ಜೂನ್ 23ರಂದು ಮಂಗಳೂರಿನಲ್ಲಿ ಕಾಂಗ್ರೆಸ್ನ ಮತದಾರರ ಜಾಗೃತಿ ಸಮಾವೇಶ
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವತಿಯಿಂದ ಜೂನ್ 23ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ. ಶನಿವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ನಡೆ ಮತ ರಕ್ಷಣೆಯ ಕಡೆ” ಎಂಬ ಧ್ಯೇಯವಾಕ್ಯದಡಿ ಐದು ವಿಭಾಗಗಳಲ್ಲಿ ಈ ಜನಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಜೂನ್ 23ರಂದು ಬೆಳಿಗ್ಗೆ 10.30ಕ್ಕೆ…
