Headlines

ರಾಮಮಂದಿರ ನಿಧಿ ಅವ್ಯವಹಾರ ಆರೋಪ: ಕರ್ನಾಟಕ ಮೂಲದ ಆರ್‌ಎಸ್‌ಎಸ್‌ ಮುಖಂಡನ ವಿಚಾರಣೆ

ಅಯೋಧ್ಯೆ: ಅಯೋಧ್ಯೆಯ ಶ್ರೀರಾಮ ಮಂದಿರದ ನಿಧಿ ಸಂಗ್ರಹದಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಮೂಲದ ಆರ್‌ಎಸ್‌ಎಸ್‌ ಮುಖಂಡ ಗೋಪಾಲ್ ಅವರನ್ನು ಉತ್ತರ ಪ್ರದೇಶ ಸರ್ಕಾರದ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಚಾರಣೆಗೆ ಒಳಪಡಿಸಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ರಾಮಮಂದಿರ ನಿರ್ಮಾಣ ಹಾಗೂ ನಿರ್ವಹಣೆಯ ಉಸ್ತುವಾರಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಗೋಪಾಲ್ ಕಳೆದ ಐದು ವರ್ಷಗಳಿಂದ ಅಯೋಧ್ಯೆಯಲ್ಲೇ ನೆಲೆಸಿದ್ದು, ಈ ಹಿಂದೆ ಆರ್‌ಎಸ್‌ಎಸ್‌ನ ಕರ್ನಾಟಕ ಉತ್ತರ ಪ್ರಾಂತದಲ್ಲಿ…

Read More

ರಾಮಮಂದಿರ ಸ್ಫೋಟಕ್ಕೆ ಸಂಚು? ದಾವಣಗೆರೆಯಲ್ಲಿ ಶಂಕಿತ ಉಗ್ರ ಬಂಧನ

ದಾವಣಗೆರೆ: ಜಿಲ್ಲೆಯ ಹರಿಹರದಲ್ಲಿ ಬಂಧಿತನಾಗಿರುವ ಉತ್ತರ ಪ್ರದೇಶ ಮೂಲದ 20 ವರ್ಷದ ಶಂಕಿತ ಉಗ್ರ ಸುಹೇಲ್ ವಿಚಾರಣೆ ವೇಳೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಬಾಂಬ್ ಸ್ಫೋಟ ನಡೆಸುವ ಉದ್ದೇಶ ಹೊಂದಿದ್ದಾಗಿ ತಿಳಿಸಿರುವುದಾಗಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಹರಿಹರ ಕೈಗಾರಿಕಾ ಪ್ರದೇಶದ ಖಾಸಗಿ ಕಾರ್ಖಾನೆಯೊಂದರಲ್ಲಿ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ ಸುಹೇಲ್ ತನ್ನ ನೈಜ ಚಟುವಟಿಕೆಗಳನ್ನು ಮರೆಮಾಚಿಕೊಂಡಿದ್ದ ಎನ್ನಲಾಗಿದೆ. ಆತನ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಈ ಸಂಬಂಧ ಹರಿಹರ ಗ್ರಾಮಾಂತರ…

Read More

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುದರ್ಶನ್ ಪಡೆಯಾರ್‌ಗೆ ಸನ್ಮಾನ

ಪುತ್ತೂರು: ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಲಯನ್ಸ್ ಜಿಲ್ಲೆಯ ಜಿಲ್ಲಾ ಸಂಪರ್ಕ ಅಧಿಕಾರಿ ಸುದರ್ಶನ್ ಪಡೆಯಾರ್ ವಿಟ್ಲ ಅವರನ್ನು ಪುತ್ತೂರಿನಲ್ಲಿ ನಡೆದ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ರಾಜೇಶ್ ಎಂ. ಕಾಮತ್ ಅವರು ಸುದರ್ಶನ್ ಪಡೆಯಾರ್ ಅವರನ್ನು ಗೌರವಿಸಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಮಂಗಳೂರು ಮಾಜಿ ಅಧ್ಯಕ್ಷ ವಿಜಯ ವಿಷ್ಣುಮಯ್ಯ, 2026-28ನೇ ಸಾಲಿನ ಅಧ್ಯಕ್ಷ ಹೇಮಾರಾವ್, ಕಾರ್ಯದರ್ಶಿ ಸೀಮಾ ಮಯ್ಯ, ರಚನಾ…

Read More

ಬಿಸಿರೋಡಿನಲ್ಲಿ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ: 25 ವಾಹನಗಳ ವಿರುದ್ಧ ಪ್ರಕರಣ

