ಕಾಸರಗೋಡು ಗೋ- ಕುಟೀರ”ದ ನಿರ್ಮಾಣಕ್ಕೆ ಗೋ- ಭಕ್ತರು,ಗೋ- ಪೋಷಕರು ದಾನಿಗಳಿಂದ ಸಹಕಾರದ ನಿರೀಕ್ಷೆಯಲ್ಲಿ..

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ,ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ. ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ -ಕುಟೀರವನ್ನು ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ…

Read More

ಉದ್ಯಾವರ ದುಬೈ ಸಮಿತಿ ಯುಡಿಸಿ ವತಿಯಿಂದ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಮಂಜೇಶ್ವರ: ಉದ್ಯಾವರ ಪ್ರದೇಶದ ದುಬೈನಲ್ಲಿ ನೆಲೆಸಿರುವ ಪ್ರವಾಸಿಗರ ಒಕ್ಕೂಟವಾದ ‘ಉದ್ಯಾವರ ದುಬೈ ಸಮಿತಿ’ ಯುಡಿಸಿ SSLC ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲೂ ‘ಎ ಪ್ಲಸ್’ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ, ‘ಎಜುಕೇಷನಲ್ ಎಕ್ಸಲೆನ್ಸ್ ಅವಾರ್ಡ್-2026’ ನೀಡಿ ಸನ್ಮಾನಿಸಿತು. ​ಕಳೆದ 40 ವರ್ಷಗಳಿಂದ ಉದ್ಯಾವರ ಪ್ರದೇಶದಲ್ಲಿ ಸಾಮಾಜಿಕ, ಶೈಕ್ಷಣಿಕ, ಕ್ರೀಡಾ ಮತ್ತು ಮಾನವೀಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಉದ್ಯಾವರ ದುಬೈ ಸಮಿತಿಯು, ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾಗಿದೆ. ​ಮಂಜೇಶ್ವರದ ಎ.ಕೆ. ಗಾರ್ಡನ್‌ನಲ್ಲಿ ನಡೆದ ಸಮಾರಂಭವನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್…

Read More

​ಮಂಜೇಶ್ವರದಲ್ಲಿ ಪೋಲಿಯೋ ಲಸಿಕಾ ಅಭಿಯಾನ: ಜನಪ್ರತಿನಿಧಿಗಳು ಮತ್ತು ಆರೋಗ್ಯ ಕಾರ್ಯಕರ್ತರ ಸಕ್ರಿಯ ಭಾಗಿ

ಮಂಜೇಶ್ವರ: ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ, ಭಾನುವಾರ ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೋಲಿಯೋ ಲಸಿಕಾ ಅಭಿಯಾನವು ಅತ್ಯಂತ ಉತ್ಸಾಹ ಮತ್ತು ಸಡಗರದಿಂದ ನಡೆಯಿತು. ಈ ಅಭಿಯಾನದಲ್ಲಿ ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕೈಜೋಡಿಸಿ ಯಶಸ್ವಿಗೊಳಿಸಿದರು. ​ಮಂಜೇಶ್ವರ ಸರಕಾರಿ ಆಸ್ಪತ್ರೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ ಅವರು ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಕ್ಕಳ ಆರೋಗ್ಯ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು,…

Read More

ಮಣ್ಣಗುಡ್ಡೆ ಸರಕಾರಿ ಶಾಲೆಯಲ್ಲಿ119ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಮಂಗಳೂರು, ಜೂ.27;ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ 119ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಜೂನ್ 27ರಂದು ಶನಿವಾರ ದ.ಕ. ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಳಿನಿ ಅವರು ವಹಿಸಿದ್ದರು.ಮುಖ್ಯ ಸಂಪನ್ಮೂಲ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಬಿ.ಎನ್ ಮಾತನಾಡುತ್ತಾ, ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿಕೊಳ್ಳಲುಓದುವ ಚಟು…

