Headlines

ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ

ಮೆಸ್ಕಾಂ ವ್ಯಾಪ್ತಿಯಲ್ಲಿ ಸಮಾನಾಂತರ ವಿದ್ಯುತ್ ಪರವಾನಿಗೆಗಾಗಿ ಟಾಟಾ ಪವ‌ರ್ ಕಾರ್ಪೊರೇಷನ್ ಸಲ್ಲಿಸಿರುವ ಅರ್ಜಿಯನ್ನು ರದ್ದುಪಡಿಸಲು ಹಾಗೂ ವಿದ್ಯುತ್ ಕ್ಷೇತ್ರದ ಖಾಸಗೀಕರಣ ತಡೆಗಟ್ಟಲು ಕೋರಿ ವಿದ್ಯುತ್ ನೌಕರರ ಒಕ್ಕೂಟದ ಪದಾಧಿಕಾರಿಗಳು ಮಂಗಳೂರು ನಗರ ದಕ್ಷಿಣದ ಶಾಸಕ ಡಿ. ವೇದವ್ಯಾಸ ಕಾಮತ್ ರಿಗೆ ಮನವಿ ಸಲ್ಲಿಸಿದರು. ಟಾಟಾ ಪವರ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯು ಮೆಸ್ಕಾಂ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಮಹಾನಗರ ಪಾಲಿಕೆ, ನಗರಸಭೆಗಳಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಅರ್ಜಿ ಸಲ್ಲಿಸಿದ್ದು, ನಗರವನ್ನು ಕೇಂದ್ರವಾಗಿಟ್ಟುಕೊಂಡು…

Read More

ಮಂಜೇಶ್ವರದಲ್ಲಿ ಸರಗಳ್ಳತನ: ಸ್ಕೂಟರ್‌ನಲ್ಲಿ ಬಂದ ಆರೋಪಿಯ ಬಂಧನ

ಮಂಜೇಶ್ವರ: ಮಂಜೇಶ್ವರದಲ್ಲಿ ಹಗಲಹೊತ್ತಿನಲ್ಲೇ ಸ್ಕೂಟರ್‌ನಲ್ಲಿ ಬಂದು, ಯುವತಿಯೊಬ್ಬಳ ಕತ್ತಿನಲ್ಲಿದ್ದ ಎರಡೂಕಾಲು ಪವನ್ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕುಂಬಳೆ ಬಂಬ್ರಾಣಿ ನಿವಾಸಿ ಎ. ಸಂದೀಪ್ (31) ಬಂಧಿತ ಆರೋಪಿಯಾಗಿದ್ದಾನೆ. ​ಘಟನೆಯ ನಂತರ ಸ್ಕೂಟರ್‌ನಲ್ಲಿ ಪರಾರಿಯಾದ ಆರೋಪಿಗಳಿಗಾಗಿ ಮಂಜೇಶ್ವರ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದರು. ಇದೀಗ ಸಂದೀಪ್‌ನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾದ ಆತನ ಮತ್ತೊಬ್ಬ ಸಹಚರನಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ…

Read More

ಸಂಘಪರಿವಾರದ ಕಾರ್ಯಕರ್ತನಿಂದ ಅಪ್ರಾಪ್ತ ಬಾಲಕಿಯ ಮೇಲೆ “ಲವ್ ಸೆಕ್ಸ್ ದೋಖಾ” ; ಬಾಲಕಿ ಆತ್ಮಹತ್ಯೆ : ಆರೋಪಿಯ ಬಗ್ಗೆ ಸಂಘ ಪರಿವಾರದ ಮೌನಕ್ಕೆ ವಿಮೆನ್ ಇಂಡಿಯಾ ಮೂವ್‌ಮೆಂಟ್ ಆಕ್ರೋಶ

ಮಂಗಳೂರು : ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಘ ಪರಿವಾರದ ಕಾರ್ಯಕರ್ತನಿಂದ ಅನ್ಯಾಯಕ್ಕೆ ಒಳಗಾಗಿ ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ನಡೆದಿದೆ. ಪ್ರೀತಿಯ ನಾಟಕವಾಡಿ ಬಾಲಕಿಯನ್ನು ನಿರಂತರವಾಗಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿಸಿ, ನಂತರ ವಂಚಿಸಿದ ಸಂಘಪರಿವಾರದ ಕಾರ್ಯಕರ್ತ ಅನೀಶ್ ಪೂಜಾರಿ ಎಂಬಾತನ ಕೃತ್ಯದಿಂದಾಗಿ ನೊಂದ ಬಾಲಕಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ನಾಗರಿಕ ಸಮಾಜವೇ ತಲೆತಗ್ಗಿಸುವಂತಿರುವ ಈ ಪ್ರಕರಣದಲ್ಲಿ, ಮೃತ ಬಾಲಕಿ ತಾನು ಸಂಘಪರಿವಾರದಲ್ಲಿದ್ದರೂ ತನಗೆ ಯಾವುದೇ ಸಹಾಯ ಸಿಗಲಿಲ್ಲ ಎಂದು ತನ್ನ…

