Headlines

ಪರ್ಕಳ ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ

ಉಡುಪಿ, ಜೂ. 27: ಉಡುಪಿ ಜಿಲ್ಲೆಯ ಪರ್ಕಳದ ಕೆಳಪರ್ಕಳ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್–169ಎ)ಯ ಕೆನರಾ ಬ್ಯಾಂಕ್ ಸಮೀಪದ ತಿರುವಿನಲ್ಲಿ ಕಂಟೇನರ್ ಲಾರಿಯೊಂದು ಶನಿವಾರ ಬೆಳಗ್ಗೆ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆತ್ರಾಡಿಯಿಂದ ಪೇಪರ್ ಬಾಕ್ಸ್‌ಗಳನ್ನು ತುಂಬಿಕೊಂಡು ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ. ಅಪಘಾತದ ಪರಿಣಾಮ ಲಾರಿಯಿಂದ ಡೀಸೆಲ್ ಸೋರಿಕೆಯಾಗಿದ್ದು, ತಕ್ಷಣ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಲಾರಿಯನ್ನು ಮೇಲಕ್ಕೆತ್ತಿದರು. ಪರ್ಕಳದ…

Read More

ಯುವಜನರಲ್ಲಿ ಕೃಷಿ ಆಸಕ್ತಿ ಬೆಳೆಸಿದ ವಿನೂತನ ಕೃಷಿ ಪಾಠ

ಉಡುಪಿಯಲ್ಲಿ ಗದ್ದೆಯಲ್ಲೇ ನೇಜಿ ನೆಡುವ ಅನುಭವ, ಗ್ರಾಮೀಣ ಕ್ರೀಡೆಗಳ ಸಂಭ್ರಮ ಉಡುಪಿ, ಜೂ. 26: ಕೃಷಿಯಿಂದ ಯುವಜನತೆ ದೂರ ಸರಿಯುತ್ತಿರುವ ಇಂದಿನ ಸಂದರ್ಭದಲ್ಲಿ ಕೃಷಿಯ ಮಹತ್ವವನ್ನು ಯುವ ಪೀಳಿಗೆಗೆ ಪರಿಚಯಿಸುವ ವಿನೂತನ ಕಾರ್ಯಕ್ರಮ ಉಡುಪಿಯಲ್ಲಿ ಯಶಸ್ವಿಯಾಗಿ ನಡೆಯಿತು. ಗದ್ದೆಯಲ್ಲೇ ಕೃಷಿ ಪಾಠ, ನೇಜಿ ನೆಡುವ ಪ್ರಾಯೋಗಿಕ ಅನುಭವ ಹಾಗೂ ಗ್ರಾಮೀಣ ಕ್ರೀಡೆಗಳ ಮೂಲಕ ಯುವಕರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮತ್ತು ಗೌರವ ಬೆಳೆಸುವ ಪ್ರಯತ್ನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಸಿ.ಎಸ್.ಐ. ಕೆ.ಎಸ್.ಡಿ. ಉಡುಪಿ ವಲಯ ಪ್ರಾದೇಶಿಕ ಪರಿಷತ್…

Read More

ದ್ವತ್ ಪಿಯು ಕಾಲೇಜಿನಲ್ಲಿ ಸಿಎ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ, ಜೂ. 26: ಪರಿಶ್ರಮ, ದೃಢ ಸಂಕಲ್ಪ ಹಾಗೂ ನಿರಂತರ ಅಭ್ಯಾಸದ ಮೂಲಕ ಯಾವುದೇ ಗುರಿಯನ್ನು ಸಾಧಿಸಬಹುದು. ಸಿಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಗಳಿಸಲು ನಿಖರವಾದ ಅಧ್ಯಯನ, ಸಮರ್ಪಕ ಮಾರ್ಗದರ್ಶನ ಹಾಗೂ ಸಂಶೋಧನಾತ್ಮಕ ಕಲಿಕೆಯ ಮನೋಭಾವ ಅಗತ್ಯ ಎಂದು ಯುವ ಲೆಕ್ಕಪರಿಶೋಧಕಿ (ಸಿಎ) ನಿರೀಕ್ಷಾ ನಾವರ ಹೇಳಿದರು. ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಜೂನ್ 25ರಂದು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸಿಎ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು….

