Headlines

ಅಶೋಕನಗರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 25ನೇ ದೇರೆಬೈಲ್ ಪಶ್ಚಿಮ ವಾರ್ಡಿನ ಅಶೋಕನಗರ ಆಯುರ್ವೇದಿಕ್ ಕಾಲೇಜು ರಸ್ತೆ, ಅಶೋಕನಗರ ಜಂಕ್ಷನ್ ಬಲ ಬದಿ ರಸ್ತೆ ಅಭಿವೃದ್ಧಿ ಕಾಮಗಾರಿಯು ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆಯು ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಸ್ಥಳೀಯ ಬೇಡಿಕೆಯಂತೆ ಲೋಕೋಪಯೋಗಿ ಇಲಾಖೆಯಿಂದ 30ಲಕ್ಷ ರೂ. ಅನುದಾನವನ್ನು ಹೊಂದಿಸಿಕೊಂಡು ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯರುಗಳಾದ ಜಯಲಕ್ಷ್ಮಿ ಬಿ.ಶೆಟ್ಟಿ, ಗಣೇಶ್…

Read More

ಕುರುಡಪದವು ಎಯುಪಿ ಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ

ಕುರುಡಪದವು : ಪ್ರತಿ ವರ್ಷ ಜೂನ್ 21ರಂದು ವಿಶ್ವ ಯೋಗ ದಿನವನ್ನು ಆಚರಿಸಲಾಗುತ್ತದೆ.ಇದರ ಭಾಗವಾಗಿ ಎ ಯು ಪಿ ಶಾಲೆ ಕುರುಡಪದವಿನಲ್ಲಿ ಯೋಗ ಪ್ರಾತ್ಯಕ್ಷಿಕೆ ನಡೆಸಲಾಯಿತು.ಶಾಲಾ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀ ಗಿರೀಶ್ ಸರ್ ಯೋಗದ ಮಹತ್ವವನ್ನು ತಿಳಿಸುವುದ ರೊಂದಿಗೆ, ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಎ ಯು ಪಿ ಶಾಲೆ ಕುರುಡಪದವಿನ ನಿವೃತ್ತ ಅಧ್ಯಾಪಕ ಶ್ರೀ ಕೆ. ಕೃಷ್ಣ ಭಟ್ ಇವರು ಮಕ್ಕಳಿಗೆ ಸರಳ ಯೋಗಗಳನ್ನು ಮಕ್ಕಳಿಗೆ ಪರಿಚಯಿಸಿದರು.ಶಾಲಾ ಸಭಾಂಗಣದಲ್ಲಿ ನಡೆದ ಯೋಗ ಪ್ರಾತ್ಯಕ್ಷಿಕೆಯಲ್ಲಿ ಶಾಲೆಯ ಎಲ್ಲಾ ಮಕ್ಕಳು…

Read More

ವಿಕಸಿತ ಭಾರತ 2047 ಗುರಿ ಸಾಧನೆಗೆ ತಂತ್ರಜ್ಞಾನವೇ ಶಕ್ತಿ: ಅಶ್ವಿನಿ ಎಂ.ಎಲ್.

ಕಾಸರಗೋಡು: ನರೇಂದ್ರ ಮೋದಿ ಸರ್ಕಾರದ 12ನೇ ವಾರ್ಷಿಕೋತ್ಸವದ ಅಂಗವಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ “ನವ ಭಾರತ ಸದಸ್” ಹೆಸರಿನಲ್ಲಿ ವಿಕಸಿತ ಭಾರತ ಕನ್ವೆನ್ಷನ್ ಆಯೋಜಿಸಲಾಯಿತು. ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ಅಶ್ವಿನಿ ಎಂ.ಎಲ್. ಉದ್ಘಾಟಿಸಿದರು. ವಿಶ್ವದ ಹತ್ತನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿದ್ದ ಭಾರತವನ್ನು ಕೇವಲ 12 ವರ್ಷಗಳಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿಸಲು ನರೇಂದ್ರ ಮೋದಿ ಅವರಿಗೆ ಸಾಧ್ಯವಾಗಿದೆ ಎಂದು ಅಶ್ವಿನಿ ಹೇಳಿದರು. ಭ್ರಷ್ಟಾಚಾರ ಮತ್ತು…

