ರಾಜ್ಯಮಟ್ಟದ ಗಣಿತ ಶಾಸ್ತ್ರೋತ್ಸವದಲ್ಲಿ ದ್ವಿತೀಯ ರನ್ನರಪ್ ಪ್ರಶಸ್ತಿ ಮುಡಿಗೇರಿಸಿದ ಎಸ್ ಎ ಟಿ ವಿದ್ಯಾಸಂಸ್ಥೆ

ಮಂಜೇಶ್ವರ: ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಳದ ಶಾಲೆಯ ಪ್ರೌಢ ಶಾಲಾ‌ ವಿಭಾಗದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಗಣಿತ ಶಾಸ್ತ್ರೋತ್ಸವದಲ್ಲಿ ಭಾಗವಹಿಸಿ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ರಾಜ್ಯ ಮಟ್ಟದ ಗಣಿತ ಪಝಲ್ ವಿಭಾಗದಲ್ಲಿ ಧನ್ಯ ಸಿ ಐಲ್ ದ್ವಿತೀಯ ಸ್ಥಾನದೊಂದಿಗೆ ಎ ಗ್ರೇಡ್, ನಂಬರ್ ಚಾರ್ಟ್ ವಿಭಾಗದಲ್ಲಿ ಚೈತ್ರಿಕಾ ಎಮ್ ಎ ಗ್ರೇಡ್, ಗ್ರೂಪ್ ಪ್ರೊಜೆಕ್ಟ್ ನಲ್ಲಿ ಅನುಶ್ರೀ ಮತ್ತು ಶೃಷ್ಠಿ ಶೆಟ್ಟಿ ಎ ಗ್ರೇಡ್, ಅದರ್ ಚಾರ್ಟ್ ವಿಭಾಗದಲ್ಲಿ ವರ್ಷ ಜಿ.ಕೆ ಎ ಗ್ರೇಡ್,…

Read More

ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಎಸ್ ಎ ಟಿ ಶಾಲಾ ವಿದ್ಯಾರ್ಥಿಗಳು

ತಿರುವನಂತಪುರದಲ್ಲಿ ಜರಗಿದ ರಾಜ್ಯ ಮಟ್ಟದ ಸಬ್ ಜೂನಿಯರ್ ವಿಭಾಗದ ಕ್ರಿಕೆಟ್ ಪಂದ್ಯಾಟದಲ್ಲಿ ಎಸ್ ಎ ಟಿ ಪ್ರೌಢಶಾಲೆಯ ಅದ್ವೈತ್ ಮತ್ತು ದೈವಿಕ್ ಕಾಸರಗೋಡು ಜಿಲ್ಲಾ ತಂಡವನ್ನು ಪ್ರತಿನಿಧಿಕರಿಸಿ ಉತ್ತಮ ಪ್ರದರ್ಶನವನ್ನು ನೀಡಿದರು. ರಾಜ್ಯ ಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ರಕ್ಷಕ ಶಿಕ್ಷಕ ಸಂಘ ಅಭಿನಂದನೆಗಳನ್ನು ಸಲ್ಲಿಸಿದರು.

Read More

ಸೌತ್ ಕೆನರಾ ಬೀಡಿ ವರ್ಕರ್ಸ್ ಪೆಡರೇಶನ್ ವತಿಯಿಂದ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿಯನ್ನು ಜಾರಿಗೊಳಿಸುವಂತೆ ನವೆಂಬರ್ 24 ರಿಂದ ಮಂಗಳೂರಿನಲ್ಲಿ ಅಹೋರಾತ್ರಿ ಧರಣಿ…!

ಮಂಗಳೂರು: ಸೌತ್ ಕೆನರಾ ಬೀಡಿ ವರ್ಕರ್ಸ್ ಪೆಡರೇಶನ್ ವತಿಯಿಂದ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ನವೆಂಬರ್ 24 ರಿಂದ 27 ರ ತನಕ ಅಹೋರಾತ್ರಿ ಧರಣಿಯನ್ನು ನಗರದ ಮಿನಿ ವಿಧಾನ ಸೌಧದ ಎದುರು ನಡೆಸಲಾಗುವುದು ಇದಕ್ಕೆ ಪರಿಹಾರ ಸಿಗದೇ ಹೋದಲ್ಲಿ ನವೆಂಬರ್ 28ಕ್ಕೆ ಮಂಗಳೂರಿನ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯನ್ನು ಮುತ್ತಿಗೆ ಹಾಕಲಾಗುವುದೆಂದು ಸೌತ್ ಕೆನಾರ ಬೀಡಿ ವರ್ಕರ್ಸ್ ಫೆಡರೇಶನ್ ನ ಪ್ರಧಾನ ಕಾರ್ಯದರ್ಶಿಗಳಾದ ಜೆ ಬಾಲಕೃಷ್ಣ ಶೆಟ್ಟಿ ಎಚ್ಚರಿಕೆ ನೀಡಿದರು. ಅವರು ನಗರದ…

