ಕೊಂಕಣಿ ಕವಿತಾ ವಾಚನ ಹಾಗೂ ಕವಿತೆಯ ರಚನಾ ಬಗ್ಗೆ ಮಾಹಿತಿ ಕಾರ್ಯಾಗಾರ

ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ.) , ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ (ರಿ.) ಹಾಗೂ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ನಾಲ್ಕು ದಿನಗಳ ವಸತಿ ಸಹಿತ ಚಟುವಟಿಕೆ ಆಧಾರಿತ ‘ಪ್ರಗತಿ ಸ್ಪೂರ್ತಿ ಮತ್ತು ಉನ್ನತಿ–2026’ ವ್ಯಕ್ತಿತ್ವ ವಿಕಸನ ಮತ್ತು ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ 2 ನೆಯ ದಿನದಂದು (26-06-2026) ನವದೆಹಲಿ ಕೇಂದ್ರ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸಂಚಾಲಕ, ಹೆಸರಾಂತ ಕೊಂಕಣಿ ಸಾಹಿತಿ , ಕವಿತಾ…

Read More

ಮೃತದೇಹವನ್ನು ಇಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಲೀಗ್ ಯತ್ನ: ಎಂ. ಎಲ್. ಅಶ್ವಿನಿ ಖಂಡನೆ

​ಉಪ್ಪಳ: ರೋಗಬಾಧೆಯಿಂದಾಗಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಿಧನರಾದ ವ್ಯಕ್ತಿಯ ಮೃತದೇಹವನ್ನು ಇಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಮುಸ್ಲಿಂ ಲೀಗ್ ಮತ್ತು ಮುಸ್ಲಿಂ ಲೀಗ್‌ನ ಜನಪ್ರತಿನಿಧಿಗಳು ನಡೆಸುತ್ತಿರುವ ಪ್ರಯತ್ನ ಅತ್ಯಂತ ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ. ಎಲ್. ಅಶ್ವಿನಿ ತಿಳಿಸಿದ್ದಾರೆ. ​ಆರ್ಥಿಕವಾಗಿ ಹಿಂದುಳಿದಿರುವ ಆ ಕುಟುಂಬಕ್ಕೆ ಅಂತ್ಯಸಂಸ್ಕಾರದ ವೆಚ್ಚವನ್ನು ಭರಿಸಲು ಸಾಧ್ಯವಿರಲಿಲ್ಲ. ಹಾಗಾಗಿಯೇ ಕುಟುಂಬದ ಸದಸ್ಯರು ಅಂತ್ಯಸಂಸ್ಕಾರದ ಜವಾಬ್ದಾರಿಯನ್ನು ಜನಪ್ರತಿನಿಧಿಗಳಿಗೆ ಒಪ್ಪಿಸಿದ್ದರು. ಅವರ ಭೌತಿಕ ಶರೀರದ ಅಂತ್ಯಸಂಸ್ಕಾರದ ವೆಚ್ಚವನ್ನು ಭರಿಸಿ, ವಿಧಿವಿಧಾನಗಳ ನೇತೃತ್ವ ವಹಿಸಿದ್ದು ಸೇವಾ…

Read More

ಮತದಾರರ ಪಟ್ಟಿ ತ್ರೀವ ಪರಿಷ್ಕರಣೆ (SIR) ಕಾರ್ಯಕ್ರಮಕ್ಕೆ ಪೂರ್ವಭಾವಿ ತಯಾರಿ: ಕಾಂಗ್ರೆಸ್ ಮುಖಾಂಡರ ಸಭೆ SIR ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಐವನ್ ಡಿ’ ಸೋಜ ಕರೆ

ಮಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR) ಕಾರ್ಯಕ್ರಮಕ್ಕೆ ಸಂಬಂಧಿಸಿದ ಪೂರ್ವಭಾವಿ ತಯಾರಿಯ ಅಂಗವಾಗಿ ಕಾಂಗ್ರೆಸ್ ಪಕ್ಷದ ವಾರ್ಡ್ ಅಧ್ಯಕ್ಷರು ಹಾಗೂ ಬ್ಲಾಕ್ ಅಧ್ಯಕ್ಷರ ಸಭೆ ನಡೆಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಮುಂದಿನ ಮೂರು ತಿಂಗಳ ಅವಧಿಯಲ್ಲಿ ನಡೆಯಲಿರುವ SIR ಕಾರ್ಯಕ್ರಮದ ಸಂದರ್ಭದಲ್ಲಿ ಪ್ರತಿ ಮತದಾರರಿಗೂ Booth Level Officer (BLO) ಅವರು ನೀಡುವ Enumeration Form ಅನ್ನು ಸರಿಯಾಗಿ ಭರ್ತಿ ಮಾಡಿ, ಅಗತ್ಯ…

