Headlines

ಜೂನ್ 23ರಂದು ಮಂಗಳೂರಿನಲ್ಲಿ ಕಾಂಗ್ರೆಸ್‌ನ ಮತದಾರರ ಜಾಗೃತಿ ಸಮಾವೇಶ

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವತಿಯಿಂದ ಜೂನ್ 23ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ. ಶನಿವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ನಡೆ ಮತ ರಕ್ಷಣೆಯ ಕಡೆ” ಎಂಬ ಧ್ಯೇಯವಾಕ್ಯದಡಿ ಐದು ವಿಭಾಗಗಳಲ್ಲಿ ಈ ಜನಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಜೂನ್ 23ರಂದು ಬೆಳಿಗ್ಗೆ 10.30ಕ್ಕೆ…

Read More

“ಅತ್ಯುತ್ತಮ ಜನಮೆಚ್ಚಿದ ನಾಯಕಿ” ಪ್ರಶಸ್ತಿ ಸ್ವೀಕರಿಸಿದ ಕಾಂತಿ ಶೆಟ್ಟಿ

ಬೆಂಗಳೂರು: ಕರ್ನಾಟಕ ಟಿವಿ ವತಿಯಿಂದ ಆಯೋಜಿಸಲಾದ ಬೆಸ್ಟ್ ನಾಯಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದ “ಅತ್ಯುತ್ತಮ ಜನಮೆಚ್ಚಿದ ನಾಯಕಿ” ಪ್ರಶಸ್ತಿಯನ್ನು ಕಾಂತಿ ಶೆಟ್ಟಿ ಸ್ವೀಕರಿಸಿದರು. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು. ಜನಪರ ಕಾರ್ಯಗಳು ಹಾಗೂ ಸಮಾಜದ ಅಭಿವೃದ್ಧಿಯತ್ತ ಕಾಂತಿ ಶೆಟ್ಟಿ ತೋರಿದ ಬದ್ಧತೆ ಮತ್ತು ಸೇವೆಯನ್ನು ಪರಿಗಣಿಸಿ ಈ ಗೌರವವನ್ನು ನೀಡಲಾಗಿದೆ. ಕಾರ್ಯಕ್ರಮದಲ್ಲಿ ಹಿರಿಯ ರಾಜಕಾರಾಣಿಗಳಾದ ಬಸವರಾಜ…

Read More

ದಲಿತ ಚಳುವಳಿಯ ಜೊತೆಗೆ ಕಮ್ಯುನಿಸ್ಟ್ ಚಳುವಳಿಯನ್ನು ಬೆಸುಗೆ ಹಾಕಿದ ದೇಶದ ಮೊದಲ ದಲಿತ ಕಮ್ಯುನಿಸ್ಟ್ RB ಮೋರೆಯವರ ಜೀವನ ಚರಿತ್ರೆ ನಿಜಕ್ಕೂ ರೋಮಾಂಚನಕಾರಿ ಅನುಭವ