Read More

ಕೆಕೆಪಿಎಲ್‌ಗೆ ಸಜ್ಜಾದ ಮಂಗಳೂರು ತಂಡ; ಹೆಸರು-ಲೋಗೋ ಬಿಡುಗಡೆ

ಮಂಗಳೂರು, ಜೂನ್ 27: ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ (ಕೆಕೆಪಿಎಲ್) ಪಂದ್ಯಾವಳಿಯಲ್ಲಿ ಭಾಗವಹಿಸಲಿರುವ ದಕ್ಷಿಣ ಕನ್ನಡ ಜಿಲ್ಲೆಯ ‘ಮಂಗಳೂರು’ ತಂಡದ ಅಧಿಕೃತ ಹೆಸರು ಹಾಗೂ ಲೋಗೋವನ್ನು ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಅವರು ಶನಿವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಕರಾವಳಿ ಭಾಗದ ಕಬಡ್ಡಿ ಪ್ರತಿಭೆಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಅವಕಾಶ ಮತ್ತು ವೇದಿಕೆ ಕಲ್ಪಿಸುವ ಉದ್ದೇಶದಿಂದ ಮಂಗಳೂರು ತಂಡವನ್ನು ಖರೀದಿಸಲಾಗಿದೆ ಎಂದು ತಿಳಿಸಿದರು. ಗ್ರಾಮೀಣ ಕ್ರೀಡೆಯಾದ ಕಬಡ್ಡಿಯನ್ನು ಮತ್ತಷ್ಟು…

Read More

ಕೆಲಸಕ್ಕೆಂದು ತೆರಳಿದ್ದ ಮೇಸ್ತ್ರಿ ಕಾಡಿನಲ್ಲಿ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಎಂದಿನಂತೆ ಕೆಲಸಕ್ಕೆಂದು ಮನೆಯಿಂದ ಹೊರಟಿದ್ದ ಕಲ್ಲುಕಟ್ಟುವ ಮೇಸ್ತ್ರಿ ಬಿ.ಸಿ. ಚಂದ್ರ (56) ಅವರು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಬಳವಂತಡ್ಕದ ನಿವಾಸಿಯಾದ ಇವರು, ಶುಕ್ರವಾರ ಬೆಳಗ್ಗೆ ಕೆಲಸಕ್ಕೆಂದು ತೆರಳಿದವರು ವಾಪಸ್ಸಾಗಿರಲಿಲ್ಲ. ಬಳಿಕ ಅರಣ್ಯ ಪ್ರದೇಶದಲ್ಲಿ ಕಟ್ಟಿಗೆ ಸಂಗ್ರಹಿಸಲು ತೆರಳಿದ ಸ್ಥಳೀಯರಿಗೆ, ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇವರ ಶವ ಪತ್ತೆಯಾಗಿದೆ. ​ಘಟನಾ ಸ್ಥಳಕ್ಕೆ ಅಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ. ರತನ್ ಕುಮಾರ್ ನಾಯ್ಕ್…

Read More

ಸೌರ ದೀಪದ ಬ್ಯಾಟರಿ ಕಳ್ಳರ ಜಾಲ ಭೇದಿಸಿದ ಕಾಸರಗೋಡು ಪೊಲೀಸರು: ಅಸ್ಸಾಂ ಮೂಲದ ಮೂವರ ಬಂಧನ

ಕಾಸರಗೋಡು: ಸಾರ್ವಜನಿಕ ಆಸ್ತಿಯಾದ ಸೌರ ದೀಪಗಳ ಬ್ಯಾಟರಿಗಳನ್ನು ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳರ ತಂಡವನ್ನು ಚಂದೇರ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ.​ವಲಿಯಪರಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿಲಕಡಪ್ಪುರಂ, ಬಿಚ್ಚಾರಕಡವು ಪಾಡಲ್ ಕಡಪ್ಪುರ ಮತ್ತು ವಲಿಯಪರಂಬು ಸೇತುವೆ ಪ್ರದೇಶಗಳಲ್ಲಿ ಅಳವಡಿಸಲಾಗಿದ್ದ ಸೌರ ದೀಪಗಳ ಬ್ಯಾಟರಿಗಳನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದರು. ಸುಮಾರು 80,000 ರೂ. ಮೌಲ್ಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ದೋಚಿದ್ದ ಈ ತಂಡದ ಕೃತ್ಯದಿಂದ ಸ್ಥಳೀಯ ಆಡಳಿತಕ್ಕೆ ಭಾರಿ ನಷ್ಟ ಉಂಟಾಗಿತ್ತು. ಪಂಚಾಯತ್ ಕಾರ್ಯದರ್ಶಿ ಜಿಮ್ಮಿ ಜೋಸ್…

