Headlines

ಜೂನ್ 23ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ಬಿ.ಕೆ. ಹರಿಪ್ರಸಾದ್

ಮಂಗಳೂರು, ಜೂ.22: ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರು ಜೂನ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರವಾಸ ವೇಳಾಪಟ್ಟಿಯಂತೆ, ಅವರು ಬೆಳಿಗ್ಗೆ 7.15ಕ್ಕೆ ಬೆಂಗಳೂರಿನಿಂದ ಇಂಡಿಗೋ ವಿಮಾನದ ಮೂಲಕ ಪ್ರಯಾಣ ಬೆಳೆಸಿ, ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಆಯೋಜಿಸಲಿರುವ ‘ಎಸ್‌ಐಆರ್ ಜಾಗೃತಿ ಸಮಾವೇಶ’ದಲ್ಲಿ ಭಾಗವಹಿಸಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ….

Read More

ಪ್ರಜಾಪ್ರಭುತ್ವದಲ್ಲಿ ನೈಜ ಭಾರತೀಯರ ಮತದಾನದ ಹಕ್ಕು ರಕ್ಷಿಸುವುದೇ ಎಸ್‌ಐಆರ್ ಉದ್ದೇಶ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಜೂ.22: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮೂಲ ಉದ್ದೇಶ ಪ್ರಜಾಪ್ರಭುತ್ವದಲ್ಲಿ ನೈಜ ಭಾರತೀಯರ ಮತದಾನದ ಹಕ್ಕನ್ನು ಮತ್ತಷ್ಟು ಬಲಪಡಿಸುವುದಾಗಿದ್ದು, ಭಾರತೀಯರಲ್ಲದವರಿಗೆ ಮತದಾನದ ಹಕ್ಕು ನಿರಾಕರಿಸುವುದೇ ಇದರ ಆಶಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಾಂಗ್ಲಾದೇಶದವರು ಕರ್ನಾಟಕದಲ್ಲಿ ಮತದಾನ ಮಾಡಿ ಕಾಂಗ್ರೆಸ್ ಗೆದ್ದರೆ ಅದನ್ನು ಪ್ರಜಾಪ್ರಭುತ್ವ ಎಂದು ಒಪ್ಪಿಕೊಳ್ಳುವುದು ಕಷ್ಟ. ಬಾಂಗ್ಲಾದೇಶದವರು ಇಲ್ಲಿ ಬಂದು ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿ ಮರಳಬೇಕು. ನಮ್ಮ…

Read More

ಪೆರ್ಲದಲ್ಲಿ ವಾಚನಾ ದಿನ ಉದ್ಘಾಟನೆ

ಮಂಜೇಶ್ವರ ತಾಲೂಕು ಲೈಬ್ರೇರಿ ಕೌನ್ಸಿಲ್ ಹಾಗೂ ಪೆರ್ಲ ನೇತಾಜಿ ಸಾರ್ವಜನಿಕ ಗ್ರಂಥಾಲಯ ಜಂಟಿ ಆಶ್ರಯದಲ್ಲಿ ಜರುಗಿದ ತಾಲೂಕು ಮಟ್ಟದ ವಾಚನಾ ಪಕ್ಷಾಚರಣೆ ಉದ್ಘಾಟನೆ ಎಣ್ಮಕಜೆ ಪಂಚಾಯತ್ ಸಭಾಂಗಣದಲ್ಲಿ ಜರುಗಿತ್ತು. ಎಣ್ಮಕಜೆ ಪಂಚಾಯತ್ ಅಧ್ಯಕ್ಷೆ ಕುಸುಮಾವತಿ ‘ವಾಚನಾ ಹವ್ಯಾಸ ನಮ್ಮನ್ನು ಕ್ರೀಯಾಶೀಲರನ್ನಾಗಿಸುತ್ತದೆ. ಪ್ರತೀ ಮನೆಯಿಂದಲೇ ಇಂತಹ ಮೌಲ್ಯಯುತ ಪುಸ್ತಕ ಪ್ರೀತಿ ಬೆಳೆಯಬೇಕು. ಕನ್ನಡ ಸಾಹಿತ್ಯ ಪರಂಪರೆಗೆ ದುಡಿದ ಹಿರಿಯ ಸಾಹಿತಿಗಳ ಶ್ರಮವನ್ನು ಗೌರವಿಸಿ ಪುಸ್ತಕ ಓದುವಿಕೆ ಪ್ರತಿಯೊಬ್ಬ ಪ್ರಜೆಗಳ ಕರ್ತವ್ಯವಾಗಿದೆ. ವಾಚನಾ ಪಕ್ಷಾಚರಣೆಯನ್ನು ಆಯೋಜಿಸಿದ ಲೈಬ್ರೇರಿ ಕೌನ್ಸಿಲ್ ಕಾರ್ಯಕ್ರಮ…

