Headlines

ಪೊಯ್ಯೆ ಶ್ರೀ ಚಾಮುಂಡಿ ದೈವಸ್ಥಾನ ಬಜಾಲ್, ಪಾವೂರು ಇದರ ಆಡಳಿತ ಮಂಡಳಿಯ 25-26ರ ವಾರ್ಷಿಕ ಮಹಾಸಭೆ

ಲೆಕ್ಕಪತ್ರ ಮಂಡನೆ, ಮತ್ತು ನೂತನ ಪದಾಧಿಕಾರಿಗಳ ಆಯ್ಕೆಯು ಕ್ಷೇತ್ರದ ವಠಾರದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷರಾದ ಮನೋಹರ ಶೆಟ್ಟಿ ಕೆದುಂಬಾಡಿ ಇವರ ಅಧ್ಯಕ್ಷತೆಯಲ್ಲಿ ಮಹಾಸಭೆಯು ನಡೆಯಿತು. ಸಭೆಯಲ್ಲಿ ನಾರಾಯಣಶೆಟ್ಟಿ ಕಿನ್ಯಗುತ್ತು, ಸಮಿತಿಯ ಮಾಜಿ ಅಧ್ಯಕ್ಷರುಗಳಾದ ಚಂದ್ರಹಾಸ ಪೂಜಾರಿ ಮುಡಿಮಾರು, ವಸಂತ ರೆಂಜಪಡುಪು, ನಾರಾಯಣಶೆಟ್ಟಿ ಬಜಾಲ್, ಭುಜಂಗ ಸಿಂತಾಜೆ, ಶಿವರಾಮ ಶೆಟ್ಟಿ ಮುಗೇರು ಗುತ್ತು, ತ್ಯಾಂಪಣ್ಣರೈ ಪಾವೂರು ,ಭೋಜ ಮಾಸ್ಟರ್, ಮಾಧವ ಪೂಜಾರಿ ಕುದುಕೋರಿ, ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಅಶೋಕ್ ತಚ್ಚಿರೆ ವರದಿ ವಾಚಿಸಿ, ಭೋಜ ಮಾಸ್ಟರ್ ಲೆಕ್ಕಪತ್ರ…

Read More

ಅಲೋಶಿಯಸ್ ವಿವಿಗೆ ಪ್ರತಿಷ್ಠಿತ ಯುಜಿಸಿ ಕೆಟಗರಿ-1 ಸ್ಥಾನಮಾನ

ಮಂಗಳೂರು, ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯವು ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ಶ್ರೇಣೀಕೃತ ಸ್ವಾಯತ್ತತೆ ನಿಯಮಗಳ ಅಡಿಯಲ್ಲಿ ಪ್ರತಿಷ್ಠಿತ ಕೆಟಗರಿ-1 ಸ್ಥಾನಮಾನವನ್ನು ಪಡೆದು ಐತಿಹಾಸಿಕ ಮೈಲಿಗಲ್ಲು ಸಾಧಿಸಿದೆ. ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ರೆ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ., ವಿಶ್ವವಿದ್ಯಾಲಯದ 146 ವರ್ಷಗಳ ಶೈಕ್ಷಣಿಕ ಶ್ರೇಷ್ಠತೆ, ನಾವೀನ್ಯತೆ, ಸಂಶೋಧನೆ ಮತ್ತು ರಾಷ್ಟ್ರ ನಿರ್ಮಾಣದ ಸೇವೆಯನ್ನು ಪರಿಗಣಿಸಿ ಯುಜಿಸಿ ಈ ಗೌರವವನ್ನು ನೀಡಿದೆ…

Read More

SDPI 18ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ 383 ಯೂನಿಟ್ ರಕ್ತ ಸಂಗ್ರಹ

