Headlines

ವಾಣಿಜ್ಯ ಹಡಗು ಮೇಲಿನ ಡ್ರೋನ್ ದಾಳಿ; ಇರಾನ್ ಗುರಿಯಾಗಿಸಿ ಅಮೆರಿಕ ವೈಮಾನಿಕ ದಾಳಿ

ನವದೆಹಲಿ: ಕದನ ವಿರಾಮ ಉಲ್ಲಂಘಿಸಿ ವಾಣಿಜ್ಯ ಹಡಗಿನ ಮೇಲೆ ಡ್ರೋನ್ ದಾಳಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಅಮೆರಿಕವು ಇರಾನ್‌ನ ಕ್ಷಿಪಣಿ, ಡ್ರೋನ್ ಸಂಗ್ರಹ ಕೇಂದ್ರಗಳು ಹಾಗೂ ಕರಾವಳಿ ರಾಡಾರ್ ತಾಣಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ. ಈ ದಾಳಿಯ 37 ಸೆಕೆಂಡ್‌ಗಳ ವಿಡಿಯೊವನ್ನು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಬಿಡುಗಡೆ ಮಾಡಿದೆ. ಜೂನ್ 25ರಂದು ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಸಿಂಗಾಪುರ ಧ್ವಜ ಹೊಂದಿದ್ದ ಎಂ/ವಿ ಎವರ್ ಲವ್ಲಿ ಸರಕು ಹಡಗಿನ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ…

Read More

ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ; ಚಾಲಕನ ವಿರುದ್ಧ ಪ್ರಕರಣ ದಾಖಲು

ಕಾಸರಗೋಡು: ಅಜಾಗರೂಕತೆಯಿಂದ ಕಾರು ಚಲಾಯಿಸಿ ಇಬ್ಬರು ವಿದ್ಯಾರ್ಥಿಗಳ ಗಂಭೀರ ಗಾಯಕ್ಕೆ ಕಾರಣವಾದ ಘಟನೆಗೆ ಸಂಬಂಧಿಸಿ ಆದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಳ್ಳೇರಿಯ ವಿವೇಕಾನಂದನಗರದ ಶ್ರೀಯಾನ್ (5) ಮತ್ತು ದೀಕ್ಷಾ (17) ಗಾಯಗೊಂಡ ವಿದ್ಯಾರ್ಥಿಗಳು.​ಕಳೆದ ಮಂಗಳವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ. ಗಜಾನನ ಶಾಲೆ ಸಮೀಪದ ರಸ್ತೆಯಲ್ಲಿ ವಿದ್ಯಾರ್ಥಿಗಳು ಮನೆಗೆ ತೆರಳುತ್ತಿದ್ದಾಗ, ಅತೀ ವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದಿದೆ. ದೀಕ್ಷಾ ಮುಳ್ಳೇರಿಯ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದು, ಶ್ರೀಯಾನ್ ಪ್ರೀ…

Read More

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಪರಾರಿಯಾಗಿದ್ದ ಅಧ್ಯಾಪಕ ಬಿಹಾರದಲ್ಲಿ ಸೆರೆ

​ಕಾಸರಗೋಡು: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಬೇಕಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪೋಕ್ಸೋ ಪ್ರಕರಣಗಳನ್ನು ಎದುರಿಸುತ್ತಿದ್ದ ಅಧ್ಯಾಪಕ ಎಂ.ಕೆ. ಮೊಹಮ್ಮದ್‌ನನ್ನು ವಳಾಂಜೇರಿ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ.ಮಲಪ್ಪುರಂ ಆದವನಾಡ್ ಮೂಲದ ಆರೋಪಿಯು ಕೃತ್ಯದ ಬಳಿಕ ತಲೆಮರೆಸಿಕೊಂಡಿದ್ದನೆನ್ನಲಾಗಿದೆ. ​ಬೇಕಲದಲ್ಲಿ ಇಬ್ಬರು ಮಕ್ಕಳ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಜೊತೆಗೆ, ಮಲಪ್ಪುರಂನ ಮದ್ರಸವೊಂದರ 14 ವಿದ್ಯಾರ್ಥಿಗಳಿಗೂ ಈತ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿತ್ತು. ಆರೋಪಿಯ ಸುಳಿವು ಪಡೆದ ವಳಾಂಜೇರಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬಿಹಾರದಲ್ಲಿ ಆತನನ್ನು…