Read More

ಉಡುಪಿಯಲ್ಲಿ ಟ್ರಾಫಿಕ್ ಜಾಮ್‌ಗೆ ಸಿಲುಕಿದ ನಗರ

ಸಾಲು ಸಾಲು ರಜೆ, ವೀಕೆಂಡ್ ಹಿನ್ನೆಲೆ ಪ್ರವಾಸಿಗರ ದಂಡು; ಕೃಷ್ಣಮಠದಲ್ಲಿ ಭಕ್ತರ ನೂಕುನುಗ್ಗಲು ಉಡುಪಿ, ಜೂ. 27: ಸಾಲು ಸಾಲು ಸರ್ಕಾರಿ ರಜೆಗಳು ಹಾಗೂ ವಾರಾಂತ್ಯ (ವೀಕೆಂಡ್) ಹಿನ್ನೆಲೆಯಲ್ಲಿ ಉಡುಪಿ ನಗರಕ್ಕೆ ಪ್ರವಾಸಿಗರು ಮತ್ತು ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ನಗರದಲ್ಲಿ ದಿನವಿಡೀ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ವಿಶೇಷವಾಗಿ ಶ್ರೀ ಕೃಷ್ಣ ಮಠಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರಿಂದ ಮಠದ ಆಸುಪಾಸು ಪ್ರದೇಶಗಳಲ್ಲಿ ವಾಹನ ದಟ್ಟಣೆ ಹೆಚ್ಚಾಯಿತು. ಶನಿವಾರವಾದ ಹಿನ್ನೆಲೆಯಲ್ಲಿ ಸ್ಥಳೀಯ ಭಕ್ತರೂ ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ…

Read More

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ

ಐದು ದಿನಗಳಲ್ಲಿ ಎರಡನೇ ಬಾರಿ ಇ-ಮೇಲ್ ಮೂಲಕ ಬೆದರಿಕೆ; ಶ್ವಾನದಳದಿಂದ ತಪಾಸಣೆ ಉಡುಪಿ, ಜೂನ್ 27:ಐದು ದಿನಗಳ ಹಿಂದೆಯಷ್ಟೇ ಹುಸಿ ಬಾಂಬ್ ಬೆದರಿಕೆಗೆ ಗುರಿಯಾಗಿದ್ದ ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಶುಕ್ರವಾರ ಮತ್ತೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಪೊಲೀಸರು ತಕ್ಷಣ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಬೆದರಿಕೆ ಸಂದೇಶದ ಮಾಹಿತಿ ದೊರೆಯುತ್ತಿದ್ದಂತೆ ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಪೊಲೀಸ್ ಸಿಬ್ಬಂದಿ ನ್ಯಾಯಾಲಯದ ಆವರಣದಲ್ಲಿ ಸಮಗ್ರ ತಪಾಸಣೆ ನಡೆಸುತ್ತಿದ್ದಾರೆ. ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗಿದೆಯೇ ಎಂಬ ಕುರಿತು ಪರಿಶೀಲನೆ…

Read More

ಪರ್ಕಳ ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ

ಉಡುಪಿ, ಜೂ. 27: ಉಡುಪಿ ಜಿಲ್ಲೆಯ ಪರ್ಕಳದ ಕೆಳಪರ್ಕಳ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್–169ಎ)ಯ ಕೆನರಾ ಬ್ಯಾಂಕ್ ಸಮೀಪದ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಶನಿವಾರ ಬೆಳಗ್ಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆತ್ರಾಡಿಯಿಂದ ಪೇಪರ್ ಬಾಕ್ಸ್‌ಗಳನ್ನು ತುಂಬಿಕೊಂಡು ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ. ಅಪಘಾತದ ಪರಿಣಾಮ ಲಾರಿಯಿಂದ ಡೀಸೆಲ್ ಸೋರಿಕೆಯಾಗಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಲಾರಿಯನ್ನು ಮೇಲಕ್ಕೆತ್ತಿದರು. ಪರ್ಕಳದ…