ಮಂಗಳೂರು, ಜೂನ್ 21: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ಯ 18ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಮಂಗಳೂರು ನಗರ ಜಿಲ್ಲಾ ಸಮಿತಿಯ ವತಿಯಿಂದ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಬಜ್ಪೆ, ಜೋಕಟ್ಟೆ, ಅಲೇಕಳ ಹಾಗೂ ಮುಲ್ಕಿ ಘಟಕಗಳ ಸಹಯೋಗದಲ್ಲಿ ನಡೆದ ಶಿಬಿರದಲ್ಲಿ ಯುವಕರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು. ಬಜ್ಪೆಯಲ್ಲಿ 153 ಯೂನಿಟ್, ಜೋಕಟ್ಟೆಯಲ್ಲಿ 91 ಯೂನಿಟ್, ಹಳೆಕಳದಲ್ಲಿ 85 ಯೂನಿಟ್ ಹಾಗೂ ಮುಲ್ಕಿಯಲ್ಲಿ 54 ಯೂನಿಟ್…

Read More

ಇಸ್ಕಾನ್ ಮಂಗಳೂರಿನಲ್ಲಿ ಭಗವದ್ಗೀತೆ ಹಾಗೂ ಗುರುಕುಲ ತರಗತಿಗಳಿಗೆ ಆಹ್ವಾನ

ಮಂಗಳೂರು: ಇಸ್ಕಾನ್ ಮಂಗಳೂರು ವತಿಯಿಂದ ಮಕ್ಕಳ, ಪೋಷಕರ, ಭಕ್ತರ ಹಾಗೂ ಸಾರ್ವಜನಿಕರಿಗಾಗಿ ವಿಶೇಷ ಆಧ್ಯಾತ್ಮಿಕ ಶಿಕ್ಷಣ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜುಲೈ 5, 2026ರಿಂದ ಪ್ರತಿ ಭಾನುವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪಿವಿಎಸ್ ಕಲಾಕುಂಜ್‌ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ‘ಸಂಡೇ ಗುರುಕುಲ – ಐಸಿವಿಕೆ’ ಹಾಗೂ ‘ಗೀತಾ ಲೈಫ್’ ಹೆಸರಿನ 20 ಅವಧಿಗಳ ಭಗವದ್ಗೀತೆ ಕೋರ್ಸ್ ನಡೆಯಲಿದೆ. ಭಗವದ್ಗೀತೆಯ ತತ್ವಜ್ಞಾನ, ಭಾರತೀಯ ಸಂಸ್ಕೃತಿ, ಮೌಲ್ಯಾಧಾರಿತ ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಒತ್ತು ನೀಡುವ…

Read More

ಮಂಗಳೂರಿನಲ್ಲಿ ‘ನುಡಿ ಚಮ್ಮಾಳಿಗೆ’ ಕಥಾಸಂಕಲನ ಬಿಡುಗಡೆ

ಮಂಗಳೂರು: ತೆಲುಗು ಲೇಖಕ ಎಂಡ್ಲೂರಿ ಸುಧಾಕರ್ ಅವರ ‘ಮಲ್ಲೆ ಮೊಗ್ಗುಲ ಗೊಡಗು’ ಕೃತಿಯನ್ನು ವಿಕಾಸ್ ಆರ್. ಮೌರ್ಯ ಅವರು ಕನ್ನಡಕ್ಕೆ ‘ನುಡಿ ಚಮ್ಮಾಳಿಗೆ’ ಎಂಬ ಹೆಸರಿನಲ್ಲಿ ಅನುವಾದಿಸಿದ್ದು, ಇದೇ ಜೂನ್ 28ರಂದು ಮಂಗಳೂರಿನಲ್ಲಿ ಲೋಕಾರ್ಪಣೆಯಾಗಲಿದೆ. ಮಾದಿಗ ಸಮುದಾಯದ ಬದುಕು, ಸಂಸ್ಕೃತಿ, ಹೋರಾಟ ಮತ್ತು ಸಾಮಾಜಿಕ ಅನುಭವಗಳನ್ನು ದಾಖಲಿಸುವ ಈ ಕಥಾಸಂಕಲನದ ಎಲ್ಲ ಕಥೆಗಳೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆ ಮತ್ತು ಸಾಮಾಜಿಕ ದೃಷ್ಟಿಕೋನದ ನೆಲೆಯಲ್ಲಿ ರೂಪುಗೊಂಡಿವೆ. ಕನ್ನಡ ಸಾಹಿತ್ಯ ಲೋಕದಲ್ಲಿ ‘ನುಡಿ ಚಮ್ಮಾಳಿಗೆ’ ವಿಶಿಷ್ಟ ಸ್ಥಾನ…

