ರಾಮಮಂದಿರ ಅವ್ಯವಹಾರ ಸತ್ಯವಾದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಪೇಜಾವರ ಶ್ರೀ
ಉಡುಪಿ: ದೇಶ-ವಿದೇಶದ ಕೋಟ್ಯಂತರ ಭಕ್ತರ ಆರಾಧನಾ ಕೇಂದ್ರವಾದ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಅವ್ಯವಹಾರದಂತಹ ಗಂಭೀರ ಆರೋಪಗಳು ಕೇಳಿಬಂದಿರುವುದು ಅತ್ಯಂತ ದುರದೃಷ್ಟಕರ. ಆರೋಪಗಳು ಸತ್ಯವಾಗಿದ್ದರೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯ ಹಾಗೂ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಒತ್ತಾಯಿಸಿದರು. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಎಸ್ಐಟಿ ತನಿಖೆಯ ಮೇಲೆ ವಿಶ್ವಾಸವಿದ್ದು, ಶೀಘ್ರದಲ್ಲೇ ಸತ್ಯಾಸತ್ಯತೆ ಹೊರಬರಬೇಕು ಎಂದು ಹೇಳಿದರು. 200 ಕೆ.ಜಿ. ಬೆಳ್ಳಿ ದೇಣಿಗೆ ನೀಡಿದರೂ ರಶೀದಿ ನೀಡಿಲ್ಲ…