ಎಳೆಯ ಪ್ರಾಯದಲ್ಲೇ ಜಾತಿ ತಾರತಮ್ಯ, ಅಸ್ಪ್ರಶ್ಯತೆಯ ನೋವನ್ನುಂಡು ದಲಿತ ಸಮುದಾಯಕ್ಕಾಗುವ ಅವಮಾನ ಬೇಗುದಿಗಳನ್ನು ಸ್ವತಃ ಅನುಭವಿಸಿದ ಕಾಂ.ಆರ್ ಬಿ ಮೋರೆ ಈ ದೇಶ ಕಂಡಂತಹ ಮೊದಲ ದಲಿತ ಕಮ್ಯುನಿಸ್ಟ್. ಕಡು ಬಡತನ, ತೀವ್ರ ಸಂಕಷ್ಟಗಳನ್ನು ಎದುರಿಸಿದ ಮೋರೆಯವರು ಬಾಲ್ಯದಲ್ಲಿ ಶಿಕ್ಷಣ ಪಡೆಯಲಿಕ್ಕಾಗಿ ಸಾಕಷ್ಟು ಶ್ರಮವಹಿಸಿದ್ದರು.ದಲಿತರ ನೋವಿಗೆ ಧ್ವನಿಯಾದ ಮೋರೆಯವರು ದಲಿತ ಚಳುವಳಿಗಾಗಿ ತನ್ನನ್ನು ತಾನು ಸಮರ್ಪಿಸುವ ಮೂಲಕ ಡಾ.ಬಿ ಆರ್ ಅಂಬೇಡ್ಕರ್ ರವರಿಗೆ ಅತ್ಯಂತ ಸನಿಹದ ಸಹವರ್ತಿಯಾದರು.ಮಹಾಡ್ ಚಳುವಳಿಗೆ ಅಂಬೇಡ್ಕರ್ ರವರನ್ನು ಕರೆತರುವ ಮೂಲಕ ಅಂಬೇಡ್ಕರ್ ರವರು…

Read More

ಜೂನ್ 23ರಂದು ಪುತ್ತೂರು ಲಯನ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ …. !

ಪುತ್ತೂರು: ಲಯನ್ಸ್ ಇಂಟರ್ನ್ಯಾಷನಲ್ ಜಿಲ್ಲೆ 317ಡಿ ವ್ಯಾಪ್ತಿಯ ಪುತ್ತೂರು ಲಯನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಲಯನ್ ಮಂಜುನಾಥ್ ಗೌಡ, ಕಾರ್ಯದರ್ಶಿಯಾಗಿ ಲಯನ್ ಆನಂದ ಆಚಾರ್ಯ ಹಾಗೂ ಕೋಶಾಧಿಕಾರಿಯಾಗಿ ಲಯನ್ ಸುಂದರ ಗೌಡ ಆಯ್ಕೆಯಾಗಿದ್ದಾರೆ. ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂನ್ 23ರಂದು (ಮಂಗಳವಾರ) ಸಂಜೆ 7 ಗಂಟೆಗೆ ಪುತ್ತೂರಿನ ಲಯನ್ ಸೇವಾ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಂಗಳೂರು ಲಯನ್ಸ್ ಕ್ಲಬ್‌ನ ಅಧ್ಯಕ್ಷ ಲಯನ್ ರಾಜೇಶ್ ಎಂ. ಕಾಮತ್ ಅವರು ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿ ನೂತನ ಪದಾಧಿಕಾರಿಗಳಿಗೆ ಪದಪ್ರದಾನ…

Read More

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ–ಸಂತ ಅಲೋಶಿಯಸ್ ಕಾಲೇಜು ನಡುವೆ ಸಹಕಾರ ಒಪ್ಪಂದ

ಮಂಗಳೂರು, ಸಸ್ಯಗಳ ವೈವಿಧ್ಯತೆ, ಸಂರಕ್ಷಣೆ ಹಾಗೂ ಔಷಧೀಯ ಸಸ್ಯಶಾಸ್ತ್ರ ಕುರಿತ ಅಧ್ಯಯನ ಮತ್ತು ಸಂಶೋಧನೆಯನ್ನು ಉತ್ತೇಜಿಸುವ ಉದ್ದೇಶದಿಂದ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು (ಪರಿಗಣಿತ ವಿಶ್ವವಿದ್ಯಾನಿಲಯ)ದ ಸಸ್ಯಶಾಸ್ತ್ರ ವಿಭಾಗ ಹಾಗೂ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸಸ್ಯಕಾಶಿ ವಿಭಾಗದ ನಡುವೆ ಪರಸ್ಪರ ಸಹಕಾರ ಒಪ್ಪಂದ (ಎಂಒಯು)ಕ್ಕೆ ಸಹಿ ಹಾಕಲಾಯಿತು. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎರಡೂ ಸಂಸ್ಥೆಗಳ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಒಪ್ಪಂದಕ್ಕೆ ಸಹಿ ಮಾಡಿಕೊಳ್ಳಲಾಯಿತು. ಈ ಸಹಭಾಗಿತ್ವದ ಮೂಲಕ ಸಸ್ಯಶಾಸ್ತ್ರ ಕ್ಷೇತ್ರದಲ್ಲಿ ಸಂಶೋಧನೆ,…

