ಬಾರ್ ಬಳಿ ಯುವಕರಿಗೆ ಚೂರಿ ಇರಿತ ಪ್ರಕರಣ .ಆರೋಪಿಗಳ ಜೊತೆ ಅಪರಾಧ ಕೃತ್ಯಕ್ಕೆ ಆಶ್ರಯ ನೀಡಿದವರ ಬಂಧನ .

ಮಂಗಳೂರು: ಬಾರ್ ಬಳಿ ಯುವಕರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅರೋಪಿಗಳ ಜೊತೆ ಅಪರಾಧ ಕೃತ್ಯಕ್ಕೆ ಆಶ್ರಯ ನೀಡಿದವರನ್ನೂ ಬಂಧಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾನಾದ ಬಳಿಯಲ್ಲಿ ಯುವಕರಿಬ್ಬರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಆ. 23 ರಂದು ರಾತ್ರಿ ಸುಮಾರು 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ…

Read More

ಉಡುಪಿ: ಶಿವಮಣಿ ಮಾಂತ್ರಿಕ‌ ವಾದನಕ್ಕೆ ಮೈಮರೆತ ಸಾವಿರಾರು ಸಂಖ್ಯೆಯ ಜನರು..!

ಉಡುಪಿ: ಜಗತ್‌ಪ್ರಸಿದ್ಧ ಡ್ರಮ್ಸ್ ವಾದಕ ಶಿವಮಣಿ ಅವರ ಡ್ರಮ್‌ಗಳಿಂದ ಮೊಳಗಿದ ಝೇಂಕಾರಕ್ಕೆ ಉಡುಪಿಯ ಜನತೆ ಮನಸೋತರು‌.ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ಶ್ರೀ ಪುತ್ತಿಗೆ ನೃಸಿಂಹ ಸಭಾಭವನವನದ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಡ್ರಮ್ಸ್ ಕಲಾವಿದ ಶಿವಮಣಿ ಮತ್ತು ಐರಾ ಆಚಾರ್ಯ ಅವರು ನಾದವೈಭವ ಕಾರ್ಯಕ್ರಮ ಪ್ರಸ್ತುಪಡಿಸಿದರು‌. ಡ್ರಮ್ಸ್‌ಗಳ ಜತೆಗೆ ನೀರು ತುಂಬಿದ ಪ್ಲಾಸ್ಟಿಕ್ ಬಕೆಟ್, ಸೂಟ್‌ಕೇಸ್‌, ತಟ್ಟೆ, ಚಮಚ ಹೀಗೆ ಸಂಗೀತ ಹೊರಹೊಮ್ಮಿಸಲು ಯಾವುದಾದರೇನು ಎಂಬಂತೆ ಶಿವಮಣಿ ಪ್ರತಿಯೊಂದರಿಂದಲೂ ನಾದ ಹೊರಹೊಮ್ಮಿಸಿದರು. ಒಂದೂವರೆಗಂಟೆಗಳ ಮಾಂತ್ರಿಕ‌ ವಾದನದಲ್ಲಿ ಜನರು‌…

Read More

2026ರ ಜನವರಿ 18 ರಂದು ಮಂಗಳೂರಿನ ನೆಹರು ಮೈದಾನದಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವ…. !

