Headlines

ಪ್ರತಿ ಮನೆಯಲ್ಲೂ ಗ್ರಂಥಾಲಯವಿರಬೇಕು.. ಡಾ. ವಾಮನ್ ರಾವ್ ಬೇಕಲ್

ಕಾಸರಗೋಡು : ನಗರದ ಬಿ. ಇ. ಎಮ್ ಪ್ರೌಢ ಶಾಲಾ ಅಧ್ಯಾಪಕ, ವಿದ್ಯಾರ್ಥಿಗಳಿಂದ “. ವಾಚನ ವಾರಾಚಾರಣೆಯ ಪ್ರಯುಕ್ತ ಜೀವನದಲ್ಲಿ ಪುಸ್ತಕದ ಪ್ರಸಕ್ತಿ “ಎಂಬ ಕಾರ್ಯಕ್ರಮದ ಬಾಗವಾಗಿ ವಿಚಾರ ಗೋಷ್ಠಿ ನಡೆಯಿತು. ನಗರದ ನುಳ್ಳಿಪ್ಪಾಡಿಯ ಕನ್ನಡ ಭವನ ಗ್ರಂಥಾಲಯದ ಸ್ಥಾಪಕ ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಮುಖ್ಯ ಅತಿಥಿಯಾಗಿ ಆಗಮಿಸಿ ವಿಚಾರ ಮಂಡನೆ ಮಾಡಿದರು. ವಿದ್ಯಾಭ್ಯಾಸಕ್ಕಾಗಿ ಓದುವ ಪುಸ್ತಕಗಳೊಂದಿಗೆ, ಶ್ರೇಷ್ಠ ಜ್ಞಾನ ಪ್ರಾಪ್ತಿಗಾಗಿ ವಿದ್ವತ್ ಪುಸ್ತಕ ಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪ್ರತಿ ಮನೆಯಲ್ಲಿ ಪುಟ್ಟ…

Read More

ಮಂಗಳೂರು ಇಸ್ಕಾನ್‌ನಲ್ಲಿ ‘ವೃಂದಾ ಸಂಡೇ ಸ್ನ್ಯಾಕ್ ಉತ್ಸವ…….!

ಮಂಗಳೂರು: ಭಕ್ತಿ, ರುಚಿ ಮತ್ತು ಸಂಭ್ರಮವನ್ನು ಒಂದೇ ವೇದಿಕೆಯಲ್ಲಿ ಅನುಭವಿಸಲು ಅವಕಾಶ ಕಲ್ಪಿಸುವ ‘ವೃಂದಾ ಸಂಡೇ ಸ್ನ್ಯಾಕ್ ಉತ್ಸವ ಕಾರ್ಯಕ್ರಮವು ಜೂನ್ 21 ರಂದು ಸಂಜೆ 6 ಗಂಟೆಯಿಂದ ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿರುವ ಇಸ್ಕಾನ್ ಕೇಂದ್ರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಜನಪ್ರಿಯ ತಿಂಡಿಗಳು ಹಾಗೂ ಸಿಹಿತಿಂಡಿಗಳನ್ನು ಭಕ್ತರು ಮತ್ತು ಸಾರ್ವಜನಿಕರಿಗಾಗಿ ಸಿದ್ಧಪಡಿಸಲಾಗಿದೆ. ಸಮೋಸಾ ಚಾಟ್, ಕಚೋರಿ ಚಾಟ್, ಪಾನಿಪುರಿ, ಮಸಾಲಾ ಪುರಿ, ಜಾಮೂನು-ರಬ್ಡಿ, ಪೈನಾಪಲ್ ಕೇಕ್, ಮ್ಯಾಂಗೋ ಶೇಕ್ ಹಾಗೂ ಬೇಬಿಕಾರ್ನ್ ಮಂಚೂರಿಯನ್ ಸೇರಿದಂತೆ ಹಲವು…

Read More

ಮಂಗಳೂರಿನ ಟ್ರಾಫಿಕ್‌ಗೆ ನಿಸ್ವಾರ್ಥ ಸೇವೆ: ಎಂಟೂವರೆ ವರ್ಷಗಳಿಂದ ಜನರ ಸಮಯ ಉಳಿಸುತ್ತಿರುವ ಅಬ್ದುಲ್ ರಹಮಾನ್

