ಯುವತಿಯ ಮೇಲೆ ಲೈಂಗಿಕ ಕಿರುಕುಳ, ಬೆದರಿಕೆ ಆರೋಪ:ಯುವಕ ಬಂಧನ

ಮಂಜೇಶ್ವರ : ಯುವತಿಯ ಹೆಗಲಿಗೆ ಕೈಯಿಟ್ಟು ಚುಂಬಿಸಲು ಯತ್ನಿಸಿದ ಹಾಗೂ ಬೆದರಿಕೆ ಹಾಕಿದ ಆರೋಪದ ಮೇರೆಗೆ ಮಂಜೇಶ್ವರ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ. ಕುಂಜತ್ತೂರು ಜಲಾಲಿ ಮಸೀದಿ ಸಮೀಪದ ಸಣ್ಣಡ್ಕ ಹೌಸ್ ನಿವಾಸಿ ಸುನಿಲ್ ಕುಮಾರ್ (38) ಬಂಧಿತ ಆರೋಪಿ. ಮಂಜೇಶ್ವರ ಎಸ್‌.ಐ ವೈಷ್ಣವ್ ರಾಮಚಂದ್ರನ್ ನೇತೃತ್ವದ ತಂಡ ಆರೋಪಿಯನ್ನು ವಶಕ್ಕೆ ಪಡೆದಿದೆ. ಜನವರಿ 26ರಂದು ಕುಂಜತ್ತೂರು ಮಾಸ್ಕೋ ಹಾಲ್ ಸಮೀಪದ ಬಸ್ ನಿಲ್ದಾಣದಲ್ಲಿ ಯುವತಿಯ ಕೈ ಹಿಡಿದು ಚುಂಬಿಸಲು ಯತ್ನಿಸಿದ ಘಟನೆ ನಡೆದಿತ್ತು. ಫೆಬ್ರವರಿ 8ರಂದು ರಾತ್ರಿ…

Read More

ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಡ್ರಾಮಾ ಬಯಲು

ಪುತ್ತೂರು:ಕಾಲೇಜು ವಿದ್ಯಾರ್ಥಿನಿಯ ಕಿಡ್ನಾಪ್ ಡ್ರಾಮಾ ಇದೀಗ ಬಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿತ್ತು ಎನ್ನಲಾದ ಕಿಡ್ನಾಪ್ ಯತ್ನ ಪ್ರಕರಣದಲ್ಲಿ, ಇದು ಸಂಪೂರ್ಣ ನಾಟಕ ಎಂಬುದು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ.ಮಂಗಳೂರು ಪಿಯುಸಿ ಕಾಲೇಜಿಗೆ ಸೇರ್ಪಡೆ ಪಡೆಯುವ ಉದ್ದೇಶದಿಂದ ವಿದ್ಯಾರ್ಥಿನಿಯೇ ಕಿಡ್ನಾಪ್ ಹೈಡ್ರಾಮಾ ಸೃಷ್ಟಿಸಿದ್ದಾಳೆ ಎಂಬುದು ತಿಳಿದುಬಂದಿದೆ. ಬ್ಲೇಡ್ ಬಳಸಿ ಕೈಗೆ ಸಣ್ಣ ಗಾಯ ಮಾಡಿಕೊಂಡು ಕಿಡ್ನಾಪ್ ನಡೆದಂತೆ ತೋರಿಸಲು ಯತ್ನಿಸಿದ್ದಾಳೆ. ಘಟನೆಗೆ ನಾಟಕೀಯ ತಿರುವು ನೀಡಲು ವಿದ್ಯಾರ್ಥಿನಿ ತನ್ನ ಶಾಲಾ ಬ್ಯಾಗ್‌ನಲ್ಲಿದ್ದ ಪುಸ್ತಕಗಳನ್ನು ಮನೆಯಲ್ಲೇ ಸುಟ್ಟು ಹಾಕಿ,…

