Headlines

ಪಿವಿಎಸ್ ಕಲಾಕುಂಜ್ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ವಿಶೇಷ ದಿವ್ಯ ದರ್ಶನ

ಮಂಗಳೂರು: ನಗರದ ಪಿವಿಎಸ್ ಕಲಾಕುಂಜ್‌ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ಶುಕ್ರವಾರ ವಿಶೇಷ ಪೂಜೆ ಹಾಗೂ ದಿವ್ಯ ದರ್ಶನ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು. ಈ ಸಂದರ್ಭದಲ್ಲಿ ಅಲಂಕೃತಗೊಂಡಿದ್ದ ಶ್ರೀ ಶ್ರೀ ಕೃಷ್ಣ ಬಲರಾಮ, ಶ್ರೀ ಶ್ರೀ ಗೌರ ನಿತಾಯಿ ಹಾಗೂ ಜಗದ್ಗುರು ಶ್ರೀಲ ಎ.ಸಿ. ಭಕ್ತಿವೇದಾಂತ ಸ್ವಾಮಿ ಪ್ರಭುಪಾದರ ದಿವ್ಯ ದರ್ಶನವನ್ನು ಸಾವಿರಾರು ಭಕ್ತರು ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬೆಳಗ್ಗಿನಿಂದಲೇ ಭಕ್ತರು ಮಂದಿರಕ್ಕೆ ಆಗಮಿಸಿ ದೇವರ ದರ್ಶನ ಪಡೆದು, ಹರಿನಾಮ ಸಂಕೀರ್ತನೆ, ಮಂಗಳಾರತಿ ಹಾಗೂ ವಿಶೇಷ…

Read More

ಗೃಹಲಕ್ಷ್ಮಿ ಯೋಜನೆ ಅನುಷ್ಠಾನದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ: ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಮಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ಹೀಗಿದ್ದರೂ ಪಕ್ಷದ ಅನುಷ್ಠಾನ ಸಮಿತಿಯ ಅಧಿಕಾರಿಗಳಿಗೆ ಗೌರವಧನವನ್ನು ಸರಿಯಾಗಿ ನೀಡಿರುವುದಾಗಿ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆರೋಪಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ಬಳಿಕ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದ ವೈಫಲ್ಯ ಹಾಗೂ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ನಾಯಕರೇ ಬಹಿರಂಗವಾಗಿ ಮಾತನಾಡುತ್ತಿರುವುದು ಸರ್ಕಾರದ…

Read More

ನೂತನ ಕ್ಲಬ್‌ಗೆ ಭವ್ಯ ಚಾಲನೆ; ಪದಾಧಿಕಾರಿಗಳ ಪದಗ್ರಹಣ

ಲಯನ್ಸ್ ಇಂಟರ್‌ನ್ಯಾಷನಲ್ ಜಿಲ್ಲೆ 317D ಅಡಿಯಲ್ಲಿ ನೂತನವಾಗಿ ಸ್ಥಾಪನೆಯಾದ ಲಯನ್ಸ್ ಕ್ಲಬ್ ಮಂಗಳೂರು ಐಕ್ಯವನ್ನು ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ್ ಶೆಣೈ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಕ್ಲಬ್‌ನ ಕಾರ್ಯಚಟುವಟಿಕೆಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಾಜಿ ಜಿಲ್ಲಾ ರಾಜ್ಯಪಾಲ ಅರುಣ್ ಶೆಟ್ಟಿ ಅವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಕ್ಲಬ್ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು. ಪ್ರಥಮ ಉಪ ಜಿಲ್ಲಾ ರಾಜ್ಯಪಾಲ ಚುನಾಯಿತ…

Read More

ಜಾಗತಿಕ ಆರ್ಥಿಕ ಬೆಳವಣಿಗೆಯಲ್ಲಿ MSME ವಲಯದ ಪಾತ್ರ ಮಹತ್ವದ್ದು: ಸಿ.ಎ.ಎಸ್.ಎಸ್. ನಾಯಕ್

ಮಂಗಳೂರು, ಜೂ.27: ದೇಶದ ಆರ್ಥಿಕತೆ ಬಲವರ್ಧನೆ, ಉದ್ಯೋಗ ಸೃಷ್ಟಿ ಹಾಗೂ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (MSME) ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ದಕ್ಷಿಣ ಕನ್ನಡ ಬಿಜೆಪಿ ಆರ್ಥಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಸಿ.ಎ.ಎಸ್.ಎಸ್. ನಾಯಕ್ ಹೇಳಿದರು. ನಗರದ ಪತ್ರಿಕಾಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾಗತಿಕ ಅಭಿವೃದ್ಧಿ ಮತ್ತು ಆರ್ಥಿಕತೆಯಲ್ಲಿ MSME ವಲಯದ ಮಹತ್ವವನ್ನು ಜನರಿಗೆ ತಿಳಿಸುವ ಉದ್ದೇಶದಿಂದ ವಿಶ್ವಸಂಸ್ಥೆಯು 2017ರಿಂದ ಪ್ರತಿ ವರ್ಷ ಜೂನ್ 27ರಂದು ಅಂತರರಾಷ್ಟ್ರೀಯ…