Read More

ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ-ಪೋಷಕರ ಓರಿಯಂಟೇಶನ್ ಕಾರ್ಯಕ್ರಮ

ಬೆಂಗಳೂರು: ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದ ಬ್ಲಾಕ್-ಬಿ ಕ್ಯಾಂಪಸ್‌ನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಮತ್ತು ಪೋಷಕರ ಓರಿಯಂಟೇಶನ್ ಕಾರ್ಯಕ್ರಮವು ಜೂನ್ 19 ಮತ್ತು 20ರಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಇದು ಬ್ಲಾಕ್-ಬಿ ಕ್ಯಾಂಪಸ್‌ನ ಮೊದಲ ಶೈಕ್ಷಣಿಕ ವರ್ಷದ ಅಧಿಕೃತ ಆರಂಭಕ್ಕೆ ನಾಂದಿ ಹಾಡಿತು. ಬಿ.ಕಾಂ., ಬಿ.ಎ. (ಅರ್ಥಶಾಸ್ತ್ರ, ಪತ್ರಿಕೋದ್ಯಮ ಹಾಗೂ ಮನಃಶಾಸ್ತ್ರ), ಬಿಸಿಎ ಮತ್ತು ಬಿಬಿಎ ಪದವಿ ಕೋರ್ಸ್‌ಗಳಿಗೆ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಶೈಕ್ಷಣಿಕ…

Read More

ವಾಣಿಜ್ಯ ಹಡಗು ಮೇಲಿನ ಡ್ರೋನ್ ದಾಳಿ; ಇರಾನ್ ಗುರಿಯಾಗಿಸಿ ಅಮೆರಿಕ ವೈಮಾನಿಕ ದಾಳಿ

ನವದೆಹಲಿ: ಕದನ ವಿರಾಮ ಉಲ್ಲಂಘಿಸಿ ವಾಣಿಜ್ಯ ಹಡಗಿನ ಮೇಲೆ ಡ್ರೋನ್ ದಾಳಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಅಮೆರಿಕವು ಇರಾನ್‌ನ ಕ್ಷಿಪಣಿ, ಡ್ರೋನ್ ಸಂಗ್ರಹ ಕೇಂದ್ರಗಳು ಹಾಗೂ ಕರಾವಳಿ ರಾಡಾರ್ ತಾಣಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯ 37 ಸೆಕೆಂಡ್‌ಗಳ ವಿಡಿಯೊವನ್ನು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಬಿಡುಗಡೆ ಮಾಡಿದೆ. ಜೂನ್ 25ರಂದು ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಸಿಂಗಾಪುರ ಧ್ವಜ ಹೊಂದಿದ್ದ ಎಂ/ವಿ ಎವರ್ ಲವ್ಲಿ ಸರಕು ಹಡಗಿನ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ…

Read More

ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ; ಚಾಲಕನ ವಿರುದ್ಧ ಪ್ರಕರಣ ದಾಖಲು

ಕಾಸರಗೋಡು: ಅಜಾಗರೂಕತೆಯಿಂದ ಕಾರು ಚಲಾಯಿಸಿ ಇಬ್ಬರು ವಿದ್ಯಾರ್ಥಿಗಳ ಗಂಭೀರ ಗಾಯಕ್ಕೆ ಕಾರಣವಾದ ಘಟನೆಗೆ ಸಂಬಂಧಿಸಿ ಆದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಳ್ಳೇರಿಯ ವಿವೇಕಾನಂದನಗರದ ಶ್ರೀಯಾನ್ (5) ಮತ್ತು ದೀಕ್ಷಾ (17) ಗಾಯಗೊಂಡ ವಿದ್ಯಾರ್ಥಿಗಳು.​ಕಳೆದ ಮಂಗಳವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ. ಗಜಾನನ ಶಾಲೆ ಸಮೀಪದ ರಸ್ತೆಯಲ್ಲಿ ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದಾಗ, ಅತೀ ವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದಿದೆ. ದೀಕ್ಷಾ ಮುಳ್ಳೇರಿಯ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದು, ಶ್ರೀಯಾನ್ ಪ್ರೀ…

