ಜಿಲ್ಲೆಯಲ್ಲಿ ಹಿಂದೂಗಳ ಧಮನಕಾರಿ ಯತ್ನ ಸಹಿಸುವುದಿಲ್ಲ:- ಶಾಸಕ ಕಾಮತ್
ಹಿಂದೂ ಮುಖಂಡ ಶರಣ್ ಪಂಪ್ವೆಲ್ ರವರ ಬಂಧನದ ಯತ್ನವು ದುರುದ್ದೇಶಪೂರಿತವಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ಧಮನಿಸಲೆಂದೇ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಹಿಂದೂ ಮುಖಂಡರನ್ನು ಠಾಣೆಗೆ ಕರೆಸಿ ಕಿರುಕುಳ ನೀಡುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶರಣ್ ಪಂಪ್ವೆಲ್ ಬಂಧನದ ಯತ್ನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಕಾಮತ್ ರವರು ಕದ್ರಿ ಠಾಣೆಗೆ ಧಾವಿಸಿ ಪ್ರಕರಣದ ಬಗ್ಗೆ ಸಮರ್ಪಕ ಮಾಹಿತಿ ನೀಡದ ಪೊಲೀಸರ ವಿರುದ್ಧ ಹರಿಹಾಯ್ದರು. ಪೊಲೀಸರು ವಿಚಾರಣೆ ನಡೆಸುವುದಾದರೆ ಸುಪ್ರೀಂ ಕೋರ್ಟ್…