ಅಪ್ರಾಪ್ತೆಯ ಅಪಹರಣ ಸುಳ್ಳು: ಕಟ್ಟುಕಥೆ ಹೇಳಿ ಸಿಕ್ಕಿಬಿದ್ದ ವಿದ್ಯಾರ್ಥಿನಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಿನ್ನೆ ನಡೆದಿದೆ ಎನ್ನಲಾದ ಶಾಲಾ ಬಾಲಕಿಯ ಅಪಹರಣ ಸುಳ್ಳು ಎಂದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ.ಈ ಕುರಿತು ಮಂಗಳವಾರ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಪೊಲೀಸ್ ಇಲಾಖೆ, ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ CCTV ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ. ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟುಮಾಡಿಕೊಂಡ ಗಾಯ (Self inflicted wound) ಎಂದು ತಿಳಿಸಲಾಗಿದೆ….