ಮಂಗಳೂರು: ಅಖಿಲ ಭಾರತ ಬಿಲ್ಲವರ ಯೂನಿಯನ್, ಬ್ರಹ್ಮಶ್ರೀ ನಾರಾಯಣ ಮಾರ್ಗದರ್ಶನದೊಂದಿಗೆ ಗುರುಗಳ ಆಶೀರ್ವಾದದೊಂದಿದೆ 1912 ರಲ್ಲಿ ಕುದ್ರೋಳಿಯಲ್ಲಿ ಸ್ಥಾಪನೆಯಾಗಿರುವ ಸಮಾಜದ ಅತ್ಯಂತ ಹಿರಿತನದ ಮತ್ತು ಮಾತೃ ಸಂಸ್ಥೆಯು ಕಳೆದ 113 ವರ್ಷಗಳಿಂದ ಅನೇಕ ಕಾರ್ಯಚಟುವಟಿಕೆಯನ್ನು ನಡೆಸುಕೊಂಡು ಬರುತ್ತಿದೆ . ಈಗಾಗಲೇ ಸಮಾಜಕ್ಕೆ ಶಕ್ತಿ ತುಂಬುವಂತಹ ಪ್ರಥಮ ಬಿಲ್ಲವ ಸಮ್ಮೇಳನ, ಪ್ರಥಮ ಬಿಲ್ಲವ ಮಹಿಳಾ ಸಮ್ಮೇಳನ, ಪ್ರಥಮ ಬಿಲ್ಲವ ಮಹಿಳಾ ಹಾಸ್ಟೆಲ್ ಗಳ ಮೂಲಕ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಸಂಘವು ಈ ಭಾರಿ ಪ್ರಪ್ರಥಮ ಜಾಗತಿಕ…

Read More

ಹುಟ್ಟುಹಬ್ಬದಂದೇ ಮೃತಪಟ್ಟ ಯುವಕ.ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ.

ಕನಕಗಿರಿ: ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಇಲ್ಲಿನ 10ನೇ ವಾರ್ಡ್ ನಿವಾಸಿ ಹಾಗೂ ನಟ ಗವಿಸ್ವಾಮಿ ವಸ್ತ್ರದ ಅವರ ಪುತ್ರ ಆರ್ಯನ್(22) ಅವರು ಸಾವಿನಲ್ಲಿ ಸಾರ್ಥಕ ಮೆರೆದಿದ್ದಾರೆ. ಅಪಘಾತಕ್ಕೆ ಒಳಗಾಗಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರ್ಯನ್ ತನ್ನಹುಟ್ಟಿದ ದಿನದಂದೇ ಮೃತಪಟ್ಟಿರುವುದು ಕುಟುಂಬದಲ್ಲಿ ದುಃಖ, ನೋವು ತರಿಸಿದೆ. ಎರಡು ಕಣ್ಣು, ಎರಡು ಕಿಡ್ನಿ, ಲಿವರ್ ಪ್ರ್ಯಾಂಕ್ರಿಯ್ಸ್, ಹೃದಯದ ಕವಟಗಳನ್ನು ದಾನ ಮಾಡಲಾಗಿದ್ದು, ಕಳೇಬರವನ್ನು ವಾಹನಕ್ಕೆ ತರುವ ಮುಂಚೆ ಆಸ್ಪತ್ರೆಯವರು ಮೃತನ ಕೈಯಿಂದ ಕೇಕ್ ಕಟ್ ಮಾಡಿಸಿದ್ದಾರೆ.ಮತ್ತೊಂದು ಜೀವಕ್ಕೆ…

Read More

ಸ್ಥಳೀಯಾಡಳಿತ ಚುನಾವಣೆ : ಎಸ್‌ಡಿಪಿಐ ಪಕ್ಷದ ಮೊದಲ ಹಂತದ ಅಭ್ಯರ್ಥಿ ಪಟ್ಟಿ ಬಿಡುಗಡೆ .

ಮಂಜೇಶ್ವರ: ರಾಜ್ಯದಲ್ಲಿ ಸ್ಥಳೀಯಾಡಳಿತ ಚುನಾವಣೆ ಸನ್ನಿಹಿತವಾಗಿರುವ ಹಿನ್ನೆಲೆಯಲ್ಲಿ ಕೇರಳದ ತುತ್ತ ತುದಿಯಲ್ಲಿರುವ ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯಾಡಳಿತ ಚುನಾವಣಾ ಕದನಕ್ಕೆ ವಿವಿಧ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿರುವ ಮಧ್ಯೆ ಎಸ್‌ಡಿಪಿಐ ಪಕ್ಷ ಮೊದಲ ಹಂತದ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಜೇಶ್ವರದ ಕಚೇರಿಯಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಈ ಸಲ ಮಂಜೇಶ್ವರ ಪಂಚಾಯತಿನಲ್ಲಿ 3 ಹೊಸ ವಾರ್ಡ್‌ಗಳು ಸೇರಿಕೊಂಡಿದ್ದು, ಒಟ್ಟು 24 ವಾರ್ಡ್‌ಗಳಲ್ಲಿ ಪೈಪೋಟಿ ನಡೆಯಲಿದೆ. ಕಳೆದ ಚುನಾವಣೆಯಲ್ಲಿ 2 ವಾರ್ಡ್‌ಗಳನ್ನು ಗೆದ್ದಿದ್ದ ಎಸ್‌ಡಿಪಿಐ, ಈ ಬಾರಿ ಬಹುತೇಕ…