Read More

ನಿಕಿನ್ ಜೋಸ್ ಭರ್ಜರಿ ಶತಕ; ಕರುಣ್ ನಾಯರ್ ಅರ್ಧಶತಕದ ನೆರವಿನಿಂದ ಕರಾವಳಿ ಕಿಂಗ್ಸ್‌ಗೆ ಭರ್ಜರಿ ಜಯ

ಡಿಎಸಿಸಿಎಸ್ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಟೂರ್ನಿಯ ಐದನೇ ಆವೃತ್ತಿಯಲ್ಲಿ ಕರಾವಳಿ ಕಿಂಗ್ಸ್ ಮಂಗಳೂರು ತಂಡದ ಬ್ಯಾಟರ್ ನಿಕಿನ್ ಜೋಸ್ ಸಿಡಿಸಿದ ಅಜೇಯ ಶತಕದ ನೆರವಿನಿಂದ ತಂಡವು ಗುಲ್ಬರ್ಗಾ ಮಿಸ್ಟಿಕ್ಸ್ ವಿರುದ್ಧ ಎಂಟು ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. 178 ರನ್‌ಗಳ ಗುರಿ ಬೆನ್ನಟ್ಟಿದ ಕರಾವಳಿ ಕಿಂಗ್ಸ್ ಆರಂಭದಲ್ಲೇ ಮುರಳೀಧರ ವೆಂಕಟೇಶ್ ವಿಕೆಟ್ ಕಳೆದುಕೊಂಡರೂ, ನಂತರ ನಿಕಿನ್ ಜೋಸ್ ಹಾಗೂ ನಾಯಕ ಕರೂಣ್ ನಾಯರ್ ಜೋಡಿ ತಂಡವನ್ನು ಸುಲಭವಾಗಿ ಗೆಲುವಿನತ್ತ ಮುನ್ನಡೆಸಿತು. ಈ ಜೋಡಿ ಎರಡನೇ ವಿಕೆಟ್‌ಗೆ…

Read More

ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪೂರ್ವಭಾವಿ ಮಹಾಸಭೆ

ಅನಂತಪುರ, ಜೂನ್ 23: ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು, ಮುಂಬರುವ ಬ್ರಹ್ಮಕಲಶೋತ್ಸವದ ಸಿದ್ಧತೆಗಳು ಆರಂಭಗೊಂಡಿವೆ. ಇದರ ಅಂಗವಾಗಿ ಭಕ್ತರು ಹಾಗೂ ಸೇವಾ ಸಮಿತಿಯ ಸದಸ್ಯರ ಮಹಾಸಭೆಯನ್ನು ಆಯೋಜಿಸಲಾಗಿದೆ. ಮಹಾಸಭೆಯು ಜೂನ್ 28, 2026ರಂದು ಬೆಳಿಗ್ಗೆ 10 ಗಂಟೆಗೆ ಅನಂತಪುರ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವು ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಮಾಣಿಲ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಒಡಿಯೂರು…

Read More

ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು, ಜೂ.23: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಪಕ್ಷಾತೀತವಾಗಿ ಎಲ್ಲಾ ಸರ್ಕಾರಗಳ ಜನಪರ ಕಾರ್ಯಕ್ರಮಗಳ ಯಶಸ್ಸಿಗೆ ಕರೆ ನೀಡುತ್ತಿದ್ದರು. ಕರ್ನಾಟಕದಲ್ಲಿ ಇಂಧ್ರ ಧನುಷ್ ಲಸಿಕೆ ಕಾರ್ಯಕ್ರಮ ನಡೆದಾಗ ಮೊಹಲ್ಲಾಗಳಲ್ಲಿ ಇದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದ್ದರು. ಗೌರವಾನ್ವಿತ ಧಾರ್ಮಿಕ ನಾಯಕರಾಗಿ ಮುಸ್ಲಿಂ ಸಮುದಾಯದ ಏಳಿಗೆಗೆ ಸಾಕಷ್ಟು ಕೊಡುಗೆ ನೀಡಿದ್ದರು. ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು…