Read More

ಸೌದಿಯಲ್ಲಿ ಬಸ್‌ಗೆ ಡೀಸೆಲ್ ಟ್ಯಾಂಕರ್ ಡಿಕ್ಕಿ; 42 ಭಾರತೀಯ ಹಜ್ ಯಾತ್ರಿಕರು ಸಜೀವ ದಹನ

ಹೈದರಾಬಾದ್ : ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಭೀಕರ ದುರಂತದಲ್ಲಿ 42 ಮಂದಿ ಭಾರತೀಯ ಯಾತ್ರಿಕರು ಮೃತಪಟ್ಟಿದ್ದಾರೆ. ಮುಫ್ರಿಹತ್ ಪ್ರದೇಶದ ಬಳಿ ಭಾರತೀಯ ಕಾಲಮಾನ ಬೆಳಗಿನ 1.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ ದುರಂತಕ್ಕೆ ಬಲಿಯಾದವರಲ್ಲಿ ಮಹಿಳೆಯರು ಮತ್ತು ಮಕ್ಕಳೂ ಸೇರಿದ್ದಾರೆ. ಮೃತಪಟ್ಟವರೆಲ್ಲರೂ ಹೈದರಾಬಾದ್‌ನವರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದುರಂತದ ವೇಳೆಗೆ ಬಸ್‌ನಲ್ಲಿ ಸುಮಾರು 20 ಮಹಿಳೆಯರು, 11 ಮಕ್ಕಳು ಇದ್ದರು ಎಂದು ಮೂಲಗಳು…

Read More

41 ದಿನಗಳ 700 ಕಿಲೋ ಮೀಟರ್ ಉದ್ದದ ಐತಿಹಾಸಿಕ ಪಾದಯಾತ್ರೆ ಕೈಗೊಳ್ಳಲಿರುವ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿ …. !

ಮಂಗಳೂರು: ಈಡಿಗ , ಬಿಲ್ಲವ, ನಾಮಧಾರಿ ಧೀವರ ಸೇರಿದಂತೆ 26 ಪಂಗಡಗಳ ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗಾಗಿ 2026ರ ಜನವರಿ 6 ರಂದು ಶಕ್ತಿಪೀಠ ಕರದಾಳದಿಂದ ಫೆಬ್ರವರಿ 12 ಬೆಂಗಳೂರ ತನಕ 41 ದಿನಗಳ 700 ಕಿಲೋ ಮೀಟರ್ ಉದ್ದದ ಐತಿಹಾಸಿಕ ಪಾದಯಾತ್ರೆ ಕೈಗೊಳ್ಳುವುದಾಗಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪೀಠಾಧಿಪತಿ ಡಾ. ಶ್ರೀ ಶ್ರೀ ಶ್ರೀ ಪಣವಾನಂದ ಸ್ವಾಮೀಜಿ ತಿಳಿಸಿದ್ದಾರೆ .ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, ಸಮುದಾಯದ ಹಕ್ಕುಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುವಂತೆ…

Read More

ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ .ಮೂವರು ಸಾವು

ಮಂಗಳೂರು :ಪಣಂಬೂರು ಬಳಿ ಎರಡು ಟ್ಯಾಂಕರ್ ಲಾರಿಗಳ ನಡುವೆ ರಿಕ್ಷಾ ಸಿಲುಕಿ ಮೂವರು ಮೃತಪಟ್ಟ ದಾರುಣ ಘಟನೆ‌ ನಡೆದಿದೆ.ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನಪ್ಪಿದ್ದಾರೆ.ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್ ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದಿನಿಂದ ಆಟೊ ರಿಕ್ಷಾ ಮತ್ತು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ…

Read More

ಎಲ್ ಡಿ ಎಫ್ ಮಂಜೇಶ್ವರ ಪಂಚಾಯತ್ ಚುನಾವಣಾ ಸಮಾವೇಶ

ಮ0ಜೇಶ್ವರ : ಎಲ್ ಡಿ ಎಫ್ ಮಂಜೇಶ್ವರ ಪಂಚಾಯತ್ ಸಮಾವೇಶ ಟಿವಿ ತೋಮಸ್ ಹಾಲ್ ನಲ್ಲಿ ನಡೆಯಿತು. ಸಮಾವೇಶವನ್ನು ಸಿಪಿಐ ಎಂ ರಾಜ್ಯ ಸಮಿತಿ ಸದಸ್ಯ ಕೆ ಆರ್ ಜಯಾನಂದ ಉದ್ಘಾಟಿಸಿದರು.ಸಿಪಿಐ ನೇತಾರ ದಯಾಕರ ಮಾಡ ಅಧ್ಯಕ್ಷತೆ ವಹಿಸಿದರು. ಸಿಪಿಐ ರಾಜ್ಯ ಸಮಿತಿ ಸದಸ್ಯ ಟಿ ಕೃಷ್ಣನ್, ಜೆ ಡಿ ಎಸ್ ನೇತಾರ ಡಾ. ಖಾದರ್, ಸಿಪಿಐ ನೇತಾರರಾದ ಎಸ್ ರಾಮಚಂದ್ರ ಬಡಾಜೆ, ಶ್ರೀಧರ್ ಮಾಡ,ಸಿಪಿಐ ಎಂ ನೇತಾರರಾದ ಅಶ್ರಫ್ ಕುಂಜತ್ತೂರ್, ಕರುಣಾಕರ ಶೆಟ್ಟಿ ಮೊದಲಾದವರು ಸಮಾವೇಶ…

