ಎಮ್.ಕೆ. ಫೈಝಿ ಅವರಿಗೆ ಜಾಮೀನು ಮಂಜೂರು: ದೇಶದ ಧ್ವನಿಯಿಲ್ಲದ ಸಮುದಾಯಗಳಿಗೆ ದೊರೆತ ಕಾನೂನಿನ ವಿಜಯ – ಅನ್ವರ್ ಸಾದತ್ ಬಜತ್ತೂರು
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಅವರಿಗೆ ದೆಹಲಿ ಹೈಕೋರ್ಟ್ ನಲ್ಲಿ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬಿ.ಸಿ. ರೋಡ್ ಕೈಕಂಬದಲ್ಲಿರುವ ಪಕ್ಷದ ಕಚೇರಿ ಮುಂಭಾಗದಲ್ಲಿ ವಿಜಯೋತ್ಸವ ಸಂಭ್ರಮಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್ ವಹಿಸಿದ್ದರು.ಪಕ್ಷದ ನಾಯಕರು, ಕಾರ್ಯಕರ್ತರು, ಹಿತೈಷಿಗಳು ಹಾಗೂ ಅಭಿಮಾನಿಗಳು ಭಾಗವಹಿಸಿ ಸಿಹಿ…