ಮಂಗಳೂರು, ಜೂನ್ 19: ನಗರದ ವಿವಿಧ ಭಾಗಗಳಲ್ಲಿ ಕಳೆದ ಎಂಟೂವರೆ ವರ್ಷಗಳಿಂದ ಸ್ವಯಂಪ್ರೇರಿತವಾಗಿ ಟ್ರಾಫಿಕ್ ನಿಯಂತ್ರಣ ಕಾರ್ಯ ನಿರ್ವಹಿಸುತ್ತಿರುವ ಬಜಾಲ್ ಪಕ್ಕಲಡ್ಕ ನಿವಾಸಿ ಅಬ್ದುಲ್ ರಹಮಾನ್ ಅವರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಹಿಂದೆ ಲಾರಿ ಹಾಗೂ ಕಾರು ಚಾಲಕರಾಗಿ ಕಾರ್ಯನಿರ್ವಹಿಸಿದ್ದ ರಹಮಾನ್, ರಸ್ತೆಗಳಲ್ಲಿ ಉಂಟಾಗುವ ಸಂಚಾರ ದಟ್ಟಣೆಯಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಅನುಭವಿಸುವ ತೊಂದರೆಗಳನ್ನು ನೇರವಾಗಿ ಕಂಡಿದ್ದರು. ಈ ಅನುಭವವೇ ಅವರನ್ನು ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಟ್ರಾಫಿಕ್ ಕ್ಲಿಯರೆನ್ಸ್ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಪ್ರೇರೇಪಿಸಿತು. “ಜನರ ಸಮಯ…

Read More

ತುಂಬೆ ಮೆಡಿಸಿಟಿಗೆ ಯುಎಇ ವಿದೇಶಿ ವ್ಯಾಪಾರ ಸಚಿವರ ಭೇಟಿ

ಅಜ್ಮಾನ್ (ಯುಎಇ): ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿದೇಶಿ ವ್ಯಾಪಾರ ಸಚಿವ ಡಾ. ಥಾನಿ ಬಿನ್ ಅಹ್ಮದ್ ಅಲ್ ಜೆಯೌದಿ ಅವರು ಅಜ್ಮಾನ್‌ನಲ್ಲಿರುವ ತುಂಬೆ ಮೆಡಿಸಿಟಿ ಕ್ಯಾಂಪಸ್‌ಗೆ ಭೇಟಿ ನೀಡಿ ವೈದ್ಯಕೀಯ ಶಿಕ್ಷಣ, ಆರೋಗ್ಯ ಸೇವೆ ಹಾಗೂ ಸಂಶೋಧನಾ ಚಟುವಟಿಕೆಗಳ ಕುರಿತು ಮಾಹಿತಿ ಪಡೆದುಕೊಂಡರು. ಸಚಿವರನ್ನು ತುಂಬೆ ಗ್ರೂಪ್‌ನ ಸ್ಥಾಪಕ ಅಧ್ಯಕ್ಷ ಡಾ. ತುಂಬೆ ಮೊಯಿದೀನ್, ಆರೋಗ್ಯ ವಿಭಾಗದ ಉಪಾಧ್ಯಕ್ಷ ಅಖ್ತರ್ ಮೊಯಿದೀನ್ ತುಂಬೆ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಭೇಟಿಯ ಸಂದರ್ಭದಲ್ಲಿ ಸಚಿವರು ಗಲ್ಫ್…

