ಎಸ್ ಐ ಆರ್ ಸಂದರ್ಭ ಪ್ರತಿಯೊಬ್ಬ ಮತದಾರರ ಸಂವಿಧಾನಿಕ ಹಕ್ಕು ಕಾಪಾಡಲು ಕ್ರಮ ವಹಿಸಲು ದ.ಕ. ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಗಳಿಗೆ ಸಿಪಿಐಎಂ ಮನವಿ
ಜೂನ್ 30 ರಿಂದ ಎಸ್ಐಆರ್ ರಾಜ್ಯದಲ್ಲಿ ಆರಂಭಗೊಳ್ಳುತ್ತಿದ್ದು, ಪೌರತ್ವವನ್ನು ಸ್ವಯಂ ಮತದಾರರೆ ನಿರೂಪಿಸಿಕೊಂಡು ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳುವ ತೀವ್ರ ಸಂಕಷ್ಟದ ವಿಧಾನವನ್ನು ಚುನಾವಣಾ ಆಯೋಗ ಅನುಸರಿಸುತ್ತಿರುವುದರಿಂದ ಯಾವೊಬ್ಬ ನಾಗರಿಕನೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ರಾಜ್ಯ ಸರಕಾರ ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಪಿಐಎಂ ರಾಜ್ಯ ಸಮಿತಿಯು ದ.ಕ. ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ. ಚುನಾವಣಾ ಆಯೋಗ ನಿಗದಿ ಪಡಿಸಿರುವ 11 ದಾಖಲೆಗಳ ಪೈಕಿ ಒಂದು ದಾಖಲೆಯೂ ಒದಗಿಸಲು ಸಾಧ್ಯ ಇಲ್ಲದವರಿಗೆ ದಾಖಲೆಗಳನ್ನು ಪಡೆದುಕೊಳ್ಳಲು ನಿಯಮಗಳನ್ನು ಸರಳೀಕರಿಸಿ…