Read More

ಯುವಕನೊಬ್ಬನ ಸಮಯ ಪ್ರಜ್ಞೆಯಿಂದ ಮನೆಮಂದಿ ಗ್ಯಾಸ್ ಸಿಲಿಂಡರ್ ಅವಘಡದಿಂದ ಪಾರು.

ಬಂಟ್ವಾಳ : ಯುವಕನೊಬ್ಬನ ಸಮಯ ಪ್ರಜ್ಞೆಯಿಂದ ಮನೆಮಂದಿ ಗ್ಯಾಸ್ ಸಿಲಿಂಡರ್ ಅವಘಡದಿಂದ ಪಾರಾದ ಘಟನೆ ಬುಧವಾರ ರಾತ್ರಿ ಅನಂತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ‌ ಬಾಬನಕಟ್ಟೆ ಸಮೀಪದ ಹಿರ್ತಂದ ಬೈಲು ಎಂಬಲ್ಲಿ‌ ರಾತ್ರಿ 9.45ರ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಸಮಯಪ್ರಜ್ಞೆ ಮೆರೆದ ಯುವಕ ಜಯರಾಜ್ ನ ಮುಖ ಹಾಗೂ ಕೈ ಗೆ ಗಾಯಗಳಾಗಿದೆ. ಘಟನೆಯಲ್ಲಿ ದ್ವಿಚಕ್ರವಾಹನ ಸಹಿತ ಹಲವು ಉಪಕರಣಗಳಿಗೆ ಹಾನಿಯಾಗಿದೆ. ಘಟನೆ ವಿವರ : ತಾಯಿ ಸುಶೀಲ‌ ಹಾಗೂ ಜಯರಾಜ್ ವಾಸ್ತವ್ಯವಿರುವ ಮನೆಯಲ್ಲಿ, ಬುಧವಾರ ಗ್ಯಾಸ್…

Read More

GST ಕಡಿತ ಜನತೆಗೆ ಖುಷಿ ನೀಡಿದ್ರೆ ಐವನ್, ಪದ್ಮರಾಜ್ ಗೆ ಏಕೆ ಹೊಟ್ಟೆಕಿಚ್ಚು ? ಅರುಣ್ ಶೇಟ್ ಪ್ರಶ್ನೆ

ಮಂಗಳೂರು:”ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿ ಜನತೆಗೆ ನೆಮ್ಮದಿ ನೀಡಿದರೆ, ರಾಜ್ಯ ಸರ್ಕಾರ ಪ್ರತಿಯೊಂದು ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದೊಡ್ಡಿದೆ. ಕೇಂದ್ರದ ಜಿಎಸ್‌ಟಿ ದರ ಇಳಿಕೆ ಕುರಿತು ಶಾಸಕ ವೇದವ್ಯಾಸ ಕಾಮತ್ ಮನೆಮನೆಗೆ ಕರಪತ್ರ ವಿತರಣೆ ಕಾರ್ಯ ಆರಂಭಿಸಿದಾಗ ಕಾಂಗ್ರೆಸ್ ನಾಯಕರಾದ ಐವನ್ ಡಿ’ಸೋಜಾ ಮತ್ತು ಪದ್ಮರಾಜ್ ಅವರಲ್ಲಿ ಹೊಟ್ಟೆಕಿಚ್ಚು ಶುರುವಾಗಿದೆ. ಜನರಿಗೆ ಸಿಗುತ್ತಿರುವ ಪ್ರಯೋಜನವೇ ಇವರಿಗೆ ಅಸಹ್ಯ,” ಎಂದು ಅರುಣ್ ಶೇಟ್ ವ್ಯಂಗ್ಯವಾಡಿದರು. ಅವರು ಜಿಲ್ಲಾ ಬಿಜಿಪಿ ಕಚೇರಿಯಲ್ಲಿ ಕರೆದ…