Read More

ಜೂ.28ರಂದು ಉಡುಪಿ ಯಕ್ಷಗಾನ ಕಲಾರಂಗದಿಂದ ‘ಸೂರು ನೂರರ ಸಡಗರ’ ಕಾರ್ಯಕ್ರಮ

ಉಡುಪಿ: ಉಡುಪಿ ಯಕ್ಷಗಾನ ಕಲಾರಂಗದ ‘ವಿದ್ಯಾಪೋಷಕ್’ ಯೋಜನೆಯಡಿಯಲ್ಲಿ 100ರ ಮನೆ ಹಸ್ತಾಂತರ ಹಾಗೂ ಸೂರು ನೂರರ ಸಡಗರ ಕಾರ್ಯಕ್ರಮವನ್ನು ಜೂ. 28ರಂದು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉಡುಪಿ ಯಕ್ಷಗಾನ ಕಲಾರಂಗವು ಕಳೆದ 26 ವರ್ಷಗಳಿಂದ ಯಕ್ಷನಿಧಿಯ ಮೂಲಕ ಕಲಾವಿದರ ಕಲ್ಯಾಣಕ್ಕಾಗಿ ಹಾಗೂ 22 ವರ್ಷಗಳಿಂದ ವಿದ್ಯಾಪೋಷಕ್ ಯೋಜನೆಯಡಿ ಉಡುಪಿ ಜಿಲ್ಲೆಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು…

Read More

ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಎಂ.ಎನ್. ಅನುಚೇತ್ ಅಧಿಕಾರ ಸ್ವೀಕಾರ

ಬೆಂಗಳೂರು, ಜೂ.25: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಡಿಐಜಿ ಎಂ.ಎನ್. ಅನುಚೇತ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ಇದುವರೆಗೆ ಇಲಾಖೆಯ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಎಡಿಜಿಪಿ ಹೇಮಂತ್ ಎಂ. ನಿಂಬಾಳ್ಕರ್ ಅವರು ನೂತನ ಆಯುಕ್ತರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಅನುಚೇತ್ ಅವರಿಗೆ ಶುಭ ಹಾರೈಸಿದರು. ಸರ್ಕಾರವು ಎಂ.ಎನ್. ಅನುಚೇತ್ ಅವರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ…

Read More

ಬಾರ್‌ಗಳಲ್ಲಿ ಅಗ್ನಿ ಸುರಕ್ಷತಾ ಕ್ರಮ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಕ್ರಮ – ಅಬಕಾರಿ ಇಲಾಖೆ ಎಚ್ಚರಿಕೆ

ಉಡುಪಿ, ಜೂ.25: ಇತ್ತೀಚೆಗೆ ಮೈಸೂರಿನ ಪಬ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಸನ್ನದುದಾರರು ಹಾಗೂ ಬಾರ್ ಮಾಲೀಕರು ಅಗ್ನಿ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಉಡುಪಿ ಅಬಕಾರಿ ಜಿಲ್ಲಾಧಿಕಾರಿ ಟಿ.ಎಂ. ಶ್ರೀನಿವಾಸ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಉಡುಪಿ ಅಬಕಾರಿ ಇಲಾಖೆಯ ವತಿಯಿಂದ ಜಿಲ್ಲೆಯ ಸನ್ನದುದಾರರು ಹಾಗೂ ಬಾರ್ ಮಾಲೀಕರಿಗಾಗಿ ಅಗ್ನಿ ಅವಘಡ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಮತ್ತು ಸುರಕ್ಷತಾ ಕ್ರಮಗಳ ಕುರಿತು ಕಾರ್ಯಾಗಾರವನ್ನು ಅಬಕಾರಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಾಗಾರದಲ್ಲಿ ಮಾತನಾಡಿದ ಅವರು,…