Read More

ಯುವಜನರಲ್ಲಿ ಕೃಷಿ ಆಸಕ್ತಿ ಬೆಳೆಸಿದ ವಿನೂತನ ಕೃಷಿ ಪಾಠ

ಉಡುಪಿಯಲ್ಲಿ ಗದ್ದೆಯಲ್ಲೇ ನೇಜಿ ನೆಡುವ ಅನುಭವ, ಗ್ರಾಮೀಣ ಕ್ರೀಡೆಗಳ ಸಂಭ್ರಮ ಉಡುಪಿ, ಜೂ. 26: ಕೃಷಿಯಿಂದ ಯುವಜನತೆ ದೂರ ಸರಿಯುತ್ತಿರುವ ಇಂದಿನ ಸಂದರ್ಭದಲ್ಲಿ ಕೃಷಿಯ ಮಹತ್ವವನ್ನು ಯುವ ಪೀಳಿಗೆಗೆ ಪರಿಚಯಿಸುವ ವಿನೂತನ ಕಾರ್ಯಕ್ರಮ ಉಡುಪಿಯಲ್ಲಿ ಯಶಸ್ವಿಯಾಗಿ ನಡೆಯಿತು. ಗದ್ದೆಯಲ್ಲೇ ಕೃಷಿ ಪಾಠ, ನೇಜಿ ನೆಡುವ ಪ್ರಾಯೋಗಿಕ ಅನುಭವ ಹಾಗೂ ಗ್ರಾಮೀಣ ಕ್ರೀಡೆಗಳ ಮೂಲಕ ಯುವಕರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮತ್ತು ಗೌರವ ಬೆಳೆಸುವ ಪ್ರಯತ್ನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಸಿ.ಎಸ್.ಐ. ಕೆ.ಎಸ್.ಡಿ. ಉಡುಪಿ ವಲಯ ಪ್ರಾದೇಶಿಕ ಪರಿಷತ್…

Read More

ದ್ವತ್ ಪಿಯು ಕಾಲೇಜಿನಲ್ಲಿ ಸಿಎ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ, ಜೂ. 26: ಪರಿಶ್ರಮ, ದೃಢ ಸಂಕಲ್ಪ ಹಾಗೂ ನಿರಂತರ ಅಭ್ಯಾಸದ ಮೂಲಕ ಯಾವುದೇ ಗುರಿಯನ್ನು ಸಾಧಿಸಬಹುದು. ಸಿಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ನಿಖರವಾದ ಅಧ್ಯಯನ, ಸಮರ್ಪಕ ಮಾರ್ಗದರ್ಶನ ಹಾಗೂ ಸಂಶೋಧನಾತ್ಮಕ ಕಲಿಕೆಯ ಮನೋಭಾವ ಅಗತ್ಯ ಎಂದು ಯುವ ಲೆಕ್ಕಪರಿಶೋಧಕಿ (ಸಿಎ) ನಿರೀಕ್ಷಾ ನಾವರ ಹೇಳಿದರು. ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಜೂನ್ 25ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸಿಎ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು….

Read More

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ-ಪೋಷಕರ ಓರಿಯಂಟೇಶನ್ ಕಾರ್ಯಕ್ರಮ

ಬೆಂಗಳೂರು: ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಬ್ಲಾಕ್-ಬಿ ಕ್ಯಾಂಪಸ್‌ನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮತ್ತು ಪೋಷಕರ ಓರಿಯಂಟೇಶನ್ ಕಾರ್ಯಕ್ರಮವು ಜೂನ್ 19 ಮತ್ತು 20ರಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಇದು ಬ್ಲಾಕ್-ಬಿ ಕ್ಯಾಂಪಸ್‌ನ ಮೊದಲ ಶೈಕ್ಷಣಿಕ ವರ್ಷದ ಅಧಿಕೃತ ಆರಂಭಕ್ಕೆ ನಾಂದಿ ಹಾಡಿತು. ಬಿ.ಕಾಂ., ಬಿ.ಎ. (ಅರ್ಥಶಾಸ್ತ್ರ, ಪತ್ರಿಕೋದ್ಯಮ ಹಾಗೂ ಮನಃಶಾಸ್ತ್ರ), ಬಿಸಿಎ ಮತ್ತು ಬಿಬಿಎ ಪದವಿ ಕೋರ್ಸ್‌ಗಳಿಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಶೈಕ್ಷಣಿಕ…

Read More

ವಾಣಿಜ್ಯ ಹಡಗು ಮೇಲಿನ ಡ್ರೋನ್ ದಾಳಿ; ಇರಾನ್ ಗುರಿಯಾಗಿಸಿ ಅಮೆರಿಕ ವೈಮಾನಿಕ ದಾಳಿ

ನವದೆಹಲಿ: ಕದನ ವಿರಾಮ ಉಲ್ಲಂಘಿಸಿ ವಾಣಿಜ್ಯ ಹಡಗಿನ ಮೇಲೆ ಡ್ರೋನ್ ದಾಳಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಅಮೆರಿಕವು ಇರಾನ್‌ನ ಕ್ಷಿಪಣಿ, ಡ್ರೋನ್ ಸಂಗ್ರಹ ಕೇಂದ್ರಗಳು ಹಾಗೂ ಕರಾವಳಿ ರಾಡಾರ್ ತಾಣಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯ 37 ಸೆಕೆಂಡ್‌ಗಳ ವಿಡಿಯೊವನ್ನು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಬಿಡುಗಡೆ ಮಾಡಿದೆ. ಜೂನ್ 25ರಂದು ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಸಿಂಗಾಪುರ ಧ್ವಜ ಹೊಂದಿದ್ದ ಎಂ/ವಿ ಎವರ್ ಲವ್ಲಿ ಸರಕು ಹಡಗಿನ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ…

Read More
error: Content is protected !!