Read More

ಉದ್ಯಮಿ, ಪೂಂಜಾ ಟ್ರಾವಲ್ಸ್ ನ ಮಾಲೀಕ ಸಂಜಯ್ ಶೆಟ್ಟಿ ನಿಧನ

ಉಡುಪಿ: ಹೋಟೆಲ್ ಉದ್ಯಮಿ, ಪೂಂಜಾ ಟ್ರಾವಲ್ಸ್ ನ ಮಾಲೀಕ ಸಂಜಯ್ ಶೆಟ್ಟಿ ಕೊರಂಗ್ರಪಾಡಿ (65) ಅವರು ಅಲ್ಪಕಾಲದ ಅಸ್ವೌಖ್ಯದಿಂದ ಗುರುವಾರ (ಅ.23) ನಿಧನ ಹೊಂದಿದರು‌. ಕೊರಂಗ್ರಪಾಡಿ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಹಾಗೂ ಬೈಲೂರು ಮಹಿಷಮರ್ದಿನಿ ಶಾಲೆಯ ಅಭಿವೃದ್ಧಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಅಲ್ಲದೆ, ಮಾರ್ಪಳ್ಳಿ, ಕೊರಂಗ್ರಪಾಡಿ, ಬೈಲೂರು ಪ್ರದೇಶದಲ್ಲಿ ಸಾಮಾಜಿಕ ಕಾರ್ಯಗಳ ಹೆಸರುವಾಸಿಯಾಗಿದ್ದರು. ಅವರು ಒರ್ವ ಪುತ್ರ, ಪತ್ನಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

Read More

ಅಮೃತ ಪ್ರಕಾಶ ಪತ್ರಿಕೆ 45ನೇ ಸರಣಿ ಕೃತಿ ಬಿಡುಗಡೆ

ಮಂಗಳೂರು: ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಇದರ ವತಿಯಿಂದ ನಡೆಯುವ ಅಮೃತ ಪ್ರಕಾಶ 45ನೇ ಸರಣಿ ಕೃತಿ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈ ಯವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ಸ್ ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ಕೊಡಗಿನ ಕುಲದೇವತೆ ಶ್ರೀ ಕಾವೇರಿ ಮಾತೆಯ ಪುರಾಣ ಚಿತ್ರ ಕಥಾ ಪುಸ್ತಕ ಕನ್ನಡ, ಇಂಗ್ಲೀಷ್, ಅರೆಭಾಷೆ ಮತ್ತು ತಮಿಳು…

Read More

ಪಟಾಕಿ ಅಂಗಡಿಗಳ ಮಾಲೀಕರಿಗೆ ಬೆದರಿಕೆ: ಕೊಲೆ ಆರೋಪಿ ವಿರುದ್ಧ ದಾಖಲಾಯ್ತು ಕೇಸ್ .

ಪಟಾಕಿ ಅಂಗಡಿಗಳ ಮಾಲೀಕರಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿರುವ ಆರೋಪದಲ್ಲಿ ಇಬ್ಬರ ವಿರುದ್ಧ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್ ಮಂಗಳಪೇಟೆಯ ಫಾಝಿಲ್ ಕೊಲೆ ಆರೋಪಿ, ರೌಡಿ ಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಅಶ್ವಿತ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬಜ್ಪೆಯ ಪಟಾಕಿ ಮಾರಾಟ ಮಳಿಗೆಗಳಿಗೆ ತೆರಳಿ ಹಣ ಕೊಡುವುದಿಲ್ಲ, ಆದರೆ ಎಲ್ಲರೂ ಪಟಾಕಿ ಕೊಡಲೇಬೇಕು ಎಂದು ಬೆದರಿಸಿ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಂದಹಾಗೇ ಈ ಘಟನೆ ಅ.22ರಂದು ನಡೆದಿದ್ದು,…

Read More
error: Content is protected !!