Headlines

ಪ್ರಜಾಪ್ರಭುತ್ವವನ್ನು ಕೊಂದವರು ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಮಾತನಾಡುತ್ತಿದ್ದಾರೆ: ಟಿ.ಪಿ. ಜಯಚಂದ್ರನ್

​ಕಾಸರಗೋಡು: ಪ್ರಜಾಪ್ರಭುತ್ವವನ್ನು ಕೊಂದ ಕಾಂಗ್ರೆಸ್ ಪಕ್ಷದ ಹೊಸ ಪೀಳಿಗೆಯ ನಾಯಕರು ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಮಾತನಾಡುತ್ತಿದ್ದಾರೆ. ತನ್ನ ಪೂರ್ವಜರು ನಡೆಸಿದ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಖಂಡಿಸಲು ಸಿದ್ಧರಿಲ್ಲದ ರಾಹುಲ್ ಗಾಂಧಿ, ಜೇಬಿನಲ್ಲಿ ಸಂವಿಧಾನವನ್ನು ಇಟ್ಟುಕೊಂಡು ತಿರುಗಾಡುತ್ತಾ ಸ್ವತಃ ಹಾಸ್ಯಾಸ್ಪದವಾಗುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಟಿ.ಪಿ. ಜಯಚಂದ್ರನ್ ಮಾಸ್ಟರ್ ಹೇಳಿದ್ದಾರೆ. ತುರ್ತು ಪರಿಸ್ಥಿತಿ ವಿರೋಧಿ ಹೋರಾಟದ 51ನೇ ವರ್ಷಾಚರಣೆಯ ಅಂಗವಾಗಿ ಬಿಜೆಪಿ ಜಿಲ್ಲಾ ಸಮಿತಿಯು ಆಯೋಜಿಸಿದ್ದ ತುರ್ತು ಪರಿಸ್ಥಿತಿ ವಿರೋಧಿ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ​ಇಂದಿರಾ…

Read More

ಕಾಟಿಪಳ್ಳ : ಅಪ್ರಾಪ್ತೆಯ ದುರಂತದಲ್ಲಿ ಡ್ರಗ್ಸ್ ಪ್ರಭಾವ: ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು :ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಟಿಪಳ್ಳದಲ್ಲಿ ಜೂನ್ 23 ರಂದು ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಬಳಿಕ ಆಕೆ ಗರ್ಭಿಣಿಯಾಗಿ ಕೊನೆಗೆ ಆತ್ಮಹತ್ಯೆ ಮಾಡಿ ಕೊಂಡಿರುವ ಪ್ರಕರಣದಲ್ಲಿ ಡ್ರಗ್ಸ್ ಕೂಡಾ ಕೆಲಸ ಮಾಡಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ತಿಳಿಸಿದ್ದಾರೆ. ಮಂಗಳೂರು ಪುರಭವನದಲ್ಲಿ ಮಂಗಳೂರು ನಗರ ಪೊಲೀಸ್ ವತಿಯಿಂದ ಯೆನೆಪೊಯ ಡೀಮ್ಸ್ ಯೂನಿವರ್ಸಿಟಿ ಸಹಯೋಗದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ…

Read More

ಬೆಂದೂರು ಲಾಡ್ಜ್ ಮೇಲೆ ಸಿಸಿಬಿ ದಾಳಿ; ಎಂಡಿಎಂಎ ಸಮೇತ ಮೂವರು ವಶಕ್ಕೆ

ಮಂಗಳೂರು :ಬೆಂದೂರು ಲಾಡ್ಜ್‌ನಲ್ಲಿ ಎಂಡಿಎಂಎ ಮಾರಾಟಕ್ಕೆ ಯತ್ನಿಸಿದವರಿಂದ 35.53 ಗ್ರಾಂ ಮಾದಕ ವಸ್ತು ಸಮೇತ ಮೂವರನ್ನು ಬಂಧಿಸಲಾಗಿದೆ.ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA)ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಮಾದಕ ವಸ್ತು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ನದೀಂ (27), ಉಮರುಲ್ ಫಾರೂಕ್ (30) ಹಾಗೂ ಇಮ್ಮಿಯಾಜ್ ಇಸ್ಮಾಯಿಲ್ ಕಿನ್ಯಾ (41) ಎಂದು ಗುರುತಿಸಲಾಗಿದೆ. ಜೂನ್ 23ರಂದು ಮಂಗಳೂರು ನಗರದ ಬೆಂದೂರಿನಲ್ಲಿರುವ ಲಾಡ್ಜ್ ಒಂದರಲ್ಲಿ…

