ಆರೋಗ್ಯಕರ ಬೆಳವಣಿಗೆಗೆ ನೈತಿಕ ಹಾಗೂ ಸುರಕ್ಷಿತ ಶಿಕ್ಷಣ ಅಗತ್ಯ: ರಾಯಿ ರಾಜ ಕುಮಾರ
ಕೊಡಂಗಲ್ಲು, ಜೂನ್ 18: ಧರ್ಮಸ್ಥಳ ಜ್ಞಾನ ವಿಕಾಸ ಕಾರ್ಯಕ್ರಮದಡಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಆಸಕ್ತರಿಗಾಗಿ ಮಾಹಿತಿ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಡಂಗಲ್ಲು ಇಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸ್ಪಾರ್ಕ್ ಅಕಾಡೆಮಿಯ ತರಬೇತುದಾರ ಹಾಗೂ ಹಿರಿಯ ಪತ್ರಕರ್ತ ರಾಯಿ ರಾಜ ಕುಮಾರ ಭಾಗವಹಿಸಿ ಮಾತನಾಡಿದರು. ಶಿಕ್ಷಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸುರಕ್ಷಿತ ಹಾಗೂ ನೈತಿಕ ಶಿಕ್ಷಣದ ಮೂಲಕ ಮಕ್ಕಳಲ್ಲಿ ಆರೋಗ್ಯಕರ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು. ಮನೆ ಹಾಗೂ…