Read More

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಟ್ಯಾರ್ ಬ್ರಾಂಚ್ ವತಿಯಿಂದ ಸಂಸ್ಥಾಪನ ದಿನ ಧ್ವಜಾರೋಹಣ ಕಾರ್ಯಕ್ರಮ

ಪುತ್ತೂರು :- ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಟ್ಯಾರ್ ಬ್ರಾಂಚ್ ವತಿಯಿಂದ ಸಂಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಸಂಟ್ಯಾರ್ ಶಾಲಾ ಬಳಿ ನಡೆಯಿತು. ಧ್ವಜಾರೋಹಣ ನಡೆಸಿ ಸಂಸ್ಥಾಪನ ದಿನದ ಸಂದೇಶ ನೀಡಿ ಮಾತನಾಡಿದ ಎಸ್‍ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಜೊತೆ ಕಾರ್ಯದರ್ಶಿಯಾದ ಅಬ್ದುಲ್ ರಹಿಮಾನ್ ಪುತ್ತೂರುರವರು ದೇಶದಲ್ಲಿ ಎಸ್ ಡಿ ಪಿ ಐ ಹಲವು ಸವಾಲುಗಳನ್ನು ದಿಟ್ಟವಾಗಿ ಎದುರಿಸಿ ಮುನ್ನುಗ್ಗುತ್ತಿದೆ, ಈ ದೇಶದ ಸಂವಿಧಾನದ ಉಳಿವಿಗೆ ಸದೃಢ ಭಾರತದ ನಿರ್ಮಾಣಕ್ಕೆ ಎಸ್ ಡಿ ಪಿ…

Read More

ನೀಟ್-ಯುಜಿ ಮರುಪರೀಕ್ಷೆ ಯಶಸ್ವಿ: ಕಠಿಣ ಪ್ರಶ್ನೆಪತ್ರಿಕೆ, ಬಿಗಿ ಭದ್ರತೆಯಲ್ಲಿ ಪರೀಕ್ಷೆ

ಬೆಂಗಳೂರು: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ) ಮರುಪರೀಕ್ಷೆ ರಾಜ್ಯಾದ್ಯಂತ ಬಿಗಿ ಭದ್ರತೆಯ ನಡುವೆ ಭಾನುವಾರ ಯಶಸ್ವಿಯಾಗಿ ನಡೆಯಿತು. ಪ್ರಶ್ನೆಪತ್ರಿಕೆ ಹಿಂದಿನ ಪರೀಕ್ಷೆಗಿಂತ ಹೆಚ್ಚು ಕಠಿಣವಾಗಿದ್ದು, ವಿಶೇಷವಾಗಿ ಭೌತಶಾಸ್ತ್ರ ವಿಭಾಗ ವಿದ್ಯಾರ್ಥಿಗಳಿಗೆ ಸವಾಲಾಗಿತ್ತು ಎಂದು ಪರೀಕ್ಷಾರ್ಥಿಗಳು ಅಭಿಪ್ರಾಯಪಟ್ಟಿದ್ದಾರೆ. ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಕ್ರಮಗಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಬಳಿಕ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ದೇಶಾದ್ಯಂತ 22,79,743 ವಿದ್ಯಾರ್ಥಿಗಳಿಗಾಗಿ ಮರುಪರೀಕ್ಷೆ ಆಯೋಜಿಸಿತ್ತು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ…

Read More

ಮಂಗಳೂರಿನಲ್ಲಿ ಇಸ್ಕಾನ್‌ನಿಂದ ‘ಸಂಡೇ ಗುರುಕುಲ’ ಆರಂಭ: ಮಕ್ಕಳಿಗೆ ಭಾರತೀಯ ಸಂಸ್ಕೃತಿ, ಮೌಲ್ಯ ಶಿಕ್ಷಣ