Read More

ಜಮೀರ್ ಅಹ್ಮದ್ ಖಾನ್‌ಗೆ ಪ್ರಮುಖ ಸಚಿವ ಸ್ಥಾನ ನೀಡುವಂತೆ ಡಿಕೆಶಿಗೆ ಕಾಂಗ್ರೆಸ್ ಕಾರ್ಯಕರ್ತನ ಮನವಿ

ಬಂಟ್ವಾಳ, ಜೂನ್ 27:ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಜನಸೇವೆ ಹಾಗೂ ಕಾಂಗ್ರೆಸ್ ಪಕ್ಷದ ಮೇಲಿನ ನಿಷ್ಠೆಯನ್ನು ಪರಿಗಣಿಸಿ ರಾಜ್ಯ ಸರ್ಕಾರದಲ್ಲಿ ಪ್ರಮುಖ ಸಚಿವ ಸ್ಥಾನ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಾಂಗ್ರೆಸ್ ಕಾರ್ಯಕರ್ತ ಅಸೀಬ್ ರಹ್ಮಾನ್ ಅವರು ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರದಲ್ಲಿ ಜಮೀರ್ ಅಹ್ಮದ್ ಖಾನ್ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಗೆ ಮಹತ್ವದ ಕೊಡುಗೆ ನೀಡಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು…

Read More

₹25 ಕೋಟಿ ವಿಶೇಷ ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಶಾಸಕಿ ವಿರುದ್ಧ ಕಾಂಗ್ರೆಸ್ ಆರೋಪ

ಕಡಬ, ಜೂನ್ 27:ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ₹25 ಕೋಟಿ ವಿಶೇಷ ಅಭಿವೃದ್ಧಿ ಅನುದಾನದ ಹಂಚಿಕೆಯಲ್ಲಿ ತಾರತಮ್ಯ ಎಸಗಿ ಸಾರ್ವಜನಿಕ ಹಣ ದುರ್ಬಳಕೆ ಮಾಡಲಾಗಿದೆ ಎಂದು ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ. ಆರೋಪಿಸಿದರು. ಶುಕ್ರವಾರ ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅನುದಾನ ಹಂಚಿಕೆಯಲ್ಲಿ ಪಾರದರ್ಶಕತೆ ಇಲ್ಲದೆ ಬಿಜೆಪಿ ಮುಖಂಡರು, ಬಿಜೆಪಿ ಬೆಂಬಲಿತ ವ್ಯಕ್ತಿಗಳು ಹಾಗೂ ಸಂಘ-ಸಂಸ್ಥೆಗಳ ಶಿಫಾರಸ್ಸಿನ ಮೇರೆಗೆ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಲಾಗಿದೆ. ಅಗತ್ಯವಿರುವ ಹಲವು ಅಭಿವೃದ್ಧಿ…

Read More

ವೆನೆಜುವೆಲಾದಲ್ಲಿ ಮತ್ತೆ ಭೂಕಂಪ; ಮೃತರ ಸಂಖ್ಯೆ 920ಕ್ಕೆ ಏರಿಕೆ

ಕಾರಕಾಸ್: ದಕ್ಷಿಣ ಅಮೆರಿಕದ ವೆನೆಜುವೆಲಾದಲ್ಲಿ ಭೀಕರ ಅವಳಿ ಭೂಕಂಪಗಳ ಬೆನ್ನಲ್ಲೇ ಶುಕ್ರವಾರ 4.9 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿದ್ದು, ಜನರಲ್ಲಿ ಆತಂಕ ಮತ್ತಷ್ಟು ಹೆಚ್ಚಿಸಿದೆ. ಬುಧವಾರ ಸಂಭವಿಸಿದ್ದ 7.2 ಮತ್ತು 7.5 ತೀವ್ರತೆಯ ಭೂಕಂಪಗಳಿಂದ ಸಾವಿರಾರು ಮನೆಗಳು, ರಸ್ತೆ, ಸೇತುವೆಗಳು ಹಾಗೂ ಆಸ್ಪತ್ರೆಗಳು ಧ್ವಂಸಗೊಂಡಿವೆ. ಈವರೆಗೆ ಮೃತರ ಸಂಖ್ಯೆ 920ಕ್ಕೆ ಏರಿಕೆಯಾಗಿದ್ದು, 50 ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವೆನೆಜುವೆಲಾ ರಾಷ್ಟ್ರೀಯ ಅಸೆಂಬ್ಲಿ ಅಧ್ಯಕ್ಷ ಜಾರ್ಜ್ ರೋಡ್ರಿಗಸ್ ತಿಳಿಸಿದ್ದಾರೆ. ಅಂತರರಾಷ್ಟ್ರೀಯ ವಲಸೆ ಸಂಸ್ಥೆ (IOM) ಅಂದಾಜಿನಂತೆ…

