Headlines

ದೇರಳಕಟ್ಟೆ, ಕಟಪಾಡಿಯಲ್ಲಿ ಎಂಸಿಸಿ ಬ್ಯಾಂಕ್‌ನ ಹೊಸ ಶಾಖೆಗಳು

ಮಂಗಳೂರು, ಜೂನ್ 25: 114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆಯನ್ನು ಜೂನ್ 28ರಂದು ದೇರಳಕಟ್ಟೆಯಲ್ಲಿ ಹಾಗೂ 23ನೇ ಶಾಖೆಯನ್ನು ಆಗಸ್ಟ್ 2ರಂದು ಉಡುಪಿಯ ಕಟಪಾಡಿಯಲ್ಲಿ ಆರಂಭಿಸಲಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇರಳಕಟ್ಟೆ ಶಾಖೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದು, ಬ್ಯಾಂಕಿನ 16ನೇ ಎಟಿಎಂ ಕೂಡ ಇದೇ ಸಂದರ್ಭದಲ್ಲಿ ಕಾರ್ಯಾರಂಭ ಮಾಡಲಿದೆ ಎಂದರು. 2025-26ನೇ ಹಣಕಾಸು ವರ್ಷದಲ್ಲಿ…

Read More

ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಚುನಾವಣೆ: ಪ್ರಜಾಪ್ರಭುತ್ವದ ಪಾಠಕ್ಕೆ ಮೆಚ್ಚುಗೆ

ಮಂಜೇಶ್ವರ: ​”ಬ್ಯಾಲೆಟ್ ಪೇಪರ್ ಗುಂಡಿಗಿಂತಲೂ ಬಲಿಷ್ಠ; ಮತದಾನವೇ ರಾಜಕೀಯ ಚಟುವಟಿಕೆಯ ಅಡಿಪಾಯ” ಎಂಬ ಮಹಾನ್ ಧ್ಯೇಯವಾಕ್ಯವನ್ನು ಸಾಬೀತುಪಡಿಸುವಂತೆ, 2026-27ನೇ ಶೈಕ್ಷಣಿಕ ಸಾಲಿನಲ್ಲಿ ಗಡಿಭಾಗದ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸುತ್ತಿರುವ ಕುಂಜತ್ತೂರು ಹಾಗೂ ಹೊಸಂಗಡಿ ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಸತ್ ಚುನಾವಣೆ ಅತ್ಯಂತ ವ್ಯವಸ್ಥಿತವಾಗಿ ಏಕ ಕಾಲದಲ್ಲಿ ನಡೆಯಿತು. ಶಾಲಾ ಪ್ರಾಂಶುಪಾಲರಾದ ಶ್ರೀಯುತ ಅಬ್ದುಲ್ ಖಾದರ್ ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿ ವಿದ್ಯಾರ್ಥಿಗಳಿಂದ ನಾಮ ಪತ್ರಗಳನ್ನು ಸ್ಪೀಕರಿಸಿ ಪರಿಶೀಲಿಸಿದರು. ಅದೇ ರೀತಿ ವಿದ್ಯಾರ್ಥಿಗಳು ಪ್ರತಿಯೊಂದು ತರಗತಿಗಳಿಗೆ ತೆರಳಿ…

Read More

ಮಂಗಳೂರು ಆನ್‌ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟದ ಹೋರಾಟಕ್ಕೆ ಎಸ್.ಡಿ.ಟಿ.ಯು ಸಂಪೂರ್ಣ ಬೆಂಬಲ

ಮಂಗಳೂರು: ಉಬರ್ ಕಂಪೆನಿಯ ಅನ್ಯಾಯದ ನೀತಿ ಹಾಗೂ ಚಾಲಕರ ಜೀವನೋಪಾಯಕ್ಕೆ ಧಕ್ಕೆ ಉಂಟುಮಾಡುತ್ತಿರುವ ಕ್ರಮಗಳನ್ನು ಖಂಡಿಸಿ, ಮಂಗಳೂರು ಆನ್‌ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಬರ್ ಟ್ಯಾಕ್ಸಿ ಸೇವೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲು ತೀರ್ಮಾನಿಸಿರುವುದಕ್ಕೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಮಂಗಳೂರು ನಗರ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ. ವರ್ಷಗಳಿಂದ ವಿಮಾನ ನಿಲ್ದಾಣದಲ್ಲಿ ಸೇವೆ ಸಲ್ಲಿಸುತ್ತಿರುವ ಆನ್‌ಲೈನ್ ಟ್ಯಾಕ್ಸಿ ಚಾಲಕರ ಹಕ್ಕುಗಳನ್ನು ಕಡೆಗಣಿಸಿ ಉಬರ್ ಕಂಪೆನಿ ಅನುಸರಿಸುತ್ತಿರುವ ನೀತಿಗಳು…