Read More

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಪರಾರಿಯಾಗಿದ್ದ ಅಧ್ಯಾಪಕ ಬಿಹಾರದಲ್ಲಿ ಸೆರೆ

​ಕಾಸರಗೋಡು: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಬೇಕಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪೋಕ್ಸೋ ಪ್ರಕರಣಗಳನ್ನು ಎದುರಿಸುತ್ತಿದ್ದ ಅಧ್ಯಾಪಕ ಎಂ.ಕೆ. ಮೊಹಮ್ಮದ್‌ನನ್ನು ವಳಾಂಜೇರಿ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.ಮಲಪ್ಪುರಂ ಆದವನಾಡ್ ಮೂಲದ ಆರೋಪಿಯು ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದನೆನ್ನಲಾಗಿದೆ. ​ಬೇಕಲದಲ್ಲಿ ಇಬ್ಬರು ಮಕ್ಕಳ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಜೊತೆಗೆ, ಮಲಪ್ಪುರಂನ ಮದ್ರಸವೊಂದರ 14 ವಿದ್ಯಾರ್ಥಿಗಳಿಗೂ ಈತ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿತ್ತು. ಆರೋಪಿಯ ಸುಳಿವು ಪಡೆದ ವಳಾಂಜೇರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬಿಹಾರದಲ್ಲಿ ಆತನನ್ನು…

Read More

ಆರ್‌ಎಸ್‌ಎಸ್‌ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರಮೋದ್ ಮುತಾಲಿಕ್ ವಾಗ್ದಾಳಿ

ಚಿಕ್ಕಮಗಳೂರು,:ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ಹಾಗೂ ಲೆಕ್ಕಪತ್ರಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸಚಿವರು ತಮ್ಮ ಜವಾಬ್ದಾರಿಯ ಅರಿವಿನಿಂದ ನಡೆದುಕೊಳ್ಳಬೇಕು ಎಂದು ತೀವ್ರ ವಾಗ್ದಾಳಿ ನಡೆಸಿದರು. ಮೂಡಿಗೆರೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ಕುರಿತು ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. “ನೀವು ಕರ್ನಾಟಕದ ಏಳು ಕೋಟಿ ಜನರ ಸಚಿವರಾಗಿದ್ದೀರಿ. ಆದರೆ ಆರ್‌ಎಸ್‌ಎಸ್‌…

Read More

ಅಕ್ಟೋಬರ್ 18, 19ರಂದು ಮೈಸೂರು ದಸರಾ ಕಂಬಳ; ಸ್ಥಳ, ದಿನಾಂಕ ಅಂತಿಮ

ಪುತ್ತೂರು,ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿರುವ ಕಂಬಳ ಸ್ಪರ್ಧೆಯು ಅಕ್ಟೋಬರ್ 18 ಮತ್ತು 19ರಂದು ನಡೆಯಲಿದ್ದು, ಕಂಬಳಕ್ಕೆ ಸಂಬಂಧಿಸಿದ ಪ್ರಥಮ ಸಭೆಯಲ್ಲಿ ದಿನಾಂಕ ಹಾಗೂ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಎಂದು ಕಂಬಳದ ರೂವಾರಿ ಹಾಗೂ ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಶುಕ್ರವಾರ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಂಬಳ ಆಯೋಜನೆ ಕುರಿತಂತೆ ಅಧಿಕಾರಿಗಳು ಹಾಗೂ ಕಂಬಳ ಸಮಿತಿ ಪ್ರಮುಖರು ಭಾಗವಹಿಸಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ…

Read More

ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ಕಂಬಳ; ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು/ಮೈಸೂರು: ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಮೊದಲ ಬಾರಿಗೆ ಕಂಬಳ ಆಯೋಜನೆಗೆ ಸಿದ್ಧತೆಗಳು ಆರಂಭಗೊಂಡಿದ್ದು, ಪುತ್ತೂರು ಶಾಸಕ ಅಶೋಕ್ ರೈ ಅವರು ಶುಕ್ರವಾರ ಮೈಸೂರಿನ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಕಳೆದ ವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಶಾಸಕ ಅಶೋಕ್ ರೈ ಅವರನ್ನು ಭೇಟಿ ಮಾಡಿ, ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದರು….

Read More
error: Content is protected !!