ ಬೈಕನ್ನು ಕಳವು ಮಾಡಿದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ವೇಣೂರು ಗ್ರಾಮದ ಕೆರೆಕೋಡಿ ನಿವಾಸಿ ಮಹಮ್ಮದ್ ಇರ್ಷಾದ್ (25) ಹಾಗೂ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ ಸಾದಿಕ್ ಖಾನ್ (26) ಬಂಧಿತರು. ಅವರಿಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ನ. 11ರಂದು ರಾತ್ರಿ ಕುಕ್ಕೇಡಿ ನಿವಾಸಿ ಸಂಪತ್ ಕುಮಾ‌ರ್ ತನ್ನ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾದ ಕಾರಣ…

Read More

ನ.28ಕ್ಕೆ ಪ್ರಧಾನಿ ಮೋದಿ ಕೃಷ್ಣ ನಗರ ಉಡುಪಿ ಭೇಟಿ, ನಿಗದಿಯಾಗಿದ್ದ ರೋಡ್ ಶೋ ರದ್ದು!

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯನ್ನು ಉನ್ನತ ಮೂಲಗಳು ಖಚಿತ ಪಡಿಸಿವೆ. ಕಾರಣಾಂತರಗಳಿಂದ ಪ್ರಧಾನಿಗಳ ರೋಡ್ ಶೋ ಕಾರ್ಯಕ್ರಮ ರದ್ದುಗೊಂಡಿದೆ. ಪ್ರಧಾನಿ ಆಗಮಿಸುವ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ:ಪ್ರಧಾನಿ ಮೋದಿ ಅಂದು ಬೆಳಿಗ್ಗೆ ದೆಹಲಿಯ ಏರ್ ಪೋರ್ಟ್ ನಿಂದ ಹೊರಡಲಿದ್ದಾರೆ. ಬೆಳಿಗ್ಗೆ 11.10ಕ್ಕೆ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬೆಳಿಗ್ಗೆ 11.35ಕ್ಕೆ ಉಡುಪಿಯ ಆದಿಉಡುಪಿ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಳಿಕ ಪ್ರಧಾನಿ ಅವರು ರಸ್ತೆ…

Read More

ನ.28 ಬೆಳ್ಳಿ ತೆರೆಯ ಮೇಲೆ : “ಅಪರೇಷನ್ ಲಂಡನ್ ಕೆಫೆ”ರಾಜ್ಯಾದ್ಯಂತ ಭರ್ಜರಿ ಬಿಡುಗಡೆ ಸಿದ್ದ … !

ಮಂಗಳೂರು: “ಬಹು ನಿರೀಕ್ಷಿತ ಮಾಸ್ ಮತ್ತು ಆಕ್ಷನ್ ಪೋಸ್ಟರ್ಸ್, ಟೀಸರ್, ಟ್ರೈಲರ್ ಹಾಗೂ ರೈ ರೈ ರೈ ಅದ್ಭುತ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಇನ್ನಷ್ಟೂ ಕುತೂಹಲ ಮೂಡಿಸಿರುವ ಅಪರೇಷನ್ ಲಂಡನ್ ಕೆಫೆ ಕನ್ನಡ ಚಿತ್ರವು ಇದೇ ನವೆಂಬ‌ರ್ 28ರಂದು ಏಕಕಾಲಕ್ಕೆ ಕನ್ನಡ ಮರಾಠಿ ಮತ್ತು ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ” ಎಂದು ನಟ ಅರ್ಜುನ್ ದೇವ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ನಿರ್ಮಾಪಕ ವಿಜಯ್ ಕುಮಾರ್ ಶೆಟ್ಟಿ ಚಿತ್ರಕ್ಕೆ ಸಾಕಷ್ಟು ಬಂಡವಾಳ ಹಾಕಿ ಸಿನಿಮಾ ಮಾಡಿದ್ದಾರೆ. ಮರಾಠಿ ಭಾಷೆ ಬಾರದೆ…