Read More

ಜೂ.26ರಂದು ಪ್ರತಿಭಾನ್ವಿತ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಪರ್ಯಾಯ ಶಿರೂರು ಮಠ ಇದರ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ. 90ರಷ್ಟು ಅಂಕ ಗಳಿಸಿದ ಪ್ರತಿಭಾನ್ವಿತ ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವು ಜೂ. 26ರಂದು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ತಿಳಿಸಿದ್ದಾರೆ.ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ…

Read More

ಜೂನ್ 27ರಂದು ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ ₹15 ಲಕ್ಷ ಮೌಲ್ಯದ ಉಚಿತ ಶೈಕ್ಷಣಿಕ ಪರಿಕರ ವಿತರಣೆ

ಉಡುಪಿ, ಜೂ.25: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಸಾಮಾಜಿಕ ಕಳಕಳಿಯ ಧ್ಯೇಯದಡಿ ಉಡುಪಿ ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳಿಗೆ ₹15 ಲಕ್ಷ ಮೌಲ್ಯದ ಉಚಿತ ನೋಟ್ ಪುಸ್ತಕ, ಶೈಕ್ಷಣಿಕ ಪರಿಕರಗಳ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಜೂನ್ 27ರಂದು ಬೆಳಿಗ್ಗೆ 10.30ಕ್ಕೆ ನಗರದ ಟೌನ್ ಹಾಲ್‌ನಲ್ಲಿ ನಡೆಯಲಿದೆ ಎಂದು ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಮಾಜಿ ಸಚಿವ ಹಾಗೂ…

Read More

ಜು. 3-4ರಂದು ‘ಯಂಗ್ ಇಂಡಿಯನ್ಸ್ ಪಾರ್ಲಿಮೆಂಟ್-2026’

ಮಂಗಳೂರು, ಜೂ.25: ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ವಿಮರ್ಶಾತ್ಮಕ ಚಿಂತನೆ ಹಾಗೂ ನಾಗರಿಕ ಜಾಗೃತಿ ಬೆಳೆಸುವ ಉದ್ದೇಶದಿಂದ ಯಂಗ್ ಇಂಡಿಯನ್ಸ್ (ವೈಐ) ಮಂಗಳೂರು ಘಟಕವು ‘ಯಂಗ್ ಇಂಡಿಯನ್ಸ್ ಪಾರ್ಲಿಮೆಂಟ್-2026’ ಕಾರ್ಯಕ್ರಮವನ್ನು ಜುಲೈ 3 ಮತ್ತು 4ರಂದು ಬೋಂದೆಲ್‌ನ ಭಾರತ್ ಅಕಾಡೆಮಿಯಲ್ಲಿ ಆಯೋಜಿಸಿದೆ ಎಂದು ಘಟಕದ ಅಧ್ಯಕ್ಷ ಶರಣ್ ಶೆಟ್ಟಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 3ರಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದ್ದು, ದಕ್ಷಿಣ ಕನ್ನಡ ಲೋಕಸಭಾ ಸದಸ್ಯ Capt. Brijesh Chowta ಹಾಗೂ ಶಾಸಕ…

Read More

ಅಡಿಕೆ ಬೆಳೆಗಾರರು ಮತ್ತು ವರ್ತಕರ ಮೇಲೆ ನಿರಂತರ ದೌರ್ಜನ್ಯ: SDPI ಖಂಡನೆ

▪️ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ ರಾಜ್ಯದ ಲಾರಿಗಳ ಬಿಡುಗಡೆಗೆ ಆಗ್ರಹ ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅಡಿಕೆ ಬೆಳೆಗಾರರು ಹಾಗೂ ವರ್ತಕರು ಕಳೆದ ಹಲವು ವರ್ಷಗಳಿಂದ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇದೀಗ ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಾಣಿಕೆಯ ಲಾರಿಗಳನ್ನು ತಡೆಹಿಡಿದಿರುವ ಕ್ರಮವು ಅತೀಹೇಯಾ ಹಾಗೂ ಖಂಡನೀಯ ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡಿಕೆ ವರ್ತಕರು ಅತೀ ದೊಡ್ಡಮಟ್ಟದಲ್ಲಿ GST ಕಟ್ಟುವ ಮೂಲಕ ಸರ್ಕಾರಕ್ಕೆ ತೆರಿಗೆ ಪಾವತಿಯನ್ನು ಮಾಡುತ್ತಿದ್ದಾರೆ. ಮಹಾರಾಷ್ಟ್ರ…

Read More
error: Content is protected !!