ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿವಾಹಕ್ಕೆಂದು ಬರುತ್ತಿದ್ದ ವಾಹನ ಪಲ್ಟಿ: 20ಕ್ಕೂ ಅಧಿಕ ಮಂದಿಗೆ ಗಾಯ; ಹಲವರು ಗಂಭೀರ

ಕಡಬ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಗುರುವಾರ (ಅ.30) ಸಂಭವಿಸಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವಧು – ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ಬಿಸ್ಥೆ ತಿರುವಿನಲ್ಲಿ ವಾಹನ…

Read More

ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳ ಮಂಚಿಯ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ಮೃತ್ಯು

ಬಂಟ್ವಾಳ: ಪವಿತ್ರ ಮಕ್ಕಾ ಉಮ್ರಾ ಯಾತ್ರೆಗೆ ತೆರಳಿದ್ದ ಬಂಟ್ವಾಳದ ಮಂಚಿಯ ವ್ಯಕ್ತಿಯೊಬ್ಬರು ಮಕ್ಕಾದಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಅ. 29ರಂದು ನಡೆದಿದೆ. ಮಂಚಿ ಕುಕ್ಕಾಜೆ ಸೂತ್ರಬೈಲ್ ನಿವಾಸಿ ಯೂಸುಫ್ (62) ಮೃತಪಟ್ಟವರು. ಅವರು ಕಳೆದ ಕೆಲವು ದಿನಗಳ ಹಿಂದೆ ತಂಡವಾಗಿ ಪತ್ನಿಯ ಜತೆಗೆ ಉಮ್ರಾ ಯಾತ್ರೆಗೆ ತೆರಳಿದ್ದರು. ಇಂದು ಮಕ್ಕಾದಲ್ಲೀ ಅವರ ಧಪನ ಕಾರ್ಯ ನಡೆಯಲಿದೆ ಎಂದು ಕುಟುಂಬ ವರ್ಗ ಮಾಹಿತಿ ನೀಡಿದೆ.

Read More

ಶಾಸಕರ ಆಸ್ತಿ ಅಭಿವೃದ್ಧಿ ನಿಧಿಯ ಭಾಗವಾಗಿ 2020–21 ಆರ್ಥಿಕ ವರ್ಷದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ಮೀಂಜ ಕೃಷಿ ಭವನದ ಉದ್ಘಾಟನೆ

ಮಂಜೇಶ್ವರ: ಶಾಸಕರ ಆಸ್ತಿ ಅಭಿವೃದ್ಧಿ ನಿಧಿಯ ಭಾಗವಾಗಿ 2020–21 ಆರ್ಥಿಕ ವರ್ಷದಲ್ಲಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿತವಾದ ಮೀಂಜ ಕೃಷಿ ಭವನವನ್ನು ಗೌರವಾನ್ವಿತ ಕೃಷಿ ಸಚಿವರಾದ ಶ್ರೀ ಪಿ. ಪ್ರಸಾದ್ ಅವರು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಮಂಜೇಶ್ವರ ಶಾಸಕ ಶ್ರೀ ಎ. ಕೆ. ಎಂ. ಅಶ್ರಫ್ ಅಧ್ಯಕ್ಷತೆ ವಹಿಸಿದ್ದರು. “ರೈತರ ದ್ವಿತೀಯ ಮನೆಯಾಗಿರುವುದು ಕೃಷಿ ಭವನ. ರೈತರಿಗೆ ಉತ್ತಮ ಸೇವೆಗಳು ನೀಡುವ ಉದ್ದೇಶದಿಂದ ಈ ಕೃಷಿ ಭವನದಲ್ಲಿ ಪ್ಲಾಂಟ್ ಹೆಲ್ತ್ ಕ್ಲಿನಿಕ್ (ಸಸ್ಯ ಆರೋಗ್ಯ ಕೇಂದ್ರ) ಕೂಡ…

Read More

ದ್ವಿ ಚಕ್ರ ವಾಹನ ಚಲಾಯಿಸುವ ವೇಳೆ ಹೃದಯಾಘಾತಕ್ಕೆ ಬಲಿಯಾದ ಸವಾರ

ಮಂಗಳೂರು: ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ವ್ಯಕ್ತಿಯೋರ್ವ ಮೃತಪಟ್ಟಿ ಘಟನೆ ಇಂದು(ಅ.30) ಬೆಳಗ್ಗೆ, ಸುರತ್ಕಲ್ ಜಂಕ್ಷನ್‌ನಲ್ಲಿ ಸಂಭವಿಸಿದೆ. ಕಾಟಿಪಳ್ಳ ಮೋರ್ ಸೂಪರ್ ಮಾರ್ಕೆಟ್ ಬಳಿಯ ನಿವಾಸಿ ಜಬ್ಬಾರ್ ಹೃದಯಾಘಾತಕ್ಕೊಳಗಾದ ವ್ಯಕ್ತಿ. ಜಬ್ಬಾರ್ ಅವರು ಸೂರಜ್ ಹೋಟೇಲ್ ಕಡೆಯಿಂದ ಸುರತ್ಕಲ್ ಜಂಕ್ಷನ್ ಕಡೆಗೆ ಸರ್ವಿಸ್ ರಸ್ತೆಯಾಗಿ ತನ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವಾಹನದಿಂದ ರಸ್ತೆಗೆ ಬಿದ್ದರು ಎನ್ನಲಾಗಿದೆ. ತಕ್ಷಣ ಸ್ಥಳೀಯರು ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಅಷ್ಟರಲ್ಲಾಗಲೇ ಅವರು ಹೃದಾಯಾಘಾತಕ್ಕೊಳಗಾಗಿ ಮೃತಪಟ್ಟಿದ್ದರು…

