Headlines

ಮಂಜೇಶ್ವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗದ ಮಹತ್ವ

ಮಂಜೇಶ್ವರ: ಮಂಜೇಶ್ವರ ಸರ್ಕಾರಿ ಹೋಮಿಯೋಪತಿ ಡಿಸ್ಪೆನ್ಸರಿ ಮತ್ತು ಆಯುಷ್ಮಾನ್ ಆರೋಗ್ಯ ಮಂದಿರದ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಇತ್ತೀಚೆಗೆ ಕಾರ್ಯಕ್ರಮ ಆಯೋಜಿಸಲಾಯಿತು. ​ಕಾರ್ಯಕ್ರಮದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಫಾತಿಮತ್ ಸೌರಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಕಡಪ್ಪುರಂ ಅಧ್ಯಕ್ಷತೆ ವಹಿಸಿದ್ದರು. ​ಎಫ್‌ಎಚ್‌ಸಿ ವೈದ್ಯಾಧಿಕಾರಿ ಡಾ. ಪ್ರಭಾಕರ ರಾಯ್ ಅವರು ‘ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ವಿಷಯದ ಕುರಿತು ಮಾತನಾಡಿದರು. ಆಯುರ್ವೇದ…

Read More

ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ – 2026 ಮತ್ತು ಕೇರಳ- ಕರ್ನಾಟಕ ಉತ್ಸವ,ಕೇರಳ- ಕರ್ನಾಟಕ ಭವನ ಶಿಲಾನ್ಯಾಸಕ್ಕೆ ಗಣ್ಯರು ಸಾಂಸ್ಕೃತಿಕ ರಾಯಭಾರಿಗಳು ಸ್ವಾಮೀಜಿಗಳಿಗೆ ಅಹ್ವಾನ.

ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪ ಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕನ್ನಡ ಗ್ರಾಮ, ಕಾಸರಗೋಡು ಇದರ ನೇತೃತ್ವದಲ್ಲಿ ಕಳೆದ 36 ವರ್ಷಗಳಿಂದ ಕೇರಳ ರಾಜ್ಯದ ಕನ್ನಡ ಭಾಷೆ,ಸಾಹಿತ್ಯ, ಸಂಸ್ಕೃತಿ,ಇತಿಹಾಸ ಪರಂಪರೆಯನ್ನು ಅಂತರ ರಾಜ್ಯದ್ಯಂತ ಕನ್ನಡ ಜನತೆಗೆ ತಲುಪಿಸುವ ಉದ್ದೇಶದಿಂದ ಕೇರಳ,ಕರ್ನಾಟಕ ಹಾಗೂ ಅಖಿಲ ಭಾರತ ಮತ್ತು ಆನಿವಾಸಿ ಭಾರತೀಯ ಕನ್ನಡಿಗರು,ಕಲಾವಿದರು, ಸಾಹಿತಿಗಳನ್ನು ಆಮಂತ್ರಿಸಿ ರಾಜ್ಯ,ರಾಷ್ಟ್ರೀಯ,ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಸಾಂಸ್ಕೃತಿಕ ವಿನಿಮಯಕ್ಕಾಗಿ ಕಾಸರಗೋಡಿನ ಮೀಪುಗುರಿ- ಪಾರೆಕಟ್ಟೆಯ…

Read More

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಧರ್ಮಸ್ಥಳ,: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿದೆ ಎನ್ನಲಾದ ಅಡ್ಡ ಮತದಾನ (ಕ್ರಾಸ್‌ ವೋಟಿಂಗ್) ವಿವಾದದ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಡ್ಡ ಮತದಾನದ ಸತ್ಯಾಸತ್ಯತೆ ಕುರಿತು ಚರ್ಚಿಸಲು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ವಿಜಯೇಂದ್ರ ಅವರು ಮುಂದಾಗಿದ್ದರು. ಆದರೆ ಪಕ್ಷದ ವರಿಷ್ಠರ ಸೂಚನೆಯ ಮೇರೆಗೆ ಸಭೆಯನ್ನು ರದ್ದುಗೊಳಿಸಲಾಯಿತು. ಬಳಿಕ…

