Headlines

ವಿಶ್ವ ಯೋಗ ದಿನಾಚರಣೆ: ಪರಂಬಳ ಕಯ್ಯಾರಿನಲ್ಲಿ 75 ವಿದ್ಯಾರ್ಥಿಗಳಿಗೆ ಯೋಗ ತರಬೇತಿ

ದುರ್ಗಾ ಶಕ್ತಿ ಕುಣಿತ ಭಜನಾ ತಂಡದ ಆಶ್ರಯದಲ್ಲಿ ಕಾರ್ಯಕ್ರಮ ಉಪ್ಪಳ, ಜೂನ್ 21: ದುರ್ಗಾ ಶಕ್ತಿ ಕುಣಿತ ಭಜನಾ ತಂಡ, ಪರಂಬಳ ಕಯ್ಯಾರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಭಾರತ ಮಾತಾ ಸೇವಾ ಟ್ರಸ್ಟ್ ಸಭಾಂಗಣದಲ್ಲಿ ವಿಶೇಷ ಯೋಗ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಮಂಜೇಶ್ವರ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀ ರಾಮಕೃಷ್ಣ ಸಂತಡ್ಕ ಹಾಗೂ ಸಾಮಾಜಿಕ ಕಾರ್ಯಕರ್ತ ಸುರೇಶ್ ಶೆಟ್ಟಿ ಹೇರೂರು ದೀಪ ಬೆಳಗಿಸುವ…

Read More

ಹೊಸಂಗಡಿಯಲ್ಲಿ ಬೈಕ್ ಸವಾರರ ಕೈಚಳಕ; ಎರಡು ಪವನ್ ಸರ ಎಳೆದು ಪರಾರಿ

ಹೊಸಂಗಡಿ, ದಾರಿ ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಯಿಂದ ಎರಡು ಪವನ್ ತೂಕದ ಚಿನ್ನದ ಸರ ಎಳೆದೊಯ್ದ ಘಟನೆ ಹೊಸಂಗಡಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಪೈವಳಿಕೆ ಬಾಯಿಕಟ್ಟೆ ನಿವಾಸಿ ಎ. ನಯನಾ (30) ಅವರು ಸೋಮವಾರ ಸಂಜೆ ಸುಮಾರು 4 ಗಂಟೆಯ ವೇಳೆಗೆ ಹೊಸಂಗಡಿ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಎಸ್‌ಬಿಐ ಬ್ಯಾಂಕ್ ಸಮೀಪ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ದಾರಿ ಕೇಳುವ ನೆಪದಲ್ಲಿ ಅವರನ್ನು ಸಮೀಪಿಸಿ, ಕ್ಷಣಾರ್ಧದಲ್ಲಿ ಅವರ ಕುತ್ತಿಗೆಯಲ್ಲಿದ್ದ ಎರಡು…

Read More

ಪೈವಳಿಕೆ ಗ್ರಾಮ ಪಂಚಾಯತ್‌ನಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ವಿಫಲ: DYFI ಆರೋಪ

MCF ಕೇಂದ್ರಗಳಲ್ಲಿ ತ್ಯಾಜ್ಯ ರಾಶಿ; ದುರ್ವಾಸನೆ, ಸಾಂಕ್ರಾಮಿಕ ರೋಗದ ಭೀತಿ – ತಕ್ಷಣ ಕ್ರಮಕ್ಕೆ ಆಗ್ರಹ ಪೈವಳಿಕೆ, ಜುಲೈ 23: ಪೈವಳಿಕೆ ಗ್ರಾಮ ಪಂಚಾಯತ್ ಆಡಳಿತ ಸಮಿತಿಯು ನಿರಂತರವಾಗಿ ಅವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ನಡೆಸುತ್ತಿದ್ದು, ಇದರಿಂದ ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟಾಗಿದೆ ಎಂದು DYFI ಮಂಜೇಶ್ವರ ಬ್ಲೋಕ್ ಸಮಿತಿ ಆರೋಪಿಸಿದೆ. ಮನೆಮನೆಗಳಿಂದ ಹರಿತ ಕರ್ಮ ಸೇನೆ ಸಂಗ್ರಹಿಸುವ ಪ್ಲಾಸ್ಟಿಕ್ ತ್ಯಾಜ್ಯವನ್ನು MCF ಕೇಂದ್ರಗಳಿಗೆ ತಂದು ಸುರಿಯಲಾಗುತ್ತಿದ್ದು, ಕಿಲೋಗಟ್ಟಲೆ ತ್ಯಾಜ್ಯವು MCF ಒಳಗೆ ಮತ್ತು ಹೊರಗೆ…