Read More

ಐಆರ್‌ಸಿಟಿಸಿ ವತಿಯಿಂದ ಕಾಶಿ, ಅಯೋಧ್ಯೆ, ಉತ್ತರ ಭಾರತ ಪ್ರವಾಸ ಪ್ಯಾಕೇಜುಗಳ ಪ್ರಕಟ .

ಮಂಗಳೂರು: ಭಾರತೀಯ ರೈಲ್ವೆ ಕ್ಯಾಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಶನ್ ಲಿಮಿಟೆಡ್ (ಐಆರ್‌ಸಿಟಿಸಿ) ಭಾರತ ಸರ್ಕಾರದ ನವರತ್ನ ಸಂಸ್ಥೆಯು ದಕ್ಷಿಣ ವಲಯದ ಮಂಗಳೂರು ಕಚೇರಿಯಿಂದ ಯಾತ್ರಿಕರ ಅನುಕೂಲಕ್ಕಾಗಿ ಹಲವು ವಿಶಿಷ್ಟ ಪ್ರವಾಸ ಪ್ಯಾಕೇಜುಗಳನ್ನು ಪ್ರಕಟಿಸಿದೆ ಎಂದು ಸಂಸ್ಥೆಯ ಜಂಟಿ ಜನರಲ್ ಮ್ಯಾನೇಜರ್ ಸ್ಯಾಮ್ ಜೋಸೆಫ್ ಪಿ ಮಾಹಿತಿಯನ್ನು ನೀಡಿದರು . ಅವರು ಪತ್ರಿಕಾ ಭವನದಲ್ಲಿ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಈ ಪ್ಯಾಕೇಜುಗಳಲ್ಲಿ ಕಾಶಿ, ಪ್ರಯಾಗರಾಜ್, ಅಯೋಧ್ಯಾ ವಿಮಾನ ಪ್ಯಾಕೇಜ್, ಉತ್ತರ ಭಾರತ ರೈಲು…

Read More

ಬಿಲ್ಲವ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ …. !

ದಾಮೋದರ ಆ‌ರ್.ಸುವರ್ಣ ರವರ 101 ನೇ ಜನ್ಮಜಯಂತಿಯ ಸ್ಮರಣೆಯೊಂದಿಗೆ ದಾಮೋದರ ಆರ್.ಸುವರ್ಣ ಟ್ರಸ್ಟ್ ವತಿಯಿಂದ ಬಿಲ್ಲವ ಸಮಾಜದ ಬಡ ಕುಟುಂಬದ ವೃತ್ತಿಪರ ಶಿಕ್ಷಣ ಮಾಡುತ್ತಿರುವ ಸುಮಾರು 500ರಕ್ಕೂ ಮಿಕ್ಕಿ ಅರ್ಹ ಫಲಾನುಭವಿ ವಿದ್ಯಾರ್ಥಿಗಳಿಗೆ ನೀಡಲಾಗುವ ಸುಮಾರು 50 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣೆ ಸಮಾರಂಭವು ಡಿಸೆಂಬರ್ 21 ರ ಆದಿತ್ಯವಾರ ಬೆಳಿಗ್ಗೆ 10.00 ಘಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ನಡೆಯಲಿದೆಯೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ಸಂಘ ಮಂಗಳೂರು ಇದರ ಅಧ್ಯಕ್ಷರಾದ ನವೀನ್…

Read More

ಸ್ವೀಕರ್ ಯುಟಿ ಖಾದರ್ ಮೇಲೆ ಮಾಡಿದ ಭ್ರಷ್ಟಾಚಾರದ ಆರೋಪ ಸರಿಯಲ್ಲ , ಶಾಸಕ ಭರತ್ ಶೆಟ್ಟಿ ಆಪಾದನೆ ಸುಳ್ಳು : ಕೆಪಿಸಿಸಿ ದ.ಕ ಜಿಲ್ಲಾ ವಕ್ತಾರ ಎ ಸಿ ವಿನಾಯರಾಜ್