Read More

ಕುತ್ಯಾಳ ಶ್ರೀ ನವಜೀವನ ಸಮಿತಿ ಕೂಡ್ಲು ವತಿಯಿಂದ ಸನ್ಮಾನ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಕಾಸರಗೋಡು , ಕಾಸರಗೋಡು ಜಿಲ್ಲಾ ನವಜೀವನ ಸಮಿತಿಯಲ್ಲಿ ಒಂದಾದ ಕುತ್ಯಾಳ ಶ್ರೀ ನವಜೀವನ ಸಮಿತಿ ಕೂಡ್ಲು ವತಿಯಿಂದ ಕುತ್ಯಾಳ ಶ್ರೀ ನವಜೀವನ ಸಮಿತಿಯ ಸದಸ್ಯರ ಮಕ್ಕಳಿಗೆ 2025 – 2026 ನೇ ಸಾಲಿನ SSLC ಹಾಗೂ +2 ಉತ್ತೀರ್ಣರಾದ ವಿಧ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಕೂಡ್ಲು ಶಾಲೆಯಲ್ಲಿ ನಡೆಯಿತು . ಮಧೂರು ಗ್ರಾಮಪಂಚಾತಿನ ಉಪಾಧ್ಯಕ್ಷರಾದ ಶ್ರೀ ಭಾನುಪ್ರಕಾಶ್ ದೀಪ ಬೆಳಗಿಸಿ ಉದ್ಘಾಟಿಸಿದರು . ಕುತ್ಯಾಳ ಶ್ರೀ ನವಜೀವನ…

Read More

ಶ್ರೀ ಶಾರದಾ ಎ.ಯು.ಪಿ. ಶಾಲೆ ಚೇವಾರದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಚೇವಾರ್, ಜೂನ್ 22: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಶ್ರೀ ಶಾರದಾ ಎ.ಯು.ಪಿ. ಶಾಲೆ, ಚೇವಾರ್‌ನಲ್ಲಿ ಯೋಗಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ರಾಜೇಶ್ವರಿ ಟೀಚರ್ ಉದ್ಘಾಟಿಸಿದರು. ಯೋಗವು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಶಾಂತಿ ಹಾಗೂ ಏಕಾಗ್ರತೆಯನ್ನು ವೃದ್ಧಿಸುತ್ತದೆ ಎಂದು ಅವರು ತಿಳಿಸಿದರು. ಪ್ರಸಾದ್ ಸರ್ ಹಾಗೂ ಸಾತ್ವಿಕ್ ಸರ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು, ಪ್ರಾಣಾಯಾಮ ಮತ್ತು ಧ್ಯಾನದ ತರಬೇತಿ ನೀಡಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಯೋಗದ ಮಹತ್ವವನ್ನು ಅರಿತುಕೊಂಡರು. ಕಾರ್ಯಕ್ರಮದ…