Read More

ಯುಪಿಎಸ್‌ಸಿ ಪರೀಕ್ಷೆಗೆ ಮಾರ್ಗದರ್ಶನ: ಜೂನ್ 28ರಂದು ‘ಮಾರ್ಗದರ್ಶಿ’ ಕಾರ್ಯಕ್ರಮ

ಮಂಗಳೂರು IAS, ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ರಾಮಕೃಷ್ಣ ಮಿಷನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಾಗರಿಕ ಸೇವಾ ಪರೀಕ್ಷಾ ಆಕಾಂಕ್ಷಿಗಳಿಗಾಗಿ “ಮಾರ್ಗದರ್ಶಿ – Cracking the UPSC Examination” ವಿಶೇಷ ಮಾರ್ಗದರ್ಶನ ಕಾರ್ಯಕ್ರಮವು ಜೂನ್ 28ರಂದು ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್ ಸಭಾಂಗಣದಲ್ಲಿ ನಡೆಯಲಿದೆ ಎಂದುರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ ಅಧ್ಯಕ್ಷ ರೊಯ್ ಕ್ಯಾಸ್ಟೆಲಿನೊ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ…

Read More

ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ: ಎಲ್ಲ ಇಲಾಖೆಗಳ ಸಹಕಾರ ಅಗತ್ಯ – ಆಯುಕ್ತ ರವಿಚಂದ್ರ ನಾಯಕ್

ಮಂಗಳೂರು, ಜೂ.22: ಜೂನ್ 28ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಸಂಬಂಧಿತ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಸೂಚಿಸಿದರು. ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ನಗರ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 0ರಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಅಗತ್ಯ ಸಿದ್ಧತೆಗಳನ್ನು…

Read More

ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ: ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚನೆ

ಮಂಗಳೂರು, ಜೂ.22: ಜಿಲ್ಲೆಯಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ವಿಳಂಬವಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 86 ಮಕ್ಕಳ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 79 ಮಕ್ಕಳು ಪತ್ತೆಯಾಗಿದ್ದಾರೆ. ಉಳಿದ ಪ್ರಕರಣಗಳಲ್ಲಿಯೂ ತ್ವರಿತ ತನಿಖೆ ನಡೆಸಿ ಮಕ್ಕಳನ್ನು…

Read More

ಪ್ರಿಯದರ್ಶಿನಿ ಯೋಜನೆಯ ಪರಿಣಾಮ: ಖಾಸಗಿ ಬಸ್ ಉದ್ಯಮ ಕುಸಿತದ ಅಂಚಿನಲ್ಲಿ

ಕಾಸರಗೋಡು: ಕೇರಳ ಸರ್ಕಾರ ಜಾರಿಗೆ ತಂದಿರುವ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯ ಪರಿಣಾಮವಾಗಿ ಖಾಸಗಿ ಬಸ್ ಉದ್ಯಮ ಗಂಭೀರ ಸಂಕಷ್ಟವನ್ನು ಎದುರಿಸುತ್ತಿದೆ ಎಂಬ ಆತಂಕ ಸಾರಿಗೆ ವಲಯದಲ್ಲಿ ವ್ಯಕ್ತವಾಗುತ್ತಿದೆ. ಸಾರ್ವಜನಿಕರಿಗೆ ನೆರವಾಗುವ ಉದ್ದೇಶದಿಂದ ಜಾರಿಗೊಂಡಿರುವ ಈ ಯೋಜನೆಯು ಖಾಸಗಿ ಬಸ್ ಮಾಲೀಕರ ಜೀವನೋಪಾಯದ ಮೇಲೆಯೂ ಪರಿಣಾಮ ಬೀರಿದೆ ಎಂಬ ಅಭಿಪ್ರಾಯ ಕೇಳಿಬರುತ್ತಿದೆ. ಉಚಿತ ಪ್ರಯಾಣ ಯೋಜನೆ ಆರಂಭವಾದ ಬಳಿಕ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕುಸಿದಿದೆ ಎಂದು ಬಸ್ ನಿರ್ವಾಹಕರು ಅಳಲು ತೋಡಿಕೊಂಡಿದ್ದಾರೆ. ದಿನದ…