Read More

ಎಲ್ ಡಿ ಎಫ್ ಮೀoಜ ಪಂಚಾಯತ್ ಚುನಾವಣಾ ಸಮಾವೇಶ :

ಮೀಯಪದವು : ಎಲ್ ಡಿ ಎಫ್ ಮೀoಜ ಪಂಚಾಯತ್ ಚುನಾವಣಾ ಸಮಾವೇಶವು ಮೀಯಪದವು ನಾರಾಯಣ ಅಡ್ಯಾಂತ್ತಾಯ.ಸ್ಮಾರಕ ಮಂದಿರದಲ್ಲಿ ನಡೆಯಿತು. ಸಿಪಿಎಂ ಹಿರಿಯ ನೇತಾರ ಕಾಂ : ಬಾಳಪ್ಪ ಬಂಗೇರರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕಾಂ : ಬೇಬಿ ಬಾಲಕೃಷ್ಣನ್ ಸಮಾವೇಶವನ್ನು ಉದ್ಘಾಟಿಸಿದರು. ಸಿಪಿಐ ದೇಶೀಯ ಸಮಿತಿ ಸದಸ್ಯರಾದ ಕಾಂ : ಗೋವಿಂದನ್ ಪಳ್ಳಿಕಾಪಿಲ್, ಎಲ್ ಡಿ ಎಫ್ ಮಂಜೇಶ್ವರ ಮಂಡಲ ಸಮಿತಿ ಕನ್ವೀನರ್ ಕಾಂ : ಜಯರಾಮ ಬಲ್ಲoಗುಡೆಲ್, ಸಿಪಿಎಂ ನೇತಾರೆ, ಕಡoಬಾರ್ ಬ್ಲಾಕ್ ಡಿವಿಷನ್…

Read More

ಭಾಷೆ ಬಳಕೆಯಿಂದ ಬೆಳೆಯುತ್ತದೆ – ಡಾ. ಇಂಚರ ನಾರಾಯಣ ಸ್ವಾಮಿ

ಕಾಸರಗೋಡು : ಗಡಿನಾಡಿನ ಕನ್ನಡಿಗರ ಭಾಂದವ್ಯವು ಪರಸ್ಪರ ಚಿರಕಾಲದ ಅನುಬಂಧವಾಗಬೇಕು. ನಮ್ಮ ಮಕ್ಕಳಿಗೆ ಅಂಕ ಶಿಕ್ಷಣದ ಜತೆಗೆ ಕನ್ನಡ ಸಂಸ್ಕೃತಿಯ ಶಿಕ್ಷಣವನ್ನೂ ನೀಡಬೇಕು. ಕನ್ನಡ ಭಾಷೆಯ ಬಳಕೆ ಹೆಚ್ಚಾದಾಗ ಭಾಷೆಯು ಸ್ವಯಂ ಜಾಗೃತಿಯಾಗಿ ಬೆಳೆಯುತ್ತದೆ’ ಎಂದು ಕೋಲಾರದ ರಂಗ ಇಂಚರ ಟ್ರಸ್ಟಿನ ಅಧ್ಯಕ್ಷ ಡಾ. ಇಂಚರ ನಾರಾಯಣ ಸ್ವಾಮಿ ಹೇಳಿದರು. ಅವರು ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ಶನಿವಾರ ಕಾಸರಗೋಡಿನ ಕನ್ನಡ ಭವನ, ಕನ್ನಡ ಭವನ…

Read More

ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಸಹಕಾರ ಕ್ಷೇತ್ರ ಅಪಾರ ಕೊಡುಗೆ ನೀಡಿದೆ : ಸ್ಪೀಕರ್ ಯು ಟಿ ಖಾದರ್

ಮಂಗಳೂರು: ಸಹಕಾರ ಕ್ಷೇತ್ರವು ದೇಶದ ಗ್ರಾಮೀಣ ಜನರ ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡುವ ಮೂಲಕ ಗ್ರಾಮೀಣ ಜನರಿಗೆ ಶಕ್ತಿ ನೀಡಿದೆ. ದೇಶದ ಅಭಿವೃದ್ಧಿಗೆ ಸಹಕಾರ ರಂಗವು ಅಪಾರ ಕೊಡುಗೆ ನೀಡುತ್ತಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು ಎಂಬ ಧ್ಯೇಯ ವಾಕ್ಯ ದೊಂದಿಗೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಭಾನುವಾರ…

Read More
error: Content is protected !!