Read More

ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ: ಅರ್ಜಿ ಆಹ್ವಾನ

ಮಂಗಳೂರು, ಜೂ.23: ಅಲ್ಪಸಂಖ್ಯಾತ ಸಮುದಾಯದ ಕಾನೂನು ಪದವೀಧರರಿಗೆ 2026-27ನೇ ಸಾಲಿನ ನಾಲ್ಕು ವರ್ಷದ ಕಾನೂನು ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು ಐದು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಬಾರ್ ಕೌನ್ಸಿಲ್‌ನಲ್ಲಿ ನೋಂದಾಯಿತರಾಗಿರುವ ಕಾನೂನು ಪದವೀಧರರನ್ನು ಸರ್ಕಾರಿ ವಕೀಲರು ಅಥವಾ ಕನಿಷ್ಠ 20 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ನ್ಯಾಯವಾದಿಗಳ ಮಾರ್ಗದರ್ಶನದಲ್ಲಿ ತರಬೇತಿಗೆ ನಿಯೋಜಿಸಲಾಗುತ್ತದೆ. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹3.50 ಲಕ್ಷ ಮೀರಿರಬಾರದು. ವಯೋಮಿತಿ 38 ವರ್ಷಗಳೊಳಗಿದ್ದು, ಅಂತಿಮ ಕಾನೂನು ಪದವಿಯನ್ನು ಪೂರ್ಣಗೊಳಿಸಿ ಎರಡು…

Read More

ಕೊರಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಮಂಗಳೂರು, ಜೂ.23: 2026-27ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡದ ಮೂಲನಿವಾಸಿ ಕೊರಗ ಸಮುದಾಯದ ಎಸ್‌ಎಸ್‌ಎಲ್‌ಸಿ ಹಾಗೂ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ನೆರವಾಗುವ ಉದ್ದೇಶದಿಂದ ವರ್ಷದಲ್ಲಿ ಎರಡು ಕಂತುಗಳಲ್ಲಿ (ಶೇ.50ರಂತೆ) ಪ್ರೋತ್ಸಾಹಧನ ನೀಡಲಾಗುತ್ತದೆ. ಪ್ರೋತ್ಸಾಹಧನದ ಮೊತ್ತ ಹೀಗಿದೆ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ₹10,000, ಪಿಯುಸಿ ಹಾಗೂ ತತ್ಸಮಾನ ಕೋರ್ಸುಗಳಿಗೆ ವಾರ್ಷಿಕ ₹12,000, ಎಲ್ಲಾ ಪದವಿ ಕೋರ್ಸುಗಳಿಗೆ ವಾರ್ಷಿಕ ₹15,000 ಹಾಗೂ ಎಲ್ಲಾ ಸ್ನಾತಕೋತ್ತರ…

Read More

ಸಂಘಟಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಮಂಗಳೂರು, ಜೂ.23: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ 2026-27ನೇ ಸಾಲಿನ ಶೈಕ್ಷಣಿಕ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ. ಅರ್ಜಿದಾರರ ಪೋಷಕರ ಮಾಸಿಕ ವೇತನ ₹35,000 ಮೀರಿರಬಾರದು. ಒಂದು ಕುಟುಂಬದ ಗರಿಷ್ಠ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ಲಭ್ಯವಿರುತ್ತದೆ….

Read More

200 ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 20 ಸಾವಿರ ಉಚಿತ ಸಮವಸ್ತ್ರ ವಿತರಣೆ

ಉಡುಪಿ, ಜೂನ್ 24: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಅನುದಾನಿತ ಶಾಲಾ ಸಂಘಗಳ ಸಹಯೋಗದಲ್ಲಿ ಜಿಲ್ಲೆಯ 200 ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ 20,000 ಜೋಡಿ ಉಚಿತ ಶಾಲಾ ಸಮವಸ್ತ್ರ ವಿತರಣೆ ಮತ್ತು ವೆಬ್‌ಸೈಟ್ ಅನಾವರಣ ಕಾರ್ಯಕ್ರಮ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಡಾ. ಎಚ್.ಎಸ್. ಶೆಟ್ಟಿ, ಕನ್ನಡ ಶಾಲೆಗಳು ನಮ್ಮ ಭಾಷೆಯ ಜೀವನಾಡಿಯಾಗಿದ್ದು, ಅವುಗಳನ್ನು ಉಳಿಸಲು ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸಬೇಕು ಎಂದು…