Read More

ಕನ್ನಡ ನೆಲ-ನುಡಿಗಾಗಿ ಜೀವಮಾನವಿಡೀ ಹೋರಾಡಿದ ಕಯ್ಯಾರರು: ಪ್ರೊ. ಎಸ್.ಜಿ. ಸಿದ್ದರಾಮಯ್ಯ

ಉಪ್ಪಳ, :ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರು ಕನ್ನಡ ಭಾಷೆ, ನೆಲ ಹಾಗೂ ಅಸ್ಮಿತೆಗಾಗಿ ಜೀವನದ ಕೊನೆಯವರೆಗೂ ಹೋರಾಟ ನಡೆಸಿದ ಅಪರೂಪದ ವ್ಯಕ್ತಿತ್ವವಾಗಿದ್ದು, ಕನ್ನಡ ಸಾಹಿತ್ಯದಲ್ಲಿ ಕ್ರಾಂತಿ ಮತ್ತು ಕಲೆಯ ವಿಶಿಷ್ಟ ಛಾಪು ಮೂಡಿಸಿದ ಮಹಾನ್ ಕವಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಹಾಗೂ ಕಲ್ಕೂರ ಪ್ರತಿಷ್ಠಾನ ಮಂಗಳೂರು ಸಹಯೋಗದಲ್ಲಿ ಭಾನುವಾರ ಕಯ್ಯಾರು…

Read More

ಐಪಿಎಲ್ ಪ್ರಭಾವದಿಂದ ಟಿ20 ಕ್ರಿಕೆಟ್ ಮನೋಭಾವ ಬದಲಾಗಿದೆ: ಕರುಣ್ ನಾಯರ್

ಮೈಸೂರು, ಐಪಿಎಲ್ ಕ್ರಿಕೆಟ್‌ನ ಪ್ರಭಾವದಿಂದ ಟಿ20 ಮಾದರಿಯ ಆಟದ ಬಗ್ಗೆ ಆಟಗಾರರ ಮನೋಭಾವದಲ್ಲಿ ಮಹತ್ವದ ಬದಲಾವಣೆ ಆಗಿದ್ದು, ಮುಂದಿನ ದಿನಗಳಲ್ಲಿ ದೇಶೀಯ ಟೂರ್ನಿಗಳಲ್ಲಿಯೂ ಇದೇ ಪ್ರವೃತ್ತಿ ಮುಂದುವರಿಯಲಿದೆ ಎಂದು ಕರಾವಳಿ ಕಿಂಗ್ಸ್ ಮಂಗಳೂರು ತಂಡದ ನಾಯಕ ಹಾಗೂ ಅನುಭವಿ ಬ್ಯಾಟರ್ ಕರುಣ್ ನಾಯರ್ ಅಭಿಪ್ರಾಯಪಟ್ಟಿದ್ದಾರೆ. ಡಿಎಸಿಎಸ್‌ಎಸ್ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಟೂರ್ನಿಯ ವೇಳೆ ಮಾತನಾಡಿದ ಅವರು, ಆಧುನಿಕ ಟಿ20 ಕ್ರಿಕೆಟ್ ಆಟಗಾರರನ್ನು ಹೆಚ್ಚು ಆಕ್ರಮಣಕಾರಿ ಹಾಗೂ ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಳ್ಳುವ ರೀತಿಯಲ್ಲಿ ಯೋಚಿಸಲು ಪ್ರೇರೇಪಿಸಿದೆ ಎಂದು…

Read More

ಭೋವಿ ಸಮುದಾಯದವರು ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿ: ಪವನ್ ಕುಮಾರ್ ಶಿರ್ವ ಕರೆ