ಮಂಗಳೂರು: ಸ್ವೀಕರ್ ಯುಟಿ ಖಾದರ್ ಮೇಲೆ ವಿದ್ಯಾವಂತ ಶಾಸಕರೆಂದು ಕರೆಸಿಕೊಳ್ಳುವ ಶಾಸಕ ಭರತ್ ಶೆಟ್ಟಿ ಮಾಡಿದ ಭ್ರಷ್ಟಾಚಾರದ ಅಪವಾದನೇ ಸರಿಯಲ್ಲ , ಇದು ಸಭಾಧ್ಯಕ್ಷರ ಸ್ಥಾನಕ್ಕೆ ಕಳಂಕ ತಂದಿದೆ ಎಂದು ಕೆಪಿಸಿಸಿ ದ.ಕ ಜಿಲ್ಲಾ ವಕ್ತಾರ ಎ ಸಿ ವಿನಾಯರಾಜ್ ಮಂಗಳೂರಿನ ಉತ್ತರ ಕ್ಷೇತ್ರದ ಶಾಸಕರಾದ ಡಾ ವೈ ಭರತ್ ಶೆಟ್ಟಿ ಹೇಳಿಕೆಯನ್ನು ಖಂಡಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಖಾದರ್ ಅವರು ೫ ಭಾರಿ ಶಾಸಕರಾಗಿ ಆಯ್ಕೆ ಆಗಿ ವಿವಿಧ…

Read More

ಮಂಗಳೂರು : ವೀಸಾ ಕೊಡಿಸುವುದಾಗಿ ವಂಚನೆ – ಇಬ್ಬರ ಬಂಧನ

ಮಂಗಳೂರು, ಅ. 30ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ ಹಲವಾರು ಮಂದಿ ಯನ್ನು ನಂಬಿಸಿ ಅವರಿಂದ ಹಣವನ್ನು ಪಡೆದುಕೊಂಡು ಬಳಿಕ ಉದ್ಯೋಗ ಕೊಡಿಸದೆ ವಂಚಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರಿನ ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ಆನೆಕಲ್ ತಾಲೂಕಿನ ಪ್ರ್ರಕೃತಿ ಯು (34) ಮತ್ತು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಆಲ್ಡನ್ ರೆಬೇರೋ (42) ಎಂದು ಗುರುತಿಸಲಾಗಿದೆ. ಕಾವೂರು ಠಾಣಾ ವ್ಯಾಪ್ತಿಯ ಹಲವಾರು ಮಂದಿಗೆ ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಕೊಡಿಸುವುದಾಗಿ ಹೇಳಿ 1 ಕೋ.ರೂ. ಗೂ…

Read More

ಕೊಳಲು ವಾದನದೊಂದಿಗೆ ಬ್ಯಾಕ್ ಸ್ವಿಮ್ ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್‌ ಜೇಸನ್ ಮಚಾದೊ

ಮಂಗಳೂರು: ಬಹುಮುಖ ಪ್ರತಿಭೆಯ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ ಅವರು ನಗರದ ಸಂತ ಅಲೋಶಿಯೆಸ್ ಪರಿಗಣಿತ ವಿವಿಯ ಈಜು ಕೊಳದಲ್ಲಿ ಕೊಳಲನ್ನು ನುಡಿಸುತ್ತಾ ಸುಮಾರು 700 ಮೀಟರ್‌ಗೂ ಅಧಿಕ ದೂರವನ್ನು ಹಿಂದಕ್ಕೆ ಈಜುತ್ತಾ ಸಾಗುವ ಮೂಲಕ ಬ್ಯಾಕ್ ಸ್ಟ್ರೋಕ್ ಸ್ವಿಮ್‌ನಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಈ ಸಾಧನೆಯೊಂದಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದಿದ್ದಾರೆ. 29ರ ಹರೆಯದ ಸಂಗೀತಗಾರ ಮಚಾದೊ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಕೊಳಲು ವಾದನದೊಂದಿಗೆ ಈಜು ಆರಂಭಿಸಿ…

Read More

ಮಂಜೇಶ್ವರ : ವನಿತಾ ತರಬೇತಿ ಕೇಂದ್ರ ಉದ್ಘಾಟನೆ .

ಮಂಜೇಶ್ವರ ಬಡಾಜೆ ಕಲ್ಲ ದೇವಸ್ಥಾನ ಬಳಿ ಮಂಜೇಶ್ವರ ಗ್ರಾಮ ಪಂಚಾಯತ್ ಅನುದಾನದೊಂದಿಗೆ ನಿರ್ಮಿಸಲಾದ ವನಿತಾ ತರಬೇತಿ ಕೇಂದ್ರದ ಉದ್ಘಾಟನೆ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹಮ್ಮದ್ ಸಿದ್ದಿಕ್ ವಹಿಸಿದ್ದರು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವೀನಾ ಮೊಂತೇರೋ ದೀಪ ಪ್ರಜ್ವಲನಗೈದು ಉದ್ಧಾಟಿಸಿ ಶುಭ ಹಾರೈಸಿದರು. ಸ್ಫೂರ್ತಿ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ಮ್ಯಾನೇಜರ್ ಮಧುಸೂದನ ಬಳ್ಳಕ್ಕುರಾಯ, ಸಿಡಿಎಸ್ ಸದಸ್ಯೆ ಪ್ರಭಾವತಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಕುಟುಂಬಶ್ರೀ ಮಂಜೇಶ್ವರ ಚಯರ್ ಪರ್ಸನ್…

Read More
error: Content is protected !!