Read More

ತಲಪಾಡಿಯಲ್ಲಿ ಭೀಕರ ಸರಣಿ ಅಪಘಾತ: ರಿಕ್ಷಾ ಚಾಲಕ ಗಂಭೀರ, ಹಲವರಿಗೆ ಗಾಯ

​ಮಂಜೇಶ್ವರ: ತಲಪಾಡಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಆಟೋ ರಿಕ್ಷಾ ಚಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಆಟೋದಲ್ಲಿದ್ದ ಇಬ್ಬರು ಮತ್ತು ಕಾರುಗಳಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ನಿನ್ನೆ ಸಂಜೆ 6.15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ​ಕಾಸರಗೋಡು ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಕಂಟೈನರ್ ಲಾರಿ, ಏಕಾಏಕಿ ರಸ್ತೆಗೆ ಬಂದ ಆಟೋ ರಿಕ್ಷಾವನ್ನು ರಕ್ಷಿಸಲು ಪ್ರಯತ್ನಿಸಿದೆ. ಈ ವೇಳೆ ಲಾರಿ ಚಾಲಕ ಕಂಟೈನರನ್ನು ಬಲಭಾಗಕ್ಕೆ ತಿರುಗಿಸಿದಾಗ, ಎದುರಿನಿಂದ ಬರುತ್ತಿದ್ದ ಮತ್ತೊಂದು ಲಾರಿ ಹಾಗೂ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ…

Read More

ನವಜಾತ ಹೆಣ್ಣು ಮಗು ಅಕ್ರಮ ಮಾರಾಟ ಪ್ರಕರಣ: ವೈದ್ಯ ಸೇರಿ ನಾಲ್ವರ ಬಂಧನ

ಉಡುಪಿ: ಒಂದು ತಿಂಗಳ ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿ ಉಡುಪಿ ಮಹಿಳಾ ಪೊಲೀಸ್ ಠಾಣೆ ಪೊಲೀಸರು ವೈದ್ಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಕಾಮತ್ ನರ್ಸಿಂಗ್ ಹೋಮ್‌ನ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ (76), ಸಂತೆಕಟ್ಟೆ ನೇಜಾರಿನ ಎಸ್. ಪ್ರಕಾಶ್ (50), ಕಾರ್ಕಳದ ಸೂಡ ನಿವಾಸಿ ಸಂಪತ್ (22) ಹಾಗೂ ನಂದಳಿಕೆಯ ಸುಪ್ರೀತಿ (22) ಎಂದು ಗುರುತಿಸಲಾಗಿದೆ. ಜೂನ್ 19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ವಲಯ ಮೇಲ್ವಿಚಾರಕರು…

Read More

ಉದ್ಯಾವರ ಸೇತುವೆಯಿಂದ ನದಿಗೆ ಹಾರಿ ಯುವಕ ಆತ್ಮಹತ್ಯೆ

ಉಡುಪಿ: ಉದ್ಯಾವರ ಪಾಪನಾಶಿನಿ ಸೇತುವೆಯಿಂದ ನದಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಉದ್ಯಾವರ ಪಿತ್ರೋಡಿ ನಿವಾಸಿ ರಮೇಶ್ ಹಾಗೂ ಪ್ರಮೋದಿನಿ ಶೆಟ್ಟಿ ದಂಪತಿಯ ಪುತ್ರ ಹರ್ಷಿತ್ ಶೆಟ್ಟಿ (28) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ 5 ಗಂಟೆ ಸುಮಾರಿಗೆ ಕ್ರಿಕೆಟ್ ಆಡಲು ಹೋಗುವುದಾಗಿ ಮನೆಯಿಂದ ತೆರಳಿದ್ದ ಹರ್ಷಿತ್ ಬಳಿಕ ಮನೆಗೆ ವಾಪಸ್ಸಾಗಿರಲಿಲ್ಲ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ದ್ವಿಚಕ್ರ ವಾಹನವು ಉದ್ಯಾವರ ಪಾಪನಾಶಿನಿ ಸೇತುವೆಯ ಮೇಲೆ ಪತ್ತೆಯಾಗಿತ್ತು. ಇದರಿಂದ…

Read More
error: Content is protected !!