ಸ್ನೇಹಾಲಯದ ಸೇವಾ ಕಾರ್ಯಗಳಿಗೆ ನಿಧಿ ಸಂಗ್ರಹಾರ್ಥ ಜೂನ್ 21ರಂದು ಸಂಗೀತ ರಸಮಂಜರಿ
ಮಂಗಳೂರು, ಮಾನಸಿಕ ಅಸ್ವಸ್ಥರ ರಕ್ಷಣೆ, ಚಿಕಿತ್ಸೆ, ಪುನರ್ವಸತಿ ಹಾಗೂ ಸಮಾಜದ ಮುಖ್ಯವಾಹಿನಿಗೆ ಮರುಸೇರಿಸುವ ಕಾರ್ಯದಲ್ಲಿ ತೊಡಗಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಬಾಚಳಿಕೆಯ ಸ್ನೇಹಾಲಯ ಚ್ಯಾರಿಟೇಬಲ್ ಟ್ರಸ್ಟ್ ವತಿಯಿಂದ ನಿಧಿ ಸಂಗ್ರಹಾರ್ಥ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಜೂನ್ 21ರಂದು ಸಂಜೆ 6 ಗಂಟೆಗೆ ಮಂಗಳೂರಿನ ಟೌನ್ ಹಾಲ್ನಲ್ಲಿ ಆಯೋಜಿಸಲಾಗಿದೆ. 2009ರಿಂದ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯು ಕಳೆದ 17 ವರ್ಷಗಳಲ್ಲಿ 1,750ಕ್ಕೂ ಅಧಿಕ ಮಾನಸಿಕ ಅಸ್ವಸ್ಥರನ್ನು ರಕ್ಷಿಸಿ, ಚಿಕಿತ್ಸೆ ನೀಡಿ, ಅವರ ಕುಟುಂಬಗಳೊಂದಿಗೆ ಪುನರ್ಮಿಲನಗೊಳಿಸಿ ಪುನರ್ವಸತಿ ಕಲ್ಪಿಸಿರುವುದಾಗಿ ಸಂಸ್ಥೆ ತಿಳಿಸಿದೆ….