Read More

ಮುಂಗಾರು ಬೆಳೆ ವಿಮೆ ಯೋಜನೆ: ಆಗಸ್ಟ್‌ 14ರೊಳಗೆ ನೋಂದಣಿ ಮಾಡಿಕೊಳ್ಳಲು ರೈತರಿಗೆ ಸೂಚನೆ

ಮಂಗಳೂರು: 2026-27ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದ್ದು, ಭತ್ತದ ಬೆಳೆಗೆ ನೋಂದಣಿ ಸಲ್ಲಿಸಲು ಆಗಸ್ಟ್‌ 14 ಕೊನೆಯ ದಿನವಾಗಿದೆ. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೋಜನೆ ಅನುಷ್ಠಾನಕ್ಕೆ ಇಂಡಸ್ ಇಂಡ್ ಜನರಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್‌ ಅನ್ನು ನೇಮಿಸಲಾಗಿದೆ. ಭತ್ತದ ಬೆಳೆಗೆ ಪ್ರತಿ ಎಕರೆಗೆ ಒಟ್ಟು ವಿಮಾ ಮೊತ್ತ ರೂ.30,595.32 ನಿಗದಿಯಾಗಿದ್ದು, ರೈತರ ವಂತಿಕೆಯಾಗಿ ಶೇ.2ರಂತೆ ರೂ.611.91 ವಿಮಾ ಕಂತು…

Read More

ಕುದ್ಮುಲ್ ರಂಗರಾವ್ ದಿನಾಚರಣೆ ಜೂನ್ 29 ರಂದು

ಮಂಗಳೂರು, :- ಮಂಗಳೂರು ಮಹಾನಗರಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕುದ್ಮುಲ್ ರಂಗರಾವ್ ದಿನಾಚರಣೆ ಜೂನ್ 29 ರಂದು ಬೆಳಿಗ್ಗೆ 10 ಗಂಟೆಗೆ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಫರೀದ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಗೋಕರ್ಣನಾಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ ಉಪನ್ಯಾಸ ನೀಡಲಿದ್ದಾರೆ.

Read More

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಆಹ್ವಾನ

ಮಂಗಳೂರು, : 2026-27ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‌ಎಸ್‌ಪಿ) ಅಡಿಯಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳು ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಗಳಾಗಿರಬೇಕು. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ…

Read More

ಮಣ್ಣಗುಡ್ಡೆಯಲ್ಲಿ 119ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಜೂನ್ 27ರಂದು

ಮಂಗಳೂರು: 119ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ * ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣ್ಣಗುಡ್ಡೆ ಇವರ ಜಂಟಿ ಆಶ್ರಯದಲ್ಲಿ 119ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮವು ಜೂನ್ 27ರಂದು ಶನಿವಾರ11ಗಂಟೆಗೆ ದ.ಕ. ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಮಣಗುಡ್ಡ ಇಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ನಳಿನಿ ಅವರು ವಹಿಸುವರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ಹಾಗೂ…

Read More

ಮಾದಕ ವಸ್ತುಗಳ ವಿರುದ್ಧ ಬಂಟ್ವಾಳದಲ್ಲಿ ಸಾವಿರಾರು ವಿದ್ಯಾರ್ಥಿಗಳ ಜಾಗೃತಿ ಅಭಿಯಾನ

ಬಂಟ್ವಾಳ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್, ಬಂಟ್ವಾಳ ಉಪವಿಭಾಗ, ಬಂಟ್ವಾಳ ನಗರ ಪೊಲೀಸ್ ಠಾಣೆ, ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್ ಮತ್ತು ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ‘ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತರಾಷ್ಟ್ರೀಯ ದಿನ–2026’ ಅಂಗವಾಗಿ ಜನಜಾಗೃತಿ ಕಾರ್ಯಕ್ರಮ ಹಾಗೂ ಕಾಲ್ನಡಿಗೆ ಜಾಥಾ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಉಪವಿಭಾಗದ ಎಎಸ್‌ಪಿ ಯಶ್ ಕುಮಾರ್ ಶರ್ಮಾ (ಐಪಿಎಸ್) ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳ ದುಷ್ಪರಿಣಾಮಗಳ…