Read More

ಐದು ವರ್ಷಗಳ ಸೇವಾ ಪಯಣಕ್ಕೆ ಕೃತಜ್ಞತೆ ಸಲ್ಲಿಸಿದ: ಕೊಳ್ನಾಡು ಗ್ರಾ.ಪಂ. ನಿಕಟಪೂರ್ವ ಉಪಾಧ್ಯಕ್ಷೆ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ

ಕೊಳ್ನಾಡು ಗ್ರಾಮ ಪಂಚಾಯತ್‌ನ ಅತೀ ಕಿರಿಯ ಸದಸ್ಯೆಯಾಗಿ ಹಾಗೂ ಒಂದು ಅವಧಿಯ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ತಾಳಿತ್ತನೂಜಿ–ನಾರ್ಶದ ಪ್ರಜ್ಞಾವಂತ ಮತದಾರರು, ಪಕ್ಷದ ನಾಯಕರು, ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಗ್ರಾಮದ ಎಲ್ಲಾ ಹಿತೈಷಿ ನಾಗರೀಕರಿಗೆ,ಚುನಾಯಿತ ಮಹಿಳಾ ಪ್ರತಿನಿಧಿಗಳ ಸಂಘ (ಸುಗ್ರಾಮ)ಇವರಿಗೂ ಮೊಟ್ಟ ಮೊದಲನೆಯದಾಗಿ ತುಂಬು ಹೃದಯದ ಧನ್ಯವಾದಗಳು. ತಾಳಿತ್ತನೂಜಿ–ನಾರ್ಶ ವಾರ್ಡಿನ ಗ್ರಾಮ ಪಂಚಾಯತ್ ಸದಸ್ಯೆಯಾಗಿ ಹಾಗೂ ಜಿಲ್ಲೆಯ ದೊಡ್ಡ ಗ್ರಾಮ ಪಂಚಾಯತ್‌ಗಳಲ್ಲೊಂದಾದ ಕೊಳ್ನಾಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸುವ ಅವಕಾಶವನ್ನು ಜವಾಬ್ದಾರಿಯಿಂದ ಸ್ವೀಕರಿಸಿ,…

Read More

ಕೊಂಕಣಿ ಚಿತ್ರ ‘ವಾಗಾಂಚೊ ಖೇಳ್’ ಮೊದಲ ಹಾಡು ‘ಮೋಗ್ ಜಾಲಾ’ ಫೆ.14ರಂದು ಬಿಡುಗಡೆ

ಮಂಗಳೂರು :ಸನ್ ಶೈನ್ ಕ್ರಿಯೇಷನ್ ಲಾಂಛನದಲ್ಲಿ ಪ್ರವೀಣ್ ಫೆರ್ನಾಂಡೀಸ್ ನಿರ್ಮಾಣದ ಹಾಗೂ ಅರ್ವಿನ್ ಲೋಬೊ ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಕೊಂಕಣಿ ಚಲನ ಚಿತ್ರ ವಾಗಾಂಚೊ ಖೇಳ್ ಚಿತ್ರದ ಮೊದಲ ಹಾಡು ಮೋಗ್ ಜಾಲಾ ಇದೇ ಬರುವ ಫೆಬ್ರವರಿ 14 ಪ್ರೇಮಿಗಳ ದಿನಾಚರಣೆಯಂದು ಸನ್ ಶೈನ್ ಕ್ರಿಯೇಷನ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗಲಿದೆ ಎಂದು ಚಿತ್ರದ ನಿರ್ದೇಶಕರಾದ ಅರ್ವಿನ್ ಲೋಬೊ ಅವರು ಹೇಳಿದರು. ಪತ್ರಿಕಾಭವನದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಚಲನಚಿತ್ರವು ಕರಾವಳಿ ಭಾಗದ…

Read More

ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್.

ಪುತ್ತೂರು:ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ಪುತ್ತೂರು ತಾಲೂಕು ಒಳಮೊಗ್ರು ಗ್ರಾಮ ಹೊಸಮನೆ ನಿವಾಸಿ ಅಜಿತ್ ರೈ ವಿರುದ್ಧ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 55ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಆದೇಶ ಹೊರಡಿಸುವ ಕುರಿತು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆ ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆ.25ರಂದು ನಡೆಯಲಿದೆ….