ಬಂಟ್ವಾಳ: ಬಿಸಿರೋಡಿನ ಹೃದಯಭಾಗದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘಿಸುತ್ತಿದ್ದ ವಾಹನ ಸವಾರರ ವಿರುದ್ಧ ಟ್ರಾಫಿಕ್ ಎಸ್‌ಐ ಆದರ್ಶ್ ನೇತೃತ್ವದ ತಂಡ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ವಿಧಿಸಿದೆ. ಜೊತೆಗೆ ಸಂಚಾರ ದಟ್ಟಣೆ ಮತ್ತು ಕಿರಿಕಿರಿ ಉಂಟು ಮಾಡುತ್ತಿದ್ದ ಬಸ್ ಹಾಗೂ ರಿಕ್ಷಾ ಚಾಲಕರಿಗೆ ಎಚ್ಚರಿಕೆ ನೀಡಿ ನಿಯಮ ಪಾಲನೆಯ ಪಾಠ ಮಾಡಿದ್ದಾರೆ. ಬಿಸಿರೋಡಿನ ಬಸ್ ನಿಲ್ದಾಣದ ಬಳಿ ಗ್ರಾಮೀಣ ಭಾಗಗಳಿಗೆ ಸಂಚರಿಸುವ ಖಾಸಗಿ ಬಸ್‌ಗಳು ಹಾಗೂ ಗ್ರಾಮೀಣ ಪರವಾನಗಿ ಹೊಂದಿರುವ ರಿಕ್ಷಾಗಳು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡಿ ಸಂಚಾರಕ್ಕೆ ತೊಂದರೆ…

Read More

ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಒಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬಂಧಿತನನ್ನು ಕಾಟಿಪಳ್ಳ ಸುರತ್ಕಲ್ ನಿವಾಸಿ ಮೊಹಮ್ಮದ್ ಆಯುಬ್ ಅವರ ಪುತ್ರ ಮೊಹಮ್ಮದ್ ಫರಾಜ್ ಎಂದು ಗುರುತಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯ ಅ.ಕ್ರ. 98/2023 ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಸಿ.ಸಿ. ನಂ. 440/2024 ಪ್ರಕರಣದಲ್ಲಿ ಫರಾಜ್ ವಾರಂಟ್ ಆರೋಪಿಯಾಗಿ ತಲೆಮರೆಸಿಕೊಂಡಿದ್ದನು. ಬಂಟ್ವಾಳ ನಗರ ಪೊಲೀಸ್ ಠಾಣೆಯ…

Read More

ಜ್ಞಾನವಿಕಾಸ ಯೋಜನೆಯಡಿ ಮಾದಕ ವಸ್ತು ನಿಷೇಧ ಮಸಾಚರಣೆ

ಕಲ್ಲಮುಂಡ್ಕೂರು ಪ್ರಾಥಮಿಕ ಶಾಲಾ ಬಳಿಯ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮ: ಮೂಡುಬಿದಿರೆ ತಾಲೂಕು ಕಲ್ಲಮುಂಡ್ಕೂರು ಗ್ರಾಮದ ಧರ್ಮಸ್ಥಳ ಜ್ಞಾನವಿಕಾಸ ಯೋಜನೆಯ ಆಶ್ರಯದಲ್ಲಿ ಜೂನ್ 23ರಂದು ಪ್ರಾಥಮಿಕ ಶಾಲಾ ಬಳಿಯ ಸಮುದಾಯ ಭವನದಲ್ಲಿ ನಡೆಯಿತು. ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ರಾಜ್ಯ ಗ್ರಾಹಕ ವೇದಿಕೆಯ ಸಂಪನ್ಮೂಲ ವ್ಯಕ್ತಿ, ಹಿರಿಯ ಪತ್ರಕರ್ತ ರಾಯಿ ರಾಜ ಕುಮಾರರು ಮಾಹಿತಿದಾರರಾಗಿ ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ಮಾದಕ ವಸ್ತು ಬಳಕೆಯಿಂದಾಗುವ ಅನಾನುಕೂಲತೆ, ಅದರಿಂದ ಕುಟುಂಬದ ವ್ಯವಸ್ಥೆಯ ಮೇಲಾಗುವ ಪರಿಣಾಮಗಳು, ಆರೋಗ್ಯಕ್ಕೆ ಅತ್ಯಂತ ಹಾನಿಕರವಾದ ಗುಟ್ಕಾ,…

Read More

ಚಿತ್ರ ಕಲಾಲೋಕದ ಅಪ್ರತಿಮ ಸಾಧಕ ಬಿ.ಕೆ. ಮಾದವ ರಾವ್‌ಗೆ ‘ಕನ್ನಡ ಪಯಸ್ವಿನಿ ಚಿತ್ರ ಕಲಾರತ್ನ’ ಪ್ರಶಸ್ತಿ

ಮಂಗಳೂರು: ಚಿತ್ರಕಲಾ ಕ್ಷೇತ್ರದಲ್ಲಿ ಅಪೂರ್ವ ಸಾಧನೆಗೈದು ರಾಜ್ಯದಾದ್ಯಂತ ಗುರುತಿಸಿಕೊಂಡಿರುವ ಹಿರಿಯ ಕಲಾವಿದ ಬಿ.ಕೆ. ಮಾಧವ ರಾವ್ ಅವರು ಕನ್ನಡ ಭವನದ ಪ್ರತಿಷ್ಠಿತ ‘ಕನ್ನಡ ಪಯಸ್ವಿನಿ ಚಿತ್ರ ಕಲಾರತ್ನ ಅಚೀವ್‌ಮೆಂಟ್ ಅವಾರ್ಡ್–2026’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ…