Read More

ಮಣಿಮುಂಡದಲ್ಲಿ ನೀರಸ ಮೌನಕ್ಕೆ ಜಾರಿದ ಬಿಜೆಪಿ ಹಾಗೂ ಎಡರಂಗ : ನಾಮಪತ್ರ ಸೂಕ್ಷ್ಮ ಪರಿಶೋಧನೆಗೆ ಮೊದಲೇ ಮುಸ್ಲಿಂಲೀಗ್ ಅಭ್ಯರ್ಥಿ ಅವಿರೋಧ ಆಯ್ಕೆ

ಮಂಜೇಶ್ವರ : ಸ್ಥಳೀಯಾಡಳಿತ. ಚುನಾವಣೆಯ ನಾಮಪತ್ರ ಸೂಕ್ಷ್ಮ ಪರಿಶೋಧನೆಗೆ ಮೊದಲೇ ಕಳೆದ ಸಲ ಬ್ಲಾಕ್ ಪಂಚಾಯತು ಅಧ್ಯಕ್ಷ ಪದವಿಯನ್ನು ಅಲಂಕರಿಸಿದ್ದ ಮುಸ್ಲಿಂಲೀಗ್ ಅಭ್ಯರ್ಥಿ ಮಂಗಲ್ಪಾಡಿ ಗ್ರಾ. ಪಂ. ನ ಮಣಿಮುಂಡ ವಾರ್ಡಿನಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ. ಮಂಗಲ್ಪಾಡಿ ಗ್ರಾ. ಪಂ. ನ 24ನೇ ವಾರ್ಡು ಮಣಿಮುಂಡ ದಲ್ಲಿ ಮುಸ್ಲಿಂಲೀಗ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಮೀಮ ಟೀಚರ್ ಅವಿರೋಧವಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಗೆಲುವನ್ನು ತನ್ನದಾಗಿಸಿಕೊಂಡಿದ್ದಾರೆ.ಮೊದಲ ಬಾರಿಗೆ ಕೋಡಿಬೈಲ್ ನಿಂದ ಪಂಚಾಯತು ಸದಸ್ಯರಾಗಿ ಆಯ್ಕೆಯಾದ ಶಮೀನಾ ಟೀಚರ್ 2020 – 25…

Read More

ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ನಡೆದ ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ ಕಾರ್ಯಕ್ರಮ

ಮಂಗಳೂರು : ಮಂಗಳೂರುನಗರದ ಕದ್ರಿ ಜೋಗಿ ಮಠ ಸಮೀಪದ ಉಳ್ಳಾಲ ಶ್ರೀನಿವಾಸ ಮಲ್ಯ ಉದ್ಯಾವನದಲ್ಲಿ ಉಳ್ಳಾಲ ಶ್ರೀನಿವಾಸ್ ಮಲ್ಯ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ನಡೆದ ಆಧುನಿಕ ಮಂಗಳೂರು ನಿರ್ಮಾತೃ ಉಳ್ಳಾಲ ಶ್ರೀನಿವಾಸ ಮಲ್ಯರ 124ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ಸಂಧರ್ಭದಲ್ಲಿ 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಶ್ರೀಯುತ ಅರ್ಜುನ್ ಭಂಡಾರ್ಕರ್ ರವರನ್ನು ಹಾಗೂ ಮಲ್ಯ ಕುಟುಂಬಸ್ಥರಾದ ಉಳ್ಳಾಲ ನರಹರಿ ಮಲ್ಯರವರನ್ನು ಗೌರವಿಸಲಾಯಿತು.ಸಮಿತಿಯ…