Read More

ಶಿರ್ವ ಸಮೀಪ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ಐವರ ಪ್ರಾಣ ರಕ್ಷಣೆ

ಉಡುಪಿ: ಮಂಗಳೂರಿನಿಂದ ಶಿರ್ವದತ್ತ ಸಾಗುತ್ತಿದ್ದ ಮಾರುತಿ ಡಿಸೈರ್ ಕಾರೊಂದು ಸೋಮವಾರ ಮಧ್ಯರಾತ್ರಿ ಆಕಸ್ಮಿಕವಾಗಿ ರಸ್ತೆ ಮಧ್ಯದಲ್ಲೇ ಬೆಂಕಿಗಾಹುತಿಯಾದ ಘಟನೆ ನ್ಯಾರ್ಮ ಶ್ರೀ ಜಾರಂದಾಯ ದೈವಸ್ಥಾನದ ಸಮೀಪ ಸಂಭವಿಸಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸೋಮವಾರ ತಡರಾತ್ರಿ ಮಂಗಳೂರಿನಿಂದ ಶಿರ್ವಕ್ಕೆ ಬರುತ್ತಿದ್ದ ಕಾರು ನ್ಯಾರ್ಮ ಪ್ರದೇಶವನ್ನು ತಲುಪುತ್ತಿದ್ದಂತೆ ಅದರ ಇಂಜಿನ್ ಭಾಗದಿಂದ ಹೊಗೆ ಹೊರಬರುತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣ ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ, ಕಾರಿನಲ್ಲಿದ್ದ ತನ್ನ ಕುಟುಂಬದ…

Read More

ಫೆಬ್ರವರಿ 12 ಮಹಾ ಮುಷ್ಕರ ಬೆಂಬಲಿಸಿ ಬಂದರು ಹಮಾಲಿ ಕಾರ್ಮಿಕರ ಸಭೆ

ಮಂಗಳೂರು : ಕೇಂದ್ರ ಸರಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ 4 ಕಾರ್ಮಿಕ ಸಂಹಿತೆ ರದ್ದುಗೊಳಿಸಲು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿರುವ ಫೆಬ್ರವರಿ 12 ರಂದು ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಕಾರ್ಮಿಕರ ಮುಷ್ಕರವನ್ನು ಹಳೆ ಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಬೆಂಬಲಿಸಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಇಂದು ಹಳೆ ಬಂದರಿನ ಕಾರ್ಮಿಕರ ಕಟ್ಟೆ ಬಳಿ ಸಭೆ ನಡೆಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಮಾತನಾಡುತ್ತಾ…

Read More

ಫೆ.13ರಿಂದ 17ರವರೆಗೆ ಶಕ್ತಿನಗರದಲ್ಲಿ ಐದು ದಿನಗಳ ಪದವು ಫ್ರೆಂಡ್ಸ್ ಕ್ಲಬ್ ಸ್ವರ್ಣ ವಾರ್ಷಿಕೋತ್ಸವ ಸಂಭ್ರಮ …. !

ಮಂಗಳೂರು:ಪದವು ಫ್ರೆಂಡ್ಸ್ ಕ್ಲಬ್ (PFC) ತನ್ನ ಸ್ವರ್ಣ ವಾರ್ಷಿಕೋತ್ಸವವನ್ನು ಫೆಬ್ರವರಿ 13ರಿಂದ 17ರವರೆಗೆ ಶಕ್ತಿನಗರ ಸರಕಾರಿ ಪ್ರೌಢ ಶಾಲಾ ಮೈದಾನದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲಿದೆ ಎಂದು ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್ ಕೆ. ತಿಳಿಸಿದರು . ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಸಾಮಾಜಿಕ, ಶೈಕ್ಷಣಿಕ, ಕ್ರೀಡಾ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಪದವು ಫ್ರೆಂಡ್ಸ್ ಕ್ಲಬ್, ಶಕ್ತಿನಗರ ಪರಿಸರದ ಹೆಮ್ಮೆಯ ಸಂಸ್ಥೆಯಾಗಿ ಬೆಳೆದಿದೆ. ಸ್ಥಳೀಯ ಸರಕಾರಿ…