Read More

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್‌ಗೆ ಅಂತಿಮ ವಿದಾಯ; ಕಾಶಿಪಟ್ಣದಲ್ಲಿ ದಫನ

ಮೂಡುಬಿದಿರೆ, ಜೂನ್ 25: ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ದಫನ ಕ್ರಿಯೆಯು ಇಂದು ಮೂಡುಬಿದಿರೆ ಸಮೀಪದ ಕಾಶಿಪಟ್ಣದ ದಾರುನ್ನೂರ್ ಎಜುಕೇಶನ್ ಸೆಂಟರ್ ಆವರಣದಲ್ಲಿ ನೆರವೇರಿತು. ಕಾಸರಗೋಡಿನಿಂದ ಇಂದು ಮುಂಜಾನೆ ಮೃತದೇಹವನ್ನು ದಾರುನ್ನೂರ್ ಎಜುಕೇಶನ್ ಸೆಂಟರ್‌ಗೆ ತರಲಾಗಿದ್ದು, ಧಾರ್ಮಿಕ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ಬಳಿಕ ಅಂತಿಮ ದಫನ ಕಾರ್ಯ ನಡೆಸಲಾಯಿತು. ಖಾಝಿಯವರ ಅಂತಿಮ ದರ್ಶನ ಮತ್ತು ದಫನ ಕಾರ್ಯಕ್ರಮದಲ್ಲಿ ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್,…

Read More

ನಿರಂತರ ತೈಲ ಬೆಲೆಯೇರಿಕೆ,ಉಜ್ವಲ ಸಿಲಿಂಡರ್ ರಿಯಾಯಿತಿ ಇಳಿಕೆ: ಕಾರ್ಮಿಕ ವರ್ಗಗಳಿಗೆ ಕೇಂದ್ರ ಸರಕಾರದ ಅನ್ಯಾಯದ SDTU ವತಿಯಿಂದ ಅಭಿಯಾನ

ಇತ್ತೀಚೆಗೆ ನಡೆಯುತ್ತಿರುವ ಮಧ್ಯ ಪ್ರಾಚ್ಯ ರಾಷ್ಟ್ರಗಳ ಯುದ್ಧದ ನೆಪವನ್ನಿಟ್ಟುಕೊಂಡು ಕೇಂದ್ರ ಸರ್ಕಾರವು ನಿರಂತರವಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ತೈಲಬೆಲೆಯೇರಿಕೆ ಮಾಡುತ್ತಿದ್ದು ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದ್ದ ಸಿಲಿಂಡರ್ ಸಂಖ್ಯೆಯನ್ನು ಕಳೆದ ವರ್ಷಕ್ಕಿಂತ ಕಡಿತಗೊಳಿಸಿ ನಾಲ್ಕಕ್ಕೆ ಸೀಮಿತಗೊಳಿಸಿರುವುದು ಜನಸಾಮಾನ್ಯರ ಮೇಲೆ ಮತ್ತೊಂದು ಆರ್ಥಿಕ‌ ಸಂಕಷ್ಟವನ್ನುಂಟು ಮಾಡಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (SDTU) ರಾಜ್ಯ ಪ್ರಧಾನ ಕಾರ್ಯದರ್ಶಿ ಸಲೀಮ್ ಗುರುವಾಯನಕೆರೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ…

Read More

ಮುಖರ್ಜಿ ಕನಸನ್ನು ಮೋದಿ ಸರ್ಕಾರ ನನಸು ಮಾಡಿದೆ: ಶಾಸಕ ವೇದವ್ಯಾಸ ಕಾಮತ್

ಬಿಜೆಪಿ ಮಂಗಳೂರು ದಕ್ಷಿಣ ಮಂಡಲದಿಂದ ಜನಸಂಘ ಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನದ ಸಂಸ್ಮರಣಾ ಕಾರ್ಯಕ್ರಮವು ನಗರದ ಅಟಲ್ ಸೇವಾ ಕೇಂದ್ರದಲ್ಲಿ ನಡೆಯಿತು. ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಅವರನ್ನು ಕೇವಲ ಜನಸಂಘದ ಸಂಸ್ಥಾಪಕರು ಎಂಬ ಕಾರಣಕ್ಕೆ ಸ್ಮರಿಸುವುದು ಅಲ್ಲ. ಬದಲಿಗೆ ಭಾರತದ ಏಕತೆಯ ರಕ್ಷಣೆ, ಬಂಗಾಳ ಹಾಗೂ ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗವನ್ನಾಗಿ ಉಳಿಸುವುದು ಸೇರಿದಂತೆ ರಾಷ್ಟ್ರಪರ ಅನೇಕ ಹೋರಾಟಕ್ಕೆ ಸರ್ವಸ್ವವನ್ನು ಅರ್ಪಿಸಿದ ಮಹಾನ್ ವ್ಯಕ್ತಿ….

Read More
error: Content is protected !!