Read More

ಅಮೆರಿಕಾ–ಇರಾನ್ ಮಧ್ಯಂತರ ಶಾಂತಿ ಒಪ್ಪಂದ: ಮಧ್ಯಪ್ರಾಚ್ಯ ಬಿಕ್ಕಟ್ಟಿಗೆ ತಾತ್ಕಾಲಿಕ ತೆರೆ

ವಾಷಿಂಗ್ಟನ್/ತೆಹ್ರಾನ್, : ತಿಂಗಳುಗಳಿಂದ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಗೆ ಕಾರಣವಾಗಿದ್ದ ಅಮೆರಿಕಾ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ತೆರೆ ಬಿದ್ದಿದ್ದು, ಉಭಯ ರಾಷ್ಟ್ರಗಳು ಮಧ್ಯಂತರ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿವೆ. ಈ ಬೆಳವಣಿಗೆಯಿಂದ ಜಾಗತಿಕ ತೈಲ ಪೂರೈಕೆ ಸರಪಳಿ ಪುನಃ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆ ವ್ಯಕ್ತವಾಗಿದೆ. ಒಪ್ಪಂದದ ಅನುಷ್ಠಾನಕ್ಕೆ ಸಂಬಂಧಿಸಿದ ಆರಂಭಿಕ ಮಾತುಕತೆಗಳು ಸ್ವಿಟ್ಜರ್‌ಲ್ಯಾಂಡ್‌ನ ಬ್ಯೂರ್ಗೆನ್‌ಸ್ಟಾಕ್‌ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಮಾತುಕತೆಯಲ್ಲಿ ಮಧ್ಯವರ್ತಿಗಳಾದ ಪಾಕಿಸ್ತಾನ, ಕತಾರ್ ಹಾಗೂ ಇತರ ಭಾಗಿಯಾಗಿರುವ ರಾಷ್ಟ್ರಗಳು ಪಾಲ್ಗೊಳ್ಳಲಿವೆ ಎಂದು…

Read More

ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್ ಸಂಚಾರ ಪುನರಾರಂಭ; ಜಾಗತಿಕ ಇಂಧನ ಮಾರುಕಟ್ಟೆಗೆ ನಿರಾಳತೆ

ಅಮೆರಿಕಾ–ಇರಾನ್ ನಡುವಿನ ಹೊಸ ಒಪ್ಪಂದದ ಬೆನ್ನಲ್ಲೇ ಜಾಗತಿಕ ತೈಲ ಸಾಗಣೆಗೆ ಮಹತ್ವದ ಹಾರ್ಮುಜ್ ಜಲಸಂಧಿಯಲ್ಲಿ ತೈಲ ಟ್ಯಾಂಕರ್‌ಗಳ ಸಂಚಾರ ಪುನರಾರಂಭಗೊಂಡಿದೆ. ಹಲವು ದಿನಗಳಿಂದ ಯುದ್ಧ ಮತ್ತು ಭದ್ರತಾ ಆತಂಕಗಳಿಂದ ಸ್ಥಗಿತಗೊಂಡಿದ್ದ ಈ ಪ್ರಮುಖ ಜಲಮಾರ್ಗದಲ್ಲಿ ಮತ್ತೆ ವಾಣಿಜ್ಯ ಚಟುವಟಿಕೆಗಳು ಆರಂಭವಾಗಿರುವುದು ಜಾಗತಿಕ ಇಂಧನ ಮಾರುಕಟ್ಟೆಗೆ ನಿರಾಳತೆ ತಂದಿದೆ. ಗುರುವಾರದಿಂದ ಅನೇಕ ಬೃಹತ್ ಕಚ್ಚಾ ತೈಲ ಟ್ಯಾಂಕರ್‌ಗಳು ಜಲಸಂಧಿಯನ್ನು ದಾಟಲು ಆರಂಭಿಸಿದ್ದು, ಅಮೆರಿಕಾ–ಇರಾನ್ ಒಪ್ಪಂದ ಜಾರಿಗೆ ಬಂದ ಬಳಿಕದ ಮೊದಲ ದೊಡ್ಡ ಮಟ್ಟದ ಸಾಗಣೆ ಚಟುವಟಿಕೆ ಇದಾಗಿದೆ. ವಿಶ್ವದ…

Read More

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌ಗೆ 5, ಬಿಜೆಪಿಗೆ 2 ಸ್ಥಾನ; ಅಡ್ಡ ಮತದಾನ ಭಾರೀ ಚರ್ಚೆಗೆ ಗ್ರಾಸ

ಬೆಂಗಳೂರು, ಭಾರೀ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ. ಬಿಜೆಪಿ ಎರಡು ಸ್ಥಾನಗಳನ್ನು ತನ್ನದಾಗಿಸಿಕೊಂಡಿದ್ದು, ಜೆಡಿಎಸ್ ಅಭ್ಯರ್ಥಿ ಸೋಲನುಭವಿಸಿದ್ದಾರೆ. ಅಡ್ಡ ಮತದಾನ ಆರೋಪಗಳ ನಡುವೆಯೇ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸಂಖ್ಯಾಬಲಕ್ಕಿಂತ ಹೆಚ್ಚಿನ ಮತಗಳನ್ನು ಗಳಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.ಅಧಿಕೃತ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್‌ಗೆ 135 ಶಾಸಕರ ಬೆಂಬಲವಿದ್ದರೂ, ಪಕ್ಷದ ಅಭ್ಯರ್ಥಿಗಳಿಗೆ ಒಟ್ಟು 151 ಮತಗಳು…

Read More

ಕನ್ನಡ ಭವನದಿಂದ ವಿದ್ಯಾರ್ಥಿ ಹಾಗೂ ಅಧ್ಯಾಪಕರಿಗೆ ಪ್ರತಿಭಾ ಪುರಸ್ಕಾರಕ್ಕೆ ಅಹ್ವಾನ.