Read More

ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ

ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ…

Read More

ಮಂಗಳೂರಿನಲ್ಲಿ ಕಾಂಗ್ರೆಸ್‌ನ SIR ಜನಜಾಗೃತಿ ಸಮಾವೇಶ; ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ಗೆ ಅದ್ದೂರಿ ಸ್ವಾಗತ

ಮಂಗಳೂರು: ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜಿಸಲಾದ SIR ಜನಜಾಗೃತಿ ಸಮಾವೇಶವು ಮಂಗಳೂರಿನಲ್ಲಿ ಭಾನುವಾರ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಿ.ಕೆ. ಹರಿಪ್ರಸಾದ್ ಅವರಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು. ಬಳಿಕ ನಗರದ ಪುರಭವನದಲ್ಲಿ ಆಯೋಜಿಸಲಾದ ಜನಜಾಗೃತಿ ಸಮಾವೇಶದಲ್ಲಿ ಬಿ.ಕೆ. ಹರಿಪ್ರಸಾದ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ವಿ.ಆರ್. ಸುದರ್ಶನ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಮಾವೇಶದಲ್ಲಿ ಪಕ್ಷದ…

Read More

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ

78ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದ ಧಾರ್ಮಿಕ ನಾಯಕ; ಸಚಿವ ಯು.ಟಿ. ಖಾದರ್ ಸಂತಾಪ ಮಂಗಳೂರು, ಜೂನ್ 23: ದಕ್ಷಿಣ ಕನ್ನಡ ಜಿಲ್ಲಾ ಖಾಝಿ, ಖ್ಯಾತ ಧಾರ್ಮಿಕ ನಾಯಕ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರು ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು…

Read More

ಎಸ್‌ಡಿಪಿಐ 18ನೇ ಸಂಸ್ಥಾಪನಾ ದಿನಾಚರಣೆ: ಕೊಪ್ಪಳದಲ್ಲಿ ಬ್ರಾಂಚ್ ಕಚೇರಿ ಉದ್ಘಾಟನೆ

“ಹಸಿವಿಲ್ಲದ, ಭಯವಿಲ್ಲದ ಭಾರತ ನಿರ್ಮಾಣವೇ ಪಕ್ಷದ ಗುರಿ” – ನಾಸರ್ ಬಂಬ್ರಾಣ ಮಂಜೇಶ್ವರ, ಜೂನ್ 21: ಎಸ್‌ಡಿಪಿಐಯ 18ನೇ ಸಂಸ್ಥಾಪನಾ ದಿನದ ಅಂಗವಾಗಿ ಮಂಜೇಶ್ವರ ಮಂಡಲ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ಕೊಪ್ಪಳದಲ್ಲಿ ನೂತನ ಬ್ರಾಂಚ್ ಕಚೇರಿಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಸ್‌ಡಿಪಿಐ ಮಂಜೇಶ್ವರ ಮಂಡಲ ಅಧ್ಯಕ್ಷ ನಾಸರ್ ಬಂಬ್ರಾಣ, ಕಳೆದ ಹದಿನೆಂಟು ವರ್ಷಗಳಿಂದ ಪಕ್ಷವು ದೇಶದ ದಲಿತ, ಹಿಂದುಳಿದ ಹಾಗೂ ಅಂಚಿನಲ್ಲಿರುವ ಸಮುದಾಯಗಳ ರಾಜಕೀಯ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದೆ…

Read More
error: Content is protected !!