Read More

ತುಳುನಾಡಿನ ಆಚರಣೆಗಳಲ್ಲಿ ಮೂಡನಂಬಿಕೆ ವೈಭವೀಕರಣಕ್ಕೆ ಕಳವಳ ವ್ಯಕ್ತಪಡಿಸಿದ ಡಾ. ಸಂತೋಷ್ ಗುರೂಜಿ

ಅರಬ್ ಸಂಯುಕ್ತ ಸಂಸ್ಥಾನದ ವಾಣಿಜ್ಯ ನಗರಿ ದುಬಾಯಿಯಲ್ಲಿ ಯು.ಎ.ಇ. ಬಂಟ್ಸ್ ಮತ್ತು ಯು.ಎ.ಇ.ಯಲ್ಲಿರುವ ಕರ್ನಾಟಕ ಪರ ಸಂಘಟನೆಗಳ ಆಶ್ರಯದಲ್ಲಿ ಫೆಬ್ರವರಿ 8ನೇ ತಾರೀಕಿನಂದು ತುಳುನಾಡ ಸಂಸ್ಕೃತಿಯ ಅನಾವರಣ ಉಪನ್ಯಾಸ ಕಾರ್ಯಕ್ರಮ ಫಾರ್ಚೂನ್ ಪ್ಲಾಝಾ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಶ್ರೀ ಬಾರ್ಕೂರು ಮಹಾ ಸಂಸ್ಥಾನ (ಭಾರ್ಗವಬೀಡು ಬಾರ್ಕೂರು) ಪೀಠಾಧಿಪತಿ ಶ್ರೀ ಶ್ರೀ ಶ್ರೀ ಡಾ|| ವಿದ್ಯಾವಾಚಾಸ್ಪತಿ ವಿಶ್ವಸಂತೋಷ ಭಾರತಿ ಶ್ರೀಪಾದರು ಪ್ರವಚನ ಹಾಗೂ ತುಳುನಾಡಿನ ಆಚಾರ ವಿಚಾರ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.ಸುಮಂಗಲೆಯರ ಪೂರ್ಣ ಕುಂಭ…

Read More

ವಿದ್ಯಾರ್ಥಿನಿ ಅಪಹರಣ ಯತ್ನ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ಬೆಳ್ತಂಗಡಿ: ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕಾಲೇಜು ಹೋಗುವ ವೇಳೆ ಅಪರಿಚಿತ ಗೂಂಡಾಗಳು ಅಪಹರಿಸಲು ಯತ್ನಿಸಿ, ಚಾಕುವಿನಿಂದ ಇರಿದ ಘಟನೆ ಅತ್ಯಂತ ಬೆಚ್ಚಿಬೀಳಿಸುವಂತದ್ದು. ಇದು ಹೆಣ್ಣು ಮಕ್ಕಳ ಸುರಕ್ಷತೆಯ ಮೇಲೆ ದೊಡ್ಡ ಸವಾಲು ಎತ್ತಿದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಅಧ್ಯಕ್ಷೆ ಶಿನೀರ ಖಂಡಿಸಿದರು. ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಎಪ್‌ಸ್ಟೀನ್ ಫೈಲ್ಸ್ ಮತ್ತು ನ್ಯಾಯ ಸಿಗದೇ ಉಳಿದಿರುವ ಸ್ಥಳೀಯ ಮಟ್ಟದಲ್ಲಿ ನಡೆದ ಬೆಳ್ತಂಗಡಿ ಸೌಜನ್ಯ ಪ್ರಕರಣ ಇರುವಾಗಲೇ ಹೆಣ್ಣು ಮಕ್ಕಳ ಮೇಲಿನ ಅಪಹರಣ,…

Read More
error: Content is protected !!