ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಚಾಲನೆ
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅರಳ ಗ್ರಾಮದ ಬಹುಕಾಲದ ಬೇಡಿಕೆಯಾಗಿದ್ದ ಅರ್ಭಿ–ದೆಂಬುಡೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂ.20 ಲಕ್ಷ ವಿಶೇಷ ಅನುದಾನ ಮಂಜೂರಾಗಿದ್ದು, ಕಾಮಗಾರಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಚಾಲನೆ ನೀಡಿದರು. ಗ್ರಾಮಸ್ಥರ ಬಹುವರ್ಷಗಳ ಬೇಡಿಕೆಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಲಾಗಿದ್ದು, ಈ ಕಾಮಗಾರಿಯಿಂದ ಸ್ಥಳೀಯ ನಿವಾಸಿಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಇದು ಮಹತ್ವದ ಕೊಡುಗೆಯಾಗಿದೆ ಎಂದು ರಮಾನಾಥ…