Read More

ಆರ್‌ಎಸ್‌ಎಸ್‌ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರಮೋದ್ ಮುತಾಲಿಕ್ ವಾಗ್ದಾಳಿ

ಚಿಕ್ಕಮಗಳೂರು,:ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನೋಂದಣಿ ಹಾಗೂ ಲೆಕ್ಕಪತ್ರಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಸಚಿವರು ತಮ್ಮ ಜವಾಬ್ದಾರಿಯ ಅರಿವಿನಿಂದ ನಡೆದುಕೊಳ್ಳಬೇಕು ಎಂದು ತೀವ್ರ ವಾಗ್ದಾಳಿ ನಡೆಸಿದರು. ಮೂಡಿಗೆರೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ಕುರಿತು ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. “ನೀವು ಕರ್ನಾಟಕದ ಏಳು ಕೋಟಿ ಜನರ ಸಚಿವರಾಗಿದ್ದೀರಿ. ಆದರೆ ಆರ್‌ಎಸ್‌ಎಸ್‌…

Read More

ಅಕ್ಟೋಬರ್ 18, 19ರಂದು ಮೈಸೂರು ದಸರಾ ಕಂಬಳ; ಸ್ಥಳ, ದಿನಾಂಕ ಅಂತಿಮ

ಪುತ್ತೂರು,ಜಗತ್ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ಆಯೋಜಿಸಲಾಗುತ್ತಿರುವ ಕಂಬಳ ಸ್ಪರ್ಧೆಯು ಅಕ್ಟೋಬರ್ 18 ಮತ್ತು 19ರಂದು ನಡೆಯಲಿದ್ದು, ಕಂಬಳಕ್ಕೆ ಸಂಬಂಧಿಸಿದ ಪ್ರಥಮ ಸಭೆಯಲ್ಲಿ ದಿನಾಂಕ ಹಾಗೂ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಎಂದು ಕಂಬಳದ ರೂವಾರಿ ಹಾಗೂ ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಶುಕ್ರವಾರ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಂಬಳ ಆಯೋಜನೆ ಕುರಿತಂತೆ ಅಧಿಕಾರಿಗಳು ಹಾಗೂ ಕಂಬಳ ಸಮಿತಿ ಪ್ರಮುಖರು ಭಾಗವಹಿಸಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ಸಭೆಯಲ್ಲಿ…

Read More

ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ಕಂಬಳ; ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು/ಮೈಸೂರು: ಐತಿಹಾಸಿಕ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಈ ಬಾರಿ ಮೊದಲ ಬಾರಿಗೆ ಕಂಬಳ ಆಯೋಜನೆಗೆ ಸಿದ್ಧತೆಗಳು ಆರಂಭಗೊಂಡಿದ್ದು, ಪುತ್ತೂರು ಶಾಸಕ ಅಶೋಕ್ ರೈ ಅವರು ಶುಕ್ರವಾರ ಮೈಸೂರಿನ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಕಳೆದ ವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಶಾಸಕ ಅಶೋಕ್ ರೈ ಅವರನ್ನು ಭೇಟಿ ಮಾಡಿ, ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದರು….