ಮಂಗಳೂರು: ಇಸ್ಕಾನ್ ಮಂಗಳೂರು ವತಿಯಿಂದ ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ನೈತಿಕ ಮೌಲ್ಯಗಳು ಹಾಗೂ ಆಧ್ಯಾತ್ಮಿಕ ಜ್ಞಾನ ಬೆಳೆಸುವ ಉದ್ದೇಶದಿಂದ ‘ಸಂಡೇ ಗುರುಕುಲ – ಐಸಿವಿಎಫ್ (Indian Culture & Values for Family)’ ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಜುಲೈ 5ರಿಂದ ಪ್ರತಿ ಭಾನುವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪಿವಿಎಸ್ ಕಲಾಕುಂಜ್‌ನಲ್ಲಿರುವ ಶ್ರೀ ಕೃಷ್ಣ ಬಲರಾಮ ಮಂದಿರದಲ್ಲಿ ನಾಲ್ಕು ತಿಂಗಳ ಅವಧಿಯ ಈ ವಿಶೇಷ ತರಗತಿಗಳು ನಡೆಯಲಿವೆ. 6ರಿಂದ 9 ವರ್ಷದ ಮಕ್ಕಳಿಗೆ ‘ಕೇಶವ’ ಹಾಗೂ 9ರಿಂದ…

Read More

ಪಾಲಿಕೆ ವತಿಯಿಂದಲೇ ಕುದ್ಮುಲ್ ರಂಗರಾವ್ ಜಯಂತಿ ನಡೆಯಬೇಕು :- ಶಾಸಕ ಕಾಮತ್

ದಲಿತೋದ್ದಾರಕ ಕುದ್ಮುಲ್ ರಂಗರಾಯರ ಜಯಂತಿಯು ಪಾಲಿಕೆ ವತಿಯಿಂದಲೇ ನಡೆಯುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ದಲಿತ ಮುಖಂಡರ, ಪಾಲಿಕೆ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕರು, ಕಳೆದ ಬಾರಿ ಪಾಲಿಕೆ ವತಿಯಿಂದ ರಂಗರಾಯರ ಜಯಂತಿ ಆಚರಿಸದಿರುವುದು ಅತ್ಯಂತ ಬೇಸರದ ಸಂಗತಿ. ಈ ಬಗ್ಗೆ ದಲಿತ ಮುಖಂಡರು ಕುಂದುಕೊರತೆ ಸಭೆಯಲ್ಲೂ ಪ್ರಸ್ತಾಪಿಸಿದ್ದು, ಇಂತಹ ತಪ್ಪುಗಳು ಮರುಕಳಿಸಬಾರದು. ಈ ಹಿಂದೆ ನಮ್ಮ ಅವಧಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ರಂಗರಾಯರ…

Read More

ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ

ಪ್ರತಿ ವರ್ಷ ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತದೆ. 2014 ರಲ್ಲಿ ವಿಶ್ವಸಂಸ್ಥೆ ಜೂನ್ 21 ಅನ್ನು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಘೋಷಿಸಿತು. ‘ಯೋಗ’ ಇಂದು ವಿಶ್ವ ಮಟ್ಟದಲ್ಲಿ ಮಾನ್ಯತೆ ಪಡೆದು ಭಾರತದ ಕೊಡುಗೆಯನ್ನು ಜಗತ್ತಿನ ಎಲ್ಲಾ ರಾಷ್ಟ್ರಗಳು ಸ್ಮರಿಸುತ್ತಿರುವುದು ಭಾರತೀಯರಾದ ನಮಗೆಲ್ಲಾ ಹೆಮ್ಮೆ. ಭಾರತದ ಪ್ರತಿ ಮೂಲೆ ಮೂಲೆಯಲ್ಲೂ ಜೂನ್ 21ರಂದು ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅದೇ ರೀತಿಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು ಇಲ್ಲಿಯೂ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಇಲ್ಲಿ…

Read More
error: Content is protected !!