Read More

ಮಂಗಳೂರಿನಲ್ಲಿ ಶಾರುಖ್ ಖಾನ್ ಜಾದು: ‘ರೋಹನ್ ಮರೀನಾ ಒನ್’ ಅನಾವರಣ, ಅಭಿಮಾನಿಗಳ ಸಂಭ್ರಮ

ಮಂಗಳೂರು, ಜೂ.26: ಬಾಲಿವುಡ್‌ನ ಖ್ಯಾತ ನಟ ಶಾರುಖ್ ಖಾನ್ ಅವರ ಉಪಸ್ಥಿತಿಯಲ್ಲಿ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಗುರುವಾರ ರೋಹನ್ ಕಾರ್ಪೊರೇಶನ್ ಆಯೋಜಿಸಿದ್ದ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ವಿಶೇಷ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಶನ್‌ನ ಐಷಾರಾಮಿ ಸಮುದ್ರತೀರ ವಸತಿ ಯೋಜನೆಯಾದ ‘ರೋಹನ್ ಮರೀನಾ ಒನ್’ ಅನ್ನು ಶಾರುಖ್ ಖಾನ್ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಂಗಳೂರಿನ ಆತಿಥ್ಯ, ಸಂಸ್ಕೃತಿ ಹಾಗೂ ನಗರವು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವುದನ್ನು ಶ್ಲಾಘಿಸಿದರು. ರೋಹನ್ ಕಾರ್ಪೊರೇಶನ್ ನಗರದ…

Read More

ಅಖಿಲ ಭಾರತ ಹೊರನಾಡ ಕನ್ನಡ ಸಂಘಗಳ ಪ್ರತಿನಿಧಿಗಳ 10 ನೇ ಮಹಾ ಮೇಳ – ಹೊರನಾಡ ಕನ್ನಡಿಗರ ಗೋಷ್ಠಿ, ಗಡಿನಾಡು – ಹೊರನಾಡು ಕನ್ನಡಿಗರಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ.

ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನೆಲೆಸಿದ ರಾಷ್ಟ್ರಕವಿ ನಿವಾಸ “ಗಿಳಿವಿಂಡು “ಸಮಗ್ರ ಅಭಿವೃದ್ದಿಗಾಗಿ ಕೇರಳ – ಕರ್ನಾಟಕ ಮುಖ್ಯ ಮಂತ್ರಿಯವರಲ್ಲಿಗೆ ನಿಯೋಗ ಬೇಟಿಗೆ ನಿರ್ಧಾರ. ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ ಇದರ ಆಶ್ರಯದಲ್ಲಿ ಮಹಾರಾಷ್ಟ್ರದ ಸೋಲಾಪುರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಸಮೀಪದ ಹುತಾತ್ಮ ಸ್ಮೃತಿ ಮಂದಿರದಲ್ಲಿ 2026 ಜೂನ್ 20 ಮತ್ತು 21 ರಂದು ನಡೆದ ಅಖಿಲ ಭಾರತ ಹೊರನಾಡ ಕನ್ನಡ ಸಂಘಗಳ ಪ್ರತಿನಿಧಿಗಳ 10 ನೇ ಮಹಾಮೇಳದಲ್ಲಿ ಹೊರನಾಡ ಕನ್ನಡಿಗರ ಗೋಷ್ಠಿಯಲ್ಲಿ ಕಾಸರಗೋಡಿನ…

Read More
error: Content is protected !!