Read More

ಪಿವಿಎಸ್ ಕಲಾಕುಂಜ್ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ವಿಶೇಷ ದಿವ್ಯ ದರ್ಶನ

ಮಂಗಳೂರು: ನಗರದ ಪಿವಿಎಸ್ ಕಲಾಕುಂಜ್‌ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಶುಕ್ರವಾರ ವಿಶೇಷ ಪೂಜೆ ಹಾಗೂ ದಿವ್ಯ ದರ್ಶನ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ಅಲಂಕೃತಗೊಂಡಿದ್ದ ಶ್ರೀ ಶ್ರೀ ಕೃಷ್ಣ ಬಲರಾಮ, ಶ್ರೀ ಶ್ರೀ ಗೌರ ನಿತಾಯಿ ಹಾಗೂ ಜಗದ್ಗುರು ಶ್ರೀಲ ಎ.ಸಿ. ಭಕ್ತಿವೇದಾಂತ ಸ್ವಾಮಿ ಪ್ರಭುಪಾದರ ದಿವ್ಯ ದರ್ಶನವನ್ನು ಸಾವಿರಾರು ಭಕ್ತರು ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗಿನಿಂದಲೇ ಭಕ್ತರು ಮಂದಿರಕ್ಕೆ ಆಗಮಿಸಿ ದೇವರ ದರ್ಶನ ಪಡೆದು, ಹರಿನಾಮ ಸಂಕೀರ್ತನೆ, ಮಂಗಳಾರತಿ ಹಾಗೂ ವಿಶೇಷ…

Read More

ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ: ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಮಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಹೀಗಿದ್ದರೂ ಪಕ್ಷದ ಅನುಷ್ಠಾನ ಸಮಿತಿಯ ಅಧಿಕಾರಿಗಳಿಗೆ ಗೌರವಧನವನ್ನು ಸರಿಯಾಗಿ ನೀಡಿರುವುದಾಗಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಬಳಿಕ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ವೈಫಲ್ಯ ಹಾಗೂ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ನಾಯಕರೇ ಬಹಿರಂಗವಾಗಿ ಮಾತನಾಡುತ್ತಿರುವುದು ಸರ್ಕಾರದ…

Read More

ನೂತನ ಕ್ಲಬ್‌ಗೆ ಭವ್ಯ ಚಾಲನೆ; ಪದಾಧಿಕಾರಿಗಳ ಪದಗ್ರಹಣ

ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317D ಅಡಿಯಲ್ಲಿ ನೂತನವಾಗಿ ಸ್ಥಾಪನೆಯಾದ ಲಯನ್ಸ್ ಕ್ಲಬ್ ಮಂಗಳೂರು ಐಕ್ಯವನ್ನು ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕ್ಲಬ್‌ನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಜಿಲ್ಲಾ ರಾಜ್ಯಪಾಲ ಅರುಣ್ ಶೆಟ್ಟಿ ಅವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಕ್ಲಬ್ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು. ಪ್ರಥಮ ಉಪ ಜಿಲ್ಲಾ ರಾಜ್ಯಪಾಲ ಚುನಾಯಿತ…

Read More

ಜಾಗತಿಕ ಆರ್ಥಿಕ ಬೆಳವಣಿಗೆಯಲ್ಲಿ MSME ವಲಯದ ಪಾತ್ರ ಮಹತ್ವದ್ದು: ಸಿ.ಎ.ಎಸ್.ಎಸ್. ನಾಯಕ್

ಮಂಗಳೂರು, ಜೂ.27: ದೇಶದ ಆರ್ಥಿಕತೆ ಬಲವರ್ಧನೆ, ಉದ್ಯೋಗ ಸೃಷ್ಟಿ ಹಾಗೂ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (MSME) ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಆರ್ಥಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಸಿ.ಎ.ಎಸ್.ಎಸ್. ನಾಯಕ್ ಹೇಳಿದರು. ನಗರದ ಪತ್ರಿಕಾಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕ ಅಭಿವೃದ್ಧಿ ಮತ್ತು ಆರ್ಥಿಕತೆಯಲ್ಲಿ MSME ವಲಯದ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ವಿಶ್ವಸಂಸ್ಥೆಯು 2017ರಿಂದ ಪ್ರತಿ ವರ್ಷ ಜೂನ್ 27ರಂದು ಅಂತರರಾಷ್ಟ್ರೀಯ…

Read More
error: Content is protected !!