Read More

ದಮಯಂತಿ ತಿಮ್ಮಯ್ಯ ಅವರಿಗೆ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಪ್ರಶಸ್ತಿ’

ಕಾಸರಗೋಡು: ಕೊಡಗು ಜಿಲ್ಲೆಯ ಶಿಕ್ಷಣ ಕ್ಷೇತ್ರದ ಗಣನೀಯ ಸೇವೆಗಾಗಿ ಶ್ರೀಮತಿ ಕಾಳೆಂಗಡ ದಮಯಂತಿ ತಿಮ್ಮಯ್ಯ ಅವರಿಗೆ ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತಾರಾಜ್ಯ ಮಟ್ಟದ ‘ಕನ್ನಡ ಪಯಸ್ವಿನಿ ಶಿಕ್ಷಣ ರತ್ನ ಪ್ರಶಸ್ತಿ’ (Teachers Achievement Award) ನೀಡಿ ಗೌರವಿಸಲಾಗುತ್ತಿದೆ. ಜುಲೈ 26ರಂದು ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಸಮಾರಂಭದ ಅಂಗವಾಗಿ ನಡೆಯಲಿರುವ **‘ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಸಮ್ಮೇಳನವು ಮಾಜಿ ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ…

Read More

2027ರಲ್ಲಿ ಕುದ್ರೋಳಿ ಭಗವತಿ ಕ್ಷೇತ್ರದ ಪೆರುಂ ಕಳಿಯಾಟ ಮಹೋತ್ಸವ: 75 ವರ್ಷಗಳ ಬಳಿಕ ಮತ್ತೆ ಕದ್ರಿ-ಕುದ್ರೋಳಿ ಐತಿಹಾಸಿಕ ಭೇಟಿ

ಮಂಗಳೂರು: ತುಳುನಾಡಿನ ಅತ್ಯಂತ ವೈಭವಶಾಲಿ ಹಾಗೂ ಐತಿಹಾಸಿಕ ಧಾರ್ಮಿಕ ಉತ್ಸವಗಳಲ್ಲಿ ಒಂದಾದ ಕುದ್ರೋಳಿ ಶ್ರೀ ಭಗವತಿ ಕ್ಷೇತ್ರದ ಪೆರುಂ ಕಳಿಯಾಟ ಮಹೋತ್ಸವವು 75 ವರ್ಷಗಳ ಬಳಿಕ 2027ರ ಏಪ್ರಿಲ್ 9ರಿಂದ ಮೇ 4ರವರೆಗೆ ವೈಭವದಿಂದ ನಡೆಯಲಿದೆ. ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಆಧ್ಯಾತ್ಮಿಕ ಪರಂಪರೆಯ ಪ್ರತೀಕವಾಗಿ ಗುರುತಿಸಿಕೊಂಡಿರುವ ಈ ಮಹೋತ್ಸವವು ಲಕ್ಷಾಂತರ ಭಕ್ತರು, ಕಲಾವಿದರು ಹಾಗೂ ಸಾರ್ವಜನಿಕರನ್ನು ಒಂದೆಡೆ ಸೇರಿಸುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವವಾಗಿದೆ. ಭಕ್ತಿ, ಆಚರಣೆ ಮತ್ತು ಜನಪದ ವೈಭವದ ಸಂಗಮವಾಗಿರುವ ಪೆರುಂ ಕಳಿಯಾಟವು…