Read More

ಮುಡಿಪು: ಆಟೋ ಡಿಕ್ಕಿಯಾಗಿ ಪಾದಚಾರಿಗೆ ಗಂಭೀರ ಗಾಯ

ಮಂಗಳೂರು: ನಗರದ ಹೊರವಲಯದ ಮುಡಿಪು ಸಮೀಪ ಆಟೋರಿಕ್ಷಾ ಡಿಕ್ಕಿಯಾಗಿ ಪಾದಚಾರಿ ವೃದ್ಧರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಮುಡಿಪು ಮುಖ್ಯರಸ್ತೆ ಬದಿಯಲ್ಲಿ ವೃದ್ಧರು ನಡೆದುಕೊಂಡು ಹೋಗುತ್ತಿದ್ದ ವೇಳೆ, ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ಅವರ ಮೇಲೆ ಹರಿದಿದೆ. ಡಿಕ್ಕಿಯ ರಭಸಕ್ಕೆ ವೃದ್ಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಆಟೋರಿಕ್ಷಾ ಚಾಲಕನಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.ಘಟನೆ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Read More

ಹಾರ್ಮುಜ್ ಜಲಸಂಧಿಯಲ್ಲಿ ಹಡಗು ಸಂಚಾರಕ್ಕೆ ಮತ್ತೆ ಚೈತನ್ಯ

ದುಬೈ:ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ತಗ್ಗಿ ಶಾಂತಿ ಒಪ್ಪಂದ ಜಾರಿಗೆ ಬಂದ ಬೆನ್ನಲ್ಲೇ ಜಾಗತಿಕ ವ್ಯಾಪಾರಕ್ಕೆ ಮಹತ್ವದ ಕೇಂದ್ರವಾಗಿರುವ ಹಾರ್ಮುಜ್ ಜಲಸಂಧಿಯಲ್ಲಿ ಹಡಗು ಸಂಚಾರ ಮತ್ತೆ ಚೇತರಿಕೆಯ ಲಕ್ಷಣಗಳನ್ನು ತೋರಿದೆ. ಹಲವು ತಿಂಗಳುಗಳ ಅನಿಶ್ಚಿತತೆ ಮತ್ತು ನಿರ್ಬಂಧಗಳ ಬಳಿಕ ಜಲಮಾರ್ಗದಲ್ಲಿ ಸಂಚಾರ ಗಣನೀಯವಾಗಿ ಹೆಚ್ಚಿರುವುದು ಜಾಗತಿಕ ವಾಣಿಜ್ಯ ವಲಯಕ್ಕೆ ನೆಮ್ಮದಿ ತಂದಿದೆ. ಕಡಲ ಗುಪ್ತಚರ ಸಂಸ್ಥೆ ಕೆಪ್ಲರ್ (Kpler) ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ, ಜೂನ್ 24ರಂದು ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಸಂಚಾರದಲ್ಲಿ ಶೇ.105ರಷ್ಟು…

Read More

ಜೂ. 27ಕ್ಕೆ ಕಾಡಬೆಟ್ಟು ದೇವಸ್ಥಾನದಲ್ಲಿ ಸಾಮೂಹಿಕ ಶನಿಶಾಂತಿ

ಉಡುಪಿ: ಕಾಡಬೆಟ್ಟುವಿನ ಅತ್ಯಂತ ಪುರಾತನ ಇತಿಹಾಸ ಪ್ರಸಿದ್ಧ ಶ್ರೀ ಅಬ್ಬರದರಗ ವೀರಭದ್ರ ಸಹಪರಿವಾರ ಹಾಗೂ ಶ್ರೀ ಶನೈಶ್ಚರ ದೇವಸ್ಥಾನದ ಜೀಣೋರ್ದ್ಧಾರ ಅಂಗವಾಗಿ ಜೂನ್​ 27ರಂದು ಶನಿವಾರ ತ್ರಯೋದಶಿ ತಿಥಿಯ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷವಾಗಿ ನವಗ್ರಹ ಸಹಿತ ಸಾಮೂಹಿಕ ಶ್ರೀ ಶನಿಶಾಂತಿ ಹೋಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನದ ತಂತ್ರಿ, ಹಿರಿಯ ವಿದ್ವಾಂಸ ಕುಮಾರಗುರು ತಂತ್ರಿ ತಿಳಿಸಿದರು. ಈ‌ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 11 ಗಂಟೆಗೆ ಕೃಷ್ಣಾಪುರ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ…

Read More

ಜೂನ್ 28ರಂದು ರೋಟರಿ ಜಿಲ್ಲಾ 3181 ನೂತನ ಜಿಲ್ಲಾ ಗವರ್ನರ್ ಆಗಿ ಸತೀಶ್ ಬೋಳಾರ್ ಅಧಿಕಾರ ಸ್ವೀಕಾರ …. !

