ದೈವ ನರ್ತಕ ಲಕ್ಷ್ಮಣ ಯಾನೆ ಕಾಂತರಿಗೆ ‘ಕನ್ನಡ ಪಯಸ್ವಿನಿ ಜಾನಪದ ರತ್ನ’ ಪ್ರಶಸ್ತಿ
ಕಾಸರಗೋಡು, ಜು. 24: ದೈವ ನರ್ತನ ಹಾಗೂ ಜಾನಪದ ಕಲಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಶ್ರೀ ಲಕ್ಷ್ಮಣ ಯಾನೆ ಕಾಂತ ಅವರಿಗೆ ಅಂತರ್ರಾಜ್ಯ “ಕನ್ನಡ ಪಯಸ್ವಿನಿ – ಜಾನಪದ ರತ್ನ ಪ್ರಶಸ್ತಿ-2026” ಪ್ರದಾನ ಮಾಡಲಾಗುತ್ತಿದೆ. ಜುಲೈ 26ರಂದು ಕಾಸರಗೋಡಿನ ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಖ್ಯಾತ ಕನ್ನಡ ಸಂಸ್ಥೆಯಾದ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್…