ಉಡುಪಿ, ಜೂನ್ 22: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿರುವ ಭೋವಿ ಸಮುದಾಯದ ಸುಮಾರು 70 ಸಾವಿರಕ್ಕೂ ಅಧಿಕ ಜನರು ಜಾತಿ ಪ್ರಮಾಣ ಪತ್ರ ಪಡೆಯಲು ತಕ್ಷಣವೇ ಅರ್ಜಿ ಸಲ್ಲಿಸಬೇಕು ಎಂದು ಭೋವಿ ಸಮುದಾಯದ ಯುವ ಮುಖಂಡ ಪವನ್ ಕುಮಾರ್ ಶಿರ್ವ ಮನವಿ ಮಾಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಸುಮಾರು 300 ಗ್ರಾಮ ಪಂಚಾಯತ್‌ಗಳಲ್ಲಿ ವಾಸಿಸುವ ಭೋವಿ ಸಮುದಾಯದವರು ಅಗತ್ಯ ದಾಖಲೆಗಳೊಂದಿಗೆ ಗ್ರಾಮ ಆಡಳಿತಾಧಿಕಾರಿ (ವಿ.ಎ.)…

Read More

ಟೋಲ್ ಶುಲ್ಕ ತಪ್ಪಿಸಲು ಬೂಮ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಪರಾರಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದಲ್ಲಿ ಟೋಲ್ ಶುಲ್ಕ ಪಾವತಿಸದೇ ವಾಹನಗಳು ಬೂಮ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಇತ್ತೀಚೆಗೆ ಸಿಪಿಐಎಂ ಪಕ್ಷದ ಕಾರ್ಯಕರ್ತರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್‌ವೊಂದು ಟೋಲ್ ಶುಲ್ಕ ಪಾವತಿಸದೇ ಬೂಮ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಹಾನಿಗೊಳಿಸಿ ಸ್ಥಳದಿಂದ ತೆರಳಿರುವುದು ವರದಿಯಾಗಿದೆ. ಅಷ್ಟೇ ಅಲ್ಲದೆ, ಇದೇ ಟೋಲ್ ಪ್ಲಾಜಾದಲ್ಲಿ ಹಲವು ವಾಹನಗಳು ಟೋಲ್ ಪಾವತಿಸುವುದನ್ನು ತಪ್ಪಿಸಲು ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆಗಳು ನಡೆದಿವೆ ಎನ್ನಲಾಗಿದೆ….

Read More

ಪ್ರಭಾವಿಗಳ ಹಿತ ಕಾಪಾಡಲು ಬಡ ಬೀದಿಬದಿ ವ್ಯಾಪಾರಿಗಳ ಮೇಲೆ ಪಾಲಿಕೆಯ ದಬ್ಬಾಳಿಕೆ ಖಂಡನೀಯ – ಸಿಪಿಐಎಂ

ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಡ ಬೀದಿಬದಿ ವ್ಯಾಪಾರಸ್ಥರ ಮೇಲೆ ನಗರಾಡಳಿತ ನಡೆಸುತ್ತಿರುವ ದಾಳಿಗಳು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆಡಳಿತವನ್ನೇ ನಾಚಿಸುವಂತಿದೆ. ನಗರದಲ್ಲಿ ಸಂಡೇ ಬಜಾರ್ ವ್ಯಾಪಾರಸ್ಥರ ವಿರುದ್ದ ಪ್ರಾರಂಭವಾದ ದಬ್ಬಾಳಿಕೆಗಳು ನಗರದ ಎಲ್ಲಾ ಭಾಗಗಳಲ್ಲಿಯೂ ವಿಸ್ತರಿಸಿದೆ. ಇದು ತನ್ನ ಬಡಜನ ವಿರೋದಿ ಮನೋಭಾವವನ್ನು ತೋರಿಸುತ್ತದೆ ಎಂದು CPIM ನಗರ ಸಮಿತಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ತಾ. 20/06/2026 ರ ಶನಿವಾರ ಪಡೀಲ್–ಬಜಾಲ್ ಮುಖ್ಯ ರಸ್ತೆಯಲ್ಲಿ ಜೀವನೋಪಾಯಕ್ಕಾಗಿ ಹಲವು ವರ್ಷಗಳಿಂದ ಹೂವಿನ ವ್ಯಾಪಾರ ನಡೆಸುತ್ತಿದ್ದ ಅಂಗವಿಕಲ…

Read More
error: Content is protected !!