Read More

ನ.23ರಂದು ‘ಅಸ್ಮಿತಾ’ ಮಹಿಳೆಯರ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ

ಮಂಗಳೂರು: ರಾಜ್ಯಮಟ್ಟದ ಖೇಲೋ ಇಂಡಿಯಾ ಮಹಿಳೆಯರ ಕಿಕ್ ಬಾಕ್ಸಿಂಗ್ ಕ್ರೀಡಾಕೂಟ ಅಸ್ಮಿತಾ’ ನ.23ರಂದು ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ದ.ಕ. ಕಿಕ್ ಬಾಕ್ಸಿಂಗ್ ಅಸೋಸಿಯೇಶನ್‌ನ ಚೇರ್‌ಮ್ಯಾನ್ ಸತ್ಯಜಿತ್ ಸುರತ್ಕಲ್ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಕ್ರೀಡಾಕೂಟವನ್ನು ಬೆಳಗ್ಗೆ 9ಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದು ಫಾದರ್ ಮುಲ್ಲ‌ರ್ ಸಂಸ್ಥೆಯ ಆಡಳಿತಾಧಿಕಾರಿ ರೆ.ಫಾ. ಮೈಕಲ್ ಸಾಂತುಮಯೋರ್ ಆಶೀರ್ವಚನ ನೀಡಲಿದ್ದಾರೆ ಎಂದರು . ದ.ಕ. ಜಿಲ್ಲೆಯ 150 ಮಂದಿ…

Read More

ನ.26ರಂದು ಕದ್ರಿ ಯುದ್ಧ ಸ್ಮಾರಕದಲ್ಲಿ ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮ

ಮಂಗಳೂರು: ಮುಂಬೈ ನಗರದ ಮೇಲೆ 2008ರ ನ.26ರಂದು ನಡೆದ ಭಯೋತ್ಪಾದನಾ ದಾಳಿಯ ಸಂದರ್ಭ ಉಗ್ರರ ವಿರುದ್ಧ ವೀರಾವೇಶದಿಂದ ಹೋರಾಡಿ ನಾಗರಿಕರನ್ನು ರಕ್ಷಿಸಿದ ವೀರ ಯೋಧರನ್ನು ಸ್ಮರಿಸಿ ನುಡಿನಮನ ಸಲ್ಲಿಸುವ ಸಲುವಾಗಿ ಮಂಗಳೂರಿನ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆಯ ವತಿಯಿಂದ ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮ ನ.26ರಂದು ಸಂಜೆ 4ಕ್ಕೆ ಕದ್ರಿ ಯುದ್ಧ ಸ್ಮಾರಕದಲ್ಲಿ ನಡೆಯಲಿದೆ ಎಂದು ವೇದಿಕೆಯ ಸ್ಥಾಪಕ ಫ್ರ್ಯಾಂಕ್ಲಿನ್ ಮೊಂತೆರೋ ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಸೈಂಟ್ ಅಲೋಶಿಯಸ್…

Read More

ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಗಳಿಗೆ “ಕನ್ನಡ ರಾಜ್ಯೋತ್ಸವ ಸಾಧಕ ದಂಪತಿ ಪ್ರಶಸ್ತಿ 2025.

ಕಾಸರಗೋಡು :ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಾಯ -ಕನ್ನಡ ಭವನ “ಉಚಿತ ವಸತಿ ಸೌಕರ್ಯ “ರಜತ ಸಂಭ್ರಮ ವಿಶೇಷ ಕರ್ನಾಟಕದ ಜಿಲ್ಲೆಗಳಲ್ಲಿ ಘಟಕ ಸ್ಥಾಪನೆಯೊಂದಿಗೆ ಕನ್ನಡ ಪರ ಚಟುವಟಿಕೆಗಳಲ್ಲಿ ಸದಾ ನಿರತರಾಗಿರುವ ದಂಪತಿಗಳಿಗೆ ರೋ. ಬಿ. ಶಿವಕುಮಾರ್ ಸಾರತ್ಯದ “ಸ್ವರ್ಣಭೂಮಿ ಫೌಂಡೇಶನ್, ಕೋಲಾರ -ಕರ್ನಾಟಕ ಕನ್ನಡ ರಾಜ್ಯೋತ್ಸವ ಸಾಧಕ ಕನ್ನಡ ದಂಪತಿ ಪ್ರಶಸ್ತಿ ನೀಡಿ ಗೌರವಿಸಿತು. ಕಾಸರಗೋಡು ಕನ್ನಡ ಭವನದಲ್ಲಿ 15.11.2025.ರಂದು ಒಂದಿಡೀ ದಿನ ನಡೆದ “ಕೋಲಾರ…

Read More
error: Content is protected !!