Read More

ಯಮುನಾ ಪೂಜಾರಿ ಕುಟುಂಬಕ್ಕೆ ಬಿಜೆಪಿ ಕಾರ್ಯಕರ್ತರಿಂದ ನೂತನ ಮನೆ ನಿರ್ಮಾಣ

ಬಂಟ್ವಾಳ, ಜೂ. 23: ಮಣಿನಾಲ್ಕೂರು ಗ್ರಾಮದ ಅರ್ಬಿ ನಿವಾಸಿ ಯಮುನಾ ಪೂಜಾರಿ ಅವರ ಕುಟುಂಬಕ್ಕೆ ದೇವಶ್ಯಮೂಡೂರು ಹಾಗೂ ಮಣಿನಾಲ್ಕೂರು ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ನಿರ್ಮಿಸಲಾದ ನೂತನ ಮನೆಯ ಗೃಹಪ್ರವೇಶ ಸಮಾರಂಭ ಭಾನುವಾರ ನಡೆಯಿತು. ಯಮುನಾ ಪೂಜಾರಿ ಅವರು ಪುತ್ರಿಯೊಂದಿಗೆ ವಾಸಿಸುತ್ತಿದ್ದು, ಹೊರಗಡೆ ತೆರಳಿ ದುಡಿಯಲು ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಅವರ ಜೀವನೋಪಾಯಕ್ಕೆ ನೆರವಾಗುವ ಉದ್ದೇಶದಿಂದ ಬಿಜೆಪಿ ಕಾರ್ಯಕರ್ತರು ಸುಮಾರು 50 ಮಲ್ಲಿಗೆ ಗಿಡಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಾನ್ವಿ ಪೂಜಾರಿ ಕೋಡ್ಲೆ…

Read More

ಸೇತುವೆ ಅಗಲೀಕರಣಕ್ಕೆ ಆಗ್ರಹಿಸಿ ಪೆರುವಾಯಿಯಲ್ಲಿ ಪ್ರತಿಭಟನೆ

ವಿಟ್ಲ, ಜೂ. 23: ಪೆರುವಾಯಿ–ಪಕಳಕುಂಜ ರಸ್ತೆಯ ಕೆದುಮೂಲೆ ಹಾಗೂ ಪೆರುವಾಯಿ ಸೇತುವೆ, ಪೆರುವಾಯಿ–ಬೆರಿಪದವು ರಸ್ತೆಯ ಪೇರಡ್ಕ ಸೇತುವೆಯನ್ನು ವೈಜ್ಞಾನಿಕ ರೀತಿಯಲ್ಲಿ ಅಗಲೀಕರಣಗೊಳಿಸಬೇಕು. ಅಲ್ಲದೆ, ಪೆರುವಾಯಿಯಿಂದ ಬಾಳಶೆಟ್ಟಿಮೂಲೆ ಮೂಲಕ ಹಾದು ಹೋಗುವ ಕನ್ಯಾನ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ತರಬೇಕು ಹಾಗೂ ಓಣಿಬಾಗಿಲುವಿನಿಂದ ಪಕಳಕುಂಜ ತನಕ ರಸ್ತೆ ಅಗಲೀಕರಣಗೊಳಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪೆರುವಾಯಿ ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮುರುವ ಮಹಾಬಲ ಭಟ್, ಗೋಪಾಲ ಶೆಟ್ಟಿ, ರಾಘವ ಬೆರಿಪದವು ಹಾಗೂ ಗಣೇಶ್ ಕುಮಾರ್ ದೇಲಂತಮಲು ಮಾತನಾಡಿ, ಸೇತುವೆಗಳ…

Read More

ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ಸಾವು, ಒಬ್ಬ ಗಂಭೀರ

​ಕಾಸರಗೋಡು : ಜಿಲ್ಲೆಯಲ್ಲಿ ಸೋಮವಾರ ಸಂಜೆ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಇಬ್ಬರು ದುರ್ಮರಣವನ್ನಪ್ಪಿದ್ದಾರೆ. ​ಮೊದಲನೆಯ ಘಟನೆಯು ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಿಯ ಸೇತುವೆ ಬಳಿ ನಡೆದಿದೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ, ಉದುಮ ಪಾಕ್ಯಾರ ನಿವಾಸಿ ಪ್ರಜೀಶ್ (26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೊತೆಗಿದ್ದ ಅಮೀನ್ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ​ಮತ್ತೊಂದು ಘಟನೆಯು…

Read More
error: Content is protected !!