Read More

ಬಜಾಲ್‌ನಲ್ಲಿ ‘ಸ್ವಚ್ಛತಾ ಹಿ ಸೇವಾ’ ಜಾಗೃತಿ ಜಾಥಾ

ಮಂಗಳೂರು, ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಬಜಾಲ್ ನಂತೂರಿನ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಶನಿವಾರ ‘ಸ್ವಚ್ಛತಾ ಹಿ ಸೇವಾ’ ಧ್ಯೇಯದಡಿ ಫೈಸಲ್ ನಗರದ ಸುತ್ತಮುತ್ತ ಸ್ವಚ್ಛತಾ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು. ಜಾಥಾಕ್ಕೆ ಚಾಲನೆ ನೀಡಿದ ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು ಹಾಗೂ ಸ್ಥಳೀಯ ಜುಮ್ಮಾ ಮಸೀದಿಯ ಅಧ್ಯಕ್ಷರಾದ ಜನಾಬ್ ಅಬ್ದುಲ್ ರವೂಫ್ ಅವರು ಮಾತನಾಡಿ, ಪ್ರತಿಯೊಂದು ಮನೆಯವರು ಹಸಿ ಕಸ ಮತ್ತು ಒಣ ಕಸವನ್ನು ಸಮರ್ಪಕವಾಗಿ ವಿಂಗಡಿಸಿ ಮಹಾನಗರ ಪಾಲಿಕೆಯೊಂದಿಗೆ…

Read More

ಕೆನರಾ ನಂದಗೋಕುಲದಲ್ಲಿ ತಂದೆಯಂದಿರ ದಿನಾಚರಣೆ

“ತಂದೆಯ ನೆರಳು ಮಗುವಿನ ಮೊದಲ ಭದ್ರತೆ, ತಂದೆಯ ಪ್ರೀತಿ ಮಗುವಿನ ಮೊದಲ ಶಕ್ತಿ.” ಈ ಅಮೂಲ್ಯ ಭಾವನೆಯನ್ನು ಸಾರುವ ಉದ್ದೇಶದಿಂದ ಕೆನರಾ ನಂದಗೋಕುಲ, ಕೊ ಡಿಯಾಲ್ ಬೈಲ್ ಹಾಗೂ ಅದರ ಶಾಖೆಯಾದ ಪದವಿನಂಗಡಿ ಸಂಸ್ಥೆಯು ಟಿ.ವಿ. ರಮಣ್ ಪೈ ಸಭಾಂಗಣದಲ್ಲಿ ತಂದೆಯಂದಿರ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದರು. ಮಕ್ಕಳು ಮತ್ತು ತಂದೆಯಂದಿರು ಒಟ್ಟಾಗಿ ವಿವಿಧ ಮನೋರಂಜನಾತ್ಮಕ ಆಟಗಳಲ್ಲಿ ಉತ್ಸಾಹದಿಂದ ಭಾಗವಹಿಸಿ, ಕೇವಲ ಗೆಲುವಿನ ಸಂತೋಷವನ್ನಷ್ಟೇ ಅಲ್ಲದೆ, ಜೀವನಪರ್ಯಂತ ನೆನಪಿನಲ್ಲಿ ಉಳಿಯುವ ಅಮೂಲ್ಯ ಕ್ಷಣಗಳನ್ನು ಸೃಷ್ಟಿಸಿದರು. ಮಕ್ಕಳ ನಗುವಿನಲ್ಲಿ…

Read More

ದೇಶದಲ್ಲಿ ಮೂತ್ರಪಿಂಡ ಕಸಿ ಚಿಕಿತ್ಸೆಯಲ್ಲಿ ಪಾರದರ್ಶಕತೆ ತರಬೇಕೆಂಬ ಸಂಸದ ಕ್ಯಾ. ಚೌಟ ಪತ್ರಕ್ಕೆ ಸ್ಪಂದನೆ

ಅಂಗಾಂಗ ಕಸಿ ಅಂಕಿ-ಅಂಶ ಬಹಿರಂಗಪಡಿಸಲು ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಿದ NOTTO ಸಂಸ್ಥೆ ನವದೆಹಲಿ: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದ ಬೆನ್ನಲ್ಲೇ ದೇಶದಲ್ಲಿ ವಿಶೇಷವಾಗಿ ಮೂತ್ರಪಿಂಡ(ಕಿಡ್ನಿ) ಕಸಿ ಸೇರಿ ಅಂಗಾಂಗ ಕಸಿ ಶಸ್ತ್ರಚಿಕಿತ್ಸೆಗಳ ಯಶಸ್ವಿನ ಪ್ರಮಾಣ, ಮೂತ್ರಪಿಂಡ ಕಸಿ ವೈಫಲ್ಯ, ದೀರ್ಘಕಾಲಿಕ ಪರಿಣಾಮ ಹಾಗೂ ಸಾವಿನ ಪ್ರಮಾಣದ ಬಗ್ಗೆ ದೇಶದ ಸಂಬಂಧಪಟ್ಟ ಎಲ್ಲ ಆಸ್ಪತ್ರೆಗಳು ಮಾಹಿತಿ ಒದಗಿಸಬೇಕೆಂದು ರಾಷ್ಟ್ರೀಯ ಅಂಗ ಮತ್ತು ಅಂಗಾಂಶ ಕಸಿ ಸಂಸ್ಥೆ(National…

Read More
error: Content is protected !!