Read More

ಲೋಬೋ ಫೌಂಡೇಶನ್ ನಿಂದ ಒಲವಿನಹಳ್ಳಿ ಆಶ್ರಮಕ್ಕೆ 1ಲಕ್ಷದ ದೇಣಿಗೆ

ಉಳ್ಳಾಲ :ಜಾನ್ ವಿಲ್ಸನ್ ಲೋಬೋ ನೇತೃತ್ವದಲ್ಲಿ ನಿರ್ಮಿಸುತ್ತಿರುವ ವೇಳ್ ಘಡಿ ಕೊಂಕಣಿ ಸಿನಿಮಾದ ಕಲಾವಿದರು ಹಾಗೂ ತಂತ್ರಜ್ಞರ ತಂಡ ಕಿನ್ಯ ಗ್ರಾಮದ ಒಳವಿನಹಳ್ಳಿ ಅಶ್ರಮಕ್ಕೆ ಭೇಟಿನಿಡಿದರು.ವೇಳ್ ಘಡಿ ಕೊಂಕಣಿ ಸಿನಿಮಾ ತಂಡದ ವತಿಯಿಂದ ಅಶ್ರಮದ ನಿವಾಸಿಗಳಿಗೆ ಅನ್ನದಾನ ಹಾಗೂ ಲೋಬೋ ಫೌಂಡೇಶನ್ ವತಿಯಿಂದ ಒಲವಿನಹಳ್ಳಿ ಆಶ್ರಮದ‌ ಕಟ್ಟಡ ನಿರ್ಮಾಣಕ್ಕೆ ಒಂದು ಲಕ್ಷದ ದೇಣಿಗೆಯನ್ನು ನೀಡಿದರು.ಆಶ್ರಮದ ಆಡಳಿತಾಧಿಕಾರಿ ಸಿಸ್ಟರ್ ಐಲೀನ್ ಮಾಥಿಯಾಸ್ ದೇಣಿಗೆಯನ್ನು ಸ್ವೀಕರಿಸಿದ ‌ ಮಾತನಾಡಿ ಜಾನ್ ವಿಲ್ಸನ್ ಲೋಬೋ ರಂತಹ ಸಮಾಜ ಸೇವಕರೇ ನಮ್ಮ ಆಶ್ರಮದ…

Read More

ಉಡುಪಿ ಜಿಲ್ಲೆಯಲ್ಲಿ ಮೂವರು ರೌಡಿ ಶೀಟರ್‌ಗಳಿಗೆ ಗಡಿಪಾರು ಆದೇಶ

ಕೊಲೆ, ಕೊಲೆ ಯತ್ನ ಸೇರಿದಂತೆ 30 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ; ಕಳೆದ ವರ್ಷ 14 ಮಂದಿಯ ವಿರುದ್ಧ ಗಡಿಪಾರು ಕ್ರಮ ಉಡುಪಿ, ಜೂನ್ 27:ಜಿಲ್ಲೆಯ ಮೂವರು ರೌಡಿ ಶೀಟರ್‌ಗಳ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಗಡಿಪಾರು ಆದೇಶ ಹೊರಡಿಸಿದ್ದಾರೆ. ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಮ್ಮದ್ ದಾನೀಶ್ ಮದನಿ (23), ಕರಾಣಿ ಮುಸೀನ್ (44) ಹಾಗೂ ಶಿರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಇಲಿಯಾಸ್ (36) ಅವರಿಗೆ ಜೂನ್ 24ರಂದು ಗಡಿಪಾರು…

Read More

ರಾಮಮಂದಿರ ಅವ್ಯವಹಾರ ಸತ್ಯವಾದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಪೇಜಾವರ ಶ್ರೀ

ಉಡುಪಿ: ದೇಶ-ವಿದೇಶದ ಕೋಟ್ಯಂತರ ಭಕ್ತರ ಆರಾಧನಾ ಕೇಂದ್ರವಾದ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಅವ್ಯವಹಾರದಂತಹ ಗಂಭೀರ ಆರೋಪಗಳು ಕೇಳಿಬಂದಿರುವುದು ಅತ್ಯಂತ ದುರದೃಷ್ಟಕರ. ಆರೋಪಗಳು ಸತ್ಯವಾಗಿದ್ದರೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯ ಹಾಗೂ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಒತ್ತಾಯಿಸಿದರು. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಎಸ್‌ಐಟಿ ತನಿಖೆಯ ಮೇಲೆ ವಿಶ್ವಾಸವಿದ್ದು, ಶೀಘ್ರದಲ್ಲೇ ಸತ್ಯಾಸತ್ಯತೆ ಹೊರಬರಬೇಕು ಎಂದು ಹೇಳಿದರು. 200 ಕೆ.ಜಿ. ಬೆಳ್ಳಿ ದೇಣಿಗೆ ನೀಡಿದರೂ ರಶೀದಿ ನೀಡಿಲ್ಲ…

Read More
error: Content is protected !!