Read More

ವಿವಾಹ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಅನ್ನದಾನ

ಮಂಜೇಶ್ವರ : ಸಮಾಜಸೇವೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಶ್ರೀ ಸಂಜೀವ ಶೆಟ್ಟಿ ಹಾಗೂ ಶ್ರೀಮತಿ ಅಮಿತಾ ಸಂಜೀವ ಶೆಟ್ಟಿ ಮಾಡ ದಂಪತಿಗಳ 47ನೇ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ವಿಶೇಷ ಅನ್ನದಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಜಿ.ಎಲ್.ಪಿ. ಶಾಲೆ, ಮಾಡ ಇದರ ವಿದ್ಯಾರ್ಥಿಗಳಿಗೆ ಅನ್ನದಾನ ನೆರವೇರಿಸಲಾಯಿತು. ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ದಂಪತಿಗಳು ತಮ್ಮ ವಿವಾಹ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿ, ವಿದ್ಯಾರ್ಥಿಗಳೊಂದಿಗೆ ಸಂತಸ ಹಂಚಿಕೊಂಡರು.ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸ್ಥಳೀಯರು ಉಪಸ್ಥಿತರಿದ್ದು, ದಂಪತಿಗಳ ಸೇವಾ ಮನೋಭಾವವನ್ನು ಶ್ಲಾಘಿಸಿದರು.

Read More

ಬಸ್-ಬೈಕ್ ಡಿಕ್ಕಿ: ಬೆಂಕಿಗೆ ಆಹುತಿಯಾಗಿ ಯುವಕ ಸಾವು

ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದ ಪರಿಣಾಮ ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಯುವಕನೊಬ್ಬ ಸಜೀವ ದಹನಗೊಂಡು ಮೃತಪಟ್ಟ ಘಟನೆ ಮುಧೋಳ ತಾಲ್ಲೂಕಿನ ಸೋರಗಾಂವ ಗ್ರಾಮದ ಸಮೀಪ ನಡೆದಿದೆ. ಮೃತ ಯುವಕನನ್ನು ಮುಧೋಳ ನಗರದ ಜನತಾ ಪ್ಲಾಟ್ ನಿವಾಸಿ ನವೀನ್ ಹನುಮಂತ ಗೊರ್ಕ್ (20) ಎಂದು ಗುರುತಿಸಲಾಗಿದೆ. ಬಾದಾಮಿಯಿಂದ ಇಚಲಕರಂಜಿ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್‌ಗೆ ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆಗೆ ಸಿಲುಕಿದ ಸವಾರ…

Read More

ಯೋಗದಿಂದ ಜೀವನಶೈಲಿ ಕಾಯಿಲೆಗಳಿಗೆ ಪರಿಹಾರ ಸಾಧ್ಯ: ಎಂ.ಎಲ್. ಅಶ್ವಿನಿ

ಕಾಸರಗೋಡು, ಜೂನ್ 22: ಜೀವನಶೈಲಿ ಕಾಯಿಲೆಗಳು ಹಾಗೂ ಮಾನಸಿಕ ಒತ್ತಡಕ್ಕೆ ಯೋಗದ ಮೂಲಕ ಪರಿಣಾಮಕಾರಿ ಪರಿಹಾರ ಸಾಧ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಹೇಳಿದರು. ಬಿಜೆಪಿ ಜಿಲ್ಲಾ ಸಮಿತಿ ವತಿಯಿಂದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ಆಯೋಜಿಸಿದ್ದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ವೈದ್ಯಕೀಯ ವಿಜ್ಞಾನ ಮತ್ತು ಯೋಗದ ಸಮನ್ವಯದಿಂದ ಆರೋಗ್ಯ ಕ್ಷೇತ್ರದ ಹಲವು ಸವಾಲುಗಳನ್ನು ಎದುರಿಸಬಹುದು ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಹಲವು ಯೋಗ ಚಾಂಪಿಯನ್‌ಶಿಪ್‌ಗಳಲ್ಲಿ ಚಿನ್ನದ ಪದಕ ವಿಜೇತೆ…

Read More
error: Content is protected !!