ಕಾಸರಗೋಡು : ಕಾಸರಗೋಡು ಜಿಲ್ಲೆ ಹಾಗೂ ಕೇರಳ ರಾಜ್ಯದ ರಾಮಕ್ಷತ್ರಿಯ ಸಮಾಜದ ಕಳೆದ ವಾರ್ಷಿಕ ಎಸ್. ಎಸ್. ಎಲ್. ಸಿ. ಹಾಗೂ ಪಿ. ಯು. ಸಿ. ಪರೀಕ್ಷೆಗಳಲ್ಲಿ 90.ಯಾ ಅಧಿಕ ಅಂಕ ಗಳಿಸಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ಪ್ರತಿಬಾನ್ವಿತ ವಿದ್ಯಾರ್ಥಿಗಳಿಗೆ ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ಟೀಚರ್ ಸಾರತ್ಯದ “ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008)ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಪಾಂಗೋಡು…

Read More

ತಮಿಳುನಾಡು ರಾಜ್ಯಸಭಾ ಸದಸ್ಯ ಪ್ರವೀಣ್ ಚಕ್ರವರ್ತಿ ಅವರನ್ನು ಭೇಟಿ ಮಾಡಿದ ಮಂಜುನಾಥ ಭಂಡಾರಿ

ಬೆಂಗಳೂರು: ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಮಂಜುನಾಥ ಭಂಡಾರಿ ಅವರು ತಮಿಳುನಾಡಿನ ರಾಜ್ಯಸಭಾ ಸದಸ್ಯರಾದ ಪ್ರವೀಣ್ ಚಕ್ರವರ್ತಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.ಪ್ರವೀಣ್ ಚಕ್ರವರ್ತಿ ಅವರು ತಮಿಳುನಾಡಿನಲ್ಲಿ ಟಿವಿಕೆ ಪಕ್ಷ ಜಯಭೇರಿ ಬಾರಿಸುವಲ್ಲಿ ಹಾಗೂ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಂಡಾರಿ ಅವರ ಜೊತೆ ತಮಿಳುನಾಡು ಮತ್ತು ಕರ್ನಾಟಕದ ರಾಜಕೀಯ ವಿದ್ಯಾಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.

Read More

ಅಖಿಲ ಭಾರತ ಹೊರನಾಡ ಕನ್ನಡ ಸಂಘಗಳ ಪ್ರತಿನಿಧಿಗಳ 10ನೇ ಮಹಾಮೇಳ, ಕಾಸರಗೋಡಿನಿಂದ ಸೋಲಾಪುರಕ್ಕೆ ಕನ್ನಡ ಯಾತ್ರೆ

ಕೇರಳ ರಾಜ್ಯದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಪರಂಪರೆಯನ್ನು ರಾಜ್ಯ ಅಂತರ ರಾಜ್ಯದಾದ್ಯಂತ ದೇಶ ವಿದೇಶಗಳಲ್ಲಿ ಪ್ರಚಾರ ಪಡಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕಾಸರಗೋಡಿನ ಕನ್ನಡ ಗ್ರಾಮದಲ್ಲಿ 1990 ರಲ್ಲಿ ಸ್ಥಾಪನೆಗೊಂಡಿರುವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ.), ಕಾಸರಗೋಡು ಇದರ ಆಶ್ರಯದಲ್ಲಿ ಸಾಂಸ್ಕೃತಿಕ ವಿನಿಮಯಕ್ಕಾಗಿ ಐತಿಹಾಸಿಕ ಕೇರಳ ರಾಜ್ಯ 8 ನೇ ಕನ್ನಡ ಸಮ್ಮೇಳನ- 2026 ಮತ್ತು ಕೇರಳ -ಕರ್ನಾಟಕ ಉತ್ಸವ, ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವವನ್ನು ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ನವಂಬರ್ 7 ಮತ್ತು 8ರಂದು ಹಮ್ಮಿಕೊಳ್ಳಲಾಗಿದೆ.ಈ…

Read More
error: Content is protected !!