ಮಂಗಳೂರು: ರೋಟರಿ ಇಂಟರ್‌ನ್ಯಾಷನಲ್ ಜಿಲ್ಲಾ 3181ರ 2026–27ನೇ ಸಾಲಿನ ಜಿಲ್ಲಾ ಗವರ್ನರ್ ಆಗಿ ಆಯ್ಕೆಯಾಗಿರುವ ರೊ. ಸತೀಶ್ ಬೋಳಾರ್ ಅವರು ಜೂನ್ 28ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಪಿಲಿಕುಳ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಕುರಿತು ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಗವರ್ನರ್ (ನಿಯೋಜಿತ) ರೊ. ಸತೀಶ್ ಬೋಳಾರ್, ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡಿರುವ…

Read More

ಅಶ್ವತ್ಥ ಎಲೆಯಲ್ಲಿ ಪೋಲಿಯೋ ಲಸಿಕೆ ಜಾಗೃತಿ ಸಂದೇಶ ಮೂಡಿಸಿದ ಮಹೇಶ್ ಮರ್ಣೆ

ಉಡುಪಿ, ಜೂನ್ 26: ಅಪರೂಪದ ಕಲಾಕೃತಿಗಳ ಮೂಲಕ ಜನಜಾಗೃತಿ ಮೂಡಿಸುತ್ತಿರುವ ಉಡುಪಿಯ ಕಲಾವಿದ ಮಹೇಶ್ ಮರ್ಣೆ ಅವರು ಮತ್ತೊಮ್ಮೆ ತಮ್ಮ ವಿಶಿಷ್ಟ ಕಲೆಯ ಮೂಲಕ ಸಮಾಜಮುಖಿ ಸಂದೇಶ ಸಾರಿದ್ದಾರೆ. ಅಶ್ವತ್ಥ ಎಲೆಯಲ್ಲಿ ಖ್ಯಾತನಾಮರ ಭಾವಚಿತ್ರಗಳನ್ನು ಮೂಡಿಸುವ ಮೂಲಕ ಗುರುತಿಸಿಕೊಂಡಿರುವ ಮಹೇಶ್ ಮರ್ಣೆ, ವಿವಿಧ ಸಾಮಾಜಿಕ ಹಾಗೂ ರಾಷ್ಟ್ರೀಯ ಮಹತ್ವದ ವಿಷಯಗಳ ಕುರಿತು ಕಲೆಯ ಮೂಲಕ ಜನರಲ್ಲಿ ಅರಿವು ಮೂಡಿಸುತ್ತಾ ಬಂದಿದ್ದಾರೆ. ಈ ಬಾರಿ ಜೂನ್ 28ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಹಿನ್ನೆಲೆಯಲ್ಲಿ, “5…

Read More

ಅಡ್ಡಮತದಾನದ ಸತ್ಯ ಕಾಲವೇ ಬಹಿರಂಗಪಡಿಸಲಿದೆ: ವಿಜಯೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಮಾಧ್ಯಮದವ್ರ ಜೊತೆಗೆ ಮಾತನಾಡಿದ ಅವರು, ದೆಹಲಿಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿದ್ದೇನೆ. ಅಲ್ಲಿಂದ ಮಂಗಳೂರಿಗೆ ಆಗಮಿಸಿ ಧರ್ಮಸ್ಥಳದಲ್ಲಿ ದೇವರ ದರ್ಶನ ಪಡೆದಿದ್ದೇನೆ. ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಸಿಗಲಿ ಹಾಗೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನಪರ, ಹಿಂದೂಗಳ ರಕ್ಷಣೆ ಮಾಡುವ ಹಾಗೂ ಸರ್ವತೋಮುಖ ಅಭಿವೃದ್ಧಿ ಸಾಧಿಸುವ ಬಿಜೆಪಿ…

Read More

ಧರ್ಮಸ್ಥಳದಲ್ಲಿ ಬಿ.ವೈ. ವಿಜಯೇಂದ್ರ ಪೂಜೆ, ಹೆಗ್ಗಡೆಯವರ ಭೇಟಿ

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನದ ಸತ್ಯಾಸತ್ಯತೆ ತಿಳಿಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ(ಬಿಜೆಪಿಎಲ್‌ ಪಿ) ನಡೆಸಲು ಮುಂದಾಗಿ ಕೊನೆಗೆ ವರಿಷ್ಠರ ಸೂಚನೆಯಂತೆ ಕೈಬಿಟ್ಟ ಬಳಿಕ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದಶ೯ನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಧಮಾ೯ಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